Homeಕರ್ನಾಟಕಕನ್ನಡ ಶಾಲೆ ಕೆಡವಿ ಸ್ಮಾರಕ ನಿರ್ಮಾಣ: ತೀವ್ರಗೊಂಡ ಮೈಸೂರು NTM ಶಾಲೆ ಉಳಿಸಿ ಹೋರಾಟ

ಕನ್ನಡ ಶಾಲೆ ಕೆಡವಿ ಸ್ಮಾರಕ ನಿರ್ಮಾಣ: ತೀವ್ರಗೊಂಡ ಮೈಸೂರು NTM ಶಾಲೆ ಉಳಿಸಿ ಹೋರಾಟ

- Advertisement -
- Advertisement -

ಮೈಸೂರಿನ ಎನ್‌ಟಿಎಂ ಶಾಲೆ ದೇಶದ ಮೊದಲ ಹೆಣ್ಣುಮಕ್ಕಳ ಶಾಲೆ ಎಂಬ ಖ್ಯಾತಿಯನ್ನು ಪಡೆದಿದೆ. ಶತಮಾನದ ಇತಿಹಾಸವಿರುವ ಈ ಕನ್ನಡ ಶಾಲೆಯನ್ನು ಕೆಡವಿ ಸ್ವಾಮಿ ವಿವೇಕಾನಂದರ ಸ್ಮಾರಕ ನಿರ್ಮಾಣಕ್ಕೆ ಸರ್ಕಾರ ಮುಂದಾಗಿರುವುದು ಸಾರ್ವಜನಿಕರ ಮತ್ತು ಕನ್ನಡಪರ ಸಂಘಟನೆಗಳ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಕಳೆದ ವರ್ಷ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪನವರು ಸಾರ್ವಜನಿಕರ ಹೋರಾಟಕ್ಕೆ ಮಣಿದು ಶಾಲೆ ಕೆಡವಿ ಸ್ಮಾರಕ ನಿರ್ಮಿಸುವ ಯೋಜನೆಯನ್ನು ಕೈಬಿಡುವುದಾಗಿ ಹೇಳಿದ್ದರು. ಈಗ ಮತ್ತೆ ಸರ್ಕಾರ ಸದ್ದಿಲ್ಲದೇ ಶಾಲೆಯಿದ್ದ ಸ್ಥಳದಲ್ಲಿಯೇ ವಿವೇಕ ಸ್ಮಾರಕ ನಿರ್ಮಾಣಕ್ಕೆ ಮುಂದಾಗಿದೆ.

ಮಹಾರಾಣಿ ಎನ್‌ಟಿಎಮ್‌ ಹೆಣ್ಣುಮಕ್ಕಳ ಶಾಲೆ ಉಳಿವಿಗಾಗಿ ಮೈಸೂರಿನಲ್ಲಿ ಹೋರಾಟ ತೀವ್ರಗೊಂಡಿದ್ದು ಕನ್ನಡಪರ ಸಂಘಟನೆಗಳು, ರಂಗಭೂಮಿ ಕಲಾವಿದರು, ಅಧ್ಯಾಪಕರು, ಸಾಹಿತಿಗಳು ಇತಿಹಾಸಕರರು ಸೇರಿದಂತೆ ನೂರಾರು ಜನ ಸರ್ಕಾರದ ವಿರುದ್ಧ ಪ್ರತಿನಿತ್ಯ ಪ್ರತಿಭಟನೆಗಳನ್ನು ನಡೆಸುತ್ತಿದ್ದಾರೆ. ಇಂದು ಎಸ್‌ಯುಸಿಐ, ಸಿಪಿಐ, ಸಿಪಿಐಎಂ, ಸಿಪಿಐಎಂಎಲ್‌ ಸೇರಿದಂತೆ ಹಲವು ಕಾರ್ಮಿಕ ಸಂಘಟನೆಗಳು NTM ಶಾಲೆ ಉಳಿವಿಗಾಗಿ ಪ್ರತಿಭಟನೆ ನಡೆಸಿದರು.

ಇದನ್ನೂ ಓದಿ: ಸ್ವಾರ್ಥಪರ ಯೋಗಿ – ಭೋಗಿಗಳಿಂದ ಐತಿಹಾಸಿಕ ಎನ್‌ಟಿಎಂ ಶಾಲೆ ಉಳಿಸಬೇಕು

NTM ಮಹಾರಾಣಿ ಶಾಲೆ ಉಳಿವಿಗಾಗಿ ಮೈಸೂರಿನಲ್ಲಿ ವಿವಿಧ ಸಂಘಟನೆಗಳ ಪ್ರತಿಭಟನೆ

ಸ್ವಾಮಿ ವಿವೇಕಾನಂದರು ಹೆಣ್ಣುಮಕ್ಕಳ ಶಿಕ್ಷಣವನ್ನು ಪ್ರೋತ್ಸಾಹಿಸಿದ್ದರು. ಶಾಲೆ ಕೆಡವಿ ಸ್ಮಾರಕ ನಿರ್ಮಾಣ ಮಾಡಿ ಎಂದು ಅವರು ಎಲ್ಲಿಯೂ ಹೇಳಿಲ್ಲ. ಕರ್ನಾಟಕ ಸರ್ಕಾರ ವಿವೇಕಾನಂದರ ಹೆಸರಿನಲ್ಲಿ ಅವಿವೇಕದ ಕೆಲಸ ಮಾಡುತ್ತಿದೆ. ಶಾಲೆಯ ಸಮಾಧಿ ಮೇಲೆ ಸ್ಮಾರಕ ಕಟ್ಟಿದರೆ ವಿವೇಕಾನಂದರ ಆದರ್ಶದ ಕೊಲೆ ಅದು ಎಂದು ಹೋರಾಟಗಾರರು ಆಕ್ರೋಶ ಹೊರಹಾಕಿದ್ದಾರೆ. ಮೈಸೂರಿನ ಹಲವೆಡೆ ಶಾಲೆ ಉಳಿಸಿ ಎಂಬ ಭಿತ್ತಿ ಚಿತ್ರಗಳನ್ನು ಪ್ರದರ್ಶಿಸುವ ಮೂಲಕ ಜನರನ್ನು ಜಾಗೃತಿಗೊಳಿಸುವ ಪ್ರಯತ್ನವೂ ನಡೆಯುತ್ತಿದೆ.

ಇದನ್ನೂ ಓದಿ: ಮೈಸೂರಿನಲ್ಲಿ ವಿವೇಕ ಸ್ಮಾರಕ ನಿರ್ಮಾಣ ಯಾರ ಉದ್ಧಾರಕ್ಕಾಗಿ? : ಡಾ.ಬಿ.ಪಿ ಮಹೇಶ ಚಂದ್ರ ಗುರು

ಆಮ್ ಆದ್ಮಿ ಪಕ್ಷ, ದಲಿತ ಸಂಘರ್ಷ ಸಮಿತಿ, ಕರ್ನಾಟಕ ಹಿತರಕ್ಷಣಾ ವೇದಿಕೆ, ಬಹುಜನ ವಿದ್ಯಾರ್ಥಿ ಸಂಘ ಹೀಗೆ ವಾರದಿಂದ ಸತತವಾಗಿ ಹೋರಾಟ, ಪ್ರತಿಭಟನೆಗಳು ನಡೆಯುತ್ತಿದ್ದೂ ಜನರ ಕೂಗು ಸರ್ಕಾರಕ್ಕೆ ಕೇಳುತ್ತಿಲ್ಲ. ಸಂಸದ ಪ್ರತಾಪ್ ಸಿಂಹ ಸೇರಿದಂತೆ ಬಿಜೆಪಿ ನಾಯಕರು ಶಾಲೆಯ ಸ್ಥಳದಲ್ಲಿಯೇ ಸ್ಮಾರಕ ನಿರ್ಮಾಣವಾಗಬೇಕೆಂದು ಪಟ್ಟು ಹಿಡಿದಿದ್ದಾರೆ. ವಿವೇಕಾನಂದರು NTM ಶಾಲೆ ಸೇರಿದಂತೆ ಪಕ್ಕದ ಸದ್ವಿದ್ಯಾ ಸಂಸ್ಥೆ ಮತ್ತು ಮೈಸೂರಿನ ಇನ್ನಿತರ ಭಾಗಗಳಿಗೂ ಭೇಟಿ ನೀಡಿದ್ದಾರೆ. ಸರ್ಕಾರ ಮಾತ್ರ ಕನ್ನಡ ಶಾಲೆಯ ಕಟ್ಟಡವನ್ನೇ ಆಯ್ದುಕೊಂಡಿರುವುದು ಜನರ ಸಿಟ್ಟಿಗೆ ಕಾರಣವಾಗಿದೆ.

ಹಿರಿಯ ರಂಗಕರ್ಮಿ ಸಿ ಬಸವಲಿಂಗಯ್ಯನವರು ಮಾತನಾಡಿ, “ಕನ್ನಡ ಶಾಲೆಯನ್ನು ಕೆಡವಿ ವಿವೇಕ ಸ್ಮಾರಕ ನಿರ್ಮಾಣ ಮಾಡುವುದು ಅವಿವೇಕದ ಕೆಲಸ. ವಿವೇಕಾನಂದರ ಆದರ್ಶಕ್ಕೆ ವಿರುದ್ಧವಾದದ್ದು. ಮೈಸೂರಿನ ಬೇರೆ ಎಲ್ಲಿಯಾದರೂ ಸ್ಮಾರಕ ನಿರ್ಮಾಣವಾಗಲಿ. ಶಾಲೆಯ ಸ್ಥಳದಲ್ಲಿ ಬೇಡ” ಎಂದು NTM ಮಹಾರಾಣಿ ಶಾಲೆಯ ಉಳಿವಿಗಾಗಿ ಧ್ವನಿ ಎತ್ತಿದ್ದಾರೆ.

ಪೂರ್ವದಲ್ಲಿ ಹೆಣ್ಣುಮಕ್ಕಳಿಗೆ ಶಿಕ್ಷಣದ ಅವಕಾಶವೇ ಇಲ್ಲದ ಸಂದರ್ಭದಲ್ಲಿ ಮೈಸೂರು ಸಂಸ್ಥಾನದ ರಾಣಿಯವರು ಐತಿಹಾಸಿಕ NTM ಮಹಾರಾಣಿ ಶಾಲೆಯನ್ನು ಕಟ್ಟಿ ಹೆಣ್ಣು ಮಕ್ಕಳ ಶಿಕ್ಷಣಕ್ಕೆ ಪ್ರೋತ್ಸಾಹ ನೀಡಿದ್ದಾರೆ. ಕರ್ನಾಟಕ ಮಾತ್ರವಲ್ಲ ಭಾರತದ ಇತಿಹಾಸದಲ್ಲಿ ಇದೊಂದು ಚಾರಿತ್ರಿಕ ಘಟನೆ. ಇದುವರೆಗೆ ಸಾವಿರಾರು ಹೆಣ್ಣುಮಕ್ಕಳು ಇಲ್ಲಿ ಕಲಿತು ಹಲವು ಸಾಧನೆ ಮಾಡಿದ್ದಾರೆ. ಮಹಿಳಾ ಶಿಕ್ಷಣ, ಸಬಲೀಕರಣದ ಮಾತನಾಡುವ ಸರ್ಕಾರ ಅದಕ್ಕೆ ಸ್ಪೂರ್ತಿಯಾದ ಐತಿಹಾಸಿಕ ಕಟ್ಟಡವನ್ನು ಕೆಡವಲು ಮುಂದಾಗಿರುವುದು ಅತ್ಯಂತ ದುರದೃಷ್ಟದ ಸಂಗತಿ. ಶಾಲೆ ಕೆಡವಿ ಸ್ಮಾರಕ ನಿರ್ಮಿಸುವ ಯೋಜನೆಯನ್ನು ಕೈಬಿಟ್ಟು ಚಾರಿತ್ರಿಕ ಕಟ್ಟಡದ ಅಭಿವೃದ್ಧಿಗೆ ರಾಜ್ಯ ಸರ್ಕಾರ ಮುಂದಾಗಬೇಕು. ಅಪಾಯದ ಅಂಚಿನಲ್ಲಿರುವ NTM ಶಾಲೆಯನ್ನು ಉಳಿಸುವಂತೆ ನಾಗರಿಕ ಸಮಾಜ ಕೂಡ ಸರ್ಕಾರದ ಮೇಲೆ ಒತ್ತಡ ಹೇರಲು ಮುಂದಾಗಬೇಕಿದೆ ಎಂದು ಅವರು ಮನವಿ ಮಾಡಿದ್ದಾರೆ.

ಎಸ್‌ಯುಸಿಐ ಕಮ್ಯೂನಿಸ್ಟ್‌ ಪಕ್ಷದ ಜಿಲ್ಲಾ ಸಮಿತಿಯ ಸದಸ್ಯರಾದ ಎಂ.ಉಮಾದೇವಿ, ಚಂದ್ರಶೇಖರ ಮೇಟಿ, ಹರೀಶ್ ಎಸ್.ಎಚ್‌, ಸಿಪಿಐ(ಎಂ)ನ ಜಿಲ್ಲಾ ಕಾರ್ಯದರ್ಶಿ ಕೆ.ಬಸವರಾಜ್, ಜಗನ್ನಾಥ್, ಜಗದೀಶ್ ಸೂರ್ಯ, ಸಿಪಿಐನ ಜಗನ್ನಾಥ್, ಸಿಪಿಐ ಎಂಎಲ್ ನ ಚೌಡಹಳ್ಳಿ ಜವರಯ್ಯ, ನಾ.ದಿವಾಕರ ಪಿಯುಸಿಎಲ್ ನ ಲಕ್ಷ್ಮೀನಾರಾಯಣ, ರತಿರಾವ್, ಸ್ವರಾಜ್ ಇಂಡಿಯಾದ ಉಗ್ರನರಸಿಂಹೇಗೌಡ ಐಎನ್‌ಟಿಯುಸಿಯ ಅನಿಲ್ ಕುಮಾರ್ ಸೇರಿದಂತೆ ವಿವಿಧ ಕಾರ್ಮಿಕ ಮುಖಂಡರು, ರೈತ ಹೋರಾಟಗಾರು, ಸಾಮಾಜಿಕ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ರಾಜೇಶ್ ಹೆಬ್ಬಾರ್


ಇದನ್ನೂ ಓದಿ: ಪಟ್ಟಭದ್ರರ ವಿರುದ್ಧ ದಿಟ್ಟ ಹೋರಾಟಕ್ಕೆ ಉಳಿದ ಮೈಸೂರಿನ ಸರ್ಕಾರಿ ಶಾಲೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...