Homeಕರ್ನಾಟಕಮೈಸೂರು: ಮಹಿಳೆ ನಾಪತ್ತೆ; ರೇವಣ್ಣ ವಿರುದ್ಧ ಮತ್ತೊಂದು ಪ್ರಕರಣ ದಾಖಲು

ಮೈಸೂರು: ಮಹಿಳೆ ನಾಪತ್ತೆ; ರೇವಣ್ಣ ವಿರುದ್ಧ ಮತ್ತೊಂದು ಪ್ರಕರಣ ದಾಖಲು

- Advertisement -
- Advertisement -

ಹಾಸನದ ಎಚ್‌ ಡಿ ರೇವಣ್ಣ ಮತ್ತು ಪುತ್ರ ಪ್ರಜ್ವಲ್‌ ರೇವಣ್ಣ ಅವರ ಲೈಂಗಿಕ ದೌರ್ಜನ್ಯದ ಪ್ರಕರಣ ದೇಶದಲ್ಲಿ ಭಾರೀ ಸದ್ದು ಮಾಡಿತ್ತು. ಇದೀಗ ಲೈಂಗಿಕ ದೌರ್ಜನ್ಯ ಕೇಸ್‌ನಲ್ಲಿ ಸಿಲುಕಿಕೊಂಡಿರುವ ರೇವಣ್ಣ ವಿರುದ್ಧ ಮೈಸೂರು ಜಿಲ್ಲೆಯ ಕೆಆರ್ ನಗರದಲ್ಲಿ ಮಹಿಳೆಯೊಬ್ಬರು ನಾಪತ್ತೆಯಾಗಿರುವ ಬಗ್ಗೆ ದೂರು ದಾಖಲಾಗಿದೆ.

ನಾಪತ್ತೆಯಾಗಿರುವ ಮಹಿಳೆಯ ಪುತ್ರ ರಾಜು ಪೊಲೀಸರಿಗೆ ಈ ಬಗ್ಗೆ ದೂರು ನೀಡಿದ್ದಾರೆ. ಪ್ರಜ್ವಲ್‌ ಲೈಂಗಿಕ ದೌರ್ಜನ್ಯದ ವಿಡಿಯೋದಲ್ಲಿ ನನ್ನ ತಾಯಿಯ ವಿಡಿಯೋ ಕೂಡ ಇದೆ. ವಿಡಿಯೋಗಳು ಬಹಿರಂಗವಾದ ಬಳಿಕ ತಾಯಿ ದಿಢೀರ್ ನಾಪತ್ತೆಯಾಗಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಹೆಚ್​ಡಿ ರೇವಣ್ಣ ವಿರುದ್ಧ ಸೆಕ್ಷನ್ 149/2024 ಕಲಂ, 364/A 365 ಹಾಗೂ 34 ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ರೇವಣ್ಣರನ್ನು ಆರೋಪಿ ಸಂಖ್ಯೆ 1 ಮತ್ತು ಸತೀಶ್ ಬಾಬು ಎಂಬವರನ್ನು ಆರೋಪಿ ಸಂಖ್ಯೆ 2 ಎಂದು ದೂರಿನಲ್ಲಿ ನಮೂದಿಸಲಾಗಿದೆ.

ರಾಜು ನೀಡಿದ ದೂರಿನಲ್ಲಿ ಏನಿದೆ?

ನನ್ನ ತಂದೆಗೆ ಮೂವರು ಮಕ್ಕಳು, ನನ್ನ ತಾಯಿ ಹೊಳೇನರಸಿಪುರದ ಚೆನ್ನಾಂಬಿಕ ಥಿಯೇಟರ್ ಪಕ್ಕ ಇರುವ ಎಚ್‌ಡಿ ರೇವಣ್ಣ ಅವರ ಮನೆಯಲ್ಲಿ ಸುಮಾರು 6 ವರ್ಷ ಕೆಲಸ‌ ಮಾಡಿದ್ದರು. ನಂತರ ಕೆಲಸ ಬಿಟ್ಟು ಬಂದು ನಮ್ಮೂರಿನಲ್ಲಿ ಕೂಲಿ ಕೆಲಸ ಮಾಡಿಕೊಂಡಿದ್ದರು. ಈಗ ಲೋಕಸಭೆ ಚುನಾವಣೆ ವೇಳೆ ನಮಗೆ ಪರಿಚಯಸ್ಥರಾಗದ್ದ ಸತೀಶ್ ಎಂಬವರು ಭವಾನಿ ಅಕ್ಕರವರು ಕರೆಯುತ್ತಿದ್ದಾರೆ ಎಂದು ಹೇಳಿ ನನ್ನ ತಾಯಿಯನ್ನು ಕರೆದುಕೊಂಡು ಹೋಗಿದ್ದಾರೆ. ಚುನಾವಣೆಯ ದಿವಸ ಬೆಳಿಗ್ಗೆ ನನ್ನ ತಾಯಿಯನ್ನು ಸತೀಶ್ ವಾಪಸ್ಸು  ಕರೆದುಕೊಂಡು ಬಂದಿದ್ದಾರೆ. ನನ್ನ ತಂದೆ ಮತ್ತು ತಾಯಿಗೆ ಪೊಲೀಸ್ ಬಂದರೆ ಏನೂ ಹೇಳಬೇಡಿ, ಅವರಿಗೆ ಸಿಗಬೇಡಿ, ನಿಮ್ಮ ಮೇಲೆ ಕೇಸ್ ಆಗುತ್ತದೆ. ಬಂದರೆ ನನಗೆ ತಿಳಿಸಿ ನಾನು ಬಂದು ಕರೆದುಕೊಂಡು ಹೋಗುತ್ತೇನೆ ಎಂದು ಹೇಳಿದ್ದರು ಎಂದು ದೂರಿನಲ್ಲಿ ತಿಳಿಸಲಾಗಿದೆ.

ಏಪ್ರಿಲ್ 29ರಂದು 9ಗಂಟೆಗೆ ಮತ್ತೆ ಬಂದ ಸತೀಶ್, ನಿಮ್ಮ ತಾಯಿ ಪೊಲೀಸ್‌ನವರಿಗೆ ಸಿಕ್ಕಿ ಹಾಕಿಕೊಂಡರೆ ಕೇಸು ಆಗುತ್ತದೆ ಮತ್ತೆ ನೀವು ಸಹ ಜೈಲಿಗೆ ಹೋಗಬೇಕಾಗುತ್ತದೆ. ರೇವಣ್ಣ ಸಾಹೇಬರು ಕರೆದುಕೊಂಡು ಬರಲು ಹೇಳಿದ್ದಾರೆ ಎಂದು ನನ್ನ ತಾಯಿಗೆ ಹೇಳಿ ನನ್ನ ತಾಯಿಯನ್ನು ಒತ್ತಾಯ ಮಾಡಿಕೊಂಡು ಸತೀಶ್ ಅವರು ಹೀರೋ ಹೊಂಡಾ ಸ್ಪ್ಲೆಂಡ‌ರ್ ಬೈಕಿನಲ್ಲಿ ಕರೆದುಕೊಂಡು ಹೋದರು. ನನ್ನ ತಾಯಿಯನ್ನು ಎಲ್ಲಿಗೆ ಕರೆದುಕೊಂಡು ಹೋದರು ಎಂಬುದು ನಮಗೆ ಗೊತ್ತಿಲ್ಲ. ಮೇ.1ರಂದು ನಮ್ಮ ತಾಯಿಯ ವಿಡಿಯೋ ಬಗ್ಗೆ ಸ್ನೇಹಿತರು ನನಗೆ ಮಾಹಿತಿ ನೀಡಿದ್ದಾರೆ. ನಿನ್ನ ಅಮ್ಮನ ಕಾಲು ಕಟ್ಟಿ ಪ್ರಜ್ವಲ್ ಬಲತ್ಕಾರ ಮಾಡಿದ್ದಾರೆ ಎಂದು ಹೇಳಿದರು. ಈ ಬಗ್ಗೆ ದೊಡ್ಡ ಕೇಸಾಗಿರುವುದಾಗಿ ನನಗೆ ತಿಳಿಸಿದರು. ನಂತರ ನಾನು ರಾತ್ರಿ ಫೋನ್ ಮಾಡಿ ನನ್ನ ತಾಯಿ ಬಗ್ಗೆ ವಿಚಾರಿಸಿದೆ. ನನ್ನ ತಾಯಿಯನ್ನು ವಾಪಾಸು ಕರೆದುಕೊಂಡು ಬರುವಂತೆ ಹೇಳಿದೆ, ಆದರೆ ಹಲ್ಲೆ ಪ್ರಕರಣವೊಂದರಲ್ಲಿ ನಿಮ್ಮ ತಾಯಿ ಆರೋಪಿ ಎಂದು ಸುಳ್ಳು ಹೇಳಿದ್ದಾರೆ. ನನ್ನ ತಾಯಿಯನ್ನು ಹೆದರಿಸಿ ಒತ್ತಾಯವಾಗಿ ಕರೆದುಕೊಂಡು ಹೋಗಿ ಕೂಡಿ ಹಾಕಿದ್ದಾರೆ, ನನ್ನ ತಾಯಿಯ ಜೀವಕ್ಕೆ ಅಪಾಯವಿದೆ, ಆದ್ದರಿಂದ ನನ್ನ ತಾಯಿಯನ್ನು ಪತ್ತೆ ಮಾಡಬೇಕಾಗಿ ಕೇಳಿಕೊಳ್ಳುತ್ತೇನೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಇದನ್ನು ಓದಿ: ರೋಹಿತ್ ವೇಮುಲಾ ‘ಪರಿಶಿಷ್ಟ ಜಾತಿ’ಗೆ ಸೇರಿದವರಲ್ಲ: ಪ್ರಕರಣದ ಫೈಲ್ ಕ್ಲೋಸ್ ಮಾಡಿದ ಪೊಲೀಸರು

 

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...