Homeಕರ್ನಾಟಕಮೈಸೂರು ವಿವಿ: ಸಂಶೋಧಕರಿಗಿಲ್ಲ ಹಾಸ್ಟೆಲ್‌; ಚಾಪೆ, ದಿಂಬಿನೊಂದಿಗೆ ಪ್ರತಿಭಟನೆ

ಮೈಸೂರು ವಿವಿ: ಸಂಶೋಧಕರಿಗಿಲ್ಲ ಹಾಸ್ಟೆಲ್‌; ಚಾಪೆ, ದಿಂಬಿನೊಂದಿಗೆ ಪ್ರತಿಭಟನೆ

ಸಿಸ್ಟ್‌ಗೆ ಪ್ರವೇಶಾತಿ ಪಡೆದಿರುವ ವಿದ್ಯಾರ್ಥಿಗಳಿಗೂ ಹಾಸ್ಟೆಲ್‌ ವ್ಯವಸ್ಥೆ ಇಲ್ಲವಾಗಿದೆ. ಹಾಸ್ಟೆಲ್‌ನಲ್ಲಿ ಕೊಠಡಿ ಕೊರತೆ ಇರುವುದೇ ಸಮಸ್ಯೆಗೆ ಕಾರಣ ಎಂದು ಡೀನ್ ಪ್ರತಿಕ್ರಿಯೆ ನೀಡಿದ್ದಾರೆ.

- Advertisement -
- Advertisement -

“ಸಂಶೋಧನಾ ವಿದ್ಯಾರ್ಥಿಗಳಿಗೆ ಹಾಗೂ ಸಿಸ್ಟ್‌ ಪ್ರವೇಶಾತಿ ಪಡೆದವರಿಗೆ ಹಾಸ್ಟೆಲ್‌ ಸೌಲಭ್ಯ ನೀಡಿಲ್ಲ” ಎಂದು ಮೈಸೂರು ವಿವಿ ಸಂಶೋಧನಾರ್ಥಿಗಳು ಹಾಗೂ ಸಿಸ್ಟ್‌ ವಿದ್ಯಾರ್ಥಿಗಳು ಶುಕ್ರವಾರ ಪ್ರತಿಭಟನೆ ನಡೆಸಿದ್ದಾರೆ.

ಚಾಪೆ, ದಿಂಬಿನೊಂದಿಗೆ ವಿದ್ಯಾರ್ಥಿ ಕ್ಷೇಮಪಾಲನಾ ನಿರ್ದೇಶನಾಲಯದ ಎದುರು ಸೇರಿರುವ ವಿದ್ಯಾರ್ಥಿಗಳು ವಿಶ್ವವಿದ್ಯಾನಿಲಯ ಹಾಗೂ ವಿದ್ಯಾರ್ಥಿ ಕ್ಷೇಮಪಾಲನಾ ನಿರ್ದೇಶಕರಾದ ಡಾ.ಎಸ್‌.ಟಿ.ರಾಮಚಂದ್ರ ವಿರುದ್ಧ ಘೋಷಣೆ ಕೂಗಿದ್ದಾರೆ.

ಸಂಶೋಧಕರ ಸಂಘದ ರಾಜ್ಯಾಧ್ಯಕ್ಷರಾದ ಎಸ್‌.ಮರಿದೇವಯ್ಯ ಮಾತನಾಡಿ, “ಸಿಸ್ಟ್‌ಗೆ ಪ್ರವೇಶಾತಿ ಪಡೆದಿರುವ 150 ವಿದ್ಯಾರ್ಥಿಗಳಿಗೆ, ಸಂಶೋಧನಾರ್ಥಿಗಳಿಗೆ ಹಾಸ್ಟೆಲ್ ಪ್ರವೇಶಾತಿ ವಿಳಂಬ ಮಾಡಲಾಗುತ್ತಿದೆ. ಹೀಗಾಗಿ ಡೀನ್‌‌ ಕಚೇರಿ ಎದುರು ಅಹೋರಾತ್ರಿ ಪ್ರತಿಭಟನೆ ಹಮ್ಮಿಕೊಂಡಿದ್ದೇವೆ” ಎಂದು ತಿಳಿಸಿದ್ದಾರೆ.

“ಹಾಸ್ಟೆಲ್‌ ಪ್ರವೇಶಾತಿಗಾಗಿ ಕಳೆದ ನಾಲ್ಕೈದು ತಿಂಗಳಿಂದ ಒತ್ತಾಯ ಮಾಡುತ್ತಿದ್ದೇವೆ. ಮೈಸೂರು ವಿವಿ ವಿದ್ಯಾರ್ಥಿ ಕ್ಷೇಮಪಾಲನ ನಿರ್ದೇಶಕರಾಗಿರುವ ಡಾ.ರಾಮಚಂದ್ರ ಅವರೇ ಈ ಅವಾಂತರಗಳಿಗೆ ಕಾರಣ. ಹೀಗಾಗಿ ರಾಮಚಂದ್ರ ಅವರನ್ನು ವಜಾ ಮಾಡಬೇಕೆಂದು ಆಗ್ರಹಿಸಿ ಹಲವು ಭಾರಿ ಪ್ರತಿಭಟನೆ ಮಾಡಲಾಗಿದೆ.  ಆದರೆ ಯಾವುದೇ ಕ್ರಮ ಜರುಗಿಸಿಲ್ಲ” ಎಂದು ದೂರಿದರು.

“ಮೈಸೂರು ವಿಶ್ವವಿದ್ಯಾನಿಲಯ ಆಡಳಿತ ದುರ್ಬಲವಾಗಿದೆ. ಎಲ್ಲರನ್ನು ಹೆದರಿಸುವ ಗೂಂಡಾಗಿರಿಯನ್ನು ರಾಮಚಂದ್ರ ಅವರು ಮಾಡುತ್ತಿದ್ದಾರೆ. ಈಗಲೂ ಕೂಡ ಹೀಗೆಯೇ ವರ್ತಿಸಿದ್ದಾರೆ. ಅವರನ್ನು ಸೇವೆಯಿಂದ ಕೂಡಲೇ ವಜಾಗೊಳಿಸಬೇಕು” ಎಂದು ಆಗ್ರಹಿಸಿದ್ದಾರೆ.

“ಭ್ರಷ್ಟ ವಿದ್ಯಾರ್ಥಿ ಕ್ಷೇಮಪಾಲನ ಅಧಿಕಾರಿಗೆ ಹಾಗೂ ಭ್ರಷ್ಟ ವಿವಿಗೆ ಧಿಕ್ಕಾರ” ಎಂದು ಹಾಸ್ಟೆಲ್‌ ವಂಚಿತ ವಿದ್ಯಾರ್ಥಿಗಳು ಘೋಷಣೆ ಕೂಗಿದ್ದಾರೆ.

ವಿದ್ಯಾರ್ಥಿಕ್ಷೇಮಪಾಲನ ನಿರ್ದೇಶಕರಾದ ಡಾ.ಎಸ್‌.ಟಿ.ರಾಮಚಂದ್ರ ಅವರು, ನಾನುಗೌರಿ.ಕಾಂ ಜೊತೆಗೆ ಮಾತನಾಡಿ, “ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳ ಸಂಖ್ಯೆ ಕಳೆದ ವರ್ಷಕ್ಕಿಂತ ಈಗ ಹೆಚ್ಚಾಗಿದೆ. ಸಿಸ್ಟ್‌ನವರಿಗೆ ಪ್ರವೇಶಾತಿ ನೀಡಲು ಕೊಠಡಿಗಳ ಕೊರತೆ ಇದೆ. ಈಗ ಇರುವ ಕೊಠಡಿಗಳಿಗೆ ಹೆಚ್ಚಿನ ವಿದ್ಯಾರ್ಥಿಗಳನ್ನು ತುಂಬಲಾಗಿದೆ” ಎಂದು ತಿಳಿಸಿದರು.

“ಸಂಶೋಧನಾ ವಿದ್ಯಾರ್ಥಿಗಳಿಗೆ ಹಾಸ್ಟೆಲ್ ಸಿದ್ಧವಾಗುತ್ತಿದೆ. ಹೊಸ ಹಾಸ್ಟೆಲ್‌ ಮುಂದಿನ ತಿಂಗಳು ಆರಂಭವಾಗುವ ಸಾಧ್ಯತೆ ಇದೆ. ಆದರೆ ಸಿಸ್ಟ್‌ ವಿದ್ಯಾರ್ಥಿಗಳಿಗೆ ಪ್ರವೇಶಾತಿ ಕೊಡಲು ಕೊಠಡಿಗಳಿಲ್ಲ. ಹಿಂದಿನ ವರ್ಷಗಳಲ್ಲಿ ಮಾಸ್ಟರ್‌ ಡಿಗ್ರಿ ಪ್ರವೇಶಾತಿ ಕಡಿಮೆ ಇತ್ತು. ಹೀಗಾಗಿ ಸಿಸ್ಟ್‌ನವರಿಗೆ ಪ್ರವೇಶಾತಿಯನ್ನು ನೀಡಲಾಗಿತ್ತು” ಎಂದರು.

“ಬಹುತೇಕರು ಮಾಸ್ಟರ್ ಡಿಗ್ರಿ ಮುಗಿಸಿಕೊಂಡು ಡಿಪ್ಲೊಮೊ ಸೇರಿದ್ದಾರೆ. ಆದರೆ ಸ್ನಾತಕೋತ್ತರ ಪದವಿ ಸೇರುತ್ತಿರುವವರಿಗೆ ಮೊದಲ ಆದ್ಯತೆ ನೀಡಬೇಕು. ಪ್ರವೇಶಾತಿ ಹೆಚ್ಚಿದಂತೆ ಹಾಸ್ಟೆಲ್‌ಗಳ ಮೇಲೆ ಒತ್ತಡವೂ ಹೆಚ್ಚುತ್ತದೆ. ಹೊಸ ಹಾಸ್ಟೆಲ್‌ಗಳ ಅಗತ್ಯವಿದೆ. ಇರುವ ಹಾಸ್ಟೆಲ್‌ನಲ್ಲಿಯೇ ಪ್ರವೇಶಾತಿ ನೀಡುವುದು ಕಷ್ಟವಾಗುತ್ತದೆ” ಎಂದು ಹೇಳಿದರು.

ಹಾಸ್ಟೆಲ್‌ಗಳ ಸಾಮಾರ್ಥ್ಯದ ಕುರಿತು ಮಾಹಿತಿ ನೀಡಿದ ಅವರು, “ಬಾಯ್ಸ್‌ ಹಾಸ್ಟೆಲ್‌ಗಳ ಪೈಕಿ ಬ್ಲಾಕ್‌-1ರಲ್ಲಿ 232 ಕೊಠಡಿ ಇದೆ. 270 ಜನರಿಗೆ ಪ್ರವೇಶಾತಿ ನೀಡಬಹುದು. 427 ಜನರಿಗೆ ನೀಡಲಾಗಿದೆ. ಬ್ಲಾಕ್‌ 2ರಲ್ಲಿ 228 ಕೊಠಡಿಗಳಿವೆ. ಕಚೇರಿ ಉಪಯೋಗಕ್ಕೆ ಕೆಲವು ಕೊಠಡಿ ಬಳಸಲಾಗುತ್ತಿದೆ. 220 ವಿದ್ಯಾರ್ಥಿಗಳಿಗೆ ಪ್ರವೇಶಾತಿ ನೀಡಬಹುದು. ಆದರೆ 330 ಜನರನ್ನು ತುಂಬಿದ್ದೇವೆ. ಬ್ಲಾಕ್‌ 3ರಲ್ಲಿ 38 ರೂಮ್‌ಗಳಿವೆ. ಆರು ಜನರನ್ನು ಒಂದು ಕೊಠಡಿಗೆ ತುಂಬಬಹುದು. ಒಟ್ಟು 180 ಜನರಿಗೆ ಪ್ರವೇಶಾತಿ ನೀಡಬೇಕು. ನಾವು 232 ಜನರಿಗೆ ನೀಡಿದ್ದೇವೆ. ಗರ್ಲ್ಸ್ ಹಾಸ್ಟೆಲ್‌ಗಳ ಪೈಕಿ ಬ್ಲಾಕ್‌ 1ರಲ್ಲಿ 146 ಕೊಠಡಿಗಳಿವೆ. 420 ಜನರಿಗೆ ಪ್ರವೇಶಾತಿ ನೀಡಬಹುದು, 455 ಪ್ರವೇಶಾತಿ ನೀಡಿದ್ದೇವೆ. ಬ್ಲಾಕ್‌ 2ರಲ್ಲಿ 120 ರೂಮ್‌ಗಳಿವೆ. 275 ಜನರಿಗೆ ಪ್ರವೇಶಾತಿ ನೀಡಬಹುದು, 375 ವಿದ್ಯಾರ್ಥಿನಿಯರಿಗೆ ಪ್ರವೇಶಾತಿ ನೀಡಿದ್ದೇವೆ. ಬ್ಲಾಕ್‌ 3ರಲ್ಲಿ  46 ಕೊಠಡಿಗಳಿವೆ. ಆರು ಜನರು ಒಂದು ಕೊಠಡಿಯಲ್ಲಿ ಇರಬಹುದು. 280 ಜನರಿಗೆ ಪ್ರವೇಶ ನೀಡುವಲ್ಲಿ 323 ಜನರಿಗೆ ನೀಡಿದ್ದೇವೆ. ಇನ್ನು ಸಿಸ್ಟ್‌ನವರರನ್ನು ಎಲ್ಲಿಗೆ ತುಂಬಲಿ?” ಎಂದು ಪ್ರಶ್ನಿಸಿದರು.

“ಕಳೆದ ವರ್ಷ ಎಷ್ಟು ಪ್ರವೇಶಾತಿ ನೀಡಲಾಗಿದೆ” ಎಂಬುದನ್ನು ನಾನುಗೌರಿ.ಕಾಂ ಪರಿಶೀಲಿಸಲು ಯತ್ನಿಸಿದೆ. ಮಾಹಿತಿ ಲಭ್ಯವಾಗಿಲ್ಲ.


ಇದನ್ನೂ ಓದಿರಿ: ಬೈಂದೂರು ಬಿಜೆಪಿ ಶಾಸಕನ ಒಡೆತನದ ಕಾಲೇಜಿನ ಸಿಬ್ಬಂದಿಯಿಂದ ವಿದ್ಯಾರ್ಥಿನಿಯರಿಗೆ ಅಶ್ಲೀಲ ಸಂದೇಶ- ಕಿರುಕುಳ ಆರೋಪ: ವಿದ್ಯಾರ್ಥಿಗಳಿಂದ ಧರಣಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....