Homeಕರ್ನಾಟಕಕನ್ನಡ ಶಾಲೆ ಕೆಡವಿ ಸ್ಮಾರಕ ನಿರ್ಮಾಣ: ತೀವ್ರಗೊಂಡ ಮೈಸೂರು NTM ಶಾಲೆ ಉಳಿಸಿ ಹೋರಾಟ

ಕನ್ನಡ ಶಾಲೆ ಕೆಡವಿ ಸ್ಮಾರಕ ನಿರ್ಮಾಣ: ತೀವ್ರಗೊಂಡ ಮೈಸೂರು NTM ಶಾಲೆ ಉಳಿಸಿ ಹೋರಾಟ

- Advertisement -
- Advertisement -

ಮೈಸೂರಿನ ಎನ್‌ಟಿಎಂ ಶಾಲೆ ದೇಶದ ಮೊದಲ ಹೆಣ್ಣುಮಕ್ಕಳ ಶಾಲೆ ಎಂಬ ಖ್ಯಾತಿಯನ್ನು ಪಡೆದಿದೆ. ಶತಮಾನದ ಇತಿಹಾಸವಿರುವ ಈ ಕನ್ನಡ ಶಾಲೆಯನ್ನು ಕೆಡವಿ ಸ್ವಾಮಿ ವಿವೇಕಾನಂದರ ಸ್ಮಾರಕ ನಿರ್ಮಾಣಕ್ಕೆ ಸರ್ಕಾರ ಮುಂದಾಗಿರುವುದು ಸಾರ್ವಜನಿಕರ ಮತ್ತು ಕನ್ನಡಪರ ಸಂಘಟನೆಗಳ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಕಳೆದ ವರ್ಷ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪನವರು ಸಾರ್ವಜನಿಕರ ಹೋರಾಟಕ್ಕೆ ಮಣಿದು ಶಾಲೆ ಕೆಡವಿ ಸ್ಮಾರಕ ನಿರ್ಮಿಸುವ ಯೋಜನೆಯನ್ನು ಕೈಬಿಡುವುದಾಗಿ ಹೇಳಿದ್ದರು. ಈಗ ಮತ್ತೆ ಸರ್ಕಾರ ಸದ್ದಿಲ್ಲದೇ ಶಾಲೆಯಿದ್ದ ಸ್ಥಳದಲ್ಲಿಯೇ ವಿವೇಕ ಸ್ಮಾರಕ ನಿರ್ಮಾಣಕ್ಕೆ ಮುಂದಾಗಿದೆ.

ಮಹಾರಾಣಿ ಎನ್‌ಟಿಎಮ್‌ ಹೆಣ್ಣುಮಕ್ಕಳ ಶಾಲೆ ಉಳಿವಿಗಾಗಿ ಮೈಸೂರಿನಲ್ಲಿ ಹೋರಾಟ ತೀವ್ರಗೊಂಡಿದ್ದು ಕನ್ನಡಪರ ಸಂಘಟನೆಗಳು, ರಂಗಭೂಮಿ ಕಲಾವಿದರು, ಅಧ್ಯಾಪಕರು, ಸಾಹಿತಿಗಳು ಇತಿಹಾಸಕರರು ಸೇರಿದಂತೆ ನೂರಾರು ಜನ ಸರ್ಕಾರದ ವಿರುದ್ಧ ಪ್ರತಿನಿತ್ಯ ಪ್ರತಿಭಟನೆಗಳನ್ನು ನಡೆಸುತ್ತಿದ್ದಾರೆ. ಇಂದು ಎಸ್‌ಯುಸಿಐ, ಸಿಪಿಐ, ಸಿಪಿಐಎಂ, ಸಿಪಿಐಎಂಎಲ್‌ ಸೇರಿದಂತೆ ಹಲವು ಕಾರ್ಮಿಕ ಸಂಘಟನೆಗಳು NTM ಶಾಲೆ ಉಳಿವಿಗಾಗಿ ಪ್ರತಿಭಟನೆ ನಡೆಸಿದರು.

ಇದನ್ನೂ ಓದಿ: ಸ್ವಾರ್ಥಪರ ಯೋಗಿ – ಭೋಗಿಗಳಿಂದ ಐತಿಹಾಸಿಕ ಎನ್‌ಟಿಎಂ ಶಾಲೆ ಉಳಿಸಬೇಕು

NTM ಮಹಾರಾಣಿ ಶಾಲೆ ಉಳಿವಿಗಾಗಿ ಮೈಸೂರಿನಲ್ಲಿ ವಿವಿಧ ಸಂಘಟನೆಗಳ ಪ್ರತಿಭಟನೆ

ಸ್ವಾಮಿ ವಿವೇಕಾನಂದರು ಹೆಣ್ಣುಮಕ್ಕಳ ಶಿಕ್ಷಣವನ್ನು ಪ್ರೋತ್ಸಾಹಿಸಿದ್ದರು. ಶಾಲೆ ಕೆಡವಿ ಸ್ಮಾರಕ ನಿರ್ಮಾಣ ಮಾಡಿ ಎಂದು ಅವರು ಎಲ್ಲಿಯೂ ಹೇಳಿಲ್ಲ. ಕರ್ನಾಟಕ ಸರ್ಕಾರ ವಿವೇಕಾನಂದರ ಹೆಸರಿನಲ್ಲಿ ಅವಿವೇಕದ ಕೆಲಸ ಮಾಡುತ್ತಿದೆ. ಶಾಲೆಯ ಸಮಾಧಿ ಮೇಲೆ ಸ್ಮಾರಕ ಕಟ್ಟಿದರೆ ವಿವೇಕಾನಂದರ ಆದರ್ಶದ ಕೊಲೆ ಅದು ಎಂದು ಹೋರಾಟಗಾರರು ಆಕ್ರೋಶ ಹೊರಹಾಕಿದ್ದಾರೆ. ಮೈಸೂರಿನ ಹಲವೆಡೆ ಶಾಲೆ ಉಳಿಸಿ ಎಂಬ ಭಿತ್ತಿ ಚಿತ್ರಗಳನ್ನು ಪ್ರದರ್ಶಿಸುವ ಮೂಲಕ ಜನರನ್ನು ಜಾಗೃತಿಗೊಳಿಸುವ ಪ್ರಯತ್ನವೂ ನಡೆಯುತ್ತಿದೆ.

ಇದನ್ನೂ ಓದಿ: ಮೈಸೂರಿನಲ್ಲಿ ವಿವೇಕ ಸ್ಮಾರಕ ನಿರ್ಮಾಣ ಯಾರ ಉದ್ಧಾರಕ್ಕಾಗಿ? : ಡಾ.ಬಿ.ಪಿ ಮಹೇಶ ಚಂದ್ರ ಗುರು

ಆಮ್ ಆದ್ಮಿ ಪಕ್ಷ, ದಲಿತ ಸಂಘರ್ಷ ಸಮಿತಿ, ಕರ್ನಾಟಕ ಹಿತರಕ್ಷಣಾ ವೇದಿಕೆ, ಬಹುಜನ ವಿದ್ಯಾರ್ಥಿ ಸಂಘ ಹೀಗೆ ವಾರದಿಂದ ಸತತವಾಗಿ ಹೋರಾಟ, ಪ್ರತಿಭಟನೆಗಳು ನಡೆಯುತ್ತಿದ್ದೂ ಜನರ ಕೂಗು ಸರ್ಕಾರಕ್ಕೆ ಕೇಳುತ್ತಿಲ್ಲ. ಸಂಸದ ಪ್ರತಾಪ್ ಸಿಂಹ ಸೇರಿದಂತೆ ಬಿಜೆಪಿ ನಾಯಕರು ಶಾಲೆಯ ಸ್ಥಳದಲ್ಲಿಯೇ ಸ್ಮಾರಕ ನಿರ್ಮಾಣವಾಗಬೇಕೆಂದು ಪಟ್ಟು ಹಿಡಿದಿದ್ದಾರೆ. ವಿವೇಕಾನಂದರು NTM ಶಾಲೆ ಸೇರಿದಂತೆ ಪಕ್ಕದ ಸದ್ವಿದ್ಯಾ ಸಂಸ್ಥೆ ಮತ್ತು ಮೈಸೂರಿನ ಇನ್ನಿತರ ಭಾಗಗಳಿಗೂ ಭೇಟಿ ನೀಡಿದ್ದಾರೆ. ಸರ್ಕಾರ ಮಾತ್ರ ಕನ್ನಡ ಶಾಲೆಯ ಕಟ್ಟಡವನ್ನೇ ಆಯ್ದುಕೊಂಡಿರುವುದು ಜನರ ಸಿಟ್ಟಿಗೆ ಕಾರಣವಾಗಿದೆ.

ಹಿರಿಯ ರಂಗಕರ್ಮಿ ಸಿ ಬಸವಲಿಂಗಯ್ಯನವರು ಮಾತನಾಡಿ, “ಕನ್ನಡ ಶಾಲೆಯನ್ನು ಕೆಡವಿ ವಿವೇಕ ಸ್ಮಾರಕ ನಿರ್ಮಾಣ ಮಾಡುವುದು ಅವಿವೇಕದ ಕೆಲಸ. ವಿವೇಕಾನಂದರ ಆದರ್ಶಕ್ಕೆ ವಿರುದ್ಧವಾದದ್ದು. ಮೈಸೂರಿನ ಬೇರೆ ಎಲ್ಲಿಯಾದರೂ ಸ್ಮಾರಕ ನಿರ್ಮಾಣವಾಗಲಿ. ಶಾಲೆಯ ಸ್ಥಳದಲ್ಲಿ ಬೇಡ” ಎಂದು NTM ಮಹಾರಾಣಿ ಶಾಲೆಯ ಉಳಿವಿಗಾಗಿ ಧ್ವನಿ ಎತ್ತಿದ್ದಾರೆ.

ಪೂರ್ವದಲ್ಲಿ ಹೆಣ್ಣುಮಕ್ಕಳಿಗೆ ಶಿಕ್ಷಣದ ಅವಕಾಶವೇ ಇಲ್ಲದ ಸಂದರ್ಭದಲ್ಲಿ ಮೈಸೂರು ಸಂಸ್ಥಾನದ ರಾಣಿಯವರು ಐತಿಹಾಸಿಕ NTM ಮಹಾರಾಣಿ ಶಾಲೆಯನ್ನು ಕಟ್ಟಿ ಹೆಣ್ಣು ಮಕ್ಕಳ ಶಿಕ್ಷಣಕ್ಕೆ ಪ್ರೋತ್ಸಾಹ ನೀಡಿದ್ದಾರೆ. ಕರ್ನಾಟಕ ಮಾತ್ರವಲ್ಲ ಭಾರತದ ಇತಿಹಾಸದಲ್ಲಿ ಇದೊಂದು ಚಾರಿತ್ರಿಕ ಘಟನೆ. ಇದುವರೆಗೆ ಸಾವಿರಾರು ಹೆಣ್ಣುಮಕ್ಕಳು ಇಲ್ಲಿ ಕಲಿತು ಹಲವು ಸಾಧನೆ ಮಾಡಿದ್ದಾರೆ. ಮಹಿಳಾ ಶಿಕ್ಷಣ, ಸಬಲೀಕರಣದ ಮಾತನಾಡುವ ಸರ್ಕಾರ ಅದಕ್ಕೆ ಸ್ಪೂರ್ತಿಯಾದ ಐತಿಹಾಸಿಕ ಕಟ್ಟಡವನ್ನು ಕೆಡವಲು ಮುಂದಾಗಿರುವುದು ಅತ್ಯಂತ ದುರದೃಷ್ಟದ ಸಂಗತಿ. ಶಾಲೆ ಕೆಡವಿ ಸ್ಮಾರಕ ನಿರ್ಮಿಸುವ ಯೋಜನೆಯನ್ನು ಕೈಬಿಟ್ಟು ಚಾರಿತ್ರಿಕ ಕಟ್ಟಡದ ಅಭಿವೃದ್ಧಿಗೆ ರಾಜ್ಯ ಸರ್ಕಾರ ಮುಂದಾಗಬೇಕು. ಅಪಾಯದ ಅಂಚಿನಲ್ಲಿರುವ NTM ಶಾಲೆಯನ್ನು ಉಳಿಸುವಂತೆ ನಾಗರಿಕ ಸಮಾಜ ಕೂಡ ಸರ್ಕಾರದ ಮೇಲೆ ಒತ್ತಡ ಹೇರಲು ಮುಂದಾಗಬೇಕಿದೆ ಎಂದು ಅವರು ಮನವಿ ಮಾಡಿದ್ದಾರೆ.

ಎಸ್‌ಯುಸಿಐ ಕಮ್ಯೂನಿಸ್ಟ್‌ ಪಕ್ಷದ ಜಿಲ್ಲಾ ಸಮಿತಿಯ ಸದಸ್ಯರಾದ ಎಂ.ಉಮಾದೇವಿ, ಚಂದ್ರಶೇಖರ ಮೇಟಿ, ಹರೀಶ್ ಎಸ್.ಎಚ್‌, ಸಿಪಿಐ(ಎಂ)ನ ಜಿಲ್ಲಾ ಕಾರ್ಯದರ್ಶಿ ಕೆ.ಬಸವರಾಜ್, ಜಗನ್ನಾಥ್, ಜಗದೀಶ್ ಸೂರ್ಯ, ಸಿಪಿಐನ ಜಗನ್ನಾಥ್, ಸಿಪಿಐ ಎಂಎಲ್ ನ ಚೌಡಹಳ್ಳಿ ಜವರಯ್ಯ, ನಾ.ದಿವಾಕರ ಪಿಯುಸಿಎಲ್ ನ ಲಕ್ಷ್ಮೀನಾರಾಯಣ, ರತಿರಾವ್, ಸ್ವರಾಜ್ ಇಂಡಿಯಾದ ಉಗ್ರನರಸಿಂಹೇಗೌಡ ಐಎನ್‌ಟಿಯುಸಿಯ ಅನಿಲ್ ಕುಮಾರ್ ಸೇರಿದಂತೆ ವಿವಿಧ ಕಾರ್ಮಿಕ ಮುಖಂಡರು, ರೈತ ಹೋರಾಟಗಾರು, ಸಾಮಾಜಿಕ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ರಾಜೇಶ್ ಹೆಬ್ಬಾರ್


ಇದನ್ನೂ ಓದಿ: ಪಟ್ಟಭದ್ರರ ವಿರುದ್ಧ ದಿಟ್ಟ ಹೋರಾಟಕ್ಕೆ ಉಳಿದ ಮೈಸೂರಿನ ಸರ್ಕಾರಿ ಶಾಲೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...