Homeಕರ್ನಾಟಕಸಾಮೂಹಿಕ ಅತ್ಯಾಚಾರ ಪ್ರಕರಣ: ಯುವತಿ ಅಲ್ಲಿಗೆ ಹೋಗಬಾರದಿತ್ತು ಎಂದು ಗೃಹ ಸಚಿವರ ಬೇಜವಾಬ್ದಾರಿ ಹೇಳಿಕೆ

ಸಾಮೂಹಿಕ ಅತ್ಯಾಚಾರ ಪ್ರಕರಣ: ಯುವತಿ ಅಲ್ಲಿಗೆ ಹೋಗಬಾರದಿತ್ತು ಎಂದು ಗೃಹ ಸಚಿವರ ಬೇಜವಾಬ್ದಾರಿ ಹೇಳಿಕೆ

ನಿರ್ಭಯಾ ಗೈಡ್‌ಲೈನ್ಸ್‌ ಪ್ರಕಾರ ಜವಾಬ್ದಾರಿಯುತ ಸ್ಥಾನದಲ್ಲಿರುವವರು, ಅಧಿಕಾರಿಗಳು ಸಂತ್ರಸ್ತರ ವಿರುದ್ಧ ಹೇಳಿಕೆ ಕೊಡುವಂತಿಲ್ಲ. ಗೃಹ ಸಚಿವರು ಅದನ್ನು ಉಲ್ಲಂಘಿಸಿದ್ದಾರೆ..

- Advertisement -
- Advertisement -

ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ವಿದ್ಯಾರ್ಥಿನಿಯೊರ್ವಳ ಮೇಲೆ ಅಮಾನವೀಯ ಸಾಮೂಹಿಕ ಅತ್ಯಾಚಾರ ನಡೆದಿದ್ದು, ಪ್ರಕರಣವೀಗ ರಾಜಕೀಯ ಕೆಸರೆರಚಾಟ ಕಾರಣವಾಗಿದೆ. ನಿರ್ಜನ ಪ್ರದೇಶಕ್ಕೆ ಯುವತಿ ಆ ಸಮಯದಲ್ಲಿ ಅಲ್ಲಿಗೆ ಹೋಗಿದ್ದು ತಪ್ಪು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಬೇಜವಾಬ್ದಾರಿ ಹೇಳಿಕೆ ನೀಡಿ ವಿವಾದಕ್ಕೆ ಸಿಲುಕಿಕೊಂಡಿದ್ದಾರೆ.

“ಯುವಕ-ಯುವತಿ 7, 7:30ಯ ಸಮಯಕ್ಕೆ ಅಲ್ಲಿಗೆ ಹೋಗಿದ್ದಾರೆ. ಅದು ನಿರ್ಜನವಾದ ಪ್ರದೇಶ. ಅವರು ಹೋಗಬಾರದಿತ್ತು. ಯಾರನ್ನು ಅಲ್ಲಿಗೆ ಹೋಗಬೇಡಿ ಎಂದು ತಡೆಯಲು ನಮಗೆ ಆಗುವುದಿಲ್ಲ. ಅವರು ಹೋಗಿದ್ದಾರೆ” ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಯುವತಿ ಅಲ್ಲಿಗೆ ಹೋಗಿದ್ದೆ ತಪ್ಪು, ಸಂಜೆಯ ವೇಳೆ ಹೊರ ಬಂದಿದ್ದೆ ತಪ್ಪು ಎನ್ನುವಂತೆ ಮಾತನಾಡಿದ್ದಾರೆ. ಗೃಹ ಸಚಿವರ ಹೇಳಿಕೆಗೆ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತವಾಗಿದೆ.

ಇನ್ನು ಪ್ರಕರಣ ಕುರಿತು ತನಿಖೆಗೆ ಒತ್ತಾಯಿಸಿದ ಕಾಂಗ್ರೆಸ್ ವಿರುದ್ಧ ಗೃಹ ಸಚಿವ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. “ಕಾಂಗ್ರೆಸ್‌ನವರು ನನ್ನ ಮೇಲೆ ರೇಪ್ ಮಾಡಲು ಪ್ರಯತ್ನಿಸುತ್ತಿದ್ದಾರೆ. ಗೃಹ ಸಚಿವರನ್ನು ರೇಪ್ ಮಾಡಲು ಪ್ರಯತ್ನಿಸುತ್ತಿದ್ದಾರೆ. ರಾಜಕೀಯ ಲಾಭ ಪಡೆಯಲು ಅಮಾನುಷವಾದ ಕೆಲಸ ಮಾಡುತ್ತಿದ್ದಾರೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕೊರೊನಾ ಲಾಕ್‌ಡೌನ್; ಹೆಚ್ಚುತ್ತಿರುವ ಬಡತನ ಮತ್ತು ಬಾಲ್ಯವಿವಾಹದ ರಣನರ್ತನ

ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ಹೇಳಿಕೆ ಹೀಗಿದೆ.

“ರೇಪ್ ಆಗಿದ್ದು ಅಲ್ಲಿ… ಕಾಂಗ್ರೆಸ್‌ ನನ್ನನ್ನು ರೇಪ್ ಮಾಡಲು ಪ್ರಯತ್ನಿಸುತ್ತಿದೆ. ಕಾಂಗ್ರೆಸ್ ಗೃಹ ಸಚಿವರನ್ನುರೇಪ್ ಮಾಡಲು ಪ್ರಯತ್ನಿಸುತ್ತಿದೆ. ರಾಜಕೀಯ ಲಾಭ ಪಡೆಯಲು ಪ್ರಯತ್ನಿಸುತ್ತಿರುವುದು ಅಮಾನುಷವಾದ ಕೆಲಸ. ಎಲ್ಲೋ ನಡೆಯುತ್ತದೆ. ನಾವೆಲ್ಲ ಮಾನವೀಯ ದೃಷ್ಠಿಯಿಂದ ಅದನ್ನು ತನಿಖೆ ಮಾಡಿಸುವುದು ಬಿಟ್ಟು ರಾಜಕೀಯ ಲಾಭ ಗಳಿಸುವ ಪ್ರಯತ್ನ ನಡೆಸುತ್ತಿರುವುದರ ಬಗ್ಗೆ ಜನ ಯೋಚನೆ ಮಾಡುತ್ತಾರೆ. ನಾವು ಏನು ಮಾಡಬೇಕು, ನಮ್ಮ ಪೊಲೀಸರು ಏನ್ ಮಾಡಬೇಕು ಅಂದರೆ, ಮುಂದೆ ಈ ರೀತಿಯಾಗದಂತೆ ಸಂದೇಶ ನೀಡಬೇಕು ಇದರ ಸೂಚನೆ ನೀಡಿದ್ದೇನೆ ಪೊಲೀಸರು ಹಾಗೆ ಮಾಡುತ್ತಾರೆ. ಅವರು 7, 7:30ಕ್ಕೆ ಅಲ್ಲಿಗೆ ಹೋಗಿದ್ದಾರೆ. ಅದು ನಿರ್ಜನವಾದ ಪ್ರದೇಶ. ಅವರು ಹೋಗಬಾರದಿತ್ತು. ಯಾರನ್ನು ಅಲ್ಲಿಗೆ ಹೋಗಬೇಡಿ ಎಂದು ತಡೆಯಲು ನಮಗೆ ಆಗುವುದಿಲ್ಲ. ಅವರು ಹೋಗಿದ್ದಾರೆ. ಹೋಗಿದ್ದಾಗ.. ಅಲ್ಲಿ ನಿರ್ಜನ ಪ್ರದೇಶ, ಹೇಳಿ ಕೇಳಿ ಯಾರು ಇರುವುದಿಲ್ಲ. ಅಲ್ಲಿ ಗರುಡ ವಾಹನ ತಿರುಗಬೇಕಿತ್ತು ಅಂತ ಹೇಳ್ತಿದ್ರು, ಅದು ಇರಲಿಲ್ಲ. ನಾನು ಇವತ್ತು ಅಲ್ಲಿಗೆ ಅಧಿಕಾರಿಗಳ ಜೊತೆಗೆ ಹೋಗ್ತಿದ್ದೇನೆ. ಎಲ್ಲಿ ಸಮಸ್ಯೆಗಳಿವೆ ಎಂಬುದನ್ನು ಚರ್ಚಿಸಿ ಮುಂದೆ ಹೀಗಾಗದಂತೆ ನೋಡಿಕೊಳ್ತೇವೆ” 

ಇದನ್ನೂ ಓದಿ: ಸಾಹಿತಿಯ ವೈಯಕ್ತಿಕ ಅನುಭವಗಳನ್ನು ಸಾರ್ವತ್ರಿಕಗೊಳಿಸಿ ಪ್ರತಿಪಾದಿಸುವ ಅಪಾಯ

ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ಹೇಳಿಕೆಗೆ ಆಕ್ರೋಶ ವ್ಯಕ್ತಪಡಿಸಿರುವ ಕಾಂಗ್ರೆಸ್, ರೇಪ್ ಮಾಡುವುದೇನಿದ್ದರೂ ಬಿಜೆಪಿಯ ಸಂಸ್ಕೃತಿಯೇ ಹೊರತು ಕಾಂಗ್ರೆಸ್‌ನದ್ದಲ್ಲ ಗೃಹಸಚಿವರೇ ಎಂದು ವ್ಯಂಗ್ಯವಾಡಿದೆ.

“ರೇಪ್ ಮಾಡುವುದೇನಿದ್ದರೂ ಬಿಜೆಪಿಯ ಸಂಸ್ಕೃತಿಯೇ ಹೊರತು ಕಾಂಗ್ರೆಸ್‌ನದ್ದಲ್ಲ ಗೃಹಸಚಿವರೇ. ಕಳೆದ ಬಾರಿಯ ಅಧಿಕಾರಾವಧಿಯಲ್ಲಿ ನಿಮ್ಮ ಶಾಸಕರೊಬ್ಬರು ಅತ್ಯಾಚಾರವೆಸಗಿದ್ದರು.  ಈ ಬಾರಿ ನಿಮ್ಮ ಮಾಜಿ ಸಚಿವರೊಬ್ಬರು ಉದ್ಯೋಗ ಕೇಳಿದ ಯುವತಿಯನ್ನು ಅತ್ಯಾಚಾರವೆಸಗಿದ್ದರು. ಅತ್ಯಾಚಾರಿಗಳೇ ತುಂಬಿರುವ ಬಿಜೆಪಿಯಿಂದ ಇನ್ನೆಂತಹ ಹೇಳಿಕೆ ನಿರೀಕ್ಷಿಸಲಾದೀತು!” ಎಂದು ಕಿಡಿ ಕಾರಿದೆ.

7.30ರ ಸಮಯದಲ್ಲಿ ಯುವತಿ ಅಲ್ಲಿಗೆ ಹೋಗಬಾರದಿತ್ತು ಎಂಬ ಗೃಹ ಸಚಿವರ ಬೇಜವಾಬ್ದಾರಿ ಹೇಳಿಕೆಗೆ, “ರಾತ್ರಿ 7.30ರ ಸಮಯದಲ್ಲಿ ಅವರು ಅಲ್ಲಿಗೆ ಹೋಗಲೇಬಾರದಿತ್ತು! ರಾಜ್ಯದ ರಕ್ಷಣೆ ಹೊತ್ತ ಗೃಹಸಚಿವರೇ, ಇಂತಹ ಅಯೋಗ್ಯತನದ ಹೇಳಿಕೆ ಕೊಡಲು ನಾಚಿಕೆ ಆಗುವುದಿಲ್ಲವೇ..? ಬಿಜೆಪಿ ಆಡಳಿತದಲ್ಲಿ ರಾಜ್ಯದಲ್ಲಿ 7.30ರ ಸಂಜೆಯೂ ಅಪಾಯಕಾರಿ ಎಂದು ಸ್ವತಃ ಅವರೇ ಒಪ್ಪಿದ್ದಾರೆ. ಇಂತಹ ಅಸಮರ್ಥ ಬಿಜೆಪಿಯಿಂದ ರಾಜ್ಯದ ಜನತೆಯ ರಕ್ಷಣೆ ಸಾಧ್ಯವೇ ಇಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದೆ.

“ನಿರ್ಭಯಾ ಗೈಡ್‌ಲೈನ್ಸ್‌ ಪ್ರಕಾರ ಜವಾಬ್ದಾರಿಯುತ ಸ್ಥಾನದಲ್ಲಿರುವವರು, ಅಧಿಕಾರಿಗಳು ಸಂತ್ರಸ್ತರ ವಿರುದ್ಧ ಹೇಳಿಕೆ ಕೊಡುವಂತಿಲ್ಲ. ಇಲ್ಲಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರವಾಗಿದ್ದರೂ ಅದು ಒಂದು ಸರ್ಕಾರದ ವಿರುದ್ಧದ ಕೃತ್ಯ. ಅಲ್ಲಿ ವಿದ್ಯಾರ್ಥಿನಿ ಸಂತ್ರಸ್ತೆ ಅಷ್ಟೇ. ಇಂತಹ ಸಮಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವುದು ರಾಜ್ಯದ ಕೆಲಸ. ಅದರಲ್ಲಿ ವಿಫಲವಾಗಿದ್ದಕ್ಕೆ ಕೊಲೆ, ಅತ್ಯಾಚಾರಗಳು ನಡೆಯುತ್ತವೆ. ಇಂತಹ ಸಂದರ್ಭದಲ್ಲಿ ಗೃಹ ಸಚಿವರ ಹೇಳಿಕೆ ತನಿಖೆ ಮೇಲೆ ಪ್ರಭಾವ ಬಿರುತ್ತದೆ ಮತ್ತು ಆರೋಪಿಗಳ ಪರವಾಗಿದೆ. ಇದು ಕಾನೂನಿನ ಸ್ಪಷ್ಟ ಉಲ್ಲಂಘನೆಯಾಗಿದೆ” ಎಂದು ಹೆಸರು ಹೇಳಲು ಇಚ್ಛಿಸದ ವಕೀಲರು ಪ್ರತಿಕ್ರಿಯಿಸಿದ್ದಾರೆ.


ಇದನ್ನೂ ಓದಿ: ಮೈಸೂರಿನಲ್ಲಿ ವೈದ್ಯ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ: ಪ್ರಕರಣ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...