Homeಕರ್ನಾಟಕಸಾಮೂಹಿಕ ಅತ್ಯಾಚಾರ ಪ್ರಕರಣ: ಯುವತಿ ಅಲ್ಲಿಗೆ ಹೋಗಬಾರದಿತ್ತು ಎಂದು ಗೃಹ ಸಚಿವರ ಬೇಜವಾಬ್ದಾರಿ ಹೇಳಿಕೆ

ಸಾಮೂಹಿಕ ಅತ್ಯಾಚಾರ ಪ್ರಕರಣ: ಯುವತಿ ಅಲ್ಲಿಗೆ ಹೋಗಬಾರದಿತ್ತು ಎಂದು ಗೃಹ ಸಚಿವರ ಬೇಜವಾಬ್ದಾರಿ ಹೇಳಿಕೆ

ನಿರ್ಭಯಾ ಗೈಡ್‌ಲೈನ್ಸ್‌ ಪ್ರಕಾರ ಜವಾಬ್ದಾರಿಯುತ ಸ್ಥಾನದಲ್ಲಿರುವವರು, ಅಧಿಕಾರಿಗಳು ಸಂತ್ರಸ್ತರ ವಿರುದ್ಧ ಹೇಳಿಕೆ ಕೊಡುವಂತಿಲ್ಲ. ಗೃಹ ಸಚಿವರು ಅದನ್ನು ಉಲ್ಲಂಘಿಸಿದ್ದಾರೆ..

- Advertisement -
- Advertisement -

ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ವಿದ್ಯಾರ್ಥಿನಿಯೊರ್ವಳ ಮೇಲೆ ಅಮಾನವೀಯ ಸಾಮೂಹಿಕ ಅತ್ಯಾಚಾರ ನಡೆದಿದ್ದು, ಪ್ರಕರಣವೀಗ ರಾಜಕೀಯ ಕೆಸರೆರಚಾಟ ಕಾರಣವಾಗಿದೆ. ನಿರ್ಜನ ಪ್ರದೇಶಕ್ಕೆ ಯುವತಿ ಆ ಸಮಯದಲ್ಲಿ ಅಲ್ಲಿಗೆ ಹೋಗಿದ್ದು ತಪ್ಪು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಬೇಜವಾಬ್ದಾರಿ ಹೇಳಿಕೆ ನೀಡಿ ವಿವಾದಕ್ಕೆ ಸಿಲುಕಿಕೊಂಡಿದ್ದಾರೆ.

“ಯುವಕ-ಯುವತಿ 7, 7:30ಯ ಸಮಯಕ್ಕೆ ಅಲ್ಲಿಗೆ ಹೋಗಿದ್ದಾರೆ. ಅದು ನಿರ್ಜನವಾದ ಪ್ರದೇಶ. ಅವರು ಹೋಗಬಾರದಿತ್ತು. ಯಾರನ್ನು ಅಲ್ಲಿಗೆ ಹೋಗಬೇಡಿ ಎಂದು ತಡೆಯಲು ನಮಗೆ ಆಗುವುದಿಲ್ಲ. ಅವರು ಹೋಗಿದ್ದಾರೆ” ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಯುವತಿ ಅಲ್ಲಿಗೆ ಹೋಗಿದ್ದೆ ತಪ್ಪು, ಸಂಜೆಯ ವೇಳೆ ಹೊರ ಬಂದಿದ್ದೆ ತಪ್ಪು ಎನ್ನುವಂತೆ ಮಾತನಾಡಿದ್ದಾರೆ. ಗೃಹ ಸಚಿವರ ಹೇಳಿಕೆಗೆ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತವಾಗಿದೆ.

ಇನ್ನು ಪ್ರಕರಣ ಕುರಿತು ತನಿಖೆಗೆ ಒತ್ತಾಯಿಸಿದ ಕಾಂಗ್ರೆಸ್ ವಿರುದ್ಧ ಗೃಹ ಸಚಿವ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. “ಕಾಂಗ್ರೆಸ್‌ನವರು ನನ್ನ ಮೇಲೆ ರೇಪ್ ಮಾಡಲು ಪ್ರಯತ್ನಿಸುತ್ತಿದ್ದಾರೆ. ಗೃಹ ಸಚಿವರನ್ನು ರೇಪ್ ಮಾಡಲು ಪ್ರಯತ್ನಿಸುತ್ತಿದ್ದಾರೆ. ರಾಜಕೀಯ ಲಾಭ ಪಡೆಯಲು ಅಮಾನುಷವಾದ ಕೆಲಸ ಮಾಡುತ್ತಿದ್ದಾರೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕೊರೊನಾ ಲಾಕ್‌ಡೌನ್; ಹೆಚ್ಚುತ್ತಿರುವ ಬಡತನ ಮತ್ತು ಬಾಲ್ಯವಿವಾಹದ ರಣನರ್ತನ

ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ಹೇಳಿಕೆ ಹೀಗಿದೆ.

“ರೇಪ್ ಆಗಿದ್ದು ಅಲ್ಲಿ… ಕಾಂಗ್ರೆಸ್‌ ನನ್ನನ್ನು ರೇಪ್ ಮಾಡಲು ಪ್ರಯತ್ನಿಸುತ್ತಿದೆ. ಕಾಂಗ್ರೆಸ್ ಗೃಹ ಸಚಿವರನ್ನುರೇಪ್ ಮಾಡಲು ಪ್ರಯತ್ನಿಸುತ್ತಿದೆ. ರಾಜಕೀಯ ಲಾಭ ಪಡೆಯಲು ಪ್ರಯತ್ನಿಸುತ್ತಿರುವುದು ಅಮಾನುಷವಾದ ಕೆಲಸ. ಎಲ್ಲೋ ನಡೆಯುತ್ತದೆ. ನಾವೆಲ್ಲ ಮಾನವೀಯ ದೃಷ್ಠಿಯಿಂದ ಅದನ್ನು ತನಿಖೆ ಮಾಡಿಸುವುದು ಬಿಟ್ಟು ರಾಜಕೀಯ ಲಾಭ ಗಳಿಸುವ ಪ್ರಯತ್ನ ನಡೆಸುತ್ತಿರುವುದರ ಬಗ್ಗೆ ಜನ ಯೋಚನೆ ಮಾಡುತ್ತಾರೆ. ನಾವು ಏನು ಮಾಡಬೇಕು, ನಮ್ಮ ಪೊಲೀಸರು ಏನ್ ಮಾಡಬೇಕು ಅಂದರೆ, ಮುಂದೆ ಈ ರೀತಿಯಾಗದಂತೆ ಸಂದೇಶ ನೀಡಬೇಕು ಇದರ ಸೂಚನೆ ನೀಡಿದ್ದೇನೆ ಪೊಲೀಸರು ಹಾಗೆ ಮಾಡುತ್ತಾರೆ. ಅವರು 7, 7:30ಕ್ಕೆ ಅಲ್ಲಿಗೆ ಹೋಗಿದ್ದಾರೆ. ಅದು ನಿರ್ಜನವಾದ ಪ್ರದೇಶ. ಅವರು ಹೋಗಬಾರದಿತ್ತು. ಯಾರನ್ನು ಅಲ್ಲಿಗೆ ಹೋಗಬೇಡಿ ಎಂದು ತಡೆಯಲು ನಮಗೆ ಆಗುವುದಿಲ್ಲ. ಅವರು ಹೋಗಿದ್ದಾರೆ. ಹೋಗಿದ್ದಾಗ.. ಅಲ್ಲಿ ನಿರ್ಜನ ಪ್ರದೇಶ, ಹೇಳಿ ಕೇಳಿ ಯಾರು ಇರುವುದಿಲ್ಲ. ಅಲ್ಲಿ ಗರುಡ ವಾಹನ ತಿರುಗಬೇಕಿತ್ತು ಅಂತ ಹೇಳ್ತಿದ್ರು, ಅದು ಇರಲಿಲ್ಲ. ನಾನು ಇವತ್ತು ಅಲ್ಲಿಗೆ ಅಧಿಕಾರಿಗಳ ಜೊತೆಗೆ ಹೋಗ್ತಿದ್ದೇನೆ. ಎಲ್ಲಿ ಸಮಸ್ಯೆಗಳಿವೆ ಎಂಬುದನ್ನು ಚರ್ಚಿಸಿ ಮುಂದೆ ಹೀಗಾಗದಂತೆ ನೋಡಿಕೊಳ್ತೇವೆ” 

ಇದನ್ನೂ ಓದಿ: ಸಾಹಿತಿಯ ವೈಯಕ್ತಿಕ ಅನುಭವಗಳನ್ನು ಸಾರ್ವತ್ರಿಕಗೊಳಿಸಿ ಪ್ರತಿಪಾದಿಸುವ ಅಪಾಯ

ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ಹೇಳಿಕೆಗೆ ಆಕ್ರೋಶ ವ್ಯಕ್ತಪಡಿಸಿರುವ ಕಾಂಗ್ರೆಸ್, ರೇಪ್ ಮಾಡುವುದೇನಿದ್ದರೂ ಬಿಜೆಪಿಯ ಸಂಸ್ಕೃತಿಯೇ ಹೊರತು ಕಾಂಗ್ರೆಸ್‌ನದ್ದಲ್ಲ ಗೃಹಸಚಿವರೇ ಎಂದು ವ್ಯಂಗ್ಯವಾಡಿದೆ.

“ರೇಪ್ ಮಾಡುವುದೇನಿದ್ದರೂ ಬಿಜೆಪಿಯ ಸಂಸ್ಕೃತಿಯೇ ಹೊರತು ಕಾಂಗ್ರೆಸ್‌ನದ್ದಲ್ಲ ಗೃಹಸಚಿವರೇ. ಕಳೆದ ಬಾರಿಯ ಅಧಿಕಾರಾವಧಿಯಲ್ಲಿ ನಿಮ್ಮ ಶಾಸಕರೊಬ್ಬರು ಅತ್ಯಾಚಾರವೆಸಗಿದ್ದರು.  ಈ ಬಾರಿ ನಿಮ್ಮ ಮಾಜಿ ಸಚಿವರೊಬ್ಬರು ಉದ್ಯೋಗ ಕೇಳಿದ ಯುವತಿಯನ್ನು ಅತ್ಯಾಚಾರವೆಸಗಿದ್ದರು. ಅತ್ಯಾಚಾರಿಗಳೇ ತುಂಬಿರುವ ಬಿಜೆಪಿಯಿಂದ ಇನ್ನೆಂತಹ ಹೇಳಿಕೆ ನಿರೀಕ್ಷಿಸಲಾದೀತು!” ಎಂದು ಕಿಡಿ ಕಾರಿದೆ.

7.30ರ ಸಮಯದಲ್ಲಿ ಯುವತಿ ಅಲ್ಲಿಗೆ ಹೋಗಬಾರದಿತ್ತು ಎಂಬ ಗೃಹ ಸಚಿವರ ಬೇಜವಾಬ್ದಾರಿ ಹೇಳಿಕೆಗೆ, “ರಾತ್ರಿ 7.30ರ ಸಮಯದಲ್ಲಿ ಅವರು ಅಲ್ಲಿಗೆ ಹೋಗಲೇಬಾರದಿತ್ತು! ರಾಜ್ಯದ ರಕ್ಷಣೆ ಹೊತ್ತ ಗೃಹಸಚಿವರೇ, ಇಂತಹ ಅಯೋಗ್ಯತನದ ಹೇಳಿಕೆ ಕೊಡಲು ನಾಚಿಕೆ ಆಗುವುದಿಲ್ಲವೇ..? ಬಿಜೆಪಿ ಆಡಳಿತದಲ್ಲಿ ರಾಜ್ಯದಲ್ಲಿ 7.30ರ ಸಂಜೆಯೂ ಅಪಾಯಕಾರಿ ಎಂದು ಸ್ವತಃ ಅವರೇ ಒಪ್ಪಿದ್ದಾರೆ. ಇಂತಹ ಅಸಮರ್ಥ ಬಿಜೆಪಿಯಿಂದ ರಾಜ್ಯದ ಜನತೆಯ ರಕ್ಷಣೆ ಸಾಧ್ಯವೇ ಇಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದೆ.

“ನಿರ್ಭಯಾ ಗೈಡ್‌ಲೈನ್ಸ್‌ ಪ್ರಕಾರ ಜವಾಬ್ದಾರಿಯುತ ಸ್ಥಾನದಲ್ಲಿರುವವರು, ಅಧಿಕಾರಿಗಳು ಸಂತ್ರಸ್ತರ ವಿರುದ್ಧ ಹೇಳಿಕೆ ಕೊಡುವಂತಿಲ್ಲ. ಇಲ್ಲಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರವಾಗಿದ್ದರೂ ಅದು ಒಂದು ಸರ್ಕಾರದ ವಿರುದ್ಧದ ಕೃತ್ಯ. ಅಲ್ಲಿ ವಿದ್ಯಾರ್ಥಿನಿ ಸಂತ್ರಸ್ತೆ ಅಷ್ಟೇ. ಇಂತಹ ಸಮಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವುದು ರಾಜ್ಯದ ಕೆಲಸ. ಅದರಲ್ಲಿ ವಿಫಲವಾಗಿದ್ದಕ್ಕೆ ಕೊಲೆ, ಅತ್ಯಾಚಾರಗಳು ನಡೆಯುತ್ತವೆ. ಇಂತಹ ಸಂದರ್ಭದಲ್ಲಿ ಗೃಹ ಸಚಿವರ ಹೇಳಿಕೆ ತನಿಖೆ ಮೇಲೆ ಪ್ರಭಾವ ಬಿರುತ್ತದೆ ಮತ್ತು ಆರೋಪಿಗಳ ಪರವಾಗಿದೆ. ಇದು ಕಾನೂನಿನ ಸ್ಪಷ್ಟ ಉಲ್ಲಂಘನೆಯಾಗಿದೆ” ಎಂದು ಹೆಸರು ಹೇಳಲು ಇಚ್ಛಿಸದ ವಕೀಲರು ಪ್ರತಿಕ್ರಿಯಿಸಿದ್ದಾರೆ.


ಇದನ್ನೂ ಓದಿ: ಮೈಸೂರಿನಲ್ಲಿ ವೈದ್ಯ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ: ಪ್ರಕರಣ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...