Homeಕರ್ನಾಟಕಮೈಸೂರು ವಿವಿ: ಸಂಶೋಧಕರಿಗಿಲ್ಲ ಹಾಸ್ಟೆಲ್‌; ಚಾಪೆ, ದಿಂಬಿನೊಂದಿಗೆ ಪ್ರತಿಭಟನೆ

ಮೈಸೂರು ವಿವಿ: ಸಂಶೋಧಕರಿಗಿಲ್ಲ ಹಾಸ್ಟೆಲ್‌; ಚಾಪೆ, ದಿಂಬಿನೊಂದಿಗೆ ಪ್ರತಿಭಟನೆ

ಸಿಸ್ಟ್‌ಗೆ ಪ್ರವೇಶಾತಿ ಪಡೆದಿರುವ ವಿದ್ಯಾರ್ಥಿಗಳಿಗೂ ಹಾಸ್ಟೆಲ್‌ ವ್ಯವಸ್ಥೆ ಇಲ್ಲವಾಗಿದೆ. ಹಾಸ್ಟೆಲ್‌ನಲ್ಲಿ ಕೊಠಡಿ ಕೊರತೆ ಇರುವುದೇ ಸಮಸ್ಯೆಗೆ ಕಾರಣ ಎಂದು ಡೀನ್ ಪ್ರತಿಕ್ರಿಯೆ ನೀಡಿದ್ದಾರೆ.

- Advertisement -
- Advertisement -

“ಸಂಶೋಧನಾ ವಿದ್ಯಾರ್ಥಿಗಳಿಗೆ ಹಾಗೂ ಸಿಸ್ಟ್‌ ಪ್ರವೇಶಾತಿ ಪಡೆದವರಿಗೆ ಹಾಸ್ಟೆಲ್‌ ಸೌಲಭ್ಯ ನೀಡಿಲ್ಲ” ಎಂದು ಮೈಸೂರು ವಿವಿ ಸಂಶೋಧನಾರ್ಥಿಗಳು ಹಾಗೂ ಸಿಸ್ಟ್‌ ವಿದ್ಯಾರ್ಥಿಗಳು ಶುಕ್ರವಾರ ಪ್ರತಿಭಟನೆ ನಡೆಸಿದ್ದಾರೆ.

ಚಾಪೆ, ದಿಂಬಿನೊಂದಿಗೆ ವಿದ್ಯಾರ್ಥಿ ಕ್ಷೇಮಪಾಲನಾ ನಿರ್ದೇಶನಾಲಯದ ಎದುರು ಸೇರಿರುವ ವಿದ್ಯಾರ್ಥಿಗಳು ವಿಶ್ವವಿದ್ಯಾನಿಲಯ ಹಾಗೂ ವಿದ್ಯಾರ್ಥಿ ಕ್ಷೇಮಪಾಲನಾ ನಿರ್ದೇಶಕರಾದ ಡಾ.ಎಸ್‌.ಟಿ.ರಾಮಚಂದ್ರ ವಿರುದ್ಧ ಘೋಷಣೆ ಕೂಗಿದ್ದಾರೆ.

ಸಂಶೋಧಕರ ಸಂಘದ ರಾಜ್ಯಾಧ್ಯಕ್ಷರಾದ ಎಸ್‌.ಮರಿದೇವಯ್ಯ ಮಾತನಾಡಿ, “ಸಿಸ್ಟ್‌ಗೆ ಪ್ರವೇಶಾತಿ ಪಡೆದಿರುವ 150 ವಿದ್ಯಾರ್ಥಿಗಳಿಗೆ, ಸಂಶೋಧನಾರ್ಥಿಗಳಿಗೆ ಹಾಸ್ಟೆಲ್ ಪ್ರವೇಶಾತಿ ವಿಳಂಬ ಮಾಡಲಾಗುತ್ತಿದೆ. ಹೀಗಾಗಿ ಡೀನ್‌‌ ಕಚೇರಿ ಎದುರು ಅಹೋರಾತ್ರಿ ಪ್ರತಿಭಟನೆ ಹಮ್ಮಿಕೊಂಡಿದ್ದೇವೆ” ಎಂದು ತಿಳಿಸಿದ್ದಾರೆ.

“ಹಾಸ್ಟೆಲ್‌ ಪ್ರವೇಶಾತಿಗಾಗಿ ಕಳೆದ ನಾಲ್ಕೈದು ತಿಂಗಳಿಂದ ಒತ್ತಾಯ ಮಾಡುತ್ತಿದ್ದೇವೆ. ಮೈಸೂರು ವಿವಿ ವಿದ್ಯಾರ್ಥಿ ಕ್ಷೇಮಪಾಲನ ನಿರ್ದೇಶಕರಾಗಿರುವ ಡಾ.ರಾಮಚಂದ್ರ ಅವರೇ ಈ ಅವಾಂತರಗಳಿಗೆ ಕಾರಣ. ಹೀಗಾಗಿ ರಾಮಚಂದ್ರ ಅವರನ್ನು ವಜಾ ಮಾಡಬೇಕೆಂದು ಆಗ್ರಹಿಸಿ ಹಲವು ಭಾರಿ ಪ್ರತಿಭಟನೆ ಮಾಡಲಾಗಿದೆ.  ಆದರೆ ಯಾವುದೇ ಕ್ರಮ ಜರುಗಿಸಿಲ್ಲ” ಎಂದು ದೂರಿದರು.

“ಮೈಸೂರು ವಿಶ್ವವಿದ್ಯಾನಿಲಯ ಆಡಳಿತ ದುರ್ಬಲವಾಗಿದೆ. ಎಲ್ಲರನ್ನು ಹೆದರಿಸುವ ಗೂಂಡಾಗಿರಿಯನ್ನು ರಾಮಚಂದ್ರ ಅವರು ಮಾಡುತ್ತಿದ್ದಾರೆ. ಈಗಲೂ ಕೂಡ ಹೀಗೆಯೇ ವರ್ತಿಸಿದ್ದಾರೆ. ಅವರನ್ನು ಸೇವೆಯಿಂದ ಕೂಡಲೇ ವಜಾಗೊಳಿಸಬೇಕು” ಎಂದು ಆಗ್ರಹಿಸಿದ್ದಾರೆ.

“ಭ್ರಷ್ಟ ವಿದ್ಯಾರ್ಥಿ ಕ್ಷೇಮಪಾಲನ ಅಧಿಕಾರಿಗೆ ಹಾಗೂ ಭ್ರಷ್ಟ ವಿವಿಗೆ ಧಿಕ್ಕಾರ” ಎಂದು ಹಾಸ್ಟೆಲ್‌ ವಂಚಿತ ವಿದ್ಯಾರ್ಥಿಗಳು ಘೋಷಣೆ ಕೂಗಿದ್ದಾರೆ.

ವಿದ್ಯಾರ್ಥಿಕ್ಷೇಮಪಾಲನ ನಿರ್ದೇಶಕರಾದ ಡಾ.ಎಸ್‌.ಟಿ.ರಾಮಚಂದ್ರ ಅವರು, ನಾನುಗೌರಿ.ಕಾಂ ಜೊತೆಗೆ ಮಾತನಾಡಿ, “ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳ ಸಂಖ್ಯೆ ಕಳೆದ ವರ್ಷಕ್ಕಿಂತ ಈಗ ಹೆಚ್ಚಾಗಿದೆ. ಸಿಸ್ಟ್‌ನವರಿಗೆ ಪ್ರವೇಶಾತಿ ನೀಡಲು ಕೊಠಡಿಗಳ ಕೊರತೆ ಇದೆ. ಈಗ ಇರುವ ಕೊಠಡಿಗಳಿಗೆ ಹೆಚ್ಚಿನ ವಿದ್ಯಾರ್ಥಿಗಳನ್ನು ತುಂಬಲಾಗಿದೆ” ಎಂದು ತಿಳಿಸಿದರು.

“ಸಂಶೋಧನಾ ವಿದ್ಯಾರ್ಥಿಗಳಿಗೆ ಹಾಸ್ಟೆಲ್ ಸಿದ್ಧವಾಗುತ್ತಿದೆ. ಹೊಸ ಹಾಸ್ಟೆಲ್‌ ಮುಂದಿನ ತಿಂಗಳು ಆರಂಭವಾಗುವ ಸಾಧ್ಯತೆ ಇದೆ. ಆದರೆ ಸಿಸ್ಟ್‌ ವಿದ್ಯಾರ್ಥಿಗಳಿಗೆ ಪ್ರವೇಶಾತಿ ಕೊಡಲು ಕೊಠಡಿಗಳಿಲ್ಲ. ಹಿಂದಿನ ವರ್ಷಗಳಲ್ಲಿ ಮಾಸ್ಟರ್‌ ಡಿಗ್ರಿ ಪ್ರವೇಶಾತಿ ಕಡಿಮೆ ಇತ್ತು. ಹೀಗಾಗಿ ಸಿಸ್ಟ್‌ನವರಿಗೆ ಪ್ರವೇಶಾತಿಯನ್ನು ನೀಡಲಾಗಿತ್ತು” ಎಂದರು.

“ಬಹುತೇಕರು ಮಾಸ್ಟರ್ ಡಿಗ್ರಿ ಮುಗಿಸಿಕೊಂಡು ಡಿಪ್ಲೊಮೊ ಸೇರಿದ್ದಾರೆ. ಆದರೆ ಸ್ನಾತಕೋತ್ತರ ಪದವಿ ಸೇರುತ್ತಿರುವವರಿಗೆ ಮೊದಲ ಆದ್ಯತೆ ನೀಡಬೇಕು. ಪ್ರವೇಶಾತಿ ಹೆಚ್ಚಿದಂತೆ ಹಾಸ್ಟೆಲ್‌ಗಳ ಮೇಲೆ ಒತ್ತಡವೂ ಹೆಚ್ಚುತ್ತದೆ. ಹೊಸ ಹಾಸ್ಟೆಲ್‌ಗಳ ಅಗತ್ಯವಿದೆ. ಇರುವ ಹಾಸ್ಟೆಲ್‌ನಲ್ಲಿಯೇ ಪ್ರವೇಶಾತಿ ನೀಡುವುದು ಕಷ್ಟವಾಗುತ್ತದೆ” ಎಂದು ಹೇಳಿದರು.

ಹಾಸ್ಟೆಲ್‌ಗಳ ಸಾಮಾರ್ಥ್ಯದ ಕುರಿತು ಮಾಹಿತಿ ನೀಡಿದ ಅವರು, “ಬಾಯ್ಸ್‌ ಹಾಸ್ಟೆಲ್‌ಗಳ ಪೈಕಿ ಬ್ಲಾಕ್‌-1ರಲ್ಲಿ 232 ಕೊಠಡಿ ಇದೆ. 270 ಜನರಿಗೆ ಪ್ರವೇಶಾತಿ ನೀಡಬಹುದು. 427 ಜನರಿಗೆ ನೀಡಲಾಗಿದೆ. ಬ್ಲಾಕ್‌ 2ರಲ್ಲಿ 228 ಕೊಠಡಿಗಳಿವೆ. ಕಚೇರಿ ಉಪಯೋಗಕ್ಕೆ ಕೆಲವು ಕೊಠಡಿ ಬಳಸಲಾಗುತ್ತಿದೆ. 220 ವಿದ್ಯಾರ್ಥಿಗಳಿಗೆ ಪ್ರವೇಶಾತಿ ನೀಡಬಹುದು. ಆದರೆ 330 ಜನರನ್ನು ತುಂಬಿದ್ದೇವೆ. ಬ್ಲಾಕ್‌ 3ರಲ್ಲಿ 38 ರೂಮ್‌ಗಳಿವೆ. ಆರು ಜನರನ್ನು ಒಂದು ಕೊಠಡಿಗೆ ತುಂಬಬಹುದು. ಒಟ್ಟು 180 ಜನರಿಗೆ ಪ್ರವೇಶಾತಿ ನೀಡಬೇಕು. ನಾವು 232 ಜನರಿಗೆ ನೀಡಿದ್ದೇವೆ. ಗರ್ಲ್ಸ್ ಹಾಸ್ಟೆಲ್‌ಗಳ ಪೈಕಿ ಬ್ಲಾಕ್‌ 1ರಲ್ಲಿ 146 ಕೊಠಡಿಗಳಿವೆ. 420 ಜನರಿಗೆ ಪ್ರವೇಶಾತಿ ನೀಡಬಹುದು, 455 ಪ್ರವೇಶಾತಿ ನೀಡಿದ್ದೇವೆ. ಬ್ಲಾಕ್‌ 2ರಲ್ಲಿ 120 ರೂಮ್‌ಗಳಿವೆ. 275 ಜನರಿಗೆ ಪ್ರವೇಶಾತಿ ನೀಡಬಹುದು, 375 ವಿದ್ಯಾರ್ಥಿನಿಯರಿಗೆ ಪ್ರವೇಶಾತಿ ನೀಡಿದ್ದೇವೆ. ಬ್ಲಾಕ್‌ 3ರಲ್ಲಿ  46 ಕೊಠಡಿಗಳಿವೆ. ಆರು ಜನರು ಒಂದು ಕೊಠಡಿಯಲ್ಲಿ ಇರಬಹುದು. 280 ಜನರಿಗೆ ಪ್ರವೇಶ ನೀಡುವಲ್ಲಿ 323 ಜನರಿಗೆ ನೀಡಿದ್ದೇವೆ. ಇನ್ನು ಸಿಸ್ಟ್‌ನವರರನ್ನು ಎಲ್ಲಿಗೆ ತುಂಬಲಿ?” ಎಂದು ಪ್ರಶ್ನಿಸಿದರು.

“ಕಳೆದ ವರ್ಷ ಎಷ್ಟು ಪ್ರವೇಶಾತಿ ನೀಡಲಾಗಿದೆ” ಎಂಬುದನ್ನು ನಾನುಗೌರಿ.ಕಾಂ ಪರಿಶೀಲಿಸಲು ಯತ್ನಿಸಿದೆ. ಮಾಹಿತಿ ಲಭ್ಯವಾಗಿಲ್ಲ.


ಇದನ್ನೂ ಓದಿರಿ: ಬೈಂದೂರು ಬಿಜೆಪಿ ಶಾಸಕನ ಒಡೆತನದ ಕಾಲೇಜಿನ ಸಿಬ್ಬಂದಿಯಿಂದ ವಿದ್ಯಾರ್ಥಿನಿಯರಿಗೆ ಅಶ್ಲೀಲ ಸಂದೇಶ- ಕಿರುಕುಳ ಆರೋಪ: ವಿದ್ಯಾರ್ಥಿಗಳಿಂದ ಧರಣಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...