Homeಕರ್ನಾಟಕಮೈಸೂರು: ಮಹಿಳೆ ನಾಪತ್ತೆ; ರೇವಣ್ಣ ವಿರುದ್ಧ ಮತ್ತೊಂದು ಪ್ರಕರಣ ದಾಖಲು

ಮೈಸೂರು: ಮಹಿಳೆ ನಾಪತ್ತೆ; ರೇವಣ್ಣ ವಿರುದ್ಧ ಮತ್ತೊಂದು ಪ್ರಕರಣ ದಾಖಲು

- Advertisement -
- Advertisement -

ಹಾಸನದ ಎಚ್‌ ಡಿ ರೇವಣ್ಣ ಮತ್ತು ಪುತ್ರ ಪ್ರಜ್ವಲ್‌ ರೇವಣ್ಣ ಅವರ ಲೈಂಗಿಕ ದೌರ್ಜನ್ಯದ ಪ್ರಕರಣ ದೇಶದಲ್ಲಿ ಭಾರೀ ಸದ್ದು ಮಾಡಿತ್ತು. ಇದೀಗ ಲೈಂಗಿಕ ದೌರ್ಜನ್ಯ ಕೇಸ್‌ನಲ್ಲಿ ಸಿಲುಕಿಕೊಂಡಿರುವ ರೇವಣ್ಣ ವಿರುದ್ಧ ಮೈಸೂರು ಜಿಲ್ಲೆಯ ಕೆಆರ್ ನಗರದಲ್ಲಿ ಮಹಿಳೆಯೊಬ್ಬರು ನಾಪತ್ತೆಯಾಗಿರುವ ಬಗ್ಗೆ ದೂರು ದಾಖಲಾಗಿದೆ.

ನಾಪತ್ತೆಯಾಗಿರುವ ಮಹಿಳೆಯ ಪುತ್ರ ರಾಜು ಪೊಲೀಸರಿಗೆ ಈ ಬಗ್ಗೆ ದೂರು ನೀಡಿದ್ದಾರೆ. ಪ್ರಜ್ವಲ್‌ ಲೈಂಗಿಕ ದೌರ್ಜನ್ಯದ ವಿಡಿಯೋದಲ್ಲಿ ನನ್ನ ತಾಯಿಯ ವಿಡಿಯೋ ಕೂಡ ಇದೆ. ವಿಡಿಯೋಗಳು ಬಹಿರಂಗವಾದ ಬಳಿಕ ತಾಯಿ ದಿಢೀರ್ ನಾಪತ್ತೆಯಾಗಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಹೆಚ್​ಡಿ ರೇವಣ್ಣ ವಿರುದ್ಧ ಸೆಕ್ಷನ್ 149/2024 ಕಲಂ, 364/A 365 ಹಾಗೂ 34 ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ರೇವಣ್ಣರನ್ನು ಆರೋಪಿ ಸಂಖ್ಯೆ 1 ಮತ್ತು ಸತೀಶ್ ಬಾಬು ಎಂಬವರನ್ನು ಆರೋಪಿ ಸಂಖ್ಯೆ 2 ಎಂದು ದೂರಿನಲ್ಲಿ ನಮೂದಿಸಲಾಗಿದೆ.

ರಾಜು ನೀಡಿದ ದೂರಿನಲ್ಲಿ ಏನಿದೆ?

ನನ್ನ ತಂದೆಗೆ ಮೂವರು ಮಕ್ಕಳು, ನನ್ನ ತಾಯಿ ಹೊಳೇನರಸಿಪುರದ ಚೆನ್ನಾಂಬಿಕ ಥಿಯೇಟರ್ ಪಕ್ಕ ಇರುವ ಎಚ್‌ಡಿ ರೇವಣ್ಣ ಅವರ ಮನೆಯಲ್ಲಿ ಸುಮಾರು 6 ವರ್ಷ ಕೆಲಸ‌ ಮಾಡಿದ್ದರು. ನಂತರ ಕೆಲಸ ಬಿಟ್ಟು ಬಂದು ನಮ್ಮೂರಿನಲ್ಲಿ ಕೂಲಿ ಕೆಲಸ ಮಾಡಿಕೊಂಡಿದ್ದರು. ಈಗ ಲೋಕಸಭೆ ಚುನಾವಣೆ ವೇಳೆ ನಮಗೆ ಪರಿಚಯಸ್ಥರಾಗದ್ದ ಸತೀಶ್ ಎಂಬವರು ಭವಾನಿ ಅಕ್ಕರವರು ಕರೆಯುತ್ತಿದ್ದಾರೆ ಎಂದು ಹೇಳಿ ನನ್ನ ತಾಯಿಯನ್ನು ಕರೆದುಕೊಂಡು ಹೋಗಿದ್ದಾರೆ. ಚುನಾವಣೆಯ ದಿವಸ ಬೆಳಿಗ್ಗೆ ನನ್ನ ತಾಯಿಯನ್ನು ಸತೀಶ್ ವಾಪಸ್ಸು  ಕರೆದುಕೊಂಡು ಬಂದಿದ್ದಾರೆ. ನನ್ನ ತಂದೆ ಮತ್ತು ತಾಯಿಗೆ ಪೊಲೀಸ್ ಬಂದರೆ ಏನೂ ಹೇಳಬೇಡಿ, ಅವರಿಗೆ ಸಿಗಬೇಡಿ, ನಿಮ್ಮ ಮೇಲೆ ಕೇಸ್ ಆಗುತ್ತದೆ. ಬಂದರೆ ನನಗೆ ತಿಳಿಸಿ ನಾನು ಬಂದು ಕರೆದುಕೊಂಡು ಹೋಗುತ್ತೇನೆ ಎಂದು ಹೇಳಿದ್ದರು ಎಂದು ದೂರಿನಲ್ಲಿ ತಿಳಿಸಲಾಗಿದೆ.

ಏಪ್ರಿಲ್ 29ರಂದು 9ಗಂಟೆಗೆ ಮತ್ತೆ ಬಂದ ಸತೀಶ್, ನಿಮ್ಮ ತಾಯಿ ಪೊಲೀಸ್‌ನವರಿಗೆ ಸಿಕ್ಕಿ ಹಾಕಿಕೊಂಡರೆ ಕೇಸು ಆಗುತ್ತದೆ ಮತ್ತೆ ನೀವು ಸಹ ಜೈಲಿಗೆ ಹೋಗಬೇಕಾಗುತ್ತದೆ. ರೇವಣ್ಣ ಸಾಹೇಬರು ಕರೆದುಕೊಂಡು ಬರಲು ಹೇಳಿದ್ದಾರೆ ಎಂದು ನನ್ನ ತಾಯಿಗೆ ಹೇಳಿ ನನ್ನ ತಾಯಿಯನ್ನು ಒತ್ತಾಯ ಮಾಡಿಕೊಂಡು ಸತೀಶ್ ಅವರು ಹೀರೋ ಹೊಂಡಾ ಸ್ಪ್ಲೆಂಡ‌ರ್ ಬೈಕಿನಲ್ಲಿ ಕರೆದುಕೊಂಡು ಹೋದರು. ನನ್ನ ತಾಯಿಯನ್ನು ಎಲ್ಲಿಗೆ ಕರೆದುಕೊಂಡು ಹೋದರು ಎಂಬುದು ನಮಗೆ ಗೊತ್ತಿಲ್ಲ. ಮೇ.1ರಂದು ನಮ್ಮ ತಾಯಿಯ ವಿಡಿಯೋ ಬಗ್ಗೆ ಸ್ನೇಹಿತರು ನನಗೆ ಮಾಹಿತಿ ನೀಡಿದ್ದಾರೆ. ನಿನ್ನ ಅಮ್ಮನ ಕಾಲು ಕಟ್ಟಿ ಪ್ರಜ್ವಲ್ ಬಲತ್ಕಾರ ಮಾಡಿದ್ದಾರೆ ಎಂದು ಹೇಳಿದರು. ಈ ಬಗ್ಗೆ ದೊಡ್ಡ ಕೇಸಾಗಿರುವುದಾಗಿ ನನಗೆ ತಿಳಿಸಿದರು. ನಂತರ ನಾನು ರಾತ್ರಿ ಫೋನ್ ಮಾಡಿ ನನ್ನ ತಾಯಿ ಬಗ್ಗೆ ವಿಚಾರಿಸಿದೆ. ನನ್ನ ತಾಯಿಯನ್ನು ವಾಪಾಸು ಕರೆದುಕೊಂಡು ಬರುವಂತೆ ಹೇಳಿದೆ, ಆದರೆ ಹಲ್ಲೆ ಪ್ರಕರಣವೊಂದರಲ್ಲಿ ನಿಮ್ಮ ತಾಯಿ ಆರೋಪಿ ಎಂದು ಸುಳ್ಳು ಹೇಳಿದ್ದಾರೆ. ನನ್ನ ತಾಯಿಯನ್ನು ಹೆದರಿಸಿ ಒತ್ತಾಯವಾಗಿ ಕರೆದುಕೊಂಡು ಹೋಗಿ ಕೂಡಿ ಹಾಕಿದ್ದಾರೆ, ನನ್ನ ತಾಯಿಯ ಜೀವಕ್ಕೆ ಅಪಾಯವಿದೆ, ಆದ್ದರಿಂದ ನನ್ನ ತಾಯಿಯನ್ನು ಪತ್ತೆ ಮಾಡಬೇಕಾಗಿ ಕೇಳಿಕೊಳ್ಳುತ್ತೇನೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಇದನ್ನು ಓದಿ: ರೋಹಿತ್ ವೇಮುಲಾ ‘ಪರಿಶಿಷ್ಟ ಜಾತಿ’ಗೆ ಸೇರಿದವರಲ್ಲ: ಪ್ರಕರಣದ ಫೈಲ್ ಕ್ಲೋಸ್ ಮಾಡಿದ ಪೊಲೀಸರು

 

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...