Homeಮುಖಪುಟವಿರೋಧಿಗಳ ದಮನಕ್ಕೆ ರಾಷ್ಟ್ರದ್ರೋಹ ಕಾಯಿದೆ ದುರ್ಬಳಕೆಯಾಗುತ್ತಿದೆ: ಮಾಜಿ ಐಪಿಎಸ್ ಎನ್.ಸಿ.ಅಸ್ತಾನ

ವಿರೋಧಿಗಳ ದಮನಕ್ಕೆ ರಾಷ್ಟ್ರದ್ರೋಹ ಕಾಯಿದೆ ದುರ್ಬಳಕೆಯಾಗುತ್ತಿದೆ: ಮಾಜಿ ಐಪಿಎಸ್ ಎನ್.ಸಿ.ಅಸ್ತಾನ

"ಆಜಾದಿ"ಯಂತಹ ಘೋಷಣೆ ಕೂಗುವವರನ್ನು ರಾಷ್ಟ್ರದ್ರೋಹದ ಕಾನೂನಿನ ಮೂಲಕ ಬೆದರಿಸುವುದು ಅಸಂಬದ್ಧ.

- Advertisement -
- Advertisement -

ಸಂಗ್ರಹಾನುವಾದ: ನಿಖಿಲ್ ಕೋಲ್ಪೆ

ಸ್ವಾತಂತ್ರ್ಯ ಬಂದು 70 ವರ್ಷಗಳ ನಂತರ, 2018ರಲ್ಲಿ ಪೊಲೀಸರು ದೇಶಾದ್ಯಂತ 70ರಷ್ಟು ರಾಷ್ಟ್ರದ್ರೋಹದ ಪ್ರಕರಣಗಳನ್ನು ದಾಖಲಿಸಿದ್ದಾರೆ. ನ್ಯಾಷನಲ್ ಕ್ರೈಂ ರೆಕಾರ್ಡ್ಸ್ ಬ್ಯೂರೋದ ದಾಖಲೆಗಳನ್ನು ಜನವರಿ 2019ರಲ್ಲಿ ವಿಶ್ಲೇಷಿಸಿದಾಗ 2014ರ ಬಳಿಕ ರಾಷ್ಟ್ರದ್ರೋಹದ ಆರೋಪದಲ್ಲಿ ಬಂಧನಗಳು ಏಕಾಏಕಿಯಾಗಿ ಏರಿರುವುದು ಕಂಡುಬಂದಿದೆ.

ನಿಜವಾಗಿಯೂ ನಮ್ಮಲ್ಲಿ ದೇಶಪ್ರೇಮವಿಲ್ಲದ, ದೇಶಕ್ಕೆ ಹಾನಿಮಾಡಲು ಬಯಸುವ ಅಥವಾ ಸಾರಾಸಗಟು ದೇಶದ್ರೋಹಿಗಳಾಗಿರುವ ದೊಡ್ಡ ಸಂಖ್ಯೆಯ ಸುಶಿಕ್ಷಿತ ಜನರು ಇದ್ದಾರೆಯೇ? ಅವರು ಹಿಂದೆಯೂ ಇದ್ದರು ಮತ್ತು ಇತ್ತೀಚೆಗೆ ಇಂತಹಾ ಪ್ರಕರಣಗಳಲ್ಲಿ ಭಾರೀ ಏರಿಕೆಯಾಗಿರುವುದು ಪೊಲೀಸರು ಹೆಚ್ಚು ಸಕ್ರಿಯವಾಗಿ ಕಾರ್ಯಾಚರಿಸುತ್ತಿರುವುದರಿಂದ ಎಂದು ಇಂತಹಾ ಏರಿಕೆಯನ್ನು ಮುಚ್ಚಿಡಲು ಯತ್ನಿಸುತ್ತಿರುವವರು ವಾದಿಸಬಹುದು.

ಪ್ರಶ್ನೆಯೆಂದರೆ, ಮೊತ್ತಮೊದಲಾಗಿ ನಮ್ಮಂತಹ ಮಹಾನ್ ರಾಷ್ಟ್ರದಲ್ಲಿ ದೊಡ್ಡಸಂಖ್ಯೆಯ ದ್ರೋಹಿಗಳು ಏಕಿರಬೇಕು? ದೇಶ ಕಟ್ಟುವ ಪ್ರಯೋಗದಲ್ಲಿ ನಾವೆಲ್ಲೋ ವಿಫಲರಾಗಿದ್ದೇವೆಯೆ? ಒಂದು ವೇಳೆ ಹೌದೆಂದಾದಲ್ಲಿ, ಕೇವಲ ಜನರ ಮೇಲೆ ಕೇಸು ಹಾಕುವುದನ್ನು ಬಿಟ್ಟು ಮೂಲ ಕಾರಣಗಳನ್ನು ಪರಿಹರಿಸಬೇಕು. ಆದರೆ, ಕಳೆದ ಮೂರು ವರ್ಷಗಳಲ್ಲಿ ಕೇವಲ ಎರಡು ಪ್ರಕರಣಗಳಲ್ಲಿ ಮಾತ್ರ ಶಿಕ್ಷೆಯಾಗಿದೆ ಎಂಬ ವಾಸ್ತವವು, ಪೋಲೀಸರು ನಿರಂಕುಶವಾಗಿ ತಮ್ಮ ಅಧಿಕಾರಗಳನ್ನು ದುರುಪಯೋಗಪಡಿಸುತ್ತಿದ್ದಾರೆ ಎಂದು ನಂಬಲು ಕಾರಣಗಳನ್ನು ಒದಗಿಸುತ್ತದೆ.

ನಾವು ನಮ್ಮೊಂದಿಗೆ ಹೋಲಿಸಿಕೊಳ್ಳುವ ಪ್ರಪಂಚದ ಇನ್ನೊಂದು ಮಹಾನ್ ಪ್ರಜಾಪ್ರಭುತ್ವವಾಗಿರುವ ಯುಎಸ್‌ಎಯಲ್ಲಿ ರಾಷ್ಟ್ರದ್ರೋಹವು ಸಾಮಾನ್ಯವಾಗಿ ಆರೋಪಿಸಲಾಗುವ ಅಪರಾಧವಲ್ಲ. ಅತ್ಯಂತ ಕುಖ್ಯಾತ ದೇಶದ್ರೋಹದ ಸಂಚಿನ ಪ್ರಕರಣಗಳು (1936-2010ರ ನಡುವೆ ಕೇವಲ ಐದರಲ್ಲಿ ಎರಡು ಪ್ರಕರಣಗಳು) ಯುಎಸ್‌ಎಯನ್ನು ಬುಡಮೇಲುಗೊಳಿಸಿ, ಸ್ವಾತಂತ್ರ್ಯವನ್ನು ಸ್ಥಾಪಿಸಬಯಸುವ ಪೋರ್ಟೊರಿಕನ್ ರಾಷ್ಟ್ರೀಯವಾದಿಗಳನ್ನು ಶಿಕ್ಷಿಸುವುದರಲ್ಲಿ ಕೊನೆಗೊಂಡಿದ್ದವು. ತನ್ನ ಪ್ರಜೆಗಳು ದೇಶವನ್ನು ಪ್ರೀತಿಸುವುದಿಲ್ಲ ಎಂದು ಅಮೇರಿಕನ್ ಸರಕಾರಗಳು ಭಾವಿಸುತ್ತಿಲ್ಲ ಎಂಬುದು ಸ್ಪಷ್ಟ.

ಆದರೆ, ಭಾರತದಲ್ಲಿ ಫೇಸ್‌ಬುಕ್‌ನಲ್ಲಿ ಯೋಗಗುರುವೊಬ್ಬನನ್ನು ಟೀಕಿಸಿದ ಪೋಸ್ಟ್ ಒಂದಕ್ಕೆ ಲೈಕ್ ಒತ್ತಿದ್ದಕ್ಕಾಗಿ, ಪ್ರತಿಸ್ಪರ್ಧಿ ಕ್ರಿಕೆಟ್ ತಂಡವನ್ನು ಬೆಂಬಲಿಸಿದ್ದಕ್ಕಾಗಿ, ವ್ಯಂಗ್ಯಚಿತ್ರಗಳನ್ನು ಬರೆದುದಕ್ಕಾಗಿ, ವಿಶ್ವವಿದ್ಯಾಲಯದ ಪರೀಕ್ಷೆಯಲ್ಲಿ ಪ್ರಚೋದನಕಾರಿ ಪ್ರಶ್ನೆ ಕೇಳಿದ್ದಕ್ಕಾಗಿ ಅಥವಾ ಸಿನಿಮಾ ಮಂದಿರದಲ್ಲಿ ರಾಷ್ಟ್ರಗೀತೆ ಬರುವಾಗ ಎದ್ದುನಿಲ್ಲದ್ದಕ್ಕಾಗಿ ರಾಷ್ಟ್ರದ್ರೋಹದ ಪ್ರಕರಣಗಳನ್ನು ದಾಖಲಿಸಲಾಗಿದೆ. “ಪಾಕಿಸ್ತಾನವು ನರಕವಲ್ಲ. ಅಲ್ಲಿನ ಜನರು ನಮ್ಮಂತೆಯೇ” ಎಂದು ಹೇಳಿದ್ದಕ್ಕಾಗಿ ವಕೀಲರೊಬ್ಬರು 2016ರಲ್ಲಿ ನಟಿ ದಿವ್ಯಸ್ಪಂದನಾ@ರಮ್ಯಾ ವಿರುದ್ಧ ಖಾಸಗಿಯಾಗಿ ರಾಷ್ಟ್ರದ್ರೋಹದ ಪ್ರಕರಣ ದಾಖಲಿಸಿದ್ದರು. ಆದರೆ ಪಾಕಿಸ್ತಾನವು ಅಧಿಕೃತವಾಗಿ ಶತ್ರು ರಾಷ್ಟ್ರವಲ್ಲದಿರುವುದರಿಂದ ಅಲ್ಲಿನ ಪ್ರಜೆಗಳನ್ನು ಹೊಗಳುವುದು ದೇಶದ್ರೋಹವಾಗುವುದಿಲ್ಲ ಎಂದು ಮಡಿಕೇರಿಯ ಜೆಎಂಎಫ್‌ಸಿ ನ್ಯಾಯಾಲಯವು ತೀರ್ಪು ನೀಡಿತ್ತು.

“ಪ್ರಧಾನಿ ಮತ್ತು ದೇಶದ ಪ್ರತಿಷ್ಟೆಗೆ ಧಕ್ಕೆ ತರಲು ಯತ್ನಿಸಿದ” ಆರೋಪದಲ್ಲಿ ಪತ್ರವೊಂದನ್ನು ಬಹಿರಂಗಪಡಿಸಿದ್ದಕ್ಕಾಗಿ ವಕೀಲರೊಬ್ಬರು ಮುಜಾಫರ್‌ಪುರ್‌ನ ನ್ಯಾಯಾಲಯವೊಂದರ ಮೂಲಕ 49 ಜನರ ಮೇಲೆ ರಾಷ್ಟ್ರದ್ರೋಹದ ಪ್ರಕರಣ ದಾಖಲಾಗುವಂತೆ ಮಾಡಿದ್ದರು. ಕೊನೆಯಲ್ಲಿ ಭಾರೀ ಸಾರ್ವಜನಿಕ ಪ್ರತಿಭಟನೆಯ ಬಳಿಕ ಪೊಲೀಸರು ಪ್ರಕರಣ ಮುಚ್ಚಿದ್ದರು.

ಪ್ರತ್ಯೇಕತೆ ಬಗ್ಗೆ ಮಾತನಾಡುವುದು, ಭಾರತವನ್ನು ಮೆಚ್ಚದಿರುವುದು ಅಥವಾ ಭಾರತ ವಿರೋಧಿಯಾಗಿರುವುದು ಅಪರಾಧವೆ?

ಪತ್ರಕರ್ತ ಕರಣ್ ಥಾಪರ್ ಅವರು ಸಿ.ಎನ್. ಅಣ್ಣಾದುರೈ ಪ್ರಕರಣವನ್ನು ನೆನಪಿಸಿದ್ದಾರೆ. ಮೇ 1,1962ರಲ್ಲಿ ಅವರು ರಾಜ್ಯಸಭೆಯಲ್ಲಿ ದ್ರಾವಿಡರ ಸ್ವಯಂನಿರ್ಧಾರ ಮತ್ತು ಪ್ರತ್ಯೇಕ ದಕ್ಷಿಣ ಭಾರತಕ್ಕೆ ಬೇಡಿಕೆ ಸಲ್ಲಿಸಿದ್ದರು. ಅವರ ವಿರುದ್ಧ ಯಾವುದೇ ಪ್ರಕರಣ ದಾಖಲಿಸಲಾಗಿಲ್ಲ. ಜನವರಿ 20, 1962ರ ಕೇದಾರನಾಥ ಸಿಂಗ್ ಪ್ರಕರಣದಲ್ಲಿ ನೀಡಲಾದ ಮೈಲಿಗಲ್ಲು ತೀರ್ಪನ್ನು ಅವರು ಸರಿಯಾಗಿಯೇ ಅರ್ಥ ಮಾಡಿಕೊಂಡಿರಬೇಕು.  ಸಾರ್ವಜನಿಕ ಅಶಾಂತಿಯನ್ನು ಸೃಷ್ಟಿಸಿ, ಹಿಂಸಾತ್ಮಕ ಮಾರ್ಗದಿಂದ ಸರಕಾರವನ್ನು ಬುಡಮೇಲು ಮಾಡುವ ಉದ್ದೇಶ, ಅರ್ಥವನ್ನು ಹೊಂದಿರುವ ಮಾತುಗಳು ಮತ್ತು ಎಷ್ಟೇ ಕಠಿಣವಾಗಿದ್ದರೂ ಸರಕಾರದ ಕೃತ್ಯಗಳನ್ನು ಟೀಕಿಸುವ ಮಾತುಗಳ ನಡುವಿನ ವ್ಯತ್ಯಾಸವನ್ನು ಈ ತೀರ್ಪು ಸ್ಪಷ್ಟವಾಗಿ ಗುರುತಿಸಿದೆ.

ಮತ್ತೊಮ್ಮೆ 2016ರಲ್ಲಿ ‘ಕಾಮನ್ ಕಾಸ್’ ಮತ್ತು ಇನ್ನೊಬ್ಬರ ವಿರುದ್ಧ ಭಾರತ ಸರಕಾರ ಪ್ರಕರಣದಲ್ಲಿ ಸುಪ್ರೀಂಕೋರ್ಟ್ ಈ ತತ್ವಗಳನ್ನು ದೃಢಪಡಿಸಿದೆ.

ಇದರ ಅರ್ಥವೆಂದರೆ, ಕೆಲಜನರು ತಮಗೆ ಭಾರತ ಇಷ್ಟವಿಲ್ಲ ಮತ್ತು ತಾವು ಶಾಂತಿಯುತವಾಗಿ ಪ್ರತ್ಯೇಕವಾಗಲು ಬಯಸುತ್ತೇವೆ ಎಂದು ಹೇಳಿದರೆ ಅದು ರಾಷ್ಟ್ರದ್ರೋಹವಾಗುವುದಿಲ್ಲ. ಆದರೆ, ಈ ಪ್ರಕ್ರಿಯೆಯಲ್ಲಿ ತಾವು ಬಲಪ್ರಯೋಗದಿಂದ ಸರಕಾರವನ್ನು ಬುಡಮೇಲುಗೊಳಿಸಲು ಬಯಸುತ್ತೇವೆ ಎಂದು ಹೇಳಿದರೆ, ಅದು ರಾಷ್ಟ್ರದ್ರೋಹವಾಗುತ್ತದೆ.

ಪ್ರಖ್ಯಾತ ವಕೀಲ ಫಾಲಿ ಎಸ್. ನಾರಿಮನ್ ಏನು ಹೇಳುತ್ತಾರೆಂದರೆ, ಭಾರತ ವಿರೋಧಿಯಾಗಿರುವುದು ಹೆಚ್ಚಿನ ಪ್ರಜೆಗಳಿಗೆ ರುಚಿಸದಿರಬಹುದು; ಆದರೆ ಅದು ಕ್ರಿಮಿನಲ್ ಅಪರಾಧವಲ್ಲ ಮತ್ತು ಖಂಡಿತವಾಗಿಯೂ ರಾಷ್ಟ್ರದ್ರೋಹವಲ್ಲ. ಮುಕ್ತ ವಾಕ್ ಸ್ವಾತಂತ್ರ್ಯವನ್ನು ಪ್ರತಿಪಾದಿಸುವ ಸಂವಿಧಾನದ ವಿಧಿಯ ವಿನಾಯಿತಿ ನಿಯಮಗಳಲ್ಲಿ ಸಂವಿಧಾನ ನಿರ್ಮಾತೃಗಳು ದೇಶದ್ರೋಹವನ್ನು ಉದ್ದೇಶಪೂರ್ವಕವಾಗಿ ಹೊರಗಿಟ್ಟಿದ್ದಾರೆ ಎಂದು ನಾರಿಮನ್ ಸ್ಪಷ್ಟಪಡಿಸಿದ್ದಾರೆ. “ದೇಶದ್ರೋಹವನ್ನು ಅಪರಾಧವನ್ನಾಗಿ ಮಾಡಲಾಗಿರುವುದು ಸರಕಾರಗಳ ಗಾಯಗೊಂಡ ಪ್ರತಿಷ್ಟೆಯನ್ನು ಶಮನ ಮಾಡುವುದಕ್ಕಾಗಿ ಅಲ್ಲ” ಎಂದು ಸಂವಿಧಾನ ನಿರ್ಮಾತೃಗಳು ಹೇಳಿದ್ದರು. “ಪಾಕಿಸ್ತಾನ್ ಜಿಂದಾಬಾದ್” ಮುಂತಾದ ಘೋಷಣೆಗಳನ್ನು ಕೂಗುವುದು ಕೂಡಾ ಕಾನೂನು ಪ್ರಕಾರ ರಾಷ್ಟ್ರದ್ರೋಹವಾಗುವುದಿಲ್ಲ ಎಂದು ಪ್ರಖ್ಯಾತ ವಕೀಲ ಸೋಲಿ ಸೊರಾಬ್ಜಿ ಹೇಳುತ್ತಾರೆ. ಅವರ ಅಭಿಪ್ರಾಯಗಳು ಕಾನೂನು ಆಗಿಲ್ಲದೇ ಇರಬಹುದು. ಆದರೆ ಅವರುಗಳು ಚೆನ್ನಾಗಿ ಕಾನೂನು ತಿಳಿದವರಾಗಿದ್ದಾರೆ.

ಅದೇ ರೀತಿಯಲ್ಲಿ ಪಾಕಿಸ್ತಾನದ ವಿರುದ್ಧ ಯುದ್ಧ ಮಾಡುವ ಸರಕಾರದ ನಿರ್ಧಾರವನ್ನಾಗಲೀ, ಈಗಾಗಲೇ ನಡೆಯುತ್ತಿರುವ ಯುದ್ಧವನ್ನಾಗಲೀ ಕೆಲಜನರು ಶಾಂತಿಯುತವಾಗಿ ವಿರೋಧಿಸಿದರೆ, ಅವರನ್ನು ದೇಶಪ್ರೇಮಿಗಳಲ್ಲ ಎಂದು ಕರೆಯಬಹುದಾದರೂ, ಅದು ರಾಷ್ಟ್ರದ್ರೋಹವಾಗುವುದಿಲ್ಲ. ಆದಲ್ಲದೆ, ಸರಕಾರ ಯುದ್ಧ ಸಂದರ್ಭಕ್ಕೆಂದೇ ಕಾನೂನು ತಂದಿದ್ದು, ಯಾರಾದರೂ ಉದ್ದೇಶಪೂರ್ವಕವಾಗಿ ಅದನ್ನು ಉಲ್ಲಂಘಿಸಿದರೆ, ಅದು ಕಾನೂನು ಉಲ್ಲಂಘನೆಯಾಗುತ್ತದೆಯಾದರೂ, ಆಗಲೂ ಅದು ರಾಷ್ಟ್ರದ್ರೋಹವಾಗುವುದಿಲ್ಲ.

ಆದುದರಿಂದ “ಆಜಾದಿ”ಯಂತಹ ಘೋಷಣೆ ಕೂಗುವವರನ್ನು ರಾಷ್ಟ್ರದ್ರೋಹದ ಕಾನೂನಿನ ಮೂಲಕ ಬೆದರಿಸುವುದು ಅಸಂಬದ್ಧ.

(ಲೇಖಕರಾದ ಎನ್.ಸಿ.ಅಸ್ತಾನ ಅವರು ನಿವೃತ್ತ ಐಪಿಎಸ್ ಅಧಿಕಾರಿಯಾಗಿದ್ದು, ಕೇರಳ ಡಿಜಿಪಿ ಮತ್ತು ದೀರ್ಘಕಾಲ ಸಿಆರ್‌ಪಿಎಫ್ ಮತ್ತು ಬಿಎಸ್‌ಎಫ್‌ನ ಹೆಚ್ಚುವರಿ ಡಿಜಿಪಿಯಾಗಿ ಸೇವೆ ಸಲ್ಲಿಸಿದ್ದರು.)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...