Homeಕರ್ನಾಟಕಮೈಸೂರು ವಿವಿ: ಸಂಶೋಧಕರಿಗಿಲ್ಲ ಹಾಸ್ಟೆಲ್‌; ಚಾಪೆ, ದಿಂಬಿನೊಂದಿಗೆ ಪ್ರತಿಭಟನೆ

ಮೈಸೂರು ವಿವಿ: ಸಂಶೋಧಕರಿಗಿಲ್ಲ ಹಾಸ್ಟೆಲ್‌; ಚಾಪೆ, ದಿಂಬಿನೊಂದಿಗೆ ಪ್ರತಿಭಟನೆ

ಸಿಸ್ಟ್‌ಗೆ ಪ್ರವೇಶಾತಿ ಪಡೆದಿರುವ ವಿದ್ಯಾರ್ಥಿಗಳಿಗೂ ಹಾಸ್ಟೆಲ್‌ ವ್ಯವಸ್ಥೆ ಇಲ್ಲವಾಗಿದೆ. ಹಾಸ್ಟೆಲ್‌ನಲ್ಲಿ ಕೊಠಡಿ ಕೊರತೆ ಇರುವುದೇ ಸಮಸ್ಯೆಗೆ ಕಾರಣ ಎಂದು ಡೀನ್ ಪ್ರತಿಕ್ರಿಯೆ ನೀಡಿದ್ದಾರೆ.

- Advertisement -
- Advertisement -

“ಸಂಶೋಧನಾ ವಿದ್ಯಾರ್ಥಿಗಳಿಗೆ ಹಾಗೂ ಸಿಸ್ಟ್‌ ಪ್ರವೇಶಾತಿ ಪಡೆದವರಿಗೆ ಹಾಸ್ಟೆಲ್‌ ಸೌಲಭ್ಯ ನೀಡಿಲ್ಲ” ಎಂದು ಮೈಸೂರು ವಿವಿ ಸಂಶೋಧನಾರ್ಥಿಗಳು ಹಾಗೂ ಸಿಸ್ಟ್‌ ವಿದ್ಯಾರ್ಥಿಗಳು ಶುಕ್ರವಾರ ಪ್ರತಿಭಟನೆ ನಡೆಸಿದ್ದಾರೆ.

ಚಾಪೆ, ದಿಂಬಿನೊಂದಿಗೆ ವಿದ್ಯಾರ್ಥಿ ಕ್ಷೇಮಪಾಲನಾ ನಿರ್ದೇಶನಾಲಯದ ಎದುರು ಸೇರಿರುವ ವಿದ್ಯಾರ್ಥಿಗಳು ವಿಶ್ವವಿದ್ಯಾನಿಲಯ ಹಾಗೂ ವಿದ್ಯಾರ್ಥಿ ಕ್ಷೇಮಪಾಲನಾ ನಿರ್ದೇಶಕರಾದ ಡಾ.ಎಸ್‌.ಟಿ.ರಾಮಚಂದ್ರ ವಿರುದ್ಧ ಘೋಷಣೆ ಕೂಗಿದ್ದಾರೆ.

ಸಂಶೋಧಕರ ಸಂಘದ ರಾಜ್ಯಾಧ್ಯಕ್ಷರಾದ ಎಸ್‌.ಮರಿದೇವಯ್ಯ ಮಾತನಾಡಿ, “ಸಿಸ್ಟ್‌ಗೆ ಪ್ರವೇಶಾತಿ ಪಡೆದಿರುವ 150 ವಿದ್ಯಾರ್ಥಿಗಳಿಗೆ, ಸಂಶೋಧನಾರ್ಥಿಗಳಿಗೆ ಹಾಸ್ಟೆಲ್ ಪ್ರವೇಶಾತಿ ವಿಳಂಬ ಮಾಡಲಾಗುತ್ತಿದೆ. ಹೀಗಾಗಿ ಡೀನ್‌‌ ಕಚೇರಿ ಎದುರು ಅಹೋರಾತ್ರಿ ಪ್ರತಿಭಟನೆ ಹಮ್ಮಿಕೊಂಡಿದ್ದೇವೆ” ಎಂದು ತಿಳಿಸಿದ್ದಾರೆ.

“ಹಾಸ್ಟೆಲ್‌ ಪ್ರವೇಶಾತಿಗಾಗಿ ಕಳೆದ ನಾಲ್ಕೈದು ತಿಂಗಳಿಂದ ಒತ್ತಾಯ ಮಾಡುತ್ತಿದ್ದೇವೆ. ಮೈಸೂರು ವಿವಿ ವಿದ್ಯಾರ್ಥಿ ಕ್ಷೇಮಪಾಲನ ನಿರ್ದೇಶಕರಾಗಿರುವ ಡಾ.ರಾಮಚಂದ್ರ ಅವರೇ ಈ ಅವಾಂತರಗಳಿಗೆ ಕಾರಣ. ಹೀಗಾಗಿ ರಾಮಚಂದ್ರ ಅವರನ್ನು ವಜಾ ಮಾಡಬೇಕೆಂದು ಆಗ್ರಹಿಸಿ ಹಲವು ಭಾರಿ ಪ್ರತಿಭಟನೆ ಮಾಡಲಾಗಿದೆ.  ಆದರೆ ಯಾವುದೇ ಕ್ರಮ ಜರುಗಿಸಿಲ್ಲ” ಎಂದು ದೂರಿದರು.

“ಮೈಸೂರು ವಿಶ್ವವಿದ್ಯಾನಿಲಯ ಆಡಳಿತ ದುರ್ಬಲವಾಗಿದೆ. ಎಲ್ಲರನ್ನು ಹೆದರಿಸುವ ಗೂಂಡಾಗಿರಿಯನ್ನು ರಾಮಚಂದ್ರ ಅವರು ಮಾಡುತ್ತಿದ್ದಾರೆ. ಈಗಲೂ ಕೂಡ ಹೀಗೆಯೇ ವರ್ತಿಸಿದ್ದಾರೆ. ಅವರನ್ನು ಸೇವೆಯಿಂದ ಕೂಡಲೇ ವಜಾಗೊಳಿಸಬೇಕು” ಎಂದು ಆಗ್ರಹಿಸಿದ್ದಾರೆ.

“ಭ್ರಷ್ಟ ವಿದ್ಯಾರ್ಥಿ ಕ್ಷೇಮಪಾಲನ ಅಧಿಕಾರಿಗೆ ಹಾಗೂ ಭ್ರಷ್ಟ ವಿವಿಗೆ ಧಿಕ್ಕಾರ” ಎಂದು ಹಾಸ್ಟೆಲ್‌ ವಂಚಿತ ವಿದ್ಯಾರ್ಥಿಗಳು ಘೋಷಣೆ ಕೂಗಿದ್ದಾರೆ.

ವಿದ್ಯಾರ್ಥಿಕ್ಷೇಮಪಾಲನ ನಿರ್ದೇಶಕರಾದ ಡಾ.ಎಸ್‌.ಟಿ.ರಾಮಚಂದ್ರ ಅವರು, ನಾನುಗೌರಿ.ಕಾಂ ಜೊತೆಗೆ ಮಾತನಾಡಿ, “ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳ ಸಂಖ್ಯೆ ಕಳೆದ ವರ್ಷಕ್ಕಿಂತ ಈಗ ಹೆಚ್ಚಾಗಿದೆ. ಸಿಸ್ಟ್‌ನವರಿಗೆ ಪ್ರವೇಶಾತಿ ನೀಡಲು ಕೊಠಡಿಗಳ ಕೊರತೆ ಇದೆ. ಈಗ ಇರುವ ಕೊಠಡಿಗಳಿಗೆ ಹೆಚ್ಚಿನ ವಿದ್ಯಾರ್ಥಿಗಳನ್ನು ತುಂಬಲಾಗಿದೆ” ಎಂದು ತಿಳಿಸಿದರು.

“ಸಂಶೋಧನಾ ವಿದ್ಯಾರ್ಥಿಗಳಿಗೆ ಹಾಸ್ಟೆಲ್ ಸಿದ್ಧವಾಗುತ್ತಿದೆ. ಹೊಸ ಹಾಸ್ಟೆಲ್‌ ಮುಂದಿನ ತಿಂಗಳು ಆರಂಭವಾಗುವ ಸಾಧ್ಯತೆ ಇದೆ. ಆದರೆ ಸಿಸ್ಟ್‌ ವಿದ್ಯಾರ್ಥಿಗಳಿಗೆ ಪ್ರವೇಶಾತಿ ಕೊಡಲು ಕೊಠಡಿಗಳಿಲ್ಲ. ಹಿಂದಿನ ವರ್ಷಗಳಲ್ಲಿ ಮಾಸ್ಟರ್‌ ಡಿಗ್ರಿ ಪ್ರವೇಶಾತಿ ಕಡಿಮೆ ಇತ್ತು. ಹೀಗಾಗಿ ಸಿಸ್ಟ್‌ನವರಿಗೆ ಪ್ರವೇಶಾತಿಯನ್ನು ನೀಡಲಾಗಿತ್ತು” ಎಂದರು.

“ಬಹುತೇಕರು ಮಾಸ್ಟರ್ ಡಿಗ್ರಿ ಮುಗಿಸಿಕೊಂಡು ಡಿಪ್ಲೊಮೊ ಸೇರಿದ್ದಾರೆ. ಆದರೆ ಸ್ನಾತಕೋತ್ತರ ಪದವಿ ಸೇರುತ್ತಿರುವವರಿಗೆ ಮೊದಲ ಆದ್ಯತೆ ನೀಡಬೇಕು. ಪ್ರವೇಶಾತಿ ಹೆಚ್ಚಿದಂತೆ ಹಾಸ್ಟೆಲ್‌ಗಳ ಮೇಲೆ ಒತ್ತಡವೂ ಹೆಚ್ಚುತ್ತದೆ. ಹೊಸ ಹಾಸ್ಟೆಲ್‌ಗಳ ಅಗತ್ಯವಿದೆ. ಇರುವ ಹಾಸ್ಟೆಲ್‌ನಲ್ಲಿಯೇ ಪ್ರವೇಶಾತಿ ನೀಡುವುದು ಕಷ್ಟವಾಗುತ್ತದೆ” ಎಂದು ಹೇಳಿದರು.

ಹಾಸ್ಟೆಲ್‌ಗಳ ಸಾಮಾರ್ಥ್ಯದ ಕುರಿತು ಮಾಹಿತಿ ನೀಡಿದ ಅವರು, “ಬಾಯ್ಸ್‌ ಹಾಸ್ಟೆಲ್‌ಗಳ ಪೈಕಿ ಬ್ಲಾಕ್‌-1ರಲ್ಲಿ 232 ಕೊಠಡಿ ಇದೆ. 270 ಜನರಿಗೆ ಪ್ರವೇಶಾತಿ ನೀಡಬಹುದು. 427 ಜನರಿಗೆ ನೀಡಲಾಗಿದೆ. ಬ್ಲಾಕ್‌ 2ರಲ್ಲಿ 228 ಕೊಠಡಿಗಳಿವೆ. ಕಚೇರಿ ಉಪಯೋಗಕ್ಕೆ ಕೆಲವು ಕೊಠಡಿ ಬಳಸಲಾಗುತ್ತಿದೆ. 220 ವಿದ್ಯಾರ್ಥಿಗಳಿಗೆ ಪ್ರವೇಶಾತಿ ನೀಡಬಹುದು. ಆದರೆ 330 ಜನರನ್ನು ತುಂಬಿದ್ದೇವೆ. ಬ್ಲಾಕ್‌ 3ರಲ್ಲಿ 38 ರೂಮ್‌ಗಳಿವೆ. ಆರು ಜನರನ್ನು ಒಂದು ಕೊಠಡಿಗೆ ತುಂಬಬಹುದು. ಒಟ್ಟು 180 ಜನರಿಗೆ ಪ್ರವೇಶಾತಿ ನೀಡಬೇಕು. ನಾವು 232 ಜನರಿಗೆ ನೀಡಿದ್ದೇವೆ. ಗರ್ಲ್ಸ್ ಹಾಸ್ಟೆಲ್‌ಗಳ ಪೈಕಿ ಬ್ಲಾಕ್‌ 1ರಲ್ಲಿ 146 ಕೊಠಡಿಗಳಿವೆ. 420 ಜನರಿಗೆ ಪ್ರವೇಶಾತಿ ನೀಡಬಹುದು, 455 ಪ್ರವೇಶಾತಿ ನೀಡಿದ್ದೇವೆ. ಬ್ಲಾಕ್‌ 2ರಲ್ಲಿ 120 ರೂಮ್‌ಗಳಿವೆ. 275 ಜನರಿಗೆ ಪ್ರವೇಶಾತಿ ನೀಡಬಹುದು, 375 ವಿದ್ಯಾರ್ಥಿನಿಯರಿಗೆ ಪ್ರವೇಶಾತಿ ನೀಡಿದ್ದೇವೆ. ಬ್ಲಾಕ್‌ 3ರಲ್ಲಿ  46 ಕೊಠಡಿಗಳಿವೆ. ಆರು ಜನರು ಒಂದು ಕೊಠಡಿಯಲ್ಲಿ ಇರಬಹುದು. 280 ಜನರಿಗೆ ಪ್ರವೇಶ ನೀಡುವಲ್ಲಿ 323 ಜನರಿಗೆ ನೀಡಿದ್ದೇವೆ. ಇನ್ನು ಸಿಸ್ಟ್‌ನವರರನ್ನು ಎಲ್ಲಿಗೆ ತುಂಬಲಿ?” ಎಂದು ಪ್ರಶ್ನಿಸಿದರು.

“ಕಳೆದ ವರ್ಷ ಎಷ್ಟು ಪ್ರವೇಶಾತಿ ನೀಡಲಾಗಿದೆ” ಎಂಬುದನ್ನು ನಾನುಗೌರಿ.ಕಾಂ ಪರಿಶೀಲಿಸಲು ಯತ್ನಿಸಿದೆ. ಮಾಹಿತಿ ಲಭ್ಯವಾಗಿಲ್ಲ.


ಇದನ್ನೂ ಓದಿರಿ: ಬೈಂದೂರು ಬಿಜೆಪಿ ಶಾಸಕನ ಒಡೆತನದ ಕಾಲೇಜಿನ ಸಿಬ್ಬಂದಿಯಿಂದ ವಿದ್ಯಾರ್ಥಿನಿಯರಿಗೆ ಅಶ್ಲೀಲ ಸಂದೇಶ- ಕಿರುಕುಳ ಆರೋಪ: ವಿದ್ಯಾರ್ಥಿಗಳಿಂದ ಧರಣಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...