Homeಮುಖಪುಟಮುಂದುವರಿದ ನಿಗೂಢ ಸಾವು : 500 ಗ್ರಾಮಸ್ಥರನ್ನು ಕ್ವಾರಂಟೈನ್ ಮಾಡಿದ ಸರ್ಕಾರ

ಮುಂದುವರಿದ ನಿಗೂಢ ಸಾವು : 500 ಗ್ರಾಮಸ್ಥರನ್ನು ಕ್ವಾರಂಟೈನ್ ಮಾಡಿದ ಸರ್ಕಾರ

- Advertisement -
- Advertisement -

ನಿಗೂಢ ಅನಾರೋಗ್ಯದಿಂದ ಒಬ್ಬರ ಹಿಂದೆ ಒಬ್ಬರಂತೆ ಸಾವನ್ನಪ್ಪುತ್ತಿರುವ ಹಿನ್ನೆಲೆ ಜಮ್ಮು ಕಾಶ್ಮೀರದ ರಾಜೌರಿ ಜಿಲ್ಲೆಯ ಬಾಧಲ್ ಗ್ರಾಮದ ಸುಮಾರು 400-500 ನಿವಾಸಿಗಳನ್ನು ಸರ್ಕಾರ ಕ್ವಾರಂಟೈನ್‌ ಕೇಂದ್ರಗಳಿಗೆ ಸ್ಥಳಾಂತರಿಸಿದೆ.

ಡಿಸೆಂಬರ್ 2024ರಿಂದ ಇದುವರೆಗೆ ನಿಗೂಢ ಅನಾರೋಗ್ಯದಿಂದ ಬಾಧಲ್ ಗ್ರಾಮದಲ್ಲಿ 17 ಜನರು ಸಾವನ್ನಪ್ಪಿದ್ದಾರೆ ಮತ್ತು 11 ಮಂದಿ ಅನಾರೋಗ್ಯಕ್ಕೆ ತುತ್ತಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಕಳೆದ ಎರಡು ದಿನಗಳಲ್ಲಿ ಹೊಸದಾಗಿ ಐವರು ಅನಾರೋಗ್ಯಕ್ಕೆ ಒಳಗಾದ ಹಿನ್ನೆಲೆ, ರಾಜೌರಿ ಜಿಲ್ಲಾ ಮ್ಯಾಜಿಸ್ಟ್ರೇಟ್ ಗ್ರಾಮವನ್ನು ಕಂಟೈನ್ಮೆಂಟ್ ವಲಯವೆಂದು ಘೋಷಿಸಿ ಅನಾರೋಗ್ಯಕ್ಕೆ ತುತ್ತಾದವರ ಕುಟುಂಬಸ್ಥರು ಮತ್ತುಅವರ ಸಂಬಂಧಿಕರನ್ನು ಕ್ವಾರಂಟೈನ್ ಕೇಂದ್ರಕ್ಕೆ ಸ್ಥಳಾಂತರಿಸುವ ನಿರ್ಧಾರ ಕೈಗೊಂಡಿದ್ದಾರೆ.

“ಇಡೀ ಗ್ರಾಮಸ್ಥರನ್ನು ಕ್ವಾರಂಟೈನ್‌ ಕೇಂದ್ರಕ್ಕೆ ಸ್ಥಳಾಂತರಿಸಿಲ್ಲ. ಅನಾರೋಗ್ಯಕ್ಕೆ ಒಳಗಾದವರು, ಅವರ ಸಂಬಂಧಿಕರನ್ನು ಮುನ್ನೆಚ್ಚರಿಕೆ ಕ್ರಮವಾಗಿ ಕ್ವಾರಂಟೈನ್‌ ಮಾಡಿದ್ದೇವೆ” ಎಂದು ಶಾಸಕ ಜಾವೇದ್ ಇಕ್ಬಾಲ್ ಹೇಳಿದ್ದಾರೆ.

ಗ್ರಾಮಸ್ಥರನ್ನು ಜಿಎಂಸಿ ರಾಜೌರಿ, ಹಳೆಯ ಆಸ್ಪತ್ರೆ ರಾಜೌರಿ, ನರ್ಸಿಂಗ್ ಕಾಲೇಜು ರಾಜೌರಿ ಮತ್ತು ಬಾಲಕರ ಹೈಯರ್ ಸೆಕೆಂಡರಿ ಶಾಲೆಯ ಕ್ವಾರಂಟೈನ್ ಕೇಂದ್ರಗಳಿಗೆ ಸ್ಥಳಾಂತರ ಮಾಡಲಾಗಿದೆ. ಅಲ್ಲಿ ಸರ್ಕಾರದ ವತಿಯಿಂದ ನಿಯಮಿತ ತಪಾಸಣೆ, ಆಹಾರ ಹಾಗೂ ವಾಸ್ತವ್ಯದ ವ್ಯವಸ್ಥೆ ಮಾಡಲಾಗಿದೆ.

ಡಿಸೆಂಬರ್ 2, 2024ರಂದು ಫಝಲ್ ಹುಸೇನ್ ಎಂಬವರ ಮನೆಯಲ್ಲಿ ನಡೆದ ವಿವಾಹ ಸಮಾರಂಭದಲ್ಲಿ ಊಟ ಮಾಡಿದ್ದ ಜನರು, ಡಿಸೆಂಬರ್ 7, 2024ರ ಹೊತ್ತಿಗೆ ನಿಗೂಢ ಕಾಯಿಲೆಗೆ ತುತ್ತಾಗಿದ್ದರು. ಅನಾರೋಗ್ಯಕ್ಕೆ ಒಳಗಾಗಿದ್ದವರಲ್ಲಿ ಫಝಲ್ ಮತ್ತು ಅವರ ನಾಲ್ವರು ಹೆಣ್ಣುಮಕ್ಕಳು ಐದು ದಿನಗಳಲ್ಲಿ ನಿಧನರಾಗಿದ್ದರು.

ಜನವರಿ 9ರಂದು, ನಿವಾಸಿಗಳು ಶೋಕ ಆಚರಿಸುವ ವೇಳೆ ಫಝಲ್ ಅವರ ಮನೆಯಲ್ಲಿ ಮತ್ತೊಂದು ಸಾಮುದಾಯಿಕ ಭೋಜನವನ್ನು ನೀಡಲಾಗಿತ್ತು. ಹಲವು ಗ್ರಾಮಸ್ಥರು ಈ ಕೂಟದಲ್ಲಿ ಭಾಗವಹಿಸಿದ್ದರು. ಆದರೆ, ಕೇವಲ ಮೂರು ಕುಟುಂಬಗಳ ಸದಸ್ಯರು ಅಸ್ವಸ್ಥರಾಗಿ ಸಾವನ್ನಪ್ಪಿದ್ದರು.

ಜನವರಿ 15ರಂದು, ಜಮ್ಮು ಮತ್ತು ಕಾಶ್ಮೀರ ಸರ್ಕಾರ ಈ ವಿಷಯದ ಬಗ್ಗೆ ತನಿಖೆ ನಡೆಸಲು ಪೊಲೀಸ್ ಅಧಿಕಾರಿಗಳು ಮತ್ತು ವೈದ್ಯಕೀಯ ತಜ್ಞರನ್ನು ಒಳಗೊಂಡ ವಿಶೇಷ ತನಿಖಾ ತಂಡವನ್ನು ರಚಿಸಿತ್ತು. ಆ ಬಳಿಕವೂ ಸರಣಿ ಸಾವು ಮುಂದುವರೆದಿದೆ. ಇದುವರೆಗೆ 17 ಜನರು ಸಾವಿಗೀಡಾಗಿದ್ದಾರೆ.

ಜನ್ಮದತ್ತ ಪೌರತ್ವ ಹಕ್ಕು ರದ್ದು | ಟ್ರಂಪ್ ಆದೇಶ ಜಾರಿಗೂ ಮುನ್ನ ಸಿಸೇರಿಯನ್ ಹೆರಿಗೆಗೆ ಧಾವಿಸುತ್ತಿರುವ ಮಹಿಳೆಯರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...