Homeಮುಖಪುಟವಿರೋಧಿಗಳ ದಮನಕ್ಕೆ ರಾಷ್ಟ್ರದ್ರೋಹ ಕಾಯಿದೆ ದುರ್ಬಳಕೆಯಾಗುತ್ತಿದೆ: ಮಾಜಿ ಐಪಿಎಸ್ ಎನ್.ಸಿ.ಅಸ್ತಾನ

ವಿರೋಧಿಗಳ ದಮನಕ್ಕೆ ರಾಷ್ಟ್ರದ್ರೋಹ ಕಾಯಿದೆ ದುರ್ಬಳಕೆಯಾಗುತ್ತಿದೆ: ಮಾಜಿ ಐಪಿಎಸ್ ಎನ್.ಸಿ.ಅಸ್ತಾನ

"ಆಜಾದಿ"ಯಂತಹ ಘೋಷಣೆ ಕೂಗುವವರನ್ನು ರಾಷ್ಟ್ರದ್ರೋಹದ ಕಾನೂನಿನ ಮೂಲಕ ಬೆದರಿಸುವುದು ಅಸಂಬದ್ಧ.

- Advertisement -
- Advertisement -

ಸಂಗ್ರಹಾನುವಾದ: ನಿಖಿಲ್ ಕೋಲ್ಪೆ

ಸ್ವಾತಂತ್ರ್ಯ ಬಂದು 70 ವರ್ಷಗಳ ನಂತರ, 2018ರಲ್ಲಿ ಪೊಲೀಸರು ದೇಶಾದ್ಯಂತ 70ರಷ್ಟು ರಾಷ್ಟ್ರದ್ರೋಹದ ಪ್ರಕರಣಗಳನ್ನು ದಾಖಲಿಸಿದ್ದಾರೆ. ನ್ಯಾಷನಲ್ ಕ್ರೈಂ ರೆಕಾರ್ಡ್ಸ್ ಬ್ಯೂರೋದ ದಾಖಲೆಗಳನ್ನು ಜನವರಿ 2019ರಲ್ಲಿ ವಿಶ್ಲೇಷಿಸಿದಾಗ 2014ರ ಬಳಿಕ ರಾಷ್ಟ್ರದ್ರೋಹದ ಆರೋಪದಲ್ಲಿ ಬಂಧನಗಳು ಏಕಾಏಕಿಯಾಗಿ ಏರಿರುವುದು ಕಂಡುಬಂದಿದೆ.

ನಿಜವಾಗಿಯೂ ನಮ್ಮಲ್ಲಿ ದೇಶಪ್ರೇಮವಿಲ್ಲದ, ದೇಶಕ್ಕೆ ಹಾನಿಮಾಡಲು ಬಯಸುವ ಅಥವಾ ಸಾರಾಸಗಟು ದೇಶದ್ರೋಹಿಗಳಾಗಿರುವ ದೊಡ್ಡ ಸಂಖ್ಯೆಯ ಸುಶಿಕ್ಷಿತ ಜನರು ಇದ್ದಾರೆಯೇ? ಅವರು ಹಿಂದೆಯೂ ಇದ್ದರು ಮತ್ತು ಇತ್ತೀಚೆಗೆ ಇಂತಹಾ ಪ್ರಕರಣಗಳಲ್ಲಿ ಭಾರೀ ಏರಿಕೆಯಾಗಿರುವುದು ಪೊಲೀಸರು ಹೆಚ್ಚು ಸಕ್ರಿಯವಾಗಿ ಕಾರ್ಯಾಚರಿಸುತ್ತಿರುವುದರಿಂದ ಎಂದು ಇಂತಹಾ ಏರಿಕೆಯನ್ನು ಮುಚ್ಚಿಡಲು ಯತ್ನಿಸುತ್ತಿರುವವರು ವಾದಿಸಬಹುದು.

ಪ್ರಶ್ನೆಯೆಂದರೆ, ಮೊತ್ತಮೊದಲಾಗಿ ನಮ್ಮಂತಹ ಮಹಾನ್ ರಾಷ್ಟ್ರದಲ್ಲಿ ದೊಡ್ಡಸಂಖ್ಯೆಯ ದ್ರೋಹಿಗಳು ಏಕಿರಬೇಕು? ದೇಶ ಕಟ್ಟುವ ಪ್ರಯೋಗದಲ್ಲಿ ನಾವೆಲ್ಲೋ ವಿಫಲರಾಗಿದ್ದೇವೆಯೆ? ಒಂದು ವೇಳೆ ಹೌದೆಂದಾದಲ್ಲಿ, ಕೇವಲ ಜನರ ಮೇಲೆ ಕೇಸು ಹಾಕುವುದನ್ನು ಬಿಟ್ಟು ಮೂಲ ಕಾರಣಗಳನ್ನು ಪರಿಹರಿಸಬೇಕು. ಆದರೆ, ಕಳೆದ ಮೂರು ವರ್ಷಗಳಲ್ಲಿ ಕೇವಲ ಎರಡು ಪ್ರಕರಣಗಳಲ್ಲಿ ಮಾತ್ರ ಶಿಕ್ಷೆಯಾಗಿದೆ ಎಂಬ ವಾಸ್ತವವು, ಪೋಲೀಸರು ನಿರಂಕುಶವಾಗಿ ತಮ್ಮ ಅಧಿಕಾರಗಳನ್ನು ದುರುಪಯೋಗಪಡಿಸುತ್ತಿದ್ದಾರೆ ಎಂದು ನಂಬಲು ಕಾರಣಗಳನ್ನು ಒದಗಿಸುತ್ತದೆ.

ನಾವು ನಮ್ಮೊಂದಿಗೆ ಹೋಲಿಸಿಕೊಳ್ಳುವ ಪ್ರಪಂಚದ ಇನ್ನೊಂದು ಮಹಾನ್ ಪ್ರಜಾಪ್ರಭುತ್ವವಾಗಿರುವ ಯುಎಸ್‌ಎಯಲ್ಲಿ ರಾಷ್ಟ್ರದ್ರೋಹವು ಸಾಮಾನ್ಯವಾಗಿ ಆರೋಪಿಸಲಾಗುವ ಅಪರಾಧವಲ್ಲ. ಅತ್ಯಂತ ಕುಖ್ಯಾತ ದೇಶದ್ರೋಹದ ಸಂಚಿನ ಪ್ರಕರಣಗಳು (1936-2010ರ ನಡುವೆ ಕೇವಲ ಐದರಲ್ಲಿ ಎರಡು ಪ್ರಕರಣಗಳು) ಯುಎಸ್‌ಎಯನ್ನು ಬುಡಮೇಲುಗೊಳಿಸಿ, ಸ್ವಾತಂತ್ರ್ಯವನ್ನು ಸ್ಥಾಪಿಸಬಯಸುವ ಪೋರ್ಟೊರಿಕನ್ ರಾಷ್ಟ್ರೀಯವಾದಿಗಳನ್ನು ಶಿಕ್ಷಿಸುವುದರಲ್ಲಿ ಕೊನೆಗೊಂಡಿದ್ದವು. ತನ್ನ ಪ್ರಜೆಗಳು ದೇಶವನ್ನು ಪ್ರೀತಿಸುವುದಿಲ್ಲ ಎಂದು ಅಮೇರಿಕನ್ ಸರಕಾರಗಳು ಭಾವಿಸುತ್ತಿಲ್ಲ ಎಂಬುದು ಸ್ಪಷ್ಟ.

ಆದರೆ, ಭಾರತದಲ್ಲಿ ಫೇಸ್‌ಬುಕ್‌ನಲ್ಲಿ ಯೋಗಗುರುವೊಬ್ಬನನ್ನು ಟೀಕಿಸಿದ ಪೋಸ್ಟ್ ಒಂದಕ್ಕೆ ಲೈಕ್ ಒತ್ತಿದ್ದಕ್ಕಾಗಿ, ಪ್ರತಿಸ್ಪರ್ಧಿ ಕ್ರಿಕೆಟ್ ತಂಡವನ್ನು ಬೆಂಬಲಿಸಿದ್ದಕ್ಕಾಗಿ, ವ್ಯಂಗ್ಯಚಿತ್ರಗಳನ್ನು ಬರೆದುದಕ್ಕಾಗಿ, ವಿಶ್ವವಿದ್ಯಾಲಯದ ಪರೀಕ್ಷೆಯಲ್ಲಿ ಪ್ರಚೋದನಕಾರಿ ಪ್ರಶ್ನೆ ಕೇಳಿದ್ದಕ್ಕಾಗಿ ಅಥವಾ ಸಿನಿಮಾ ಮಂದಿರದಲ್ಲಿ ರಾಷ್ಟ್ರಗೀತೆ ಬರುವಾಗ ಎದ್ದುನಿಲ್ಲದ್ದಕ್ಕಾಗಿ ರಾಷ್ಟ್ರದ್ರೋಹದ ಪ್ರಕರಣಗಳನ್ನು ದಾಖಲಿಸಲಾಗಿದೆ. “ಪಾಕಿಸ್ತಾನವು ನರಕವಲ್ಲ. ಅಲ್ಲಿನ ಜನರು ನಮ್ಮಂತೆಯೇ” ಎಂದು ಹೇಳಿದ್ದಕ್ಕಾಗಿ ವಕೀಲರೊಬ್ಬರು 2016ರಲ್ಲಿ ನಟಿ ದಿವ್ಯಸ್ಪಂದನಾ@ರಮ್ಯಾ ವಿರುದ್ಧ ಖಾಸಗಿಯಾಗಿ ರಾಷ್ಟ್ರದ್ರೋಹದ ಪ್ರಕರಣ ದಾಖಲಿಸಿದ್ದರು. ಆದರೆ ಪಾಕಿಸ್ತಾನವು ಅಧಿಕೃತವಾಗಿ ಶತ್ರು ರಾಷ್ಟ್ರವಲ್ಲದಿರುವುದರಿಂದ ಅಲ್ಲಿನ ಪ್ರಜೆಗಳನ್ನು ಹೊಗಳುವುದು ದೇಶದ್ರೋಹವಾಗುವುದಿಲ್ಲ ಎಂದು ಮಡಿಕೇರಿಯ ಜೆಎಂಎಫ್‌ಸಿ ನ್ಯಾಯಾಲಯವು ತೀರ್ಪು ನೀಡಿತ್ತು.

“ಪ್ರಧಾನಿ ಮತ್ತು ದೇಶದ ಪ್ರತಿಷ್ಟೆಗೆ ಧಕ್ಕೆ ತರಲು ಯತ್ನಿಸಿದ” ಆರೋಪದಲ್ಲಿ ಪತ್ರವೊಂದನ್ನು ಬಹಿರಂಗಪಡಿಸಿದ್ದಕ್ಕಾಗಿ ವಕೀಲರೊಬ್ಬರು ಮುಜಾಫರ್‌ಪುರ್‌ನ ನ್ಯಾಯಾಲಯವೊಂದರ ಮೂಲಕ 49 ಜನರ ಮೇಲೆ ರಾಷ್ಟ್ರದ್ರೋಹದ ಪ್ರಕರಣ ದಾಖಲಾಗುವಂತೆ ಮಾಡಿದ್ದರು. ಕೊನೆಯಲ್ಲಿ ಭಾರೀ ಸಾರ್ವಜನಿಕ ಪ್ರತಿಭಟನೆಯ ಬಳಿಕ ಪೊಲೀಸರು ಪ್ರಕರಣ ಮುಚ್ಚಿದ್ದರು.

ಪ್ರತ್ಯೇಕತೆ ಬಗ್ಗೆ ಮಾತನಾಡುವುದು, ಭಾರತವನ್ನು ಮೆಚ್ಚದಿರುವುದು ಅಥವಾ ಭಾರತ ವಿರೋಧಿಯಾಗಿರುವುದು ಅಪರಾಧವೆ?

ಪತ್ರಕರ್ತ ಕರಣ್ ಥಾಪರ್ ಅವರು ಸಿ.ಎನ್. ಅಣ್ಣಾದುರೈ ಪ್ರಕರಣವನ್ನು ನೆನಪಿಸಿದ್ದಾರೆ. ಮೇ 1,1962ರಲ್ಲಿ ಅವರು ರಾಜ್ಯಸಭೆಯಲ್ಲಿ ದ್ರಾವಿಡರ ಸ್ವಯಂನಿರ್ಧಾರ ಮತ್ತು ಪ್ರತ್ಯೇಕ ದಕ್ಷಿಣ ಭಾರತಕ್ಕೆ ಬೇಡಿಕೆ ಸಲ್ಲಿಸಿದ್ದರು. ಅವರ ವಿರುದ್ಧ ಯಾವುದೇ ಪ್ರಕರಣ ದಾಖಲಿಸಲಾಗಿಲ್ಲ. ಜನವರಿ 20, 1962ರ ಕೇದಾರನಾಥ ಸಿಂಗ್ ಪ್ರಕರಣದಲ್ಲಿ ನೀಡಲಾದ ಮೈಲಿಗಲ್ಲು ತೀರ್ಪನ್ನು ಅವರು ಸರಿಯಾಗಿಯೇ ಅರ್ಥ ಮಾಡಿಕೊಂಡಿರಬೇಕು.  ಸಾರ್ವಜನಿಕ ಅಶಾಂತಿಯನ್ನು ಸೃಷ್ಟಿಸಿ, ಹಿಂಸಾತ್ಮಕ ಮಾರ್ಗದಿಂದ ಸರಕಾರವನ್ನು ಬುಡಮೇಲು ಮಾಡುವ ಉದ್ದೇಶ, ಅರ್ಥವನ್ನು ಹೊಂದಿರುವ ಮಾತುಗಳು ಮತ್ತು ಎಷ್ಟೇ ಕಠಿಣವಾಗಿದ್ದರೂ ಸರಕಾರದ ಕೃತ್ಯಗಳನ್ನು ಟೀಕಿಸುವ ಮಾತುಗಳ ನಡುವಿನ ವ್ಯತ್ಯಾಸವನ್ನು ಈ ತೀರ್ಪು ಸ್ಪಷ್ಟವಾಗಿ ಗುರುತಿಸಿದೆ.

ಮತ್ತೊಮ್ಮೆ 2016ರಲ್ಲಿ ‘ಕಾಮನ್ ಕಾಸ್’ ಮತ್ತು ಇನ್ನೊಬ್ಬರ ವಿರುದ್ಧ ಭಾರತ ಸರಕಾರ ಪ್ರಕರಣದಲ್ಲಿ ಸುಪ್ರೀಂಕೋರ್ಟ್ ಈ ತತ್ವಗಳನ್ನು ದೃಢಪಡಿಸಿದೆ.

ಇದರ ಅರ್ಥವೆಂದರೆ, ಕೆಲಜನರು ತಮಗೆ ಭಾರತ ಇಷ್ಟವಿಲ್ಲ ಮತ್ತು ತಾವು ಶಾಂತಿಯುತವಾಗಿ ಪ್ರತ್ಯೇಕವಾಗಲು ಬಯಸುತ್ತೇವೆ ಎಂದು ಹೇಳಿದರೆ ಅದು ರಾಷ್ಟ್ರದ್ರೋಹವಾಗುವುದಿಲ್ಲ. ಆದರೆ, ಈ ಪ್ರಕ್ರಿಯೆಯಲ್ಲಿ ತಾವು ಬಲಪ್ರಯೋಗದಿಂದ ಸರಕಾರವನ್ನು ಬುಡಮೇಲುಗೊಳಿಸಲು ಬಯಸುತ್ತೇವೆ ಎಂದು ಹೇಳಿದರೆ, ಅದು ರಾಷ್ಟ್ರದ್ರೋಹವಾಗುತ್ತದೆ.

ಪ್ರಖ್ಯಾತ ವಕೀಲ ಫಾಲಿ ಎಸ್. ನಾರಿಮನ್ ಏನು ಹೇಳುತ್ತಾರೆಂದರೆ, ಭಾರತ ವಿರೋಧಿಯಾಗಿರುವುದು ಹೆಚ್ಚಿನ ಪ್ರಜೆಗಳಿಗೆ ರುಚಿಸದಿರಬಹುದು; ಆದರೆ ಅದು ಕ್ರಿಮಿನಲ್ ಅಪರಾಧವಲ್ಲ ಮತ್ತು ಖಂಡಿತವಾಗಿಯೂ ರಾಷ್ಟ್ರದ್ರೋಹವಲ್ಲ. ಮುಕ್ತ ವಾಕ್ ಸ್ವಾತಂತ್ರ್ಯವನ್ನು ಪ್ರತಿಪಾದಿಸುವ ಸಂವಿಧಾನದ ವಿಧಿಯ ವಿನಾಯಿತಿ ನಿಯಮಗಳಲ್ಲಿ ಸಂವಿಧಾನ ನಿರ್ಮಾತೃಗಳು ದೇಶದ್ರೋಹವನ್ನು ಉದ್ದೇಶಪೂರ್ವಕವಾಗಿ ಹೊರಗಿಟ್ಟಿದ್ದಾರೆ ಎಂದು ನಾರಿಮನ್ ಸ್ಪಷ್ಟಪಡಿಸಿದ್ದಾರೆ. “ದೇಶದ್ರೋಹವನ್ನು ಅಪರಾಧವನ್ನಾಗಿ ಮಾಡಲಾಗಿರುವುದು ಸರಕಾರಗಳ ಗಾಯಗೊಂಡ ಪ್ರತಿಷ್ಟೆಯನ್ನು ಶಮನ ಮಾಡುವುದಕ್ಕಾಗಿ ಅಲ್ಲ” ಎಂದು ಸಂವಿಧಾನ ನಿರ್ಮಾತೃಗಳು ಹೇಳಿದ್ದರು. “ಪಾಕಿಸ್ತಾನ್ ಜಿಂದಾಬಾದ್” ಮುಂತಾದ ಘೋಷಣೆಗಳನ್ನು ಕೂಗುವುದು ಕೂಡಾ ಕಾನೂನು ಪ್ರಕಾರ ರಾಷ್ಟ್ರದ್ರೋಹವಾಗುವುದಿಲ್ಲ ಎಂದು ಪ್ರಖ್ಯಾತ ವಕೀಲ ಸೋಲಿ ಸೊರಾಬ್ಜಿ ಹೇಳುತ್ತಾರೆ. ಅವರ ಅಭಿಪ್ರಾಯಗಳು ಕಾನೂನು ಆಗಿಲ್ಲದೇ ಇರಬಹುದು. ಆದರೆ ಅವರುಗಳು ಚೆನ್ನಾಗಿ ಕಾನೂನು ತಿಳಿದವರಾಗಿದ್ದಾರೆ.

ಅದೇ ರೀತಿಯಲ್ಲಿ ಪಾಕಿಸ್ತಾನದ ವಿರುದ್ಧ ಯುದ್ಧ ಮಾಡುವ ಸರಕಾರದ ನಿರ್ಧಾರವನ್ನಾಗಲೀ, ಈಗಾಗಲೇ ನಡೆಯುತ್ತಿರುವ ಯುದ್ಧವನ್ನಾಗಲೀ ಕೆಲಜನರು ಶಾಂತಿಯುತವಾಗಿ ವಿರೋಧಿಸಿದರೆ, ಅವರನ್ನು ದೇಶಪ್ರೇಮಿಗಳಲ್ಲ ಎಂದು ಕರೆಯಬಹುದಾದರೂ, ಅದು ರಾಷ್ಟ್ರದ್ರೋಹವಾಗುವುದಿಲ್ಲ. ಆದಲ್ಲದೆ, ಸರಕಾರ ಯುದ್ಧ ಸಂದರ್ಭಕ್ಕೆಂದೇ ಕಾನೂನು ತಂದಿದ್ದು, ಯಾರಾದರೂ ಉದ್ದೇಶಪೂರ್ವಕವಾಗಿ ಅದನ್ನು ಉಲ್ಲಂಘಿಸಿದರೆ, ಅದು ಕಾನೂನು ಉಲ್ಲಂಘನೆಯಾಗುತ್ತದೆಯಾದರೂ, ಆಗಲೂ ಅದು ರಾಷ್ಟ್ರದ್ರೋಹವಾಗುವುದಿಲ್ಲ.

ಆದುದರಿಂದ “ಆಜಾದಿ”ಯಂತಹ ಘೋಷಣೆ ಕೂಗುವವರನ್ನು ರಾಷ್ಟ್ರದ್ರೋಹದ ಕಾನೂನಿನ ಮೂಲಕ ಬೆದರಿಸುವುದು ಅಸಂಬದ್ಧ.

(ಲೇಖಕರಾದ ಎನ್.ಸಿ.ಅಸ್ತಾನ ಅವರು ನಿವೃತ್ತ ಐಪಿಎಸ್ ಅಧಿಕಾರಿಯಾಗಿದ್ದು, ಕೇರಳ ಡಿಜಿಪಿ ಮತ್ತು ದೀರ್ಘಕಾಲ ಸಿಆರ್‌ಪಿಎಫ್ ಮತ್ತು ಬಿಎಸ್‌ಎಫ್‌ನ ಹೆಚ್ಚುವರಿ ಡಿಜಿಪಿಯಾಗಿ ಸೇವೆ ಸಲ್ಲಿಸಿದ್ದರು.)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...