Homeಕರ್ನಾಟಕಮೈಸೂರು ವಿವಿ: ಸಂಶೋಧಕರಿಗಿಲ್ಲ ಹಾಸ್ಟೆಲ್‌; ಚಾಪೆ, ದಿಂಬಿನೊಂದಿಗೆ ಪ್ರತಿಭಟನೆ

ಮೈಸೂರು ವಿವಿ: ಸಂಶೋಧಕರಿಗಿಲ್ಲ ಹಾಸ್ಟೆಲ್‌; ಚಾಪೆ, ದಿಂಬಿನೊಂದಿಗೆ ಪ್ರತಿಭಟನೆ

ಸಿಸ್ಟ್‌ಗೆ ಪ್ರವೇಶಾತಿ ಪಡೆದಿರುವ ವಿದ್ಯಾರ್ಥಿಗಳಿಗೂ ಹಾಸ್ಟೆಲ್‌ ವ್ಯವಸ್ಥೆ ಇಲ್ಲವಾಗಿದೆ. ಹಾಸ್ಟೆಲ್‌ನಲ್ಲಿ ಕೊಠಡಿ ಕೊರತೆ ಇರುವುದೇ ಸಮಸ್ಯೆಗೆ ಕಾರಣ ಎಂದು ಡೀನ್ ಪ್ರತಿಕ್ರಿಯೆ ನೀಡಿದ್ದಾರೆ.

- Advertisement -
- Advertisement -

“ಸಂಶೋಧನಾ ವಿದ್ಯಾರ್ಥಿಗಳಿಗೆ ಹಾಗೂ ಸಿಸ್ಟ್‌ ಪ್ರವೇಶಾತಿ ಪಡೆದವರಿಗೆ ಹಾಸ್ಟೆಲ್‌ ಸೌಲಭ್ಯ ನೀಡಿಲ್ಲ” ಎಂದು ಮೈಸೂರು ವಿವಿ ಸಂಶೋಧನಾರ್ಥಿಗಳು ಹಾಗೂ ಸಿಸ್ಟ್‌ ವಿದ್ಯಾರ್ಥಿಗಳು ಶುಕ್ರವಾರ ಪ್ರತಿಭಟನೆ ನಡೆಸಿದ್ದಾರೆ.

ಚಾಪೆ, ದಿಂಬಿನೊಂದಿಗೆ ವಿದ್ಯಾರ್ಥಿ ಕ್ಷೇಮಪಾಲನಾ ನಿರ್ದೇಶನಾಲಯದ ಎದುರು ಸೇರಿರುವ ವಿದ್ಯಾರ್ಥಿಗಳು ವಿಶ್ವವಿದ್ಯಾನಿಲಯ ಹಾಗೂ ವಿದ್ಯಾರ್ಥಿ ಕ್ಷೇಮಪಾಲನಾ ನಿರ್ದೇಶಕರಾದ ಡಾ.ಎಸ್‌.ಟಿ.ರಾಮಚಂದ್ರ ವಿರುದ್ಧ ಘೋಷಣೆ ಕೂಗಿದ್ದಾರೆ.

ಸಂಶೋಧಕರ ಸಂಘದ ರಾಜ್ಯಾಧ್ಯಕ್ಷರಾದ ಎಸ್‌.ಮರಿದೇವಯ್ಯ ಮಾತನಾಡಿ, “ಸಿಸ್ಟ್‌ಗೆ ಪ್ರವೇಶಾತಿ ಪಡೆದಿರುವ 150 ವಿದ್ಯಾರ್ಥಿಗಳಿಗೆ, ಸಂಶೋಧನಾರ್ಥಿಗಳಿಗೆ ಹಾಸ್ಟೆಲ್ ಪ್ರವೇಶಾತಿ ವಿಳಂಬ ಮಾಡಲಾಗುತ್ತಿದೆ. ಹೀಗಾಗಿ ಡೀನ್‌‌ ಕಚೇರಿ ಎದುರು ಅಹೋರಾತ್ರಿ ಪ್ರತಿಭಟನೆ ಹಮ್ಮಿಕೊಂಡಿದ್ದೇವೆ” ಎಂದು ತಿಳಿಸಿದ್ದಾರೆ.

“ಹಾಸ್ಟೆಲ್‌ ಪ್ರವೇಶಾತಿಗಾಗಿ ಕಳೆದ ನಾಲ್ಕೈದು ತಿಂಗಳಿಂದ ಒತ್ತಾಯ ಮಾಡುತ್ತಿದ್ದೇವೆ. ಮೈಸೂರು ವಿವಿ ವಿದ್ಯಾರ್ಥಿ ಕ್ಷೇಮಪಾಲನ ನಿರ್ದೇಶಕರಾಗಿರುವ ಡಾ.ರಾಮಚಂದ್ರ ಅವರೇ ಈ ಅವಾಂತರಗಳಿಗೆ ಕಾರಣ. ಹೀಗಾಗಿ ರಾಮಚಂದ್ರ ಅವರನ್ನು ವಜಾ ಮಾಡಬೇಕೆಂದು ಆಗ್ರಹಿಸಿ ಹಲವು ಭಾರಿ ಪ್ರತಿಭಟನೆ ಮಾಡಲಾಗಿದೆ.  ಆದರೆ ಯಾವುದೇ ಕ್ರಮ ಜರುಗಿಸಿಲ್ಲ” ಎಂದು ದೂರಿದರು.

“ಮೈಸೂರು ವಿಶ್ವವಿದ್ಯಾನಿಲಯ ಆಡಳಿತ ದುರ್ಬಲವಾಗಿದೆ. ಎಲ್ಲರನ್ನು ಹೆದರಿಸುವ ಗೂಂಡಾಗಿರಿಯನ್ನು ರಾಮಚಂದ್ರ ಅವರು ಮಾಡುತ್ತಿದ್ದಾರೆ. ಈಗಲೂ ಕೂಡ ಹೀಗೆಯೇ ವರ್ತಿಸಿದ್ದಾರೆ. ಅವರನ್ನು ಸೇವೆಯಿಂದ ಕೂಡಲೇ ವಜಾಗೊಳಿಸಬೇಕು” ಎಂದು ಆಗ್ರಹಿಸಿದ್ದಾರೆ.

“ಭ್ರಷ್ಟ ವಿದ್ಯಾರ್ಥಿ ಕ್ಷೇಮಪಾಲನ ಅಧಿಕಾರಿಗೆ ಹಾಗೂ ಭ್ರಷ್ಟ ವಿವಿಗೆ ಧಿಕ್ಕಾರ” ಎಂದು ಹಾಸ್ಟೆಲ್‌ ವಂಚಿತ ವಿದ್ಯಾರ್ಥಿಗಳು ಘೋಷಣೆ ಕೂಗಿದ್ದಾರೆ.

ವಿದ್ಯಾರ್ಥಿಕ್ಷೇಮಪಾಲನ ನಿರ್ದೇಶಕರಾದ ಡಾ.ಎಸ್‌.ಟಿ.ರಾಮಚಂದ್ರ ಅವರು, ನಾನುಗೌರಿ.ಕಾಂ ಜೊತೆಗೆ ಮಾತನಾಡಿ, “ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳ ಸಂಖ್ಯೆ ಕಳೆದ ವರ್ಷಕ್ಕಿಂತ ಈಗ ಹೆಚ್ಚಾಗಿದೆ. ಸಿಸ್ಟ್‌ನವರಿಗೆ ಪ್ರವೇಶಾತಿ ನೀಡಲು ಕೊಠಡಿಗಳ ಕೊರತೆ ಇದೆ. ಈಗ ಇರುವ ಕೊಠಡಿಗಳಿಗೆ ಹೆಚ್ಚಿನ ವಿದ್ಯಾರ್ಥಿಗಳನ್ನು ತುಂಬಲಾಗಿದೆ” ಎಂದು ತಿಳಿಸಿದರು.

“ಸಂಶೋಧನಾ ವಿದ್ಯಾರ್ಥಿಗಳಿಗೆ ಹಾಸ್ಟೆಲ್ ಸಿದ್ಧವಾಗುತ್ತಿದೆ. ಹೊಸ ಹಾಸ್ಟೆಲ್‌ ಮುಂದಿನ ತಿಂಗಳು ಆರಂಭವಾಗುವ ಸಾಧ್ಯತೆ ಇದೆ. ಆದರೆ ಸಿಸ್ಟ್‌ ವಿದ್ಯಾರ್ಥಿಗಳಿಗೆ ಪ್ರವೇಶಾತಿ ಕೊಡಲು ಕೊಠಡಿಗಳಿಲ್ಲ. ಹಿಂದಿನ ವರ್ಷಗಳಲ್ಲಿ ಮಾಸ್ಟರ್‌ ಡಿಗ್ರಿ ಪ್ರವೇಶಾತಿ ಕಡಿಮೆ ಇತ್ತು. ಹೀಗಾಗಿ ಸಿಸ್ಟ್‌ನವರಿಗೆ ಪ್ರವೇಶಾತಿಯನ್ನು ನೀಡಲಾಗಿತ್ತು” ಎಂದರು.

“ಬಹುತೇಕರು ಮಾಸ್ಟರ್ ಡಿಗ್ರಿ ಮುಗಿಸಿಕೊಂಡು ಡಿಪ್ಲೊಮೊ ಸೇರಿದ್ದಾರೆ. ಆದರೆ ಸ್ನಾತಕೋತ್ತರ ಪದವಿ ಸೇರುತ್ತಿರುವವರಿಗೆ ಮೊದಲ ಆದ್ಯತೆ ನೀಡಬೇಕು. ಪ್ರವೇಶಾತಿ ಹೆಚ್ಚಿದಂತೆ ಹಾಸ್ಟೆಲ್‌ಗಳ ಮೇಲೆ ಒತ್ತಡವೂ ಹೆಚ್ಚುತ್ತದೆ. ಹೊಸ ಹಾಸ್ಟೆಲ್‌ಗಳ ಅಗತ್ಯವಿದೆ. ಇರುವ ಹಾಸ್ಟೆಲ್‌ನಲ್ಲಿಯೇ ಪ್ರವೇಶಾತಿ ನೀಡುವುದು ಕಷ್ಟವಾಗುತ್ತದೆ” ಎಂದು ಹೇಳಿದರು.

ಹಾಸ್ಟೆಲ್‌ಗಳ ಸಾಮಾರ್ಥ್ಯದ ಕುರಿತು ಮಾಹಿತಿ ನೀಡಿದ ಅವರು, “ಬಾಯ್ಸ್‌ ಹಾಸ್ಟೆಲ್‌ಗಳ ಪೈಕಿ ಬ್ಲಾಕ್‌-1ರಲ್ಲಿ 232 ಕೊಠಡಿ ಇದೆ. 270 ಜನರಿಗೆ ಪ್ರವೇಶಾತಿ ನೀಡಬಹುದು. 427 ಜನರಿಗೆ ನೀಡಲಾಗಿದೆ. ಬ್ಲಾಕ್‌ 2ರಲ್ಲಿ 228 ಕೊಠಡಿಗಳಿವೆ. ಕಚೇರಿ ಉಪಯೋಗಕ್ಕೆ ಕೆಲವು ಕೊಠಡಿ ಬಳಸಲಾಗುತ್ತಿದೆ. 220 ವಿದ್ಯಾರ್ಥಿಗಳಿಗೆ ಪ್ರವೇಶಾತಿ ನೀಡಬಹುದು. ಆದರೆ 330 ಜನರನ್ನು ತುಂಬಿದ್ದೇವೆ. ಬ್ಲಾಕ್‌ 3ರಲ್ಲಿ 38 ರೂಮ್‌ಗಳಿವೆ. ಆರು ಜನರನ್ನು ಒಂದು ಕೊಠಡಿಗೆ ತುಂಬಬಹುದು. ಒಟ್ಟು 180 ಜನರಿಗೆ ಪ್ರವೇಶಾತಿ ನೀಡಬೇಕು. ನಾವು 232 ಜನರಿಗೆ ನೀಡಿದ್ದೇವೆ. ಗರ್ಲ್ಸ್ ಹಾಸ್ಟೆಲ್‌ಗಳ ಪೈಕಿ ಬ್ಲಾಕ್‌ 1ರಲ್ಲಿ 146 ಕೊಠಡಿಗಳಿವೆ. 420 ಜನರಿಗೆ ಪ್ರವೇಶಾತಿ ನೀಡಬಹುದು, 455 ಪ್ರವೇಶಾತಿ ನೀಡಿದ್ದೇವೆ. ಬ್ಲಾಕ್‌ 2ರಲ್ಲಿ 120 ರೂಮ್‌ಗಳಿವೆ. 275 ಜನರಿಗೆ ಪ್ರವೇಶಾತಿ ನೀಡಬಹುದು, 375 ವಿದ್ಯಾರ್ಥಿನಿಯರಿಗೆ ಪ್ರವೇಶಾತಿ ನೀಡಿದ್ದೇವೆ. ಬ್ಲಾಕ್‌ 3ರಲ್ಲಿ  46 ಕೊಠಡಿಗಳಿವೆ. ಆರು ಜನರು ಒಂದು ಕೊಠಡಿಯಲ್ಲಿ ಇರಬಹುದು. 280 ಜನರಿಗೆ ಪ್ರವೇಶ ನೀಡುವಲ್ಲಿ 323 ಜನರಿಗೆ ನೀಡಿದ್ದೇವೆ. ಇನ್ನು ಸಿಸ್ಟ್‌ನವರರನ್ನು ಎಲ್ಲಿಗೆ ತುಂಬಲಿ?” ಎಂದು ಪ್ರಶ್ನಿಸಿದರು.

“ಕಳೆದ ವರ್ಷ ಎಷ್ಟು ಪ್ರವೇಶಾತಿ ನೀಡಲಾಗಿದೆ” ಎಂಬುದನ್ನು ನಾನುಗೌರಿ.ಕಾಂ ಪರಿಶೀಲಿಸಲು ಯತ್ನಿಸಿದೆ. ಮಾಹಿತಿ ಲಭ್ಯವಾಗಿಲ್ಲ.


ಇದನ್ನೂ ಓದಿರಿ: ಬೈಂದೂರು ಬಿಜೆಪಿ ಶಾಸಕನ ಒಡೆತನದ ಕಾಲೇಜಿನ ಸಿಬ್ಬಂದಿಯಿಂದ ವಿದ್ಯಾರ್ಥಿನಿಯರಿಗೆ ಅಶ್ಲೀಲ ಸಂದೇಶ- ಕಿರುಕುಳ ಆರೋಪ: ವಿದ್ಯಾರ್ಥಿಗಳಿಂದ ಧರಣಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೊಬೈಲ್ ಪತ್ತೆ ಪ್ರಕರಣ: ಪ್ರಜ್ವಲ್ ರೇವಣ್ಣ 2 ದಿನ ಪೊಲೀಸ್ ಕಸ್ಟಡಿಗೆ

ಅತ್ಯಾಚಾರ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿ ಸಜಾ ಕೈದಿಯಾಗಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಮತ್ತೊಂದು ಕಾನೂನು ಸಂಕಷ್ಟ ಎದುರಾಗಿದೆ. ಜೈಲಿನ ಅವರ ಕೊಠಡಿಯಲ್ಲಿ ಅಕ್ರಮವಾಗಿ ಮೊಬೈಲ್...

ರಾಜ್ಯದಲ್ಲಿ ಅವಧಿ ಮೀರಿದ ಆಹಾರ ಪೂರೈಕೆಯ ಬೃಹತ್ ದಂಧೆ: ₹1.43 ಕೋಟಿಯ ಉತ್ಪನ್ನಗಳು ಜಪ್ತಿ

ಆನ್‌ಲೈನ್ ಮತ್ತು ಇ-ಕಾಮರ್ಸ್ ವೇದಿಕೆಗಳ ಮೂಲಕ ಸಾರ್ವಜನಿಕರಿಗೆ ಅವಧಿ ಮೀರಿದ ಹಾಗೂ ಕಳಪೆ ಗುಣಮಟ್ಟದ ಆಹಾರ ಉತ್ಪನ್ನಗಳನ್ನು ಸರಬರಾಜು ಮಾಡುತ್ತಿದ್ದ ಬೃಹತ್ ದಂಧೆಯನ್ನು ಕರ್ನಾಟಕ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ...

ಭಾರತೀಯ ಮಹಿಳೆಯನ್ನು ಬಾಂಗ್ಲಾ ಗಡಿಯಾಚೆಗೆ ತಳ್ಳಿದ ಪ್ರಕರಣ : 2 ಲಕ್ಷ ರೂ. ಪರಿಹಾರ ಪಾವತಿಸಲು ಅಸ್ಸಾಂ ಸರ್ಕಾರಕ್ಕೆ ಗುವಾಹಟಿ ಹೈಕೋರ್ಟ್ ಆದೇಶ

ಪಶ್ಚಿಮ ಬಂಗಾಳ ಮೂಲದ ಮುಸ್ಲಿಂ ಮಹಿಳೆಯೊಬ್ಬರಿಗೆ ವಿದೇಶಿಯರ ನ್ಯಾಯಾಧಿಕರಣದ (ಫಾರಿನರ್ಸ್ ಟ್ರಿಬ್ಯೂನಲ್) ಆದೇಶವನ್ನು ಪ್ರಶ್ನಿಸಲು ಯಾವುದೇ ಅವಕಾಶ ನೀಡದೆ, ಅವರನ್ನು ಬಾಂಗ್ಲಾ ಗಡಿಯಾಚೆಗೆ ತಳ್ಳಿದ್ದಕ್ಕಾಗಿ ಮಧ್ಯಂತರ ಪರಿಹಾರವಾಗಿ ಆಕೆಯ ಪತಿಗೆ 2 ಲಕ್ಷ...

ಮಂಡಿಯ ಐಐಟಿ ಕ್ಯಾಂಪಸ್‌ನಲ್ಲಿ ‘ಶೂದ್ರರು ಮೇಲ್ವರ್ಗಗಳ ಸೇವಕರು’ ಎಂಬ ವರ್ಣ ಶ್ರೇಣೀಕರಣ ಚಿತ್ರಣ: ಜಾತಿ ವಿವಾದದ ನಂತರ ತನಿಖೆಗೆ ಆದೇಶ

ಮಂಡಿ: ಶೂದ್ರರನ್ನು ‘ಉನ್ನತ ವರ್ಗಗಳಿಗೆ ಸೇವೆ ಸಲ್ಲಿಸಲು ಉದ್ದೇಶಿಸಿರುವವರು’ ಎಂದು ಬಿಂಬಿಸುವ ಪೋಸ್ಟರ್‌ವೊಂದು ಹಿಮಾಚಲ ಪ್ರದೇಶದ ಐಐಟಿ ಮಂಡಿಯಲ್ಲಿ ಜಾತಿ ವಿವಾದಕ್ಕೆ ಕಾರಣವಾಗಿದ್ದು, ಪ್ರಕರಣದ ಕುರಿತು ಸಂಸ್ಥೆ ತನಿಖೆಗೆ ಆದೇಶಿಸಿದೆ. ಸೆಪ್ಟೆಂಬರ್ 4ರಂದು...

ಎಸ್ಐಆರ್ ಬಳಿಕ ಮಣಿಪುರ, ಸಿಕ್ಕಿಂ, ಮಿಜೋರಾಂನಲ್ಲಿ 2.24 ಲಕ್ಷ ಮತದಾರರ ಹೆಸರು ಕಡಿತ: ಸಿಕ್ಕಿಂನಲ್ಲಿ ಶೇ.11.15ರಷ್ಟು ಇಳಿಕೆ 

ನವದೆಹಲಿ: ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಬಳಿಕ ಈಶಾನ್ಯ ಭಾರತದ ಮಣಿಪುರ, ಸಿಕ್ಕಿಂ ಮತ್ತು ಮಿಜೋರಾಂ ರಾಜ್ಯಗಳ ಮತದಾರರ ಪಟ್ಟಿಯಲ್ಲಿ ದೊಡ್ಡ ಪ್ರಮಾಣದ ಬದಲಾವಣೆ ಕಂಡುಬಂದಿದೆ. ಈ ಮೂರು ರಾಜ್ಯಗಳಲ್ಲಿ...

ಜೆಎನ್‌ಯು ಪ್ರೊಫೆಸರ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ : 10ಕ್ಕೂ ಹೆಚ್ಚು ವಿದ್ಯಾರ್ಥಿನಿಯರಿಂದ ದೂರು

ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) ಆಂತರಿಕ ದೂರುಗಳ ಸಮಿತಿಯು (ಐಸಿಸಿ), ಸುಮಾರು ಹನ್ನೊಂದು ವಿದ್ಯಾರ್ಥಿನಿಯರು ಪ್ರೊಫೆಸರ್ ಒಬ್ಬರ ವಿರುದ್ಧ ಮಾಡಿರುವ ಲೈಂಗಿಕ ಕಿರುಕುಳದ ಆರೋಪಗಳ ಕುರಿತು ಪ್ರಸ್ತುತ ತನಿಖೆ ನಡೆಸುತ್ತಿದೆ ಎಂದು...

ಹಿಂದೂ ಧಾರ್ಮಿಕ ಸಂಘಟನೆ ನಿಯೋಗದ ಭೇಟಿ ವೇಳೆ ಮಹಿಳಾ ಸಿಬ್ಬಂದಿಯನ್ನು ದೂರವಿಟ್ಟ ಆರೋಪ; ಈಫೆಲ್ ಟವರ್‌ನಲ್ಲಿ ನೌಕರರ ಮುಷ್ಕರ

ಹಿಂದೂ ಧಾರ್ಮಿಕ ಸಂಘಟನೆ ಬಿಎಪಿಎಸ್ (BAPS) ನಿಯೋಗದ ಭೇಟಿಯ ವೇಳೆ ಮಹಿಳಾ ಸಿಬ್ಬಂದಿಯನ್ನು ಕೆಲಸದ ಸ್ಥಳಗಳಿಂದ ದೂರವಿಡಲಾಗಿತ್ತು ಎಂಬ ಆರೋಪ ಫ್ರಾನ್ಸ್‌ನಲ್ಲಿ ವಿವಾದಕ್ಕೆ ಕಾರಣವಾಗಿದೆ. ಘಟನೆಯನ್ನು ಖಂಡಿಸಿ ಈಫೆಲ್ ಟವರ್‌ನ ಸಿಬ್ಬಂದಿ ಸೋಮವಾರ...

KPSC ಪಶುವೈದ್ಯಾಧಿಕಾರಿ ನೇಮಕಾತಿ ಅಕ್ರಮ: CID ತನಿಖೆಯಲ್ಲಿ ರೂ. 12 ಕೋಟಿಗೂ ಅಧಿಕ ಡೀಲ್ ಬಯಲು!

ಕರ್ನಾಟಕ ಲೋಕಸೇವಾ ಆಯೋಗ (KPSC) ನಡೆಸಿದ ಪಶುವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿ ಪರೀಕ್ಷೆಯ ಅಕ್ರಮ ಪ್ರಕರಣದ ತನಿಖೆ ತೀವ್ರಗೊಂಡಿದ್ದು, ಸಿಐಡಿ (CID) ತನಿಖೆಯಲ್ಲಿ ಸಾಲು ಸಾಲು ಆಘಾತಕಾರಿ ಸಂಗತಿಗಳು ಹೊರಬಿದ್ದಿವೆ. ಒಟ್ಟು 24 ಅಭ್ಯರ್ಥಿಗಳು ಹಣ...

ದೆಹಲಿಯಲ್ಲಿ ಮಣಿಪುರದ ಸಂಗೀತಗಾರನ ಗುಂಪು ಹತ್ಯೆ : ಎಂಟು ಜನರ ಬಂಧನ

ದೆಹಲಿಯ ಆಶ್ರಮ್ ಪ್ರದೇಶದಲ್ಲಿ ವಾಸಿಸುತ್ತಿದ್ದ ಮಣಿಪುರದ ಸಂಗೀತಗಾರ ಚೊಂಗ್ಥಾಮ್ ವಿಕ್ರಮ್ ಸಿಂಗ್ ಅವರು ಭಾನುವಾರ (ಸೆ.6) ರಾತ್ರಿ ಗುಂಪೊಂದರಿಂದ ಕಲ್ಲು ತೂರಾಟ ಅಥವಾ ಹಲ್ಲೆಗೆ ಒಳಗಾಗಿ, ಅದರಿಂದ ಉಂಟಾದ ಗಂಭೀರ ಗಾಯಗಳಿಂದಾಗಿ ಸೋಮವಾರ...

SIR: ಚಿಂತಕ ಪರಕಾಲ ಪ್ರಭಾಕರ್‌ಗೆ ಚುನಾವಣಾ ಆಯೋಗದಿಂದ ನೋಟಿಸ್

ಅರ್ಥಶಾಸ್ತ್ರಜ್ಞ, ರಾಜಕೀಯ ವಿಶ್ಲೇಷಕ ಡಾ. ಪರಕಾಲ ಪ್ರಭಾಕರ್ ಅವರಿಗೂ ಈಗ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯಡಿ ಚುನಾವಣಾ ಆಯೋಗದ ನೋಟಿಸ್ ಜಾರಿಯಾಗಿದೆ. ವೋಟರ್ ಐಡಿ ಪರಿಶೀಲನೆಯಲ್ಲಿ ‘Logical Discrepancy’ (ತಾರ್ಕಿಕ ಅಸಂಗತತೆ)...