Homeಕರ್ನಾಟಕಮೈಸೂರು ವಿವಿ: ಸಂಶೋಧಕರಿಗಿಲ್ಲ ಹಾಸ್ಟೆಲ್‌; ಚಾಪೆ, ದಿಂಬಿನೊಂದಿಗೆ ಪ್ರತಿಭಟನೆ

ಮೈಸೂರು ವಿವಿ: ಸಂಶೋಧಕರಿಗಿಲ್ಲ ಹಾಸ್ಟೆಲ್‌; ಚಾಪೆ, ದಿಂಬಿನೊಂದಿಗೆ ಪ್ರತಿಭಟನೆ

ಸಿಸ್ಟ್‌ಗೆ ಪ್ರವೇಶಾತಿ ಪಡೆದಿರುವ ವಿದ್ಯಾರ್ಥಿಗಳಿಗೂ ಹಾಸ್ಟೆಲ್‌ ವ್ಯವಸ್ಥೆ ಇಲ್ಲವಾಗಿದೆ. ಹಾಸ್ಟೆಲ್‌ನಲ್ಲಿ ಕೊಠಡಿ ಕೊರತೆ ಇರುವುದೇ ಸಮಸ್ಯೆಗೆ ಕಾರಣ ಎಂದು ಡೀನ್ ಪ್ರತಿಕ್ರಿಯೆ ನೀಡಿದ್ದಾರೆ.

- Advertisement -
- Advertisement -

“ಸಂಶೋಧನಾ ವಿದ್ಯಾರ್ಥಿಗಳಿಗೆ ಹಾಗೂ ಸಿಸ್ಟ್‌ ಪ್ರವೇಶಾತಿ ಪಡೆದವರಿಗೆ ಹಾಸ್ಟೆಲ್‌ ಸೌಲಭ್ಯ ನೀಡಿಲ್ಲ” ಎಂದು ಮೈಸೂರು ವಿವಿ ಸಂಶೋಧನಾರ್ಥಿಗಳು ಹಾಗೂ ಸಿಸ್ಟ್‌ ವಿದ್ಯಾರ್ಥಿಗಳು ಶುಕ್ರವಾರ ಪ್ರತಿಭಟನೆ ನಡೆಸಿದ್ದಾರೆ.

ಚಾಪೆ, ದಿಂಬಿನೊಂದಿಗೆ ವಿದ್ಯಾರ್ಥಿ ಕ್ಷೇಮಪಾಲನಾ ನಿರ್ದೇಶನಾಲಯದ ಎದುರು ಸೇರಿರುವ ವಿದ್ಯಾರ್ಥಿಗಳು ವಿಶ್ವವಿದ್ಯಾನಿಲಯ ಹಾಗೂ ವಿದ್ಯಾರ್ಥಿ ಕ್ಷೇಮಪಾಲನಾ ನಿರ್ದೇಶಕರಾದ ಡಾ.ಎಸ್‌.ಟಿ.ರಾಮಚಂದ್ರ ವಿರುದ್ಧ ಘೋಷಣೆ ಕೂಗಿದ್ದಾರೆ.

ಸಂಶೋಧಕರ ಸಂಘದ ರಾಜ್ಯಾಧ್ಯಕ್ಷರಾದ ಎಸ್‌.ಮರಿದೇವಯ್ಯ ಮಾತನಾಡಿ, “ಸಿಸ್ಟ್‌ಗೆ ಪ್ರವೇಶಾತಿ ಪಡೆದಿರುವ 150 ವಿದ್ಯಾರ್ಥಿಗಳಿಗೆ, ಸಂಶೋಧನಾರ್ಥಿಗಳಿಗೆ ಹಾಸ್ಟೆಲ್ ಪ್ರವೇಶಾತಿ ವಿಳಂಬ ಮಾಡಲಾಗುತ್ತಿದೆ. ಹೀಗಾಗಿ ಡೀನ್‌‌ ಕಚೇರಿ ಎದುರು ಅಹೋರಾತ್ರಿ ಪ್ರತಿಭಟನೆ ಹಮ್ಮಿಕೊಂಡಿದ್ದೇವೆ” ಎಂದು ತಿಳಿಸಿದ್ದಾರೆ.

“ಹಾಸ್ಟೆಲ್‌ ಪ್ರವೇಶಾತಿಗಾಗಿ ಕಳೆದ ನಾಲ್ಕೈದು ತಿಂಗಳಿಂದ ಒತ್ತಾಯ ಮಾಡುತ್ತಿದ್ದೇವೆ. ಮೈಸೂರು ವಿವಿ ವಿದ್ಯಾರ್ಥಿ ಕ್ಷೇಮಪಾಲನ ನಿರ್ದೇಶಕರಾಗಿರುವ ಡಾ.ರಾಮಚಂದ್ರ ಅವರೇ ಈ ಅವಾಂತರಗಳಿಗೆ ಕಾರಣ. ಹೀಗಾಗಿ ರಾಮಚಂದ್ರ ಅವರನ್ನು ವಜಾ ಮಾಡಬೇಕೆಂದು ಆಗ್ರಹಿಸಿ ಹಲವು ಭಾರಿ ಪ್ರತಿಭಟನೆ ಮಾಡಲಾಗಿದೆ.  ಆದರೆ ಯಾವುದೇ ಕ್ರಮ ಜರುಗಿಸಿಲ್ಲ” ಎಂದು ದೂರಿದರು.

“ಮೈಸೂರು ವಿಶ್ವವಿದ್ಯಾನಿಲಯ ಆಡಳಿತ ದುರ್ಬಲವಾಗಿದೆ. ಎಲ್ಲರನ್ನು ಹೆದರಿಸುವ ಗೂಂಡಾಗಿರಿಯನ್ನು ರಾಮಚಂದ್ರ ಅವರು ಮಾಡುತ್ತಿದ್ದಾರೆ. ಈಗಲೂ ಕೂಡ ಹೀಗೆಯೇ ವರ್ತಿಸಿದ್ದಾರೆ. ಅವರನ್ನು ಸೇವೆಯಿಂದ ಕೂಡಲೇ ವಜಾಗೊಳಿಸಬೇಕು” ಎಂದು ಆಗ್ರಹಿಸಿದ್ದಾರೆ.

“ಭ್ರಷ್ಟ ವಿದ್ಯಾರ್ಥಿ ಕ್ಷೇಮಪಾಲನ ಅಧಿಕಾರಿಗೆ ಹಾಗೂ ಭ್ರಷ್ಟ ವಿವಿಗೆ ಧಿಕ್ಕಾರ” ಎಂದು ಹಾಸ್ಟೆಲ್‌ ವಂಚಿತ ವಿದ್ಯಾರ್ಥಿಗಳು ಘೋಷಣೆ ಕೂಗಿದ್ದಾರೆ.

ವಿದ್ಯಾರ್ಥಿಕ್ಷೇಮಪಾಲನ ನಿರ್ದೇಶಕರಾದ ಡಾ.ಎಸ್‌.ಟಿ.ರಾಮಚಂದ್ರ ಅವರು, ನಾನುಗೌರಿ.ಕಾಂ ಜೊತೆಗೆ ಮಾತನಾಡಿ, “ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳ ಸಂಖ್ಯೆ ಕಳೆದ ವರ್ಷಕ್ಕಿಂತ ಈಗ ಹೆಚ್ಚಾಗಿದೆ. ಸಿಸ್ಟ್‌ನವರಿಗೆ ಪ್ರವೇಶಾತಿ ನೀಡಲು ಕೊಠಡಿಗಳ ಕೊರತೆ ಇದೆ. ಈಗ ಇರುವ ಕೊಠಡಿಗಳಿಗೆ ಹೆಚ್ಚಿನ ವಿದ್ಯಾರ್ಥಿಗಳನ್ನು ತುಂಬಲಾಗಿದೆ” ಎಂದು ತಿಳಿಸಿದರು.

“ಸಂಶೋಧನಾ ವಿದ್ಯಾರ್ಥಿಗಳಿಗೆ ಹಾಸ್ಟೆಲ್ ಸಿದ್ಧವಾಗುತ್ತಿದೆ. ಹೊಸ ಹಾಸ್ಟೆಲ್‌ ಮುಂದಿನ ತಿಂಗಳು ಆರಂಭವಾಗುವ ಸಾಧ್ಯತೆ ಇದೆ. ಆದರೆ ಸಿಸ್ಟ್‌ ವಿದ್ಯಾರ್ಥಿಗಳಿಗೆ ಪ್ರವೇಶಾತಿ ಕೊಡಲು ಕೊಠಡಿಗಳಿಲ್ಲ. ಹಿಂದಿನ ವರ್ಷಗಳಲ್ಲಿ ಮಾಸ್ಟರ್‌ ಡಿಗ್ರಿ ಪ್ರವೇಶಾತಿ ಕಡಿಮೆ ಇತ್ತು. ಹೀಗಾಗಿ ಸಿಸ್ಟ್‌ನವರಿಗೆ ಪ್ರವೇಶಾತಿಯನ್ನು ನೀಡಲಾಗಿತ್ತು” ಎಂದರು.

“ಬಹುತೇಕರು ಮಾಸ್ಟರ್ ಡಿಗ್ರಿ ಮುಗಿಸಿಕೊಂಡು ಡಿಪ್ಲೊಮೊ ಸೇರಿದ್ದಾರೆ. ಆದರೆ ಸ್ನಾತಕೋತ್ತರ ಪದವಿ ಸೇರುತ್ತಿರುವವರಿಗೆ ಮೊದಲ ಆದ್ಯತೆ ನೀಡಬೇಕು. ಪ್ರವೇಶಾತಿ ಹೆಚ್ಚಿದಂತೆ ಹಾಸ್ಟೆಲ್‌ಗಳ ಮೇಲೆ ಒತ್ತಡವೂ ಹೆಚ್ಚುತ್ತದೆ. ಹೊಸ ಹಾಸ್ಟೆಲ್‌ಗಳ ಅಗತ್ಯವಿದೆ. ಇರುವ ಹಾಸ್ಟೆಲ್‌ನಲ್ಲಿಯೇ ಪ್ರವೇಶಾತಿ ನೀಡುವುದು ಕಷ್ಟವಾಗುತ್ತದೆ” ಎಂದು ಹೇಳಿದರು.

ಹಾಸ್ಟೆಲ್‌ಗಳ ಸಾಮಾರ್ಥ್ಯದ ಕುರಿತು ಮಾಹಿತಿ ನೀಡಿದ ಅವರು, “ಬಾಯ್ಸ್‌ ಹಾಸ್ಟೆಲ್‌ಗಳ ಪೈಕಿ ಬ್ಲಾಕ್‌-1ರಲ್ಲಿ 232 ಕೊಠಡಿ ಇದೆ. 270 ಜನರಿಗೆ ಪ್ರವೇಶಾತಿ ನೀಡಬಹುದು. 427 ಜನರಿಗೆ ನೀಡಲಾಗಿದೆ. ಬ್ಲಾಕ್‌ 2ರಲ್ಲಿ 228 ಕೊಠಡಿಗಳಿವೆ. ಕಚೇರಿ ಉಪಯೋಗಕ್ಕೆ ಕೆಲವು ಕೊಠಡಿ ಬಳಸಲಾಗುತ್ತಿದೆ. 220 ವಿದ್ಯಾರ್ಥಿಗಳಿಗೆ ಪ್ರವೇಶಾತಿ ನೀಡಬಹುದು. ಆದರೆ 330 ಜನರನ್ನು ತುಂಬಿದ್ದೇವೆ. ಬ್ಲಾಕ್‌ 3ರಲ್ಲಿ 38 ರೂಮ್‌ಗಳಿವೆ. ಆರು ಜನರನ್ನು ಒಂದು ಕೊಠಡಿಗೆ ತುಂಬಬಹುದು. ಒಟ್ಟು 180 ಜನರಿಗೆ ಪ್ರವೇಶಾತಿ ನೀಡಬೇಕು. ನಾವು 232 ಜನರಿಗೆ ನೀಡಿದ್ದೇವೆ. ಗರ್ಲ್ಸ್ ಹಾಸ್ಟೆಲ್‌ಗಳ ಪೈಕಿ ಬ್ಲಾಕ್‌ 1ರಲ್ಲಿ 146 ಕೊಠಡಿಗಳಿವೆ. 420 ಜನರಿಗೆ ಪ್ರವೇಶಾತಿ ನೀಡಬಹುದು, 455 ಪ್ರವೇಶಾತಿ ನೀಡಿದ್ದೇವೆ. ಬ್ಲಾಕ್‌ 2ರಲ್ಲಿ 120 ರೂಮ್‌ಗಳಿವೆ. 275 ಜನರಿಗೆ ಪ್ರವೇಶಾತಿ ನೀಡಬಹುದು, 375 ವಿದ್ಯಾರ್ಥಿನಿಯರಿಗೆ ಪ್ರವೇಶಾತಿ ನೀಡಿದ್ದೇವೆ. ಬ್ಲಾಕ್‌ 3ರಲ್ಲಿ  46 ಕೊಠಡಿಗಳಿವೆ. ಆರು ಜನರು ಒಂದು ಕೊಠಡಿಯಲ್ಲಿ ಇರಬಹುದು. 280 ಜನರಿಗೆ ಪ್ರವೇಶ ನೀಡುವಲ್ಲಿ 323 ಜನರಿಗೆ ನೀಡಿದ್ದೇವೆ. ಇನ್ನು ಸಿಸ್ಟ್‌ನವರರನ್ನು ಎಲ್ಲಿಗೆ ತುಂಬಲಿ?” ಎಂದು ಪ್ರಶ್ನಿಸಿದರು.

“ಕಳೆದ ವರ್ಷ ಎಷ್ಟು ಪ್ರವೇಶಾತಿ ನೀಡಲಾಗಿದೆ” ಎಂಬುದನ್ನು ನಾನುಗೌರಿ.ಕಾಂ ಪರಿಶೀಲಿಸಲು ಯತ್ನಿಸಿದೆ. ಮಾಹಿತಿ ಲಭ್ಯವಾಗಿಲ್ಲ.


ಇದನ್ನೂ ಓದಿರಿ: ಬೈಂದೂರು ಬಿಜೆಪಿ ಶಾಸಕನ ಒಡೆತನದ ಕಾಲೇಜಿನ ಸಿಬ್ಬಂದಿಯಿಂದ ವಿದ್ಯಾರ್ಥಿನಿಯರಿಗೆ ಅಶ್ಲೀಲ ಸಂದೇಶ- ಕಿರುಕುಳ ಆರೋಪ: ವಿದ್ಯಾರ್ಥಿಗಳಿಂದ ಧರಣಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...