Homeಕರ್ನಾಟಕಮೈಸೂರು ವಿವಿ: ಸಂಶೋಧಕರಿಗಿಲ್ಲ ಹಾಸ್ಟೆಲ್‌; ಚಾಪೆ, ದಿಂಬಿನೊಂದಿಗೆ ಪ್ರತಿಭಟನೆ

ಮೈಸೂರು ವಿವಿ: ಸಂಶೋಧಕರಿಗಿಲ್ಲ ಹಾಸ್ಟೆಲ್‌; ಚಾಪೆ, ದಿಂಬಿನೊಂದಿಗೆ ಪ್ರತಿಭಟನೆ

ಸಿಸ್ಟ್‌ಗೆ ಪ್ರವೇಶಾತಿ ಪಡೆದಿರುವ ವಿದ್ಯಾರ್ಥಿಗಳಿಗೂ ಹಾಸ್ಟೆಲ್‌ ವ್ಯವಸ್ಥೆ ಇಲ್ಲವಾಗಿದೆ. ಹಾಸ್ಟೆಲ್‌ನಲ್ಲಿ ಕೊಠಡಿ ಕೊರತೆ ಇರುವುದೇ ಸಮಸ್ಯೆಗೆ ಕಾರಣ ಎಂದು ಡೀನ್ ಪ್ರತಿಕ್ರಿಯೆ ನೀಡಿದ್ದಾರೆ.

- Advertisement -
- Advertisement -

“ಸಂಶೋಧನಾ ವಿದ್ಯಾರ್ಥಿಗಳಿಗೆ ಹಾಗೂ ಸಿಸ್ಟ್‌ ಪ್ರವೇಶಾತಿ ಪಡೆದವರಿಗೆ ಹಾಸ್ಟೆಲ್‌ ಸೌಲಭ್ಯ ನೀಡಿಲ್ಲ” ಎಂದು ಮೈಸೂರು ವಿವಿ ಸಂಶೋಧನಾರ್ಥಿಗಳು ಹಾಗೂ ಸಿಸ್ಟ್‌ ವಿದ್ಯಾರ್ಥಿಗಳು ಶುಕ್ರವಾರ ಪ್ರತಿಭಟನೆ ನಡೆಸಿದ್ದಾರೆ.

ಚಾಪೆ, ದಿಂಬಿನೊಂದಿಗೆ ವಿದ್ಯಾರ್ಥಿ ಕ್ಷೇಮಪಾಲನಾ ನಿರ್ದೇಶನಾಲಯದ ಎದುರು ಸೇರಿರುವ ವಿದ್ಯಾರ್ಥಿಗಳು ವಿಶ್ವವಿದ್ಯಾನಿಲಯ ಹಾಗೂ ವಿದ್ಯಾರ್ಥಿ ಕ್ಷೇಮಪಾಲನಾ ನಿರ್ದೇಶಕರಾದ ಡಾ.ಎಸ್‌.ಟಿ.ರಾಮಚಂದ್ರ ವಿರುದ್ಧ ಘೋಷಣೆ ಕೂಗಿದ್ದಾರೆ.

ಸಂಶೋಧಕರ ಸಂಘದ ರಾಜ್ಯಾಧ್ಯಕ್ಷರಾದ ಎಸ್‌.ಮರಿದೇವಯ್ಯ ಮಾತನಾಡಿ, “ಸಿಸ್ಟ್‌ಗೆ ಪ್ರವೇಶಾತಿ ಪಡೆದಿರುವ 150 ವಿದ್ಯಾರ್ಥಿಗಳಿಗೆ, ಸಂಶೋಧನಾರ್ಥಿಗಳಿಗೆ ಹಾಸ್ಟೆಲ್ ಪ್ರವೇಶಾತಿ ವಿಳಂಬ ಮಾಡಲಾಗುತ್ತಿದೆ. ಹೀಗಾಗಿ ಡೀನ್‌‌ ಕಚೇರಿ ಎದುರು ಅಹೋರಾತ್ರಿ ಪ್ರತಿಭಟನೆ ಹಮ್ಮಿಕೊಂಡಿದ್ದೇವೆ” ಎಂದು ತಿಳಿಸಿದ್ದಾರೆ.

“ಹಾಸ್ಟೆಲ್‌ ಪ್ರವೇಶಾತಿಗಾಗಿ ಕಳೆದ ನಾಲ್ಕೈದು ತಿಂಗಳಿಂದ ಒತ್ತಾಯ ಮಾಡುತ್ತಿದ್ದೇವೆ. ಮೈಸೂರು ವಿವಿ ವಿದ್ಯಾರ್ಥಿ ಕ್ಷೇಮಪಾಲನ ನಿರ್ದೇಶಕರಾಗಿರುವ ಡಾ.ರಾಮಚಂದ್ರ ಅವರೇ ಈ ಅವಾಂತರಗಳಿಗೆ ಕಾರಣ. ಹೀಗಾಗಿ ರಾಮಚಂದ್ರ ಅವರನ್ನು ವಜಾ ಮಾಡಬೇಕೆಂದು ಆಗ್ರಹಿಸಿ ಹಲವು ಭಾರಿ ಪ್ರತಿಭಟನೆ ಮಾಡಲಾಗಿದೆ.  ಆದರೆ ಯಾವುದೇ ಕ್ರಮ ಜರುಗಿಸಿಲ್ಲ” ಎಂದು ದೂರಿದರು.

“ಮೈಸೂರು ವಿಶ್ವವಿದ್ಯಾನಿಲಯ ಆಡಳಿತ ದುರ್ಬಲವಾಗಿದೆ. ಎಲ್ಲರನ್ನು ಹೆದರಿಸುವ ಗೂಂಡಾಗಿರಿಯನ್ನು ರಾಮಚಂದ್ರ ಅವರು ಮಾಡುತ್ತಿದ್ದಾರೆ. ಈಗಲೂ ಕೂಡ ಹೀಗೆಯೇ ವರ್ತಿಸಿದ್ದಾರೆ. ಅವರನ್ನು ಸೇವೆಯಿಂದ ಕೂಡಲೇ ವಜಾಗೊಳಿಸಬೇಕು” ಎಂದು ಆಗ್ರಹಿಸಿದ್ದಾರೆ.

“ಭ್ರಷ್ಟ ವಿದ್ಯಾರ್ಥಿ ಕ್ಷೇಮಪಾಲನ ಅಧಿಕಾರಿಗೆ ಹಾಗೂ ಭ್ರಷ್ಟ ವಿವಿಗೆ ಧಿಕ್ಕಾರ” ಎಂದು ಹಾಸ್ಟೆಲ್‌ ವಂಚಿತ ವಿದ್ಯಾರ್ಥಿಗಳು ಘೋಷಣೆ ಕೂಗಿದ್ದಾರೆ.

ವಿದ್ಯಾರ್ಥಿಕ್ಷೇಮಪಾಲನ ನಿರ್ದೇಶಕರಾದ ಡಾ.ಎಸ್‌.ಟಿ.ರಾಮಚಂದ್ರ ಅವರು, ನಾನುಗೌರಿ.ಕಾಂ ಜೊತೆಗೆ ಮಾತನಾಡಿ, “ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳ ಸಂಖ್ಯೆ ಕಳೆದ ವರ್ಷಕ್ಕಿಂತ ಈಗ ಹೆಚ್ಚಾಗಿದೆ. ಸಿಸ್ಟ್‌ನವರಿಗೆ ಪ್ರವೇಶಾತಿ ನೀಡಲು ಕೊಠಡಿಗಳ ಕೊರತೆ ಇದೆ. ಈಗ ಇರುವ ಕೊಠಡಿಗಳಿಗೆ ಹೆಚ್ಚಿನ ವಿದ್ಯಾರ್ಥಿಗಳನ್ನು ತುಂಬಲಾಗಿದೆ” ಎಂದು ತಿಳಿಸಿದರು.

“ಸಂಶೋಧನಾ ವಿದ್ಯಾರ್ಥಿಗಳಿಗೆ ಹಾಸ್ಟೆಲ್ ಸಿದ್ಧವಾಗುತ್ತಿದೆ. ಹೊಸ ಹಾಸ್ಟೆಲ್‌ ಮುಂದಿನ ತಿಂಗಳು ಆರಂಭವಾಗುವ ಸಾಧ್ಯತೆ ಇದೆ. ಆದರೆ ಸಿಸ್ಟ್‌ ವಿದ್ಯಾರ್ಥಿಗಳಿಗೆ ಪ್ರವೇಶಾತಿ ಕೊಡಲು ಕೊಠಡಿಗಳಿಲ್ಲ. ಹಿಂದಿನ ವರ್ಷಗಳಲ್ಲಿ ಮಾಸ್ಟರ್‌ ಡಿಗ್ರಿ ಪ್ರವೇಶಾತಿ ಕಡಿಮೆ ಇತ್ತು. ಹೀಗಾಗಿ ಸಿಸ್ಟ್‌ನವರಿಗೆ ಪ್ರವೇಶಾತಿಯನ್ನು ನೀಡಲಾಗಿತ್ತು” ಎಂದರು.

“ಬಹುತೇಕರು ಮಾಸ್ಟರ್ ಡಿಗ್ರಿ ಮುಗಿಸಿಕೊಂಡು ಡಿಪ್ಲೊಮೊ ಸೇರಿದ್ದಾರೆ. ಆದರೆ ಸ್ನಾತಕೋತ್ತರ ಪದವಿ ಸೇರುತ್ತಿರುವವರಿಗೆ ಮೊದಲ ಆದ್ಯತೆ ನೀಡಬೇಕು. ಪ್ರವೇಶಾತಿ ಹೆಚ್ಚಿದಂತೆ ಹಾಸ್ಟೆಲ್‌ಗಳ ಮೇಲೆ ಒತ್ತಡವೂ ಹೆಚ್ಚುತ್ತದೆ. ಹೊಸ ಹಾಸ್ಟೆಲ್‌ಗಳ ಅಗತ್ಯವಿದೆ. ಇರುವ ಹಾಸ್ಟೆಲ್‌ನಲ್ಲಿಯೇ ಪ್ರವೇಶಾತಿ ನೀಡುವುದು ಕಷ್ಟವಾಗುತ್ತದೆ” ಎಂದು ಹೇಳಿದರು.

ಹಾಸ್ಟೆಲ್‌ಗಳ ಸಾಮಾರ್ಥ್ಯದ ಕುರಿತು ಮಾಹಿತಿ ನೀಡಿದ ಅವರು, “ಬಾಯ್ಸ್‌ ಹಾಸ್ಟೆಲ್‌ಗಳ ಪೈಕಿ ಬ್ಲಾಕ್‌-1ರಲ್ಲಿ 232 ಕೊಠಡಿ ಇದೆ. 270 ಜನರಿಗೆ ಪ್ರವೇಶಾತಿ ನೀಡಬಹುದು. 427 ಜನರಿಗೆ ನೀಡಲಾಗಿದೆ. ಬ್ಲಾಕ್‌ 2ರಲ್ಲಿ 228 ಕೊಠಡಿಗಳಿವೆ. ಕಚೇರಿ ಉಪಯೋಗಕ್ಕೆ ಕೆಲವು ಕೊಠಡಿ ಬಳಸಲಾಗುತ್ತಿದೆ. 220 ವಿದ್ಯಾರ್ಥಿಗಳಿಗೆ ಪ್ರವೇಶಾತಿ ನೀಡಬಹುದು. ಆದರೆ 330 ಜನರನ್ನು ತುಂಬಿದ್ದೇವೆ. ಬ್ಲಾಕ್‌ 3ರಲ್ಲಿ 38 ರೂಮ್‌ಗಳಿವೆ. ಆರು ಜನರನ್ನು ಒಂದು ಕೊಠಡಿಗೆ ತುಂಬಬಹುದು. ಒಟ್ಟು 180 ಜನರಿಗೆ ಪ್ರವೇಶಾತಿ ನೀಡಬೇಕು. ನಾವು 232 ಜನರಿಗೆ ನೀಡಿದ್ದೇವೆ. ಗರ್ಲ್ಸ್ ಹಾಸ್ಟೆಲ್‌ಗಳ ಪೈಕಿ ಬ್ಲಾಕ್‌ 1ರಲ್ಲಿ 146 ಕೊಠಡಿಗಳಿವೆ. 420 ಜನರಿಗೆ ಪ್ರವೇಶಾತಿ ನೀಡಬಹುದು, 455 ಪ್ರವೇಶಾತಿ ನೀಡಿದ್ದೇವೆ. ಬ್ಲಾಕ್‌ 2ರಲ್ಲಿ 120 ರೂಮ್‌ಗಳಿವೆ. 275 ಜನರಿಗೆ ಪ್ರವೇಶಾತಿ ನೀಡಬಹುದು, 375 ವಿದ್ಯಾರ್ಥಿನಿಯರಿಗೆ ಪ್ರವೇಶಾತಿ ನೀಡಿದ್ದೇವೆ. ಬ್ಲಾಕ್‌ 3ರಲ್ಲಿ  46 ಕೊಠಡಿಗಳಿವೆ. ಆರು ಜನರು ಒಂದು ಕೊಠಡಿಯಲ್ಲಿ ಇರಬಹುದು. 280 ಜನರಿಗೆ ಪ್ರವೇಶ ನೀಡುವಲ್ಲಿ 323 ಜನರಿಗೆ ನೀಡಿದ್ದೇವೆ. ಇನ್ನು ಸಿಸ್ಟ್‌ನವರರನ್ನು ಎಲ್ಲಿಗೆ ತುಂಬಲಿ?” ಎಂದು ಪ್ರಶ್ನಿಸಿದರು.

“ಕಳೆದ ವರ್ಷ ಎಷ್ಟು ಪ್ರವೇಶಾತಿ ನೀಡಲಾಗಿದೆ” ಎಂಬುದನ್ನು ನಾನುಗೌರಿ.ಕಾಂ ಪರಿಶೀಲಿಸಲು ಯತ್ನಿಸಿದೆ. ಮಾಹಿತಿ ಲಭ್ಯವಾಗಿಲ್ಲ.


ಇದನ್ನೂ ಓದಿರಿ: ಬೈಂದೂರು ಬಿಜೆಪಿ ಶಾಸಕನ ಒಡೆತನದ ಕಾಲೇಜಿನ ಸಿಬ್ಬಂದಿಯಿಂದ ವಿದ್ಯಾರ್ಥಿನಿಯರಿಗೆ ಅಶ್ಲೀಲ ಸಂದೇಶ- ಕಿರುಕುಳ ಆರೋಪ: ವಿದ್ಯಾರ್ಥಿಗಳಿಂದ ಧರಣಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...