Homeಕರ್ನಾಟಕಮೈಸೂರು: ಸರೋದ್ ವಾದಕ ಪಂಡಿತ್ ರಾಜೀವ್‌ ತಾರಾನಾಥ್ ನಿಧನ

ಮೈಸೂರು: ಸರೋದ್ ವಾದಕ ಪಂಡಿತ್ ರಾಜೀವ್‌ ತಾರಾನಾಥ್ ನಿಧನ

- Advertisement -
- Advertisement -

ಖ್ಯಾತ ಸರೋದ್ ವಾದಕ ಪಂಡಿತ್ ರಾಜೀವ್ ತಾರಾನಾಥ್ (93) ಅವರು ವಯೋಸಹಜ ಆರೋಗ್ಯ ಸಮಸ್ಯೆಗಳಿಂದ ಮೈಸೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಇಂದು (ಜೂನ್ 11) ನಿಧನರಾಗಿದ್ದಾರೆ.

ಕುವೆಂ‍ಪು ನಗರದ ಪಂಚಮಂತ್ರ ರಸ್ತೆಯಲ್ಲಿರುವ ನಿವಾಸದಲ್ಲಿ, ತಿಂಗಳ ಹಿಂದೆ ಕುಸಿದು ಬಿದ್ದು ಅವರ
ತೊಡೆ ಮೂಳೆ ಮುರಿದಿತ್ತು. ಆಸ್ಪತ್ರೆಯಲ್ಲಿ ಶಸ್ತ್ರ ಚಿಕಿತ್ಸೆಗೆ ಒಳಗಾಗಿ ಚೇತರಿಸಿಕೊಳ್ಳುತ್ತಿದ್ದರು. ಈ ನಡುವೆ
ಇಂದು ರಾತ್ರಿ 7.05ರ ವೇಳೆಗೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ರಾಜೀವ್ ತಾರಾನಾಥ್ ಅವರು ಬೆಂಗಳೂರಿನಲ್ಲಿ 17 ಅಕ್ಟೋಬರ್ 1932 ರಂದು ಜನಿಸಿದರು. ಅವರು ತಮ್ಮ ತಂದೆ ಪಂಡಿತ್ ತಾರಾನಾಥ್ ಅವರಿಂದ ಗಾಯನ ಸಂಗೀತದಲ್ಲಿ ಆರಂಭಿಕ ತರಬೇತಿಯನ್ನು ಪಡೆದರು. ಒಂಬತ್ತು ವರ್ಷದವರಾಗಿದ್ದಾಗ ತಮ್ಮ ಮೊದಲ ಸಾರ್ವಜನಿಕ ಗಾಯನ ಪ್ರದರ್ಶನವನ್ನು ನೀಡಿದ್ದರು. ರಾಜೀವ್ ಅವರು ತಮ್ಮ ಇಪ್ಪತ್ತು ವಯಸ್ಸಿಗಿಂತ ಮೊದಲು ಆಕಾಶವಾಣಿಗೆ ಹಾಡುತ್ತಿದ್ದರು.

ಸಾಹಿತ್ಯದಲ್ಲಿ ಪಿಹೆಚ್‌ಡಿ ಪದವಿ ಪಡೆದಿದ್ದ ರಾಜೀವ್ ತಾರಾನಾಥ್ ಅವರು, ತಿರುಚಿರಾಪಳ್ಳಿಯ ಪ್ರಾದೇಶಿಕ ಇಂಜಿನಿಯರಿಂಗ್ ಕಾಲೇಜಿನಲ್ಲಿ ಇಂಗ್ಲಿಷ್ ಸಾಹಿತ್ಯದ ಪ್ರಾಧ್ಯಾಪಕ ಮತ್ತು ಮುಖ್ಯಸ್ಥರಾಗಿ ಸೇವೆ ಸಲ್ಲಿಸುತ್ತಿದ್ದರು. ಸಂಗೀತದ ಮೇಲಿನ ಪ್ರೀತಿಯಿಂದಾಗಿ ತಮ್ಮ ವೃತ್ತಿಯನ್ನು ತ್ಯಜಿಸಿ ಕೊಲ್ಕತ್ತಾಗೆ ತೆರಳಿ, ಅಲ್ಲಿ ಅಲೀ ಅಕ್ಬರ್ ಖಾನ್ ಅವರ ಮಾರ್ಗದರ್ಶನದಲ್ಲಿ ಸಂಗೀತ ತರಬೇತಿ ಪಡೆದಿದ್ದರು.

ರಾಜೀವ್ ತಾರನಾಥ್ ಅವರ ಸಂಗೀತ ಕ್ಷೇತ್ರದ ಸಾಧನೆಯನ್ನು ಗುರುತಿಸಿ ಸಂಗೀತ ರತ್ನ ಮೈಸೂರು ಟಿ. ಚೌಡಯ್ಯ ಸ್ಮಾರಕ ಪ್ರಶಸ್ತಿ-1998, ಸಂಗೀತ ನೃತ್ಯ ಅಕಾಡೆಮಿ ಪ್ರಶಸ್ತಿ-1993, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ-1996, ಕೆಂಪೇಗೌಡ ಪ್ರಶಸ್ತಿ- 2006, ಗಾಯನ ಸಮಾಜದಿಂದ ಸಂಗೀತ ಕಲಾರತ್ನ ಜ್ಯೋತಿ ಸುಬ್ರಮಣ್ಯ ಪ್ರಶಸ್ತಿ, ಭ್ರಮರಾಂಬಾ ಎನ್ ನಾಗರಾಜ್ ಬಂಗಾರದ ಪದಕ, ವಿ. ಟಿ. ಶ್ರೀನಿವಾಸನ್ ಸ್ಮಾರಕ ಪ್ರಶಸ್ತಿ, ಹಂಪಿ ಕನ್ನಡ ವಿಶ್ವವಿದ್ಯಾಲಯದಿಂದ ‘ನಾಡೋಜ’ ಪ್ರಶಸ್ತಿ, ಪ್ರತಿಷ್ಠಿತ ‘ಪದ್ಮಶ್ರೀ’ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.

ಕುವೆಂಪು ನಗರದ ನಿವಾಸದಲ್ಲಿ ಬುಧವಾರ (ಜೂನ್ 12) ಬೆಳಿಗ್ಗೆ 9 ರಿಂದ ಮಧ್ಯಾಹ್ನ 12 ಗಂಟೆಯವರೆಗೆ ಸಾರ್ವಜನಿಕರಿಗೆ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ನಂತರ ಅಂತ್ಯಕ್ರಿಯೆ ನಡೆಯಲಿದೆ ಎಂದು ತಿಳಿದು ಬಂದಿದೆ.

ರಾಜೀವ್ ತಾರಾನಾಥ್ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸೇರಿ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.

 

ಇದನ್ನೂ ಓದಿ : ಕೊಲೆ ಪ್ರಕರಣ: ನಟ ದರ್ಶನ್, ಪವಿತ್ರಾ ಗೌಡ ಸೇರಿ 13 ಆರೋಪಿಗಳು ಪೊಲೀಸ್ ಕಸ್ಟಡಿಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಮಿಳುನಾಡಿನಲ್ಲಿ ಎರಡು ಬಸ್ಸುಗಳು ಡಿಕ್ಕಿ:10ಕ್ಕೂ ಹೆಚ್ಚು ಜನರ ಸಾವು, 20 ಜನರಿಗೆ ಗಂಭೀರ ಗಾಯಗಳಾಗಿವೆ

ಚೆನ್ನೈ: ಶಿವಗಂಗಾ ಜಿಲ್ಲೆಯ ಕುಮ್ಮಂಗುಡಿ ಬಳಿ ಭಾನುವಾರ ಸಂಜೆ ಎರಡು ತಮಿಳುನಾಡು ಸರ್ಕಾರಿ ಬಸ್‌ಗಳು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ 10 ಜನರು ಸಾವನ್ನಪ್ಪಿ, 20 ಜನರು ಗಾಯಗೊಂಡಿದ್ದಾರೆ ಎಂದು ಪೊಲೀಸರು...

ನಾಳೆಯಿಂದ ಸಂಸತ್ ಚಳಿಗಾಲದ ಅಧಿವೇಶನ | ಸುಗಮ ಕಲಾಪಕ್ಕೆ ಸಹಕಾರ ಕೋರಿದ ಆಡಳಿತ : ಎಸ್‌ಐಆರ್ ಚರ್ಚೆ ಮುಂದಿಟ್ಟ ಪ್ರತಿಪಕ್ಷಗಳು

ನಾಳೆಯಿಂದ (ಡಿಸೆಂಬರ್ 1) ಸಂಸತ್ತಿನ ಚಳಿಗಾಲದ ಅಧಿವೇಶನ ಪ್ರಾರಂಭಗೊಳ್ಳಲಿದೆ. ಅದಕ್ಕೂ ಮುನ್ನ ಇಂದು (ನವೆಂಬರ್ 30) ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ನೇತೃತ್ವದಲ್ಲಿ ಸರ್ವಪಕ್ಷಗಳ ಸಭೆ ನಡೆದಿದೆ. ಸಭೆಯಲ್ಲಿ ಸುಗಮ...

ಅರೆಭಾಷೆಯಂತಹ ಪ್ರಾದೇಶಿಕ ಭಾಷೆಗಳು ಕನ್ನಡವನ್ನು ಶ್ರೀಮಂತಗೊಳಿಸಿವೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಕನ್ನಡ ಭಾಷೆ ರಾಜ್ಯದ ಅಸ್ಮಿತೆಯ ತಳಹದಿಯಾಗಿದ್ದರೆ, ಅರೆಭಾಷೆಯಂತಹ ಪ್ರಾದೇಶಿಕ ಭಾಷೆಗಳು ಕನ್ನಡವನ್ನು ಶ್ರೀಮಂತಗೊಳಿಸಿವೆ ಎಂದು  ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯಪಟ್ಟರು.  ನವೆಂಬರ್ 30ರಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕರ್ನಾಟಕ ಅರೆ ಭಾಷೆ ಸಂಸ್ಕೃತಿ ಮತ್ತು...

ಮದುವೆಯಾಗುವುದಾಗಿ ನಂಬಿಸಿ ವಂಚಿಸಿದ ಯುವಕ: ಮನನೊಂದು 22 ವರ್ಷದ ಯುವತಿ ಆತ್ಮಹತ್ಯೆ 

ಮದುವೆಯಾಗುವುದಾಗಿ ನಂಬಿಸಿದ್ದ ಯುವಕ, ಯುವತಿಗೆ ಮಾನಸಿಕ-ದೈಹಿಕ ಹಲ್ಲೆ ನಡೆಸಿದ್ದು, ಆತನ ಲೈಂಗಿಕ ಕಿರುಕುಳಕ್ಕೆ ಬೇಸತ್ತ ಯುವತಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಇಂಜಿನಿಯರಿಂಗ್ ಪದವೀಧರೆ...

ಮಹಾರಾಷ್ಟ್ರ : ಪ್ರಮುಖ ನಾಯಕ ಅನಂತ್ ಸೇರಿದಂತೆ 10 ಮಂದಿ ಮಾವೋವಾದಿಗಳು ಶರಣಾಗತಿ

ಮಹಾರಾಷ್ಟ್ರದ ಗೊಂಡಿಯಾ ಜಿಲ್ಲೆಯಲ್ಲಿ ಶುಕ್ರವಾರ (ನ.28) ಪ್ರಮುಖ ಮಾವೋವಾದಿ ನಾಯಕ ವಿಕಾಸ್ ನಾಗಪುರೆ ಅಲಿಯಾಸ್ ನವಜ್ಯೋತ್ ಅಲಿಯಾಸ್ ಅನಂತ್ ಮತ್ತು ಇತರ 10 ಮಂದಿ ಪೊಲೀಸರ ಮುಂದೆ ಶರಣಾಗಿದ್ದಾರೆ. ಅನಂತ್ ನಿಷೇಧಿತ ಕಮ್ಯುನಿಸ್ಟ್ ಪಾರ್ಟಿ...

ಎಸ್‌ಐಆರ್ : 12 ರಾಜ್ಯ, ಕೇಂದ್ರಾಡಳಿತ ಪ್ರದೇಶಗಳ ಗಡುವು ವಿಸ್ತರಿಸಿದ ಚು. ಆಯೋಗ

ಒಂಬತ್ತು ರಾಜ್ಯಗಳು ಮತ್ತು ಮೂರು ಕೇಂದ್ರಾಡಳಿತ ಪ್ರದೇಶಗಳಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌)ಯಲ್ಲಿ ಮತದಾರರು ಎಣಿಕೆ ನಮೂನೆಗಳನ್ನು ಸಲ್ಲಿಸುವ ಗಡುವನ್ನು ಡಿಸೆಂಬರ್ 4 ರಿಂದ 11ಕ್ಕೆ ಚುನಾವಣಾ ಆಯೋಗ...

ಗೆಳತಿಗೆ ಬೇರೊಬ್ಬ ವ್ಯಕ್ತಿಯೊಂದಿಗೆ ವಿವಾಹ: 18ವರ್ಷದ ಪದವಿಪೂರ್ವ ವಿದ್ಯಾರ್ಥಿ ಆತ್ಮಹತ್ಯೆ

ತನ್ನ ಗೆಳತಿ ಬೇರೊಬ್ಬ ವ್ಯಕ್ತಿಯನ್ನು ಮದುವೆಯಾದ ಕಾರಣ ನವೆಂಬರ್ 29, ಶನಿವಾರ ಹೈದರಾಬಾದ್‌ನಲ್ಲಿ ಪದವಿಪೂರ್ವ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಘಟನೆ ಸುರರಾಮ್ ಪೊಲೀಸ್ ವ್ಯಾಪ್ತಿಯಲ್ಲಿ ನಡೆದಿದೆ. ಮೃತನನ್ನು 18 ವರ್ಷದ ಅಭಿಲಾಷ್ ಎಂದು...

ಅರ್ಫಾಝ್‌ನ ಮನೆ ಕೆಡವಿದ ಆಡಳಿತ : ತನ್ನ ಜಾಗ ಉಡುಗೊರೆಯಾಗಿ ಕೊಟ್ಟ ಕುಲ್ದೀಪ್ ಶರ್ಮಾ

ಅರ್ಫಾಝ್ ಎಂಬ ಪತ್ರಕರ್ತನ ಮನೆಯನ್ನು ಆಡಳಿತ ಕೆಡವಿದಾಗ, ತನ್ನ ಜಾಗವನ್ನು ಉಡುಗೊರೆಯಾಗಿ ಕೊಟ್ಟ ಜಮ್ಮು ಕಾಶ್ಮೀರದ ಸಾಮಾಜಿಕ ಹೋರಾಟಗಾರ ಕುಲ್ದೀಪ್ ಶರ್ಮಾ ನಡೆಗೆ ದೇಶದಾದ್ಯಂತ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ. ಜಮ್ಮುವಿನ ಜ್ಯುವೆಲ್ ಪ್ರದೇಶದ ನಿವಾಸಿ...

ತೆಲಂಗಾಣದಲ್ಲಿ ಭೀಕರ ಅಗ್ನಿ ಅವಘಡ, ಕೊಂಡಗಟ್ಟು ಪ್ರದೇಶದಲ್ಲಿ 20ಕ್ಕೂ ಹೆಚ್ಚು ಅಂಗಡಿಗಳು ಭಸ್ಮ

ಹೈದರಾಬಾದ್: ತೆಲಂಗಾಣದಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಕೊಂಡಗಟ್ಟು ಪ್ರದೇಶದಲ್ಲಿ ಇಪ್ಪತ್ತಕ್ಕೂ ಹೆಚ್ಚು ಅಂಗಡಿಗಳು ಸುಟ್ಟು ಭಸ್ಮವಾಗಿವೆ. ಶನಿವಾರ ತಡರಾತ್ರಿ ಬೆಂಕಿ ಕಾಣಿಸಿಕೊಂಡಿದ್ದು, ಕೊಂಡಗಟ್ಟು ಬೆಟ್ಟಗಳ ತಪ್ಪಲಿನಲ್ಲಿರುವ ಅಂಗಡಿಗಳ ಸಾಲಿಗೆ ಬೆಂಕಿ ವ್ಯಾಪಿಸಿದ್ದು, ತೀವ್ರ...

ಬಾಬರಿ ಮಸೀದಿ ಧ್ವಂಸದಂದು ಶಾಲೆಗಳಲ್ಲಿ ‘ಶೌರ್ಯ ದಿನಾಚರಣೆ’ಗೆ ಸೂಚಿಸಿದ ರಾಜಸ್ಥಾನದ ಬಿಜೆಪಿ ಸರ್ಕಾರ : 12 ಗಂಟೆಯೊಳಗೆ ಆದೇಶ ವಾಪಸ್

ಬಾಬರಿ ಮಸೀದಿ ಧ್ವಂಸ ದಿನವಾದ ಡಿಸೆಂಬರ್ 6ರಂದು ರಾಜ್ಯದ ಎಲ್ಲಾ ಶಾಲೆಗಳಲ್ಲಿ 'ಶೌರ್ಯ ದಿನ' ಆಚರಿಸುವಂತೆ ನೀಡಿದ್ದ ಆದೇಶವನ್ನು 12 ಗಂಟೆಗಳ ಒಳಗೆ ರಾಜಸ್ಥಾನದ ಬಿಜೆಪಿ ಸರ್ಕಾರ ವಾಪಸ್ ಪಡೆದಿದೆ. ಡಿಸೆಂಬರ್ 6ರಂದು ರಾಜ್ಯದ...