Homeಕರ್ನಾಟಕಕನ್ನಡ ಶಾಲೆ ಕೆಡವಿ ಸ್ಮಾರಕ ನಿರ್ಮಾಣ: ತೀವ್ರಗೊಂಡ ಮೈಸೂರು NTM ಶಾಲೆ ಉಳಿಸಿ ಹೋರಾಟ

ಕನ್ನಡ ಶಾಲೆ ಕೆಡವಿ ಸ್ಮಾರಕ ನಿರ್ಮಾಣ: ತೀವ್ರಗೊಂಡ ಮೈಸೂರು NTM ಶಾಲೆ ಉಳಿಸಿ ಹೋರಾಟ

- Advertisement -
- Advertisement -

ಮೈಸೂರಿನ ಎನ್‌ಟಿಎಂ ಶಾಲೆ ದೇಶದ ಮೊದಲ ಹೆಣ್ಣುಮಕ್ಕಳ ಶಾಲೆ ಎಂಬ ಖ್ಯಾತಿಯನ್ನು ಪಡೆದಿದೆ. ಶತಮಾನದ ಇತಿಹಾಸವಿರುವ ಈ ಕನ್ನಡ ಶಾಲೆಯನ್ನು ಕೆಡವಿ ಸ್ವಾಮಿ ವಿವೇಕಾನಂದರ ಸ್ಮಾರಕ ನಿರ್ಮಾಣಕ್ಕೆ ಸರ್ಕಾರ ಮುಂದಾಗಿರುವುದು ಸಾರ್ವಜನಿಕರ ಮತ್ತು ಕನ್ನಡಪರ ಸಂಘಟನೆಗಳ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಕಳೆದ ವರ್ಷ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪನವರು ಸಾರ್ವಜನಿಕರ ಹೋರಾಟಕ್ಕೆ ಮಣಿದು ಶಾಲೆ ಕೆಡವಿ ಸ್ಮಾರಕ ನಿರ್ಮಿಸುವ ಯೋಜನೆಯನ್ನು ಕೈಬಿಡುವುದಾಗಿ ಹೇಳಿದ್ದರು. ಈಗ ಮತ್ತೆ ಸರ್ಕಾರ ಸದ್ದಿಲ್ಲದೇ ಶಾಲೆಯಿದ್ದ ಸ್ಥಳದಲ್ಲಿಯೇ ವಿವೇಕ ಸ್ಮಾರಕ ನಿರ್ಮಾಣಕ್ಕೆ ಮುಂದಾಗಿದೆ.

ಮಹಾರಾಣಿ ಎನ್‌ಟಿಎಮ್‌ ಹೆಣ್ಣುಮಕ್ಕಳ ಶಾಲೆ ಉಳಿವಿಗಾಗಿ ಮೈಸೂರಿನಲ್ಲಿ ಹೋರಾಟ ತೀವ್ರಗೊಂಡಿದ್ದು ಕನ್ನಡಪರ ಸಂಘಟನೆಗಳು, ರಂಗಭೂಮಿ ಕಲಾವಿದರು, ಅಧ್ಯಾಪಕರು, ಸಾಹಿತಿಗಳು ಇತಿಹಾಸಕರರು ಸೇರಿದಂತೆ ನೂರಾರು ಜನ ಸರ್ಕಾರದ ವಿರುದ್ಧ ಪ್ರತಿನಿತ್ಯ ಪ್ರತಿಭಟನೆಗಳನ್ನು ನಡೆಸುತ್ತಿದ್ದಾರೆ. ಇಂದು ಎಸ್‌ಯುಸಿಐ, ಸಿಪಿಐ, ಸಿಪಿಐಎಂ, ಸಿಪಿಐಎಂಎಲ್‌ ಸೇರಿದಂತೆ ಹಲವು ಕಾರ್ಮಿಕ ಸಂಘಟನೆಗಳು NTM ಶಾಲೆ ಉಳಿವಿಗಾಗಿ ಪ್ರತಿಭಟನೆ ನಡೆಸಿದರು.

ಇದನ್ನೂ ಓದಿ: ಸ್ವಾರ್ಥಪರ ಯೋಗಿ – ಭೋಗಿಗಳಿಂದ ಐತಿಹಾಸಿಕ ಎನ್‌ಟಿಎಂ ಶಾಲೆ ಉಳಿಸಬೇಕು

NTM ಮಹಾರಾಣಿ ಶಾಲೆ ಉಳಿವಿಗಾಗಿ ಮೈಸೂರಿನಲ್ಲಿ ವಿವಿಧ ಸಂಘಟನೆಗಳ ಪ್ರತಿಭಟನೆ

ಸ್ವಾಮಿ ವಿವೇಕಾನಂದರು ಹೆಣ್ಣುಮಕ್ಕಳ ಶಿಕ್ಷಣವನ್ನು ಪ್ರೋತ್ಸಾಹಿಸಿದ್ದರು. ಶಾಲೆ ಕೆಡವಿ ಸ್ಮಾರಕ ನಿರ್ಮಾಣ ಮಾಡಿ ಎಂದು ಅವರು ಎಲ್ಲಿಯೂ ಹೇಳಿಲ್ಲ. ಕರ್ನಾಟಕ ಸರ್ಕಾರ ವಿವೇಕಾನಂದರ ಹೆಸರಿನಲ್ಲಿ ಅವಿವೇಕದ ಕೆಲಸ ಮಾಡುತ್ತಿದೆ. ಶಾಲೆಯ ಸಮಾಧಿ ಮೇಲೆ ಸ್ಮಾರಕ ಕಟ್ಟಿದರೆ ವಿವೇಕಾನಂದರ ಆದರ್ಶದ ಕೊಲೆ ಅದು ಎಂದು ಹೋರಾಟಗಾರರು ಆಕ್ರೋಶ ಹೊರಹಾಕಿದ್ದಾರೆ. ಮೈಸೂರಿನ ಹಲವೆಡೆ ಶಾಲೆ ಉಳಿಸಿ ಎಂಬ ಭಿತ್ತಿ ಚಿತ್ರಗಳನ್ನು ಪ್ರದರ್ಶಿಸುವ ಮೂಲಕ ಜನರನ್ನು ಜಾಗೃತಿಗೊಳಿಸುವ ಪ್ರಯತ್ನವೂ ನಡೆಯುತ್ತಿದೆ.

ಇದನ್ನೂ ಓದಿ: ಮೈಸೂರಿನಲ್ಲಿ ವಿವೇಕ ಸ್ಮಾರಕ ನಿರ್ಮಾಣ ಯಾರ ಉದ್ಧಾರಕ್ಕಾಗಿ? : ಡಾ.ಬಿ.ಪಿ ಮಹೇಶ ಚಂದ್ರ ಗುರು

ಆಮ್ ಆದ್ಮಿ ಪಕ್ಷ, ದಲಿತ ಸಂಘರ್ಷ ಸಮಿತಿ, ಕರ್ನಾಟಕ ಹಿತರಕ್ಷಣಾ ವೇದಿಕೆ, ಬಹುಜನ ವಿದ್ಯಾರ್ಥಿ ಸಂಘ ಹೀಗೆ ವಾರದಿಂದ ಸತತವಾಗಿ ಹೋರಾಟ, ಪ್ರತಿಭಟನೆಗಳು ನಡೆಯುತ್ತಿದ್ದೂ ಜನರ ಕೂಗು ಸರ್ಕಾರಕ್ಕೆ ಕೇಳುತ್ತಿಲ್ಲ. ಸಂಸದ ಪ್ರತಾಪ್ ಸಿಂಹ ಸೇರಿದಂತೆ ಬಿಜೆಪಿ ನಾಯಕರು ಶಾಲೆಯ ಸ್ಥಳದಲ್ಲಿಯೇ ಸ್ಮಾರಕ ನಿರ್ಮಾಣವಾಗಬೇಕೆಂದು ಪಟ್ಟು ಹಿಡಿದಿದ್ದಾರೆ. ವಿವೇಕಾನಂದರು NTM ಶಾಲೆ ಸೇರಿದಂತೆ ಪಕ್ಕದ ಸದ್ವಿದ್ಯಾ ಸಂಸ್ಥೆ ಮತ್ತು ಮೈಸೂರಿನ ಇನ್ನಿತರ ಭಾಗಗಳಿಗೂ ಭೇಟಿ ನೀಡಿದ್ದಾರೆ. ಸರ್ಕಾರ ಮಾತ್ರ ಕನ್ನಡ ಶಾಲೆಯ ಕಟ್ಟಡವನ್ನೇ ಆಯ್ದುಕೊಂಡಿರುವುದು ಜನರ ಸಿಟ್ಟಿಗೆ ಕಾರಣವಾಗಿದೆ.

ಹಿರಿಯ ರಂಗಕರ್ಮಿ ಸಿ ಬಸವಲಿಂಗಯ್ಯನವರು ಮಾತನಾಡಿ, “ಕನ್ನಡ ಶಾಲೆಯನ್ನು ಕೆಡವಿ ವಿವೇಕ ಸ್ಮಾರಕ ನಿರ್ಮಾಣ ಮಾಡುವುದು ಅವಿವೇಕದ ಕೆಲಸ. ವಿವೇಕಾನಂದರ ಆದರ್ಶಕ್ಕೆ ವಿರುದ್ಧವಾದದ್ದು. ಮೈಸೂರಿನ ಬೇರೆ ಎಲ್ಲಿಯಾದರೂ ಸ್ಮಾರಕ ನಿರ್ಮಾಣವಾಗಲಿ. ಶಾಲೆಯ ಸ್ಥಳದಲ್ಲಿ ಬೇಡ” ಎಂದು NTM ಮಹಾರಾಣಿ ಶಾಲೆಯ ಉಳಿವಿಗಾಗಿ ಧ್ವನಿ ಎತ್ತಿದ್ದಾರೆ.

ಪೂರ್ವದಲ್ಲಿ ಹೆಣ್ಣುಮಕ್ಕಳಿಗೆ ಶಿಕ್ಷಣದ ಅವಕಾಶವೇ ಇಲ್ಲದ ಸಂದರ್ಭದಲ್ಲಿ ಮೈಸೂರು ಸಂಸ್ಥಾನದ ರಾಣಿಯವರು ಐತಿಹಾಸಿಕ NTM ಮಹಾರಾಣಿ ಶಾಲೆಯನ್ನು ಕಟ್ಟಿ ಹೆಣ್ಣು ಮಕ್ಕಳ ಶಿಕ್ಷಣಕ್ಕೆ ಪ್ರೋತ್ಸಾಹ ನೀಡಿದ್ದಾರೆ. ಕರ್ನಾಟಕ ಮಾತ್ರವಲ್ಲ ಭಾರತದ ಇತಿಹಾಸದಲ್ಲಿ ಇದೊಂದು ಚಾರಿತ್ರಿಕ ಘಟನೆ. ಇದುವರೆಗೆ ಸಾವಿರಾರು ಹೆಣ್ಣುಮಕ್ಕಳು ಇಲ್ಲಿ ಕಲಿತು ಹಲವು ಸಾಧನೆ ಮಾಡಿದ್ದಾರೆ. ಮಹಿಳಾ ಶಿಕ್ಷಣ, ಸಬಲೀಕರಣದ ಮಾತನಾಡುವ ಸರ್ಕಾರ ಅದಕ್ಕೆ ಸ್ಪೂರ್ತಿಯಾದ ಐತಿಹಾಸಿಕ ಕಟ್ಟಡವನ್ನು ಕೆಡವಲು ಮುಂದಾಗಿರುವುದು ಅತ್ಯಂತ ದುರದೃಷ್ಟದ ಸಂಗತಿ. ಶಾಲೆ ಕೆಡವಿ ಸ್ಮಾರಕ ನಿರ್ಮಿಸುವ ಯೋಜನೆಯನ್ನು ಕೈಬಿಟ್ಟು ಚಾರಿತ್ರಿಕ ಕಟ್ಟಡದ ಅಭಿವೃದ್ಧಿಗೆ ರಾಜ್ಯ ಸರ್ಕಾರ ಮುಂದಾಗಬೇಕು. ಅಪಾಯದ ಅಂಚಿನಲ್ಲಿರುವ NTM ಶಾಲೆಯನ್ನು ಉಳಿಸುವಂತೆ ನಾಗರಿಕ ಸಮಾಜ ಕೂಡ ಸರ್ಕಾರದ ಮೇಲೆ ಒತ್ತಡ ಹೇರಲು ಮುಂದಾಗಬೇಕಿದೆ ಎಂದು ಅವರು ಮನವಿ ಮಾಡಿದ್ದಾರೆ.

ಎಸ್‌ಯುಸಿಐ ಕಮ್ಯೂನಿಸ್ಟ್‌ ಪಕ್ಷದ ಜಿಲ್ಲಾ ಸಮಿತಿಯ ಸದಸ್ಯರಾದ ಎಂ.ಉಮಾದೇವಿ, ಚಂದ್ರಶೇಖರ ಮೇಟಿ, ಹರೀಶ್ ಎಸ್.ಎಚ್‌, ಸಿಪಿಐ(ಎಂ)ನ ಜಿಲ್ಲಾ ಕಾರ್ಯದರ್ಶಿ ಕೆ.ಬಸವರಾಜ್, ಜಗನ್ನಾಥ್, ಜಗದೀಶ್ ಸೂರ್ಯ, ಸಿಪಿಐನ ಜಗನ್ನಾಥ್, ಸಿಪಿಐ ಎಂಎಲ್ ನ ಚೌಡಹಳ್ಳಿ ಜವರಯ್ಯ, ನಾ.ದಿವಾಕರ ಪಿಯುಸಿಎಲ್ ನ ಲಕ್ಷ್ಮೀನಾರಾಯಣ, ರತಿರಾವ್, ಸ್ವರಾಜ್ ಇಂಡಿಯಾದ ಉಗ್ರನರಸಿಂಹೇಗೌಡ ಐಎನ್‌ಟಿಯುಸಿಯ ಅನಿಲ್ ಕುಮಾರ್ ಸೇರಿದಂತೆ ವಿವಿಧ ಕಾರ್ಮಿಕ ಮುಖಂಡರು, ರೈತ ಹೋರಾಟಗಾರು, ಸಾಮಾಜಿಕ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ರಾಜೇಶ್ ಹೆಬ್ಬಾರ್


ಇದನ್ನೂ ಓದಿ: ಪಟ್ಟಭದ್ರರ ವಿರುದ್ಧ ದಿಟ್ಟ ಹೋರಾಟಕ್ಕೆ ಉಳಿದ ಮೈಸೂರಿನ ಸರ್ಕಾರಿ ಶಾಲೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಂಯಮ ಮುಗಿದಿದೆ’: ಟ್ರಂಪ್ ಬೆದರಿಕೆಗೆ ಜಗ್ಗದ ಇರಾನ್; ಪ್ರದೇಶವನ್ನು ಮೀರಿ ಪ್ರತಿಕ್ರಿಯೆ ನೀಡುವುದಾಗಿ ಎಚ್ಚರಿಕೆ ನೀಡಿದ ಐಆರ್‌ಜಿಸಿ

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನಿಗೆ ನೀಡಿದ್ದ ಗಡುವು ಕೆಲವೇ ಗಂಟೆಗಳು ಬಾಕಿ ಇರುವಾಗ, ಟ್ರಂಪ್ ಬೆದರಿಕೆಯನ್ನು ಧಿಕ್ಕರಿಸಿದ ಇರಾನ್ "ಸಂಯಮ ಮುಗಿದಿದೆ" ಎಂದು ಹೇಳಿದೆ ಮತ್ತು ಅದು ಈಗ ಈ ಪ್ರದೇಶದಲ್ಲಿನ...

ಒಡಿಶಾ| ಬಾಕ್ಸೈಟ್ ಗಣಿಗೆ ರಸ್ತೆ ನಿರ್ಮಾಣ; ಬುಡಕಟ್ಟು ಜನಾಂಗ – ಪೊಲೀಸರ ನಡುವೆ ಘರ್ಷಣೆ

ಒಡಿಶಾದ ರಾಯಗಡ ಜಿಲ್ಲೆಯಲ್ಲಿ ಸಿಜಿಮಾಲಿ ಬಾಕ್ಸೈಟ್ ಗಣಿಗೆ ರಸ್ತೆ ನಿರ್ಮಾಣದ ಬಗ್ಗೆ ಮಂಗಳವಾರ (ಏಪ್ರಿಲ್ 7) ಸ್ಥಳೀಯ ಬುಡಕಟ್ಟು ಜನಾಂಗದವರೊಂದಿಗಿನ ಘರ್ಷಣೆಯಲ್ಲಿ 40 ಭದ್ರತಾ ಸಿಬ್ಬಂದಿ ಸೇರಿದಂತೆ ಸುಮಾರು 50 ಜನರು ಗಾಯಗೊಂಡಿದ್ದಾರೆ. ಜಿಲ್ಲೆಯ...

ಮಹಿಳೆಯರ ಶಬರಿಮಲೆ ಪ್ರವೇಶಕ್ಕೆ ಅನುಮತಿಸಿದ್ದ ತೀರ್ಪು ತಪ್ಪು : 9 ನ್ಯಾಯಾಧೀಶರ ಸುಪ್ರೀಂ ಕೋರ್ಟ್‌ ಪೀಠದ ಮುಂದೆ ಕೇಂದ್ರ ಸರ್ಕಾರ ಹೇಳಿಕೆ-ವರದಿ

ಶಬರಿಮಲೆ ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ, ಎಲ್ಲಾ ವಯಸ್ಸಿನ ಮಹಿಳೆಯರಿಗೆ ಶಬರಿಮಲೆ ದೇವಸ್ಥಾನ ಪ್ರವೇಶಿಸಲು ಅನುಮತಿ ನೀಡಿದ 2018ರ ತೀರ್ಪು ತಪ್ಪಾಗಿದೆ ಮತ್ತು ಅದನ್ನು ತಪ್ಪು ಕಾನೂನು ಎಂದು ಘೋಷಿಸಲು ಅರ್ಹವಾಗಿದೆ ಎಂಬುವುದಾಗಿ ಕೇಂದ್ರ...

ಕೇರಳದಲ್ಲಿ ಬಿಜೆಪಿ ಅಭ್ಯರ್ಥಿಯಿಂದ ‘ಲವ್ ಜಿಹಾದ್’ ಹೇಳಿಕೆ; ಜಿಲ್ಲಾಧಿಕಾರಿಯಿಂದ ವರದಿ ಕೇಳಿದ ಚುನಾವಣಾ ಆಯೋಗ

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಎಡ ಪ್ರಜಾಸತ್ತಾತ್ಮಕ ರಂಗ ಅಥವಾ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗದ ಗೆಲುವು ರಾಜ್ಯದಲ್ಲಿ "ಲವ್ ಜಿಹಾದ್" ಘಟನೆಗಳಿಗೆ ಕಾರಣವಾಗುತ್ತದೆ ಎಂದು ಬಿಜೆಪಿ ಅಭ್ಯರ್ಥಿ ಪಿ ಕೆ ಕೃಷ್ಣದಾಸ್ ನೀಡಿದ ಹೇಳಿಕೆಯ...

ಮಣಿಪುರ: ಇಬ್ಬರು ಮಕ್ಕಳ ಹತ್ಯೆ ಖಂಡಿಸಿ ಇಂಫಾಲ್ ಕಣಿವೆಯಲ್ಲಿ ಪ್ರತಿಭಟನೆ; 5 ಜಿಲ್ಲೆಗಳಲ್ಲಿ ಇಂಟರ್ನೆಟ್ ಸ್ಥಗಿತ

ಮಣಿಪುರ: ಕಣಿವೆಯ ಐದು ಜಿಲ್ಲೆಗಳಲ್ಲಿ ಮೂರು ದಿನಗಳ ಕಾಲ ಬ್ರಾಡ್‌ಬ್ಯಾಂಡ್, ವಿಎಸ್‌ಎಟಿಗಳು ಮತ್ತು ವಿಪಿಎನ್ ಸೇರಿದಂತೆ ಇಂಟರ್ನೆಟ್ ಮತ್ತು ಮೊಬೈಲ್ ಡೇಟಾ ಸೇವೆಗಳನ್ನು ಸ್ಥಗಿತಗೊಳಿಸಲು ಮಣಿಪುರ ಸರ್ಕಾರ ಮಂಗಳವಾರ ಆದೇಶಿಸಿದೆ. ಗೃಹ ಇಲಾಖೆಯ ಅಧಿಕೃತ...

ಶ್ರೀನಗರದಲ್ಲಿ ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರು ಸೇರಿದಂತೆ ಐವರ ಬಂಧನ; ಅಂತರರಾಜ್ಯ ಎಲ್‌ಇಟಿ ಮಾಡ್ಯೂಲ್ ಪತ್ತೆ 

ಶ್ರೀನಗರ: ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯಲ್ಲಿ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಮಂಗಳವಾರ ಶ್ರೀನಗರದಲ್ಲಿ ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೈಬಾದ ಅಂತರರಾಜ್ಯ ಮಾಡ್ಯೂಲ್ ಅನ್ನು ಭೇದಿಸಿದ್ದು, ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರು ಸೇರಿದಂತೆ ಐದು...

ಟರ್ಕಿಯ ಇಸ್ತಾನ್‌ಬುಲ್‌ನಲ್ಲಿರುವ ಇಸ್ರೇಲಿ ರಾಯಭಾರ ಕಚೇರಿ ಬಳಿ ಗುಂಡಿನ ದಾಳಿ: ಮೂವರು ಸಾವು

ಇಸ್ತಾನ್‌ಬುಲ್‌ನಲ್ಲಿರುವ ಇಸ್ರೇಲಿ ಕಾನ್ಸುಲೇಟ್ ಕಟ್ಟಡದ ಬಳಿ ಮಂಗಳವಾರ ನಡೆದ ಗುಂಡಿನ ಚಕಮಕಿಯಲ್ಲಿ ಕನಿಷ್ಠ ಮೂವರು ಸಾವನ್ನಪ್ಪಿದ್ದಾರೆ ಮತ್ತು ಇಬ್ಬರು ಪೊಲೀಸ್ ಅಧಿಕಾರಿಗಳು ಗಾಯಗೊಂಡಿದ್ದಾರೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ, ಅಧಿಕಾರಿಗಳು ಆ ಪ್ರದೇಶವನ್ನು...

ತೆಲಂಗಾಣ ಸಿಎಂ ರೆಡ್ಡಿ ವಿರುದ್ಧ ಪಿಣರಾಯಿ ವಿಜಯನ್ ವಾಗ್ದಾಳಿ; ತೀವ್ರ ಸ್ವರೂಪ ಪಡೆದುಕೊಂಡ ವಾಕ್ಸಮರ

ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ವಿರುದ್ಧ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮಂಗಳವಾರ (ಏ.7) ವಾಗ್ದಾಳಿ ನಡೆಸಿದ್ದಾರೆ. ಇಬ್ಬರು ನಾಯಕರ ನಡುವಿನ ಮಾತಿನ ಸಮರ ತೀವ್ರ ಸ್ವರೂಪ ಪಡೆದುಕೊಂಡಿದೆ. ಕಣ್ಣೂರಿನಲ್ಲಿ ನಡೆದ ಪತ್ರಿಕಾ ಸಂವಾದ...

ಹಿಮಂತ ಬಿಸ್ವಾ ಶರ್ಮಾ ಪತ್ನಿಯ ವಿರುದ್ಧ ‘ಹಲವು ಪಾಸ್‌ಪೋರ್ಟ್‌’ ಹೊಂದಿರುವ ಆರೋಪ : ಪವನ್ ಖೇರಾ ಮನೆಯಲ್ಲಿ ಶೋಧ ನಡೆಸಿದ ಅಸ್ಸಾಂ ಪೊಲೀಸರು

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರು ಪ್ರಕರಣ ದಾಖಲಿಸಿದ ಬೆನ್ನಲ್ಲೇ, ಅಸ್ಸಾಂ ಪೊಲೀಸರು ದೆಹಲಿಯಲ್ಲಿರುವ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರ ಮನೆಯಲ್ಲಿ ಶೋಧ...

ಮಮತಾ ಬ್ಯಾನರ್ಜಿ ಅವರ ಟಿಎಂಸಿ ಕೇಂದ್ರದ ಹಣವನ್ನು ಪಕ್ಷದ ಚಟುವಟಿಕೆಗಳಿಗೆ ಬಳಸಿಕೊಂಡಿದೆ: ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಮಂಗಳವಾರ ಪಶ್ಚಿಮ ಬಂಗಾಳದ ಟಿಎಂಸಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಕೇಂದ್ರ ನಿಧಿಯ ದುರುಪಯೋಗ ಮತ್ತು ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ತೀವ್ರ ಕುಸಿತವಾಗಿದೆ ಎಂದು...