Homeಕರ್ನಾಟಕಮೈಸೂರು ವಿವಿ: ಸಂಶೋಧಕರಿಗಿಲ್ಲ ಹಾಸ್ಟೆಲ್‌; ಚಾಪೆ, ದಿಂಬಿನೊಂದಿಗೆ ಪ್ರತಿಭಟನೆ

ಮೈಸೂರು ವಿವಿ: ಸಂಶೋಧಕರಿಗಿಲ್ಲ ಹಾಸ್ಟೆಲ್‌; ಚಾಪೆ, ದಿಂಬಿನೊಂದಿಗೆ ಪ್ರತಿಭಟನೆ

ಸಿಸ್ಟ್‌ಗೆ ಪ್ರವೇಶಾತಿ ಪಡೆದಿರುವ ವಿದ್ಯಾರ್ಥಿಗಳಿಗೂ ಹಾಸ್ಟೆಲ್‌ ವ್ಯವಸ್ಥೆ ಇಲ್ಲವಾಗಿದೆ. ಹಾಸ್ಟೆಲ್‌ನಲ್ಲಿ ಕೊಠಡಿ ಕೊರತೆ ಇರುವುದೇ ಸಮಸ್ಯೆಗೆ ಕಾರಣ ಎಂದು ಡೀನ್ ಪ್ರತಿಕ್ರಿಯೆ ನೀಡಿದ್ದಾರೆ.

- Advertisement -
- Advertisement -

“ಸಂಶೋಧನಾ ವಿದ್ಯಾರ್ಥಿಗಳಿಗೆ ಹಾಗೂ ಸಿಸ್ಟ್‌ ಪ್ರವೇಶಾತಿ ಪಡೆದವರಿಗೆ ಹಾಸ್ಟೆಲ್‌ ಸೌಲಭ್ಯ ನೀಡಿಲ್ಲ” ಎಂದು ಮೈಸೂರು ವಿವಿ ಸಂಶೋಧನಾರ್ಥಿಗಳು ಹಾಗೂ ಸಿಸ್ಟ್‌ ವಿದ್ಯಾರ್ಥಿಗಳು ಶುಕ್ರವಾರ ಪ್ರತಿಭಟನೆ ನಡೆಸಿದ್ದಾರೆ.

ಚಾಪೆ, ದಿಂಬಿನೊಂದಿಗೆ ವಿದ್ಯಾರ್ಥಿ ಕ್ಷೇಮಪಾಲನಾ ನಿರ್ದೇಶನಾಲಯದ ಎದುರು ಸೇರಿರುವ ವಿದ್ಯಾರ್ಥಿಗಳು ವಿಶ್ವವಿದ್ಯಾನಿಲಯ ಹಾಗೂ ವಿದ್ಯಾರ್ಥಿ ಕ್ಷೇಮಪಾಲನಾ ನಿರ್ದೇಶಕರಾದ ಡಾ.ಎಸ್‌.ಟಿ.ರಾಮಚಂದ್ರ ವಿರುದ್ಧ ಘೋಷಣೆ ಕೂಗಿದ್ದಾರೆ.

ಸಂಶೋಧಕರ ಸಂಘದ ರಾಜ್ಯಾಧ್ಯಕ್ಷರಾದ ಎಸ್‌.ಮರಿದೇವಯ್ಯ ಮಾತನಾಡಿ, “ಸಿಸ್ಟ್‌ಗೆ ಪ್ರವೇಶಾತಿ ಪಡೆದಿರುವ 150 ವಿದ್ಯಾರ್ಥಿಗಳಿಗೆ, ಸಂಶೋಧನಾರ್ಥಿಗಳಿಗೆ ಹಾಸ್ಟೆಲ್ ಪ್ರವೇಶಾತಿ ವಿಳಂಬ ಮಾಡಲಾಗುತ್ತಿದೆ. ಹೀಗಾಗಿ ಡೀನ್‌‌ ಕಚೇರಿ ಎದುರು ಅಹೋರಾತ್ರಿ ಪ್ರತಿಭಟನೆ ಹಮ್ಮಿಕೊಂಡಿದ್ದೇವೆ” ಎಂದು ತಿಳಿಸಿದ್ದಾರೆ.

“ಹಾಸ್ಟೆಲ್‌ ಪ್ರವೇಶಾತಿಗಾಗಿ ಕಳೆದ ನಾಲ್ಕೈದು ತಿಂಗಳಿಂದ ಒತ್ತಾಯ ಮಾಡುತ್ತಿದ್ದೇವೆ. ಮೈಸೂರು ವಿವಿ ವಿದ್ಯಾರ್ಥಿ ಕ್ಷೇಮಪಾಲನ ನಿರ್ದೇಶಕರಾಗಿರುವ ಡಾ.ರಾಮಚಂದ್ರ ಅವರೇ ಈ ಅವಾಂತರಗಳಿಗೆ ಕಾರಣ. ಹೀಗಾಗಿ ರಾಮಚಂದ್ರ ಅವರನ್ನು ವಜಾ ಮಾಡಬೇಕೆಂದು ಆಗ್ರಹಿಸಿ ಹಲವು ಭಾರಿ ಪ್ರತಿಭಟನೆ ಮಾಡಲಾಗಿದೆ.  ಆದರೆ ಯಾವುದೇ ಕ್ರಮ ಜರುಗಿಸಿಲ್ಲ” ಎಂದು ದೂರಿದರು.

“ಮೈಸೂರು ವಿಶ್ವವಿದ್ಯಾನಿಲಯ ಆಡಳಿತ ದುರ್ಬಲವಾಗಿದೆ. ಎಲ್ಲರನ್ನು ಹೆದರಿಸುವ ಗೂಂಡಾಗಿರಿಯನ್ನು ರಾಮಚಂದ್ರ ಅವರು ಮಾಡುತ್ತಿದ್ದಾರೆ. ಈಗಲೂ ಕೂಡ ಹೀಗೆಯೇ ವರ್ತಿಸಿದ್ದಾರೆ. ಅವರನ್ನು ಸೇವೆಯಿಂದ ಕೂಡಲೇ ವಜಾಗೊಳಿಸಬೇಕು” ಎಂದು ಆಗ್ರಹಿಸಿದ್ದಾರೆ.

“ಭ್ರಷ್ಟ ವಿದ್ಯಾರ್ಥಿ ಕ್ಷೇಮಪಾಲನ ಅಧಿಕಾರಿಗೆ ಹಾಗೂ ಭ್ರಷ್ಟ ವಿವಿಗೆ ಧಿಕ್ಕಾರ” ಎಂದು ಹಾಸ್ಟೆಲ್‌ ವಂಚಿತ ವಿದ್ಯಾರ್ಥಿಗಳು ಘೋಷಣೆ ಕೂಗಿದ್ದಾರೆ.

ವಿದ್ಯಾರ್ಥಿಕ್ಷೇಮಪಾಲನ ನಿರ್ದೇಶಕರಾದ ಡಾ.ಎಸ್‌.ಟಿ.ರಾಮಚಂದ್ರ ಅವರು, ನಾನುಗೌರಿ.ಕಾಂ ಜೊತೆಗೆ ಮಾತನಾಡಿ, “ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳ ಸಂಖ್ಯೆ ಕಳೆದ ವರ್ಷಕ್ಕಿಂತ ಈಗ ಹೆಚ್ಚಾಗಿದೆ. ಸಿಸ್ಟ್‌ನವರಿಗೆ ಪ್ರವೇಶಾತಿ ನೀಡಲು ಕೊಠಡಿಗಳ ಕೊರತೆ ಇದೆ. ಈಗ ಇರುವ ಕೊಠಡಿಗಳಿಗೆ ಹೆಚ್ಚಿನ ವಿದ್ಯಾರ್ಥಿಗಳನ್ನು ತುಂಬಲಾಗಿದೆ” ಎಂದು ತಿಳಿಸಿದರು.

“ಸಂಶೋಧನಾ ವಿದ್ಯಾರ್ಥಿಗಳಿಗೆ ಹಾಸ್ಟೆಲ್ ಸಿದ್ಧವಾಗುತ್ತಿದೆ. ಹೊಸ ಹಾಸ್ಟೆಲ್‌ ಮುಂದಿನ ತಿಂಗಳು ಆರಂಭವಾಗುವ ಸಾಧ್ಯತೆ ಇದೆ. ಆದರೆ ಸಿಸ್ಟ್‌ ವಿದ್ಯಾರ್ಥಿಗಳಿಗೆ ಪ್ರವೇಶಾತಿ ಕೊಡಲು ಕೊಠಡಿಗಳಿಲ್ಲ. ಹಿಂದಿನ ವರ್ಷಗಳಲ್ಲಿ ಮಾಸ್ಟರ್‌ ಡಿಗ್ರಿ ಪ್ರವೇಶಾತಿ ಕಡಿಮೆ ಇತ್ತು. ಹೀಗಾಗಿ ಸಿಸ್ಟ್‌ನವರಿಗೆ ಪ್ರವೇಶಾತಿಯನ್ನು ನೀಡಲಾಗಿತ್ತು” ಎಂದರು.

“ಬಹುತೇಕರು ಮಾಸ್ಟರ್ ಡಿಗ್ರಿ ಮುಗಿಸಿಕೊಂಡು ಡಿಪ್ಲೊಮೊ ಸೇರಿದ್ದಾರೆ. ಆದರೆ ಸ್ನಾತಕೋತ್ತರ ಪದವಿ ಸೇರುತ್ತಿರುವವರಿಗೆ ಮೊದಲ ಆದ್ಯತೆ ನೀಡಬೇಕು. ಪ್ರವೇಶಾತಿ ಹೆಚ್ಚಿದಂತೆ ಹಾಸ್ಟೆಲ್‌ಗಳ ಮೇಲೆ ಒತ್ತಡವೂ ಹೆಚ್ಚುತ್ತದೆ. ಹೊಸ ಹಾಸ್ಟೆಲ್‌ಗಳ ಅಗತ್ಯವಿದೆ. ಇರುವ ಹಾಸ್ಟೆಲ್‌ನಲ್ಲಿಯೇ ಪ್ರವೇಶಾತಿ ನೀಡುವುದು ಕಷ್ಟವಾಗುತ್ತದೆ” ಎಂದು ಹೇಳಿದರು.

ಹಾಸ್ಟೆಲ್‌ಗಳ ಸಾಮಾರ್ಥ್ಯದ ಕುರಿತು ಮಾಹಿತಿ ನೀಡಿದ ಅವರು, “ಬಾಯ್ಸ್‌ ಹಾಸ್ಟೆಲ್‌ಗಳ ಪೈಕಿ ಬ್ಲಾಕ್‌-1ರಲ್ಲಿ 232 ಕೊಠಡಿ ಇದೆ. 270 ಜನರಿಗೆ ಪ್ರವೇಶಾತಿ ನೀಡಬಹುದು. 427 ಜನರಿಗೆ ನೀಡಲಾಗಿದೆ. ಬ್ಲಾಕ್‌ 2ರಲ್ಲಿ 228 ಕೊಠಡಿಗಳಿವೆ. ಕಚೇರಿ ಉಪಯೋಗಕ್ಕೆ ಕೆಲವು ಕೊಠಡಿ ಬಳಸಲಾಗುತ್ತಿದೆ. 220 ವಿದ್ಯಾರ್ಥಿಗಳಿಗೆ ಪ್ರವೇಶಾತಿ ನೀಡಬಹುದು. ಆದರೆ 330 ಜನರನ್ನು ತುಂಬಿದ್ದೇವೆ. ಬ್ಲಾಕ್‌ 3ರಲ್ಲಿ 38 ರೂಮ್‌ಗಳಿವೆ. ಆರು ಜನರನ್ನು ಒಂದು ಕೊಠಡಿಗೆ ತುಂಬಬಹುದು. ಒಟ್ಟು 180 ಜನರಿಗೆ ಪ್ರವೇಶಾತಿ ನೀಡಬೇಕು. ನಾವು 232 ಜನರಿಗೆ ನೀಡಿದ್ದೇವೆ. ಗರ್ಲ್ಸ್ ಹಾಸ್ಟೆಲ್‌ಗಳ ಪೈಕಿ ಬ್ಲಾಕ್‌ 1ರಲ್ಲಿ 146 ಕೊಠಡಿಗಳಿವೆ. 420 ಜನರಿಗೆ ಪ್ರವೇಶಾತಿ ನೀಡಬಹುದು, 455 ಪ್ರವೇಶಾತಿ ನೀಡಿದ್ದೇವೆ. ಬ್ಲಾಕ್‌ 2ರಲ್ಲಿ 120 ರೂಮ್‌ಗಳಿವೆ. 275 ಜನರಿಗೆ ಪ್ರವೇಶಾತಿ ನೀಡಬಹುದು, 375 ವಿದ್ಯಾರ್ಥಿನಿಯರಿಗೆ ಪ್ರವೇಶಾತಿ ನೀಡಿದ್ದೇವೆ. ಬ್ಲಾಕ್‌ 3ರಲ್ಲಿ  46 ಕೊಠಡಿಗಳಿವೆ. ಆರು ಜನರು ಒಂದು ಕೊಠಡಿಯಲ್ಲಿ ಇರಬಹುದು. 280 ಜನರಿಗೆ ಪ್ರವೇಶ ನೀಡುವಲ್ಲಿ 323 ಜನರಿಗೆ ನೀಡಿದ್ದೇವೆ. ಇನ್ನು ಸಿಸ್ಟ್‌ನವರರನ್ನು ಎಲ್ಲಿಗೆ ತುಂಬಲಿ?” ಎಂದು ಪ್ರಶ್ನಿಸಿದರು.

“ಕಳೆದ ವರ್ಷ ಎಷ್ಟು ಪ್ರವೇಶಾತಿ ನೀಡಲಾಗಿದೆ” ಎಂಬುದನ್ನು ನಾನುಗೌರಿ.ಕಾಂ ಪರಿಶೀಲಿಸಲು ಯತ್ನಿಸಿದೆ. ಮಾಹಿತಿ ಲಭ್ಯವಾಗಿಲ್ಲ.


ಇದನ್ನೂ ಓದಿರಿ: ಬೈಂದೂರು ಬಿಜೆಪಿ ಶಾಸಕನ ಒಡೆತನದ ಕಾಲೇಜಿನ ಸಿಬ್ಬಂದಿಯಿಂದ ವಿದ್ಯಾರ್ಥಿನಿಯರಿಗೆ ಅಶ್ಲೀಲ ಸಂದೇಶ- ಕಿರುಕುಳ ಆರೋಪ: ವಿದ್ಯಾರ್ಥಿಗಳಿಂದ ಧರಣಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...