Homeಸಾಮಾಜಿಕಮೈಸೂರು ವಿವಿಯಲ್ಲೊಂದು `ವೇಮುಲ’ ಪ್ರಕರಣ

ಮೈಸೂರು ವಿವಿಯಲ್ಲೊಂದು `ವೇಮುಲ’ ಪ್ರಕರಣ

- Advertisement -
- Advertisement -

ಕಳೆದ ನಾಲ್ಕು ವರ್ಷಗಳಿಂದ ದೇಶದ ಹಲವಾರು ವಿಶ್ವವಿದ್ಯಾನಿಲಯಗಳು ವಿದ್ಯಾರ್ಥಿಗಳ ಧ್ವನಿಯನ್ನು ಮೊಟಕುಗೊಳಿಸುವ ಸಂಚಿನಿಂದ ಸುದ್ದಿಯಾಗುತ್ತಲೇ ಇವೆ. ಬಲಪಂಥೀಯ ಮತೀಯವಾದ ಮತ್ತು ಜಾತಿವಾದಕ್ಕೆ ವಿವಿಗಳು ಬಲಿಯಾಗುತ್ತಿವೆ. ಜಾತಿ-ಧರ್ಮವನ್ನು ಆಧಾರವಾಗಿಟ್ಟುಕೊಂಡು ವಿದ್ಯಾರ್ಥಿಗಳ ಮೇಲೆ ದೌರ್ಜನ್ಯಗಳು ನಿರಂತರವಾಗಿ ನಡೆಯುತ್ತಲೇ ಇವೆ. ಆದರೆ, ಮೈಸೂರು ವಿಶ್ವವಿದ್ಯಾಲಯವು ರೋಹಿತ್ ವೇಮುಲ ಪ್ರಕರಣವನ್ನು ನೆನಪಿಸುವಂತಹ ಪ್ರಕರಣವೊಂದಕ್ಕೆ ಸಾಕ್ಷಿಯಾಗಬಹುದೆಂದು ಯಾರೂ ನಿರೀಕ್ಷಿಸಿರಲಿಲ್ಲ.
ಹಾಗೆಂದು ಮೈಸೂರು ಅಥವಾ ಬೆಂಗಳೂರಿನಂತಹ ವಿಶ್ವವಿದ್ಯಾಲಯಗಳಲ್ಲಿ ದಲಿತ ವಿದ್ಯಾರ್ಥಿಗಳು ಅಥವಾ ಅಧ್ಯಾಪಕರು ದನಿಯಿಲ್ಲದವರೇನೂ ಅಲ್ಲ. ಮಾನಸ ಗಂಗೋತ್ರಿಯಲ್ಲಿ ದಲಿತ ವಿದ್ಯಾರ್ಥಿ ಒಕ್ಕೂಟವು ಕಳೆದ 25 ವರ್ಷಗಳಿಂದ ವಿವಿಯೊಳಗೆ ವಿದ್ಯಾರ್ಥಿಗಳ ಪರವಾದ ಹೋರಾಟಗಳನ್ನು ಮಾಡುತ್ತಾ ಬಂದಿದೆ. 2013ರಲ್ಲಿ ಇತಿಹಾಸ ವಿಭಾಗಕ್ಕೆ ಎಂ.ಎ. ಪದವಿಗಾಗಿ ಪ್ರವೇಶ ಪಡೆದ ಮಹೇಶ್ ಸೋಸಲೆ ಎಂಬ ವಿದ್ಯಾರ್ಥಿ ವಿವಿ ಆಡಳಿತದ ಅಕ್ರಮ ಆಡಳಿತ, ಭ್ರಷ್ಟಾಚಾರ, ವಿದ್ಯಾರ್ಥಿ ವಿರೋಧಿ ನೀತಿಗಳ ವಿರುದ್ಧದ ಹೋರಾಟಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು. ಮಹೇಶ್ ಕಳೆದ ವರ್ಷ ದಲಿತ ವಿದ್ಯಾರ್ಥಿ ಒಕ್ಕೂಟದ ಗೌರವಾಧ್ಯಕ್ಷನಾಗಿ ಆಯ್ಕೆಯಾಗಿದ್ದರು, ಈ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗಾಗುತ್ತಿರುವ ಅನಾನುಕೂಲಗಳು ಮತ್ತು ವಿವಿಯ ಲೋಪಗಳನ್ನು ಪ್ರಶ್ನಿಸಿದ್ದರು. ಈತ ಎಂ.ಎ ಅಂತಿಮ ಪರೀಕ್ಷೆಯಲ್ಲಿ ಚಿನ್ನದ ಪದಕವನ್ನೂ ಪಡೆದು ತನ್ನ ಮುಡಿಗೇರಿಸಿಕೊಂಡಿದ್ದರು.
ವಿದ್ಯಾಭ್ಯಾಸದಲ್ಲೂ ಮುಂದಿರುವ ಮಹೇಶ್ ಈ ವರ್ಷ ಇತಿಹಾಸ ವಿಭಾಗದಲ್ಲಿಯೇ ಪಿಹೆಚ್‍ಡಿ ಸ್ಕಾಲರ್‍ಶಿಪ್‍ಗೆ ಆಯ್ಕೆಯಾಗಿದ್ದಾರೆ. ಆಯ್ಕೆಯಾದ ಪಿಹೆಚ್‍ಡಿ ವಿದ್ಯಾರ್ಥಿಗಳಿಗೆ ಹಾಸ್ಟೆಲ್‍ನಲ್ಲಿ ಸೀಟುಕೊಡಬೇಕೆಂಬುದು ವಿವಿಯ ನಿಯಮವೂ ಹೌದು. ಆದರೆ ಮಹೇಶ್‍ನನ್ನು ವಿವಿ ಆಡಳಿತ ಹಾಸ್ಟೆಲ್‍ನಿಂದ ಹೊರಗಿಟ್ಟಿತು. ಮಹೇಶ್ ಸೋಸಲೆ ಹಾಸ್ಟೆಲ್‍ನಲ್ಲಿ ಅಕ್ರಮವಾಗಿ ನೆಲೆಸಿದ್ದು ಶೈಕ್ಷಣಿಕ ವಾತವರಣಕ್ಕೆ ಧಕ್ಕೆಯುಂಟು ಮಾಡುತ್ತಿದ್ದಾರೆಂದೂ ಹಾಗೂ ಆಡಳಿತ ವೈಖರಿಯನ್ನು ಪ್ರಶ್ನಿಸುತ್ತಾ ಕಛೇರಿ ಕೆಲಸಕ್ಕೆ ಅಡಚಣೆಯುಂಟುಮಾಡುತ್ತಿದ್ದಾರೆಂದೂ ಆರೋಪಿಸಿ ಮಹೇಶ್‍ನನ್ನು ಕಪ್ಪುಪಟ್ಟಿಗೆ ಸೇರಿದ್ದಾರೆ. ಅಷ್ಟೇ ಅಲ್ಲದೆ ವಿದ್ಯಾರ್ಥಿ ನಿಲಯಕ್ಕೆ ಪ್ರವೇಶ ಕೋರಿದಲ್ಲಿ ಅವಕಾಶ ಕಲ್ಪಿಸಬಾರದೆಂದು ಆದೇಶವನ್ನೂ ನೀಡಿದ್ದಾರೆ.
ಎಲ್ಲಾ ವಿದ್ಯಾರ್ಥಿಗಳಿಗೂ ಅವಕಾಶ ಇರುವಾಗ ಈ ವಿದ್ಯಾರ್ಥಿಗೆ ಮಾತ್ರ ಯಾಕೆ ಹೀಗೆ ಎಂದು ನೋಡಿದರೆ ಅಸಲೀ ಸಂಗತಿಗಳು ಬಿಚ್ಚಿಕೊಳ್ಳುತ್ತವೆ. ಮಹೇಶ್ ವಿದ್ಯಾರ್ಥಿ ಒಕ್ಕೂಟದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡ ನಂತರ ವಿವಿಯ ಭ್ರಷ್ಟಾಚಾರಗಳನ್ನು ಪ್ರಶ್ನಿಸುವುದರಲ್ಲಿ ಮೊದಲಿಗನಾಗಿದ್ದ. ಹಾಸ್ಟೆಲ್ ವಿದ್ಯಾರ್ಥಿಗಳಿಗೆ ಮೂಲಭೂತ ಸೌಕರ್ಯವನ್ನು ಕಲ್ಪಿಸುವಂತೆ ಹಾಗೂ ಸಂಶೋಧನಾ ವಿದ್ಯಾರ್ಥಿಗಳ ಸಮಸ್ಯೆಗಳನ್ನು ಪರಿಹರಿಸುವಂತೆ ಜುಲೈ 10ರಂದು ವಿವಿ ಕಾರ್ಯಸೌಧದ ಎದುರು ಪ್ರತಿಭಟನೆ ಮಾಡಿದ್ದರು. ನಂತರ ಜುಲೈ 17ರಂದು ಡೀನ್ ಆಫೀಸ್ ಮಂಭಾಗ ಎಲ್ಲಾ ಹಾಸ್ಟೆಲ್ ವಿದ್ಯಾರ್ಥಿಗಳು ಸೇರಿ ಬೃಹತ್ ಪ್ರತಿಭಟನೆಯನ್ನೂ ಸಹ ಮಾಡಿದ್ದಾರೆ.
ಅದಷ್ಟೇ ಅಲ್ಲದೆ ಕಳೆದ ವರ್ಷ ವಿವಿಯ ಆಡಳಿತವು 124 ಬೋಧಕೇತರ ಸಿಬ್ಬಂದಿಗಳನ್ನು ನೇಮಕ ಮಾಡಿಕೊಂಡಿದ್ದರಲ್ಲಿ ಅಕ್ರಮಗಳಾಗಿವೆ ಎಂಬ ಆರೋಪಗಳಿವೆ. ನೇಮಕಾತಿಯ ವೇಳೆಯಲ್ಲಿ ಯಾವುದೇ ನೋಟಿಫಿಕೇಷನ್ ನೀಡಿರಲಿಲ್ಲ ಹಾಗೂ ರೋಸ್ಟರ್ ಕೂಡ ಫಾಲೋ ಮಾಡಿರಲಿಲ್ಲವೆಂಬುದು ಆರೋಪ. ಹಾಗಾಗಿ ಈ ನೇಮಕಾತಿ ಅಕ್ರಮವಾದುದ್ದೆಂದು ರಾಜ್ಯಪಾಲರ ಕಛೇರಿಯಿಂದ ಪರಿಶೀಲನೆ ನಡೆದು ಈ ನೇಮಕಾತಿಯನ್ನು ಕೈ ಬಿಡಬೇಕೆಂದು ಹಾಗೂ ಈ ಪ್ರಕರಣದಲ್ಲಿ ಭಾಗಿಯಾಗಿರುವ ಅಧಿಕಾರಿಗಳ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡುವಂತೆ ಆದೇಶವನ್ನೂ ಸಹ ನೀಡಲಾಗಿತ್ತು. ಒಂದು ತಿಂಗಳಾದರೂ ಆದೇಶವನ್ನು ಜಾರಿಮಾಡದ ವಿವಿಯ ವಿರುದ್ಧ ವಿದ್ಯಾರ್ಥಿ ಒಕ್ಕೂಟವು ಆಗಸ್ಟ್ 10ರಂದು ಪ್ರತಿಭಟನೆ ನಡೆಸಿತ್ತು. ಈ ಪ್ರತಿಭಟನೆಯ ನಾಯಕತ್ವವನ್ನು ಮಹೇಶ್ ವಹಿಸಿಕೊಂಡಿದ್ದರು. ಜುಲೈ 17ರಂದು ನಡೆದ ಪ್ರತಿಭಟನೆಯನ್ನು ಆಧಾರವಾಗಿ ಇಟ್ಟುಕೊಂಡು ಡೀನ್ ಪ್ರವೀಣ್ ಅವರು ಆಗಸ್ಟ್ 18ರಂದು ಪೋಲೀಸ್ ಠಾಣೆಯಲ್ಲಿ ಮಹೇಶ್ ವಿರುದ್ಧ ದೂರು ನೀಡಿ ಎಫ್‍ಐಆರ್ ದಾಖಲಿಸಿದ್ದಾರೆ. ಹಾಸ್ಟೆಲ್ ಆಡಳಿತವು ಈತನ ಹಾಸ್ಟೆಲ್ ಪ್ರವೇಶಾತಿಗೆ ಅನುಮತಿ ನಿರಾಕರಿಸಲು ಕೋರಿ ಕುಲಪತಿಗೆ ಪತ್ರ ಬರೆದಿತ್ತು. ಕೋರಿಕೆಗೆ ಸಮ್ಮತಿಸಿರುವ ಕುಲಪತಿ ಕಛೇರಿ ಕೆಲಸಕ್ಕೆ ಅಡಚಣೆ ಮಾಡಿರುವುದರಿಂದ, ಕಪ್ಪುಪಟ್ಟಿಗೆ ಸೇರಿಸಿದ್ದೇವೆ ಮತ್ತು ಆತನಿಗೆ ಪ್ರವೇಶಾತಿಯನ್ನು ನೀಡಬಾರದೆಂದು ಆಗಸ್ಟ್ 14ರಂದು ಲಿಖಿತವಾಗಿ ಅನುಮತಿ ನೀಡಿದೆ ಹಾಗೂ ಈ ವಿಚಾರವಾಗಿ ಪ್ರತಿಭಟನೆ ಮಾಡಿದ ವಿದ್ಯಾರ್ಥಿಗಳ ಮೇಲೆ ಕ್ರಮ ಕೈಗೊಳ್ಳಲಾಗುವುದೆಂದೂ ಸಹ ವಿವಿ ಆಡಳಿತ ಬೆದರಿಕೆ ಹಾಕಿದೆ.
ಆದರೆ, ಮಹೇಶ್‍ನನ್ನು ಕಪ್ಪುಪಟ್ಟಿ ಸೇರಿಸುವುದಾಗಿ ಅಥವಾ ಸೇರಿಸಿರುವುದಾಗಿ ಆತನಿಗೆ ಈವರೆಗೂ ಯಾವುದೇ ನೋಟೀಸ್ ನೀಡಿಲ್ಲ. ಅಲ್ಲದೆ ವಿವಿಯ ಶಿಸ್ತುಪಾಲನಾ ಕಮಿಟಿಯು ಈತನನ್ನು ಇದುವರೆಗೆ ಒಮ್ಮೆಯೂ ವಿಚಾರಣೆಯನ್ನು ಮಾಡಿಲ್ಲ. ತಮ್ಮ ಅಕ್ರಮಗಳ ಬಗೆಗೆ ಪ್ರಶ್ನಿಸುತ್ತಾರೆಂಬ ಒಂದೇ ಒಂದು ಕಾರಣಕ್ಕೆ ಏಕಾಏಕಿ ಹಾಸ್ಟೆಲ್‍ನಿಂದ ಹೊರದಬ್ಬಿದ್ದಾರೆ. ಹಾಸ್ಟೆಲ್ ನಿರಾಕರಣೆಯನ್ನು ಪ್ರಶ್ನಿಸಿ ನನ್ನನ್ನು ಮಾನಸಿಕವಾಗಿ ಹಿಂಸೆಗೆ ಸಿಲುಕಿಸಲು ಕಾರಣವೇನು? ಹಾಗೂ ಪ್ರತಿದಿನ ಊರಿನಿಂದ ಪ್ರಯಾಣ ಮಾಡಿದರೆ ವಿದ್ಯಾಭ್ಯಾಸಕ್ಕೆ ತೊಂದರೆಯಾಗುತ್ತದೆ ಎಂದು ಮಹೇಶ್ ಇದುವರೆಗೂ 2 ಬಾರಿ ಪತ್ರ ಬರೆದಿದ್ದಾರೆ. ಆದರೆ ಯಾವುದೇ ಪತ್ರಕ್ಕೂ ಕುಲಪತಿಗಳಿಂದ ಪ್ರತಿಕ್ರಿಯೆ ನೀಡಿಲ್ಲ. ಹಾಗಾಗಿ ಕಳೆದ ಎಂಟು ದಿನಗಳಿಂದ ಹಾಸ್ಟೆಲ್‍ನ ಕಾರಿಡಾರ್‍ನಲ್ಲಿ ವಾಸಿಸುತ್ತಿರುವ ಮಹೇಶ್ ಮೌನ ಪ್ರತಿಭಟನೆ ಆರಂಭಿಸಿದ್ದಾರೆ.

university order letter

ಒಟ್ಟಿನಲ್ಲಿ ವಿದ್ಯಾರ್ಥಿಗಳು ಶೈಕ್ಷಣಿಕ ವಿಷಯದಲ್ಲಿ ನಡೆಯುವ ಅಕ್ರಮಗಳು, ಭ್ರಷ್ಟಾಚಾರಗಳು, ಆಡಳಿತ ದೋಷಗಳನ್ನು ಪ್ರಶ್ನಿಸಿದರೆ ಅವರನ್ನು ಎಲ್ಲಾ ಸೌಕರ್ಯಗಳಿಂದ ಹೊರದಬ್ಬುವುದು ಇತ್ತೀಚಿನ ವರ್ಷಗಳಲ್ಲಿ ಸಹಜ ಎನ್ನುವಂತೆ ಆಗಿಹೋಗಿದೆ. ದೇಶದ ಪ್ರತಿಷ್ಠಿತ ವಿಶ್ವವಿದ್ಯಾನಿಲಯವೆಂದೇ ಹೆಸರು ಪಡೆದಿರುವ ದೆಹಲಿಯ ಜವಾಹರಲಾಲ್ ವಿಶ್ವವಿದ್ಯಾನಿಲಯದಲ್ಲಿ ವಿದ್ಯಾರ್ಥಿಗಳು ಮೊಳಗಿಸುತ್ತಿದ್ದ ಪ್ರಜಾತಂತ್ರದ ಧ್ವನಿಯನ್ನು ಹತ್ತಿಕ್ಕಲು ಪಿಎಚ್‍ಡಿ ಸ್ಕಾಲರ್ ಕನ್ಹಯ್ಯ ಕುಮಾರ್‍ನ ಮೇಲೆ ರಾಷ್ಟ್ರದ್ರೋಹಿಯೆಂದು ಬಂಧನದಲ್ಲಿಡಲಾಗಿತ್ತು.
ಆ ಸುದ್ದಿ ಮಾಸುವ ಮೊದಲೇ ಹೈದರಾಬಾದ್ ಕೇಂದ್ರೀಯ ವಿಶ್ವವಿದ್ಯಾನಿಲಯದಲ್ಲಿ ಅಂಬೇಡ್ಕರ್ ಸ್ಟೂಡೆಂಟ್ ಅಸೋಸಿಯೇಷನ್ ಸಂಘಟನೆ ಕಟ್ಟಿಕೊಂಡು ದಲಿತ ವಿದ್ಯಾರ್ಥಿಗಳ ಪರವಾಗಿ ಹಾಗೂ ವಿವಿಯ ದುರಾಡಳಿತ ವಿರುದ್ಧ ಹೋರಾಟ ಮಾಡುತ್ತಿದ್ದ ರೋಹಿತ್ ವೇಮುಲನ ಮೇಲೆ ಆಡಳಿತವು ಬಿದ್ದಿತು. ಎಬಿವಿಪಿ ಗೂಂಡಾಗಳು ರೂಪಿಸಿದ್ದ ಸಂಚಿಗೆ ಕೈ ಜೋಡಿಸಿದ್ದ ಹೆಚ್‍ಸಿಯುನ ಕುಲಪತಿ ಅಪ್ಪಾರಾವ್ ಮತ್ತು ಕೇಂದ್ರ ಸಚಿವೆ ಸ್ಮøತಿ ಇರಾನಿ ವೇಮುಲನ ಫೆಲೋಶಿಪ್ ಕಡಿತಗೊಳಿಸಿ ವಿದ್ಯಾರ್ಥಿ ನಿಲಯದಿಂದ ಹೊರಹಾಕಿದ್ದರು. ತನ್ನ ಫೆಲೋಶಿಪ್ ಕೇಳಿ ಒತ್ತಾಯಿಸಿ ಹೋರಾಡಿದ ವೇಮುಲ 2016ರ ಜನವರಿ 17ರಂದು ತನಗಾದ ಅನ್ಯಾಯದ ಬಗೆಗೆ ಪತ್ರ ಬರೆದಿಟ್ಟು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದ. ಇಂತಹ ದೌರ್ಜನ್ಯ ದಬ್ಬಾಳಿಕೆಯ ಪಟ್ಟಿಗೆ ಈಗ ಮೈಸೂರು ವಿವಿಯೂ ಸೇರಿದಂತಾಗಿದೆ. ಇದು ಆಧಿಕಾರದಲ್ಲಿರುವವರ ದುರಾಡಳಿತದ ವಿರುದ್ಧ ವಿದ್ಯಾರ್ಥಿಗಳು ದನಿಯೆತ್ತದಂತೆ ಅವರನ್ನು ನಿಯಂತ್ರಿಸಲು ಸರ್ಕಾರಗಳು ಮತ್ತು ಅಧಿಕಾರಿ ವರ್ಗ ಮಾಡಿರುವ ಹುನ್ನಾರವಾಗಿದೆ. ಮೈಸೂರಿನವರೇ ಆಗಿರುವ ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡರಿಗೆ ಇದೆಲ್ಲಾ ಕೇಳಿಸುತ್ತಿದೆಯೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...