Homeಕರ್ನಾಟಕಕನ್ನಡ ಶಾಲೆ ಕೆಡವಿ ಸ್ಮಾರಕ ನಿರ್ಮಾಣ: ತೀವ್ರಗೊಂಡ ಮೈಸೂರು NTM ಶಾಲೆ ಉಳಿಸಿ ಹೋರಾಟ

ಕನ್ನಡ ಶಾಲೆ ಕೆಡವಿ ಸ್ಮಾರಕ ನಿರ್ಮಾಣ: ತೀವ್ರಗೊಂಡ ಮೈಸೂರು NTM ಶಾಲೆ ಉಳಿಸಿ ಹೋರಾಟ

- Advertisement -
- Advertisement -

ಮೈಸೂರಿನ ಎನ್‌ಟಿಎಂ ಶಾಲೆ ದೇಶದ ಮೊದಲ ಹೆಣ್ಣುಮಕ್ಕಳ ಶಾಲೆ ಎಂಬ ಖ್ಯಾತಿಯನ್ನು ಪಡೆದಿದೆ. ಶತಮಾನದ ಇತಿಹಾಸವಿರುವ ಈ ಕನ್ನಡ ಶಾಲೆಯನ್ನು ಕೆಡವಿ ಸ್ವಾಮಿ ವಿವೇಕಾನಂದರ ಸ್ಮಾರಕ ನಿರ್ಮಾಣಕ್ಕೆ ಸರ್ಕಾರ ಮುಂದಾಗಿರುವುದು ಸಾರ್ವಜನಿಕರ ಮತ್ತು ಕನ್ನಡಪರ ಸಂಘಟನೆಗಳ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಕಳೆದ ವರ್ಷ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪನವರು ಸಾರ್ವಜನಿಕರ ಹೋರಾಟಕ್ಕೆ ಮಣಿದು ಶಾಲೆ ಕೆಡವಿ ಸ್ಮಾರಕ ನಿರ್ಮಿಸುವ ಯೋಜನೆಯನ್ನು ಕೈಬಿಡುವುದಾಗಿ ಹೇಳಿದ್ದರು. ಈಗ ಮತ್ತೆ ಸರ್ಕಾರ ಸದ್ದಿಲ್ಲದೇ ಶಾಲೆಯಿದ್ದ ಸ್ಥಳದಲ್ಲಿಯೇ ವಿವೇಕ ಸ್ಮಾರಕ ನಿರ್ಮಾಣಕ್ಕೆ ಮುಂದಾಗಿದೆ.

ಮಹಾರಾಣಿ ಎನ್‌ಟಿಎಮ್‌ ಹೆಣ್ಣುಮಕ್ಕಳ ಶಾಲೆ ಉಳಿವಿಗಾಗಿ ಮೈಸೂರಿನಲ್ಲಿ ಹೋರಾಟ ತೀವ್ರಗೊಂಡಿದ್ದು ಕನ್ನಡಪರ ಸಂಘಟನೆಗಳು, ರಂಗಭೂಮಿ ಕಲಾವಿದರು, ಅಧ್ಯಾಪಕರು, ಸಾಹಿತಿಗಳು ಇತಿಹಾಸಕರರು ಸೇರಿದಂತೆ ನೂರಾರು ಜನ ಸರ್ಕಾರದ ವಿರುದ್ಧ ಪ್ರತಿನಿತ್ಯ ಪ್ರತಿಭಟನೆಗಳನ್ನು ನಡೆಸುತ್ತಿದ್ದಾರೆ. ಇಂದು ಎಸ್‌ಯುಸಿಐ, ಸಿಪಿಐ, ಸಿಪಿಐಎಂ, ಸಿಪಿಐಎಂಎಲ್‌ ಸೇರಿದಂತೆ ಹಲವು ಕಾರ್ಮಿಕ ಸಂಘಟನೆಗಳು NTM ಶಾಲೆ ಉಳಿವಿಗಾಗಿ ಪ್ರತಿಭಟನೆ ನಡೆಸಿದರು.

ಇದನ್ನೂ ಓದಿ: ಸ್ವಾರ್ಥಪರ ಯೋಗಿ – ಭೋಗಿಗಳಿಂದ ಐತಿಹಾಸಿಕ ಎನ್‌ಟಿಎಂ ಶಾಲೆ ಉಳಿಸಬೇಕು

NTM ಮಹಾರಾಣಿ ಶಾಲೆ ಉಳಿವಿಗಾಗಿ ಮೈಸೂರಿನಲ್ಲಿ ವಿವಿಧ ಸಂಘಟನೆಗಳ ಪ್ರತಿಭಟನೆ

ಸ್ವಾಮಿ ವಿವೇಕಾನಂದರು ಹೆಣ್ಣುಮಕ್ಕಳ ಶಿಕ್ಷಣವನ್ನು ಪ್ರೋತ್ಸಾಹಿಸಿದ್ದರು. ಶಾಲೆ ಕೆಡವಿ ಸ್ಮಾರಕ ನಿರ್ಮಾಣ ಮಾಡಿ ಎಂದು ಅವರು ಎಲ್ಲಿಯೂ ಹೇಳಿಲ್ಲ. ಕರ್ನಾಟಕ ಸರ್ಕಾರ ವಿವೇಕಾನಂದರ ಹೆಸರಿನಲ್ಲಿ ಅವಿವೇಕದ ಕೆಲಸ ಮಾಡುತ್ತಿದೆ. ಶಾಲೆಯ ಸಮಾಧಿ ಮೇಲೆ ಸ್ಮಾರಕ ಕಟ್ಟಿದರೆ ವಿವೇಕಾನಂದರ ಆದರ್ಶದ ಕೊಲೆ ಅದು ಎಂದು ಹೋರಾಟಗಾರರು ಆಕ್ರೋಶ ಹೊರಹಾಕಿದ್ದಾರೆ. ಮೈಸೂರಿನ ಹಲವೆಡೆ ಶಾಲೆ ಉಳಿಸಿ ಎಂಬ ಭಿತ್ತಿ ಚಿತ್ರಗಳನ್ನು ಪ್ರದರ್ಶಿಸುವ ಮೂಲಕ ಜನರನ್ನು ಜಾಗೃತಿಗೊಳಿಸುವ ಪ್ರಯತ್ನವೂ ನಡೆಯುತ್ತಿದೆ.

ಇದನ್ನೂ ಓದಿ: ಮೈಸೂರಿನಲ್ಲಿ ವಿವೇಕ ಸ್ಮಾರಕ ನಿರ್ಮಾಣ ಯಾರ ಉದ್ಧಾರಕ್ಕಾಗಿ? : ಡಾ.ಬಿ.ಪಿ ಮಹೇಶ ಚಂದ್ರ ಗುರು

ಆಮ್ ಆದ್ಮಿ ಪಕ್ಷ, ದಲಿತ ಸಂಘರ್ಷ ಸಮಿತಿ, ಕರ್ನಾಟಕ ಹಿತರಕ್ಷಣಾ ವೇದಿಕೆ, ಬಹುಜನ ವಿದ್ಯಾರ್ಥಿ ಸಂಘ ಹೀಗೆ ವಾರದಿಂದ ಸತತವಾಗಿ ಹೋರಾಟ, ಪ್ರತಿಭಟನೆಗಳು ನಡೆಯುತ್ತಿದ್ದೂ ಜನರ ಕೂಗು ಸರ್ಕಾರಕ್ಕೆ ಕೇಳುತ್ತಿಲ್ಲ. ಸಂಸದ ಪ್ರತಾಪ್ ಸಿಂಹ ಸೇರಿದಂತೆ ಬಿಜೆಪಿ ನಾಯಕರು ಶಾಲೆಯ ಸ್ಥಳದಲ್ಲಿಯೇ ಸ್ಮಾರಕ ನಿರ್ಮಾಣವಾಗಬೇಕೆಂದು ಪಟ್ಟು ಹಿಡಿದಿದ್ದಾರೆ. ವಿವೇಕಾನಂದರು NTM ಶಾಲೆ ಸೇರಿದಂತೆ ಪಕ್ಕದ ಸದ್ವಿದ್ಯಾ ಸಂಸ್ಥೆ ಮತ್ತು ಮೈಸೂರಿನ ಇನ್ನಿತರ ಭಾಗಗಳಿಗೂ ಭೇಟಿ ನೀಡಿದ್ದಾರೆ. ಸರ್ಕಾರ ಮಾತ್ರ ಕನ್ನಡ ಶಾಲೆಯ ಕಟ್ಟಡವನ್ನೇ ಆಯ್ದುಕೊಂಡಿರುವುದು ಜನರ ಸಿಟ್ಟಿಗೆ ಕಾರಣವಾಗಿದೆ.

ಹಿರಿಯ ರಂಗಕರ್ಮಿ ಸಿ ಬಸವಲಿಂಗಯ್ಯನವರು ಮಾತನಾಡಿ, “ಕನ್ನಡ ಶಾಲೆಯನ್ನು ಕೆಡವಿ ವಿವೇಕ ಸ್ಮಾರಕ ನಿರ್ಮಾಣ ಮಾಡುವುದು ಅವಿವೇಕದ ಕೆಲಸ. ವಿವೇಕಾನಂದರ ಆದರ್ಶಕ್ಕೆ ವಿರುದ್ಧವಾದದ್ದು. ಮೈಸೂರಿನ ಬೇರೆ ಎಲ್ಲಿಯಾದರೂ ಸ್ಮಾರಕ ನಿರ್ಮಾಣವಾಗಲಿ. ಶಾಲೆಯ ಸ್ಥಳದಲ್ಲಿ ಬೇಡ” ಎಂದು NTM ಮಹಾರಾಣಿ ಶಾಲೆಯ ಉಳಿವಿಗಾಗಿ ಧ್ವನಿ ಎತ್ತಿದ್ದಾರೆ.

ಪೂರ್ವದಲ್ಲಿ ಹೆಣ್ಣುಮಕ್ಕಳಿಗೆ ಶಿಕ್ಷಣದ ಅವಕಾಶವೇ ಇಲ್ಲದ ಸಂದರ್ಭದಲ್ಲಿ ಮೈಸೂರು ಸಂಸ್ಥಾನದ ರಾಣಿಯವರು ಐತಿಹಾಸಿಕ NTM ಮಹಾರಾಣಿ ಶಾಲೆಯನ್ನು ಕಟ್ಟಿ ಹೆಣ್ಣು ಮಕ್ಕಳ ಶಿಕ್ಷಣಕ್ಕೆ ಪ್ರೋತ್ಸಾಹ ನೀಡಿದ್ದಾರೆ. ಕರ್ನಾಟಕ ಮಾತ್ರವಲ್ಲ ಭಾರತದ ಇತಿಹಾಸದಲ್ಲಿ ಇದೊಂದು ಚಾರಿತ್ರಿಕ ಘಟನೆ. ಇದುವರೆಗೆ ಸಾವಿರಾರು ಹೆಣ್ಣುಮಕ್ಕಳು ಇಲ್ಲಿ ಕಲಿತು ಹಲವು ಸಾಧನೆ ಮಾಡಿದ್ದಾರೆ. ಮಹಿಳಾ ಶಿಕ್ಷಣ, ಸಬಲೀಕರಣದ ಮಾತನಾಡುವ ಸರ್ಕಾರ ಅದಕ್ಕೆ ಸ್ಪೂರ್ತಿಯಾದ ಐತಿಹಾಸಿಕ ಕಟ್ಟಡವನ್ನು ಕೆಡವಲು ಮುಂದಾಗಿರುವುದು ಅತ್ಯಂತ ದುರದೃಷ್ಟದ ಸಂಗತಿ. ಶಾಲೆ ಕೆಡವಿ ಸ್ಮಾರಕ ನಿರ್ಮಿಸುವ ಯೋಜನೆಯನ್ನು ಕೈಬಿಟ್ಟು ಚಾರಿತ್ರಿಕ ಕಟ್ಟಡದ ಅಭಿವೃದ್ಧಿಗೆ ರಾಜ್ಯ ಸರ್ಕಾರ ಮುಂದಾಗಬೇಕು. ಅಪಾಯದ ಅಂಚಿನಲ್ಲಿರುವ NTM ಶಾಲೆಯನ್ನು ಉಳಿಸುವಂತೆ ನಾಗರಿಕ ಸಮಾಜ ಕೂಡ ಸರ್ಕಾರದ ಮೇಲೆ ಒತ್ತಡ ಹೇರಲು ಮುಂದಾಗಬೇಕಿದೆ ಎಂದು ಅವರು ಮನವಿ ಮಾಡಿದ್ದಾರೆ.

ಎಸ್‌ಯುಸಿಐ ಕಮ್ಯೂನಿಸ್ಟ್‌ ಪಕ್ಷದ ಜಿಲ್ಲಾ ಸಮಿತಿಯ ಸದಸ್ಯರಾದ ಎಂ.ಉಮಾದೇವಿ, ಚಂದ್ರಶೇಖರ ಮೇಟಿ, ಹರೀಶ್ ಎಸ್.ಎಚ್‌, ಸಿಪಿಐ(ಎಂ)ನ ಜಿಲ್ಲಾ ಕಾರ್ಯದರ್ಶಿ ಕೆ.ಬಸವರಾಜ್, ಜಗನ್ನಾಥ್, ಜಗದೀಶ್ ಸೂರ್ಯ, ಸಿಪಿಐನ ಜಗನ್ನಾಥ್, ಸಿಪಿಐ ಎಂಎಲ್ ನ ಚೌಡಹಳ್ಳಿ ಜವರಯ್ಯ, ನಾ.ದಿವಾಕರ ಪಿಯುಸಿಎಲ್ ನ ಲಕ್ಷ್ಮೀನಾರಾಯಣ, ರತಿರಾವ್, ಸ್ವರಾಜ್ ಇಂಡಿಯಾದ ಉಗ್ರನರಸಿಂಹೇಗೌಡ ಐಎನ್‌ಟಿಯುಸಿಯ ಅನಿಲ್ ಕುಮಾರ್ ಸೇರಿದಂತೆ ವಿವಿಧ ಕಾರ್ಮಿಕ ಮುಖಂಡರು, ರೈತ ಹೋರಾಟಗಾರು, ಸಾಮಾಜಿಕ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ರಾಜೇಶ್ ಹೆಬ್ಬಾರ್


ಇದನ್ನೂ ಓದಿ: ಪಟ್ಟಭದ್ರರ ವಿರುದ್ಧ ದಿಟ್ಟ ಹೋರಾಟಕ್ಕೆ ಉಳಿದ ಮೈಸೂರಿನ ಸರ್ಕಾರಿ ಶಾಲೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...