Homeಕರ್ನಾಟಕಮೈಸೂರು ವಿವಿ: ಸಂಶೋಧಕರಿಗಿಲ್ಲ ಹಾಸ್ಟೆಲ್‌; ಚಾಪೆ, ದಿಂಬಿನೊಂದಿಗೆ ಪ್ರತಿಭಟನೆ

ಮೈಸೂರು ವಿವಿ: ಸಂಶೋಧಕರಿಗಿಲ್ಲ ಹಾಸ್ಟೆಲ್‌; ಚಾಪೆ, ದಿಂಬಿನೊಂದಿಗೆ ಪ್ರತಿಭಟನೆ

ಸಿಸ್ಟ್‌ಗೆ ಪ್ರವೇಶಾತಿ ಪಡೆದಿರುವ ವಿದ್ಯಾರ್ಥಿಗಳಿಗೂ ಹಾಸ್ಟೆಲ್‌ ವ್ಯವಸ್ಥೆ ಇಲ್ಲವಾಗಿದೆ. ಹಾಸ್ಟೆಲ್‌ನಲ್ಲಿ ಕೊಠಡಿ ಕೊರತೆ ಇರುವುದೇ ಸಮಸ್ಯೆಗೆ ಕಾರಣ ಎಂದು ಡೀನ್ ಪ್ರತಿಕ್ರಿಯೆ ನೀಡಿದ್ದಾರೆ.

- Advertisement -
- Advertisement -

“ಸಂಶೋಧನಾ ವಿದ್ಯಾರ್ಥಿಗಳಿಗೆ ಹಾಗೂ ಸಿಸ್ಟ್‌ ಪ್ರವೇಶಾತಿ ಪಡೆದವರಿಗೆ ಹಾಸ್ಟೆಲ್‌ ಸೌಲಭ್ಯ ನೀಡಿಲ್ಲ” ಎಂದು ಮೈಸೂರು ವಿವಿ ಸಂಶೋಧನಾರ್ಥಿಗಳು ಹಾಗೂ ಸಿಸ್ಟ್‌ ವಿದ್ಯಾರ್ಥಿಗಳು ಶುಕ್ರವಾರ ಪ್ರತಿಭಟನೆ ನಡೆಸಿದ್ದಾರೆ.

ಚಾಪೆ, ದಿಂಬಿನೊಂದಿಗೆ ವಿದ್ಯಾರ್ಥಿ ಕ್ಷೇಮಪಾಲನಾ ನಿರ್ದೇಶನಾಲಯದ ಎದುರು ಸೇರಿರುವ ವಿದ್ಯಾರ್ಥಿಗಳು ವಿಶ್ವವಿದ್ಯಾನಿಲಯ ಹಾಗೂ ವಿದ್ಯಾರ್ಥಿ ಕ್ಷೇಮಪಾಲನಾ ನಿರ್ದೇಶಕರಾದ ಡಾ.ಎಸ್‌.ಟಿ.ರಾಮಚಂದ್ರ ವಿರುದ್ಧ ಘೋಷಣೆ ಕೂಗಿದ್ದಾರೆ.

ಸಂಶೋಧಕರ ಸಂಘದ ರಾಜ್ಯಾಧ್ಯಕ್ಷರಾದ ಎಸ್‌.ಮರಿದೇವಯ್ಯ ಮಾತನಾಡಿ, “ಸಿಸ್ಟ್‌ಗೆ ಪ್ರವೇಶಾತಿ ಪಡೆದಿರುವ 150 ವಿದ್ಯಾರ್ಥಿಗಳಿಗೆ, ಸಂಶೋಧನಾರ್ಥಿಗಳಿಗೆ ಹಾಸ್ಟೆಲ್ ಪ್ರವೇಶಾತಿ ವಿಳಂಬ ಮಾಡಲಾಗುತ್ತಿದೆ. ಹೀಗಾಗಿ ಡೀನ್‌‌ ಕಚೇರಿ ಎದುರು ಅಹೋರಾತ್ರಿ ಪ್ರತಿಭಟನೆ ಹಮ್ಮಿಕೊಂಡಿದ್ದೇವೆ” ಎಂದು ತಿಳಿಸಿದ್ದಾರೆ.

“ಹಾಸ್ಟೆಲ್‌ ಪ್ರವೇಶಾತಿಗಾಗಿ ಕಳೆದ ನಾಲ್ಕೈದು ತಿಂಗಳಿಂದ ಒತ್ತಾಯ ಮಾಡುತ್ತಿದ್ದೇವೆ. ಮೈಸೂರು ವಿವಿ ವಿದ್ಯಾರ್ಥಿ ಕ್ಷೇಮಪಾಲನ ನಿರ್ದೇಶಕರಾಗಿರುವ ಡಾ.ರಾಮಚಂದ್ರ ಅವರೇ ಈ ಅವಾಂತರಗಳಿಗೆ ಕಾರಣ. ಹೀಗಾಗಿ ರಾಮಚಂದ್ರ ಅವರನ್ನು ವಜಾ ಮಾಡಬೇಕೆಂದು ಆಗ್ರಹಿಸಿ ಹಲವು ಭಾರಿ ಪ್ರತಿಭಟನೆ ಮಾಡಲಾಗಿದೆ.  ಆದರೆ ಯಾವುದೇ ಕ್ರಮ ಜರುಗಿಸಿಲ್ಲ” ಎಂದು ದೂರಿದರು.

“ಮೈಸೂರು ವಿಶ್ವವಿದ್ಯಾನಿಲಯ ಆಡಳಿತ ದುರ್ಬಲವಾಗಿದೆ. ಎಲ್ಲರನ್ನು ಹೆದರಿಸುವ ಗೂಂಡಾಗಿರಿಯನ್ನು ರಾಮಚಂದ್ರ ಅವರು ಮಾಡುತ್ತಿದ್ದಾರೆ. ಈಗಲೂ ಕೂಡ ಹೀಗೆಯೇ ವರ್ತಿಸಿದ್ದಾರೆ. ಅವರನ್ನು ಸೇವೆಯಿಂದ ಕೂಡಲೇ ವಜಾಗೊಳಿಸಬೇಕು” ಎಂದು ಆಗ್ರಹಿಸಿದ್ದಾರೆ.

“ಭ್ರಷ್ಟ ವಿದ್ಯಾರ್ಥಿ ಕ್ಷೇಮಪಾಲನ ಅಧಿಕಾರಿಗೆ ಹಾಗೂ ಭ್ರಷ್ಟ ವಿವಿಗೆ ಧಿಕ್ಕಾರ” ಎಂದು ಹಾಸ್ಟೆಲ್‌ ವಂಚಿತ ವಿದ್ಯಾರ್ಥಿಗಳು ಘೋಷಣೆ ಕೂಗಿದ್ದಾರೆ.

ವಿದ್ಯಾರ್ಥಿಕ್ಷೇಮಪಾಲನ ನಿರ್ದೇಶಕರಾದ ಡಾ.ಎಸ್‌.ಟಿ.ರಾಮಚಂದ್ರ ಅವರು, ನಾನುಗೌರಿ.ಕಾಂ ಜೊತೆಗೆ ಮಾತನಾಡಿ, “ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳ ಸಂಖ್ಯೆ ಕಳೆದ ವರ್ಷಕ್ಕಿಂತ ಈಗ ಹೆಚ್ಚಾಗಿದೆ. ಸಿಸ್ಟ್‌ನವರಿಗೆ ಪ್ರವೇಶಾತಿ ನೀಡಲು ಕೊಠಡಿಗಳ ಕೊರತೆ ಇದೆ. ಈಗ ಇರುವ ಕೊಠಡಿಗಳಿಗೆ ಹೆಚ್ಚಿನ ವಿದ್ಯಾರ್ಥಿಗಳನ್ನು ತುಂಬಲಾಗಿದೆ” ಎಂದು ತಿಳಿಸಿದರು.

“ಸಂಶೋಧನಾ ವಿದ್ಯಾರ್ಥಿಗಳಿಗೆ ಹಾಸ್ಟೆಲ್ ಸಿದ್ಧವಾಗುತ್ತಿದೆ. ಹೊಸ ಹಾಸ್ಟೆಲ್‌ ಮುಂದಿನ ತಿಂಗಳು ಆರಂಭವಾಗುವ ಸಾಧ್ಯತೆ ಇದೆ. ಆದರೆ ಸಿಸ್ಟ್‌ ವಿದ್ಯಾರ್ಥಿಗಳಿಗೆ ಪ್ರವೇಶಾತಿ ಕೊಡಲು ಕೊಠಡಿಗಳಿಲ್ಲ. ಹಿಂದಿನ ವರ್ಷಗಳಲ್ಲಿ ಮಾಸ್ಟರ್‌ ಡಿಗ್ರಿ ಪ್ರವೇಶಾತಿ ಕಡಿಮೆ ಇತ್ತು. ಹೀಗಾಗಿ ಸಿಸ್ಟ್‌ನವರಿಗೆ ಪ್ರವೇಶಾತಿಯನ್ನು ನೀಡಲಾಗಿತ್ತು” ಎಂದರು.

“ಬಹುತೇಕರು ಮಾಸ್ಟರ್ ಡಿಗ್ರಿ ಮುಗಿಸಿಕೊಂಡು ಡಿಪ್ಲೊಮೊ ಸೇರಿದ್ದಾರೆ. ಆದರೆ ಸ್ನಾತಕೋತ್ತರ ಪದವಿ ಸೇರುತ್ತಿರುವವರಿಗೆ ಮೊದಲ ಆದ್ಯತೆ ನೀಡಬೇಕು. ಪ್ರವೇಶಾತಿ ಹೆಚ್ಚಿದಂತೆ ಹಾಸ್ಟೆಲ್‌ಗಳ ಮೇಲೆ ಒತ್ತಡವೂ ಹೆಚ್ಚುತ್ತದೆ. ಹೊಸ ಹಾಸ್ಟೆಲ್‌ಗಳ ಅಗತ್ಯವಿದೆ. ಇರುವ ಹಾಸ್ಟೆಲ್‌ನಲ್ಲಿಯೇ ಪ್ರವೇಶಾತಿ ನೀಡುವುದು ಕಷ್ಟವಾಗುತ್ತದೆ” ಎಂದು ಹೇಳಿದರು.

ಹಾಸ್ಟೆಲ್‌ಗಳ ಸಾಮಾರ್ಥ್ಯದ ಕುರಿತು ಮಾಹಿತಿ ನೀಡಿದ ಅವರು, “ಬಾಯ್ಸ್‌ ಹಾಸ್ಟೆಲ್‌ಗಳ ಪೈಕಿ ಬ್ಲಾಕ್‌-1ರಲ್ಲಿ 232 ಕೊಠಡಿ ಇದೆ. 270 ಜನರಿಗೆ ಪ್ರವೇಶಾತಿ ನೀಡಬಹುದು. 427 ಜನರಿಗೆ ನೀಡಲಾಗಿದೆ. ಬ್ಲಾಕ್‌ 2ರಲ್ಲಿ 228 ಕೊಠಡಿಗಳಿವೆ. ಕಚೇರಿ ಉಪಯೋಗಕ್ಕೆ ಕೆಲವು ಕೊಠಡಿ ಬಳಸಲಾಗುತ್ತಿದೆ. 220 ವಿದ್ಯಾರ್ಥಿಗಳಿಗೆ ಪ್ರವೇಶಾತಿ ನೀಡಬಹುದು. ಆದರೆ 330 ಜನರನ್ನು ತುಂಬಿದ್ದೇವೆ. ಬ್ಲಾಕ್‌ 3ರಲ್ಲಿ 38 ರೂಮ್‌ಗಳಿವೆ. ಆರು ಜನರನ್ನು ಒಂದು ಕೊಠಡಿಗೆ ತುಂಬಬಹುದು. ಒಟ್ಟು 180 ಜನರಿಗೆ ಪ್ರವೇಶಾತಿ ನೀಡಬೇಕು. ನಾವು 232 ಜನರಿಗೆ ನೀಡಿದ್ದೇವೆ. ಗರ್ಲ್ಸ್ ಹಾಸ್ಟೆಲ್‌ಗಳ ಪೈಕಿ ಬ್ಲಾಕ್‌ 1ರಲ್ಲಿ 146 ಕೊಠಡಿಗಳಿವೆ. 420 ಜನರಿಗೆ ಪ್ರವೇಶಾತಿ ನೀಡಬಹುದು, 455 ಪ್ರವೇಶಾತಿ ನೀಡಿದ್ದೇವೆ. ಬ್ಲಾಕ್‌ 2ರಲ್ಲಿ 120 ರೂಮ್‌ಗಳಿವೆ. 275 ಜನರಿಗೆ ಪ್ರವೇಶಾತಿ ನೀಡಬಹುದು, 375 ವಿದ್ಯಾರ್ಥಿನಿಯರಿಗೆ ಪ್ರವೇಶಾತಿ ನೀಡಿದ್ದೇವೆ. ಬ್ಲಾಕ್‌ 3ರಲ್ಲಿ  46 ಕೊಠಡಿಗಳಿವೆ. ಆರು ಜನರು ಒಂದು ಕೊಠಡಿಯಲ್ಲಿ ಇರಬಹುದು. 280 ಜನರಿಗೆ ಪ್ರವೇಶ ನೀಡುವಲ್ಲಿ 323 ಜನರಿಗೆ ನೀಡಿದ್ದೇವೆ. ಇನ್ನು ಸಿಸ್ಟ್‌ನವರರನ್ನು ಎಲ್ಲಿಗೆ ತುಂಬಲಿ?” ಎಂದು ಪ್ರಶ್ನಿಸಿದರು.

“ಕಳೆದ ವರ್ಷ ಎಷ್ಟು ಪ್ರವೇಶಾತಿ ನೀಡಲಾಗಿದೆ” ಎಂಬುದನ್ನು ನಾನುಗೌರಿ.ಕಾಂ ಪರಿಶೀಲಿಸಲು ಯತ್ನಿಸಿದೆ. ಮಾಹಿತಿ ಲಭ್ಯವಾಗಿಲ್ಲ.


ಇದನ್ನೂ ಓದಿರಿ: ಬೈಂದೂರು ಬಿಜೆಪಿ ಶಾಸಕನ ಒಡೆತನದ ಕಾಲೇಜಿನ ಸಿಬ್ಬಂದಿಯಿಂದ ವಿದ್ಯಾರ್ಥಿನಿಯರಿಗೆ ಅಶ್ಲೀಲ ಸಂದೇಶ- ಕಿರುಕುಳ ಆರೋಪ: ವಿದ್ಯಾರ್ಥಿಗಳಿಂದ ಧರಣಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...