Homeಕರ್ನಾಟಕಭ್ರಷ್ಟರಲ್ಲಿ ನಡುಕ ಹುಟ್ಟಿಸಿದ್ದ ನ್ಯಾ.ಲೋಕಾಯುಕ್ತ ಎನ್.ವೆಂಕಟಾಚಲ ನಿಧನ: ಗಣ್ಯರ ಸಂತಾಪ

ಭ್ರಷ್ಟರಲ್ಲಿ ನಡುಕ ಹುಟ್ಟಿಸಿದ್ದ ನ್ಯಾ.ಲೋಕಾಯುಕ್ತ ಎನ್.ವೆಂಕಟಾಚಲ ನಿಧನ: ಗಣ್ಯರ ಸಂತಾಪ

- Advertisement -
- Advertisement -

ಲೋಕಾಯುಕ್ತದ ಮೂಲಕ ಭ್ರಷ್ಟರ ಹುಟ್ಟಡಗಿಸಿದ್ದ ಮಾಜಿ ಲೋಕಾಯುಕ್ತ ನ್ಯಾಯಮೂರ್ತಿ ಎನ್.ವೆಂಕಟಾಚಲ ಅವರು ಇಂದು ಬೆಳಗ್ಗೆ ಎಂ.ಎಸ್.ರಾಮಯ್ಯ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ನಂಜೇಗೌಡ ವೆಂಕಟಾಚಲ ಅವರಿಗೆ 89 ವಯಸ್ಸಾಗಿತ್ತು. ಇಬ್ಬರು ಪುತ್ರರು ಮತ್ತು ಪತ್ನಿಯನ್ನು ಅಗಲಿದ್ದಾರೆ.

ಕೋಲಾರದ ಮುಳಬಾಗಿಲಿನ ಮಿಟ್ಟೂರು ಗ್ರಾಮದಲ್ಲಿ ಜನಿಸಿದ ವೆಂಕಟಾಚಲ, ಬೆಂಗಳೂರಿನಲ್ಲಿ ಬಿಎಸ್ಸಿ, ಮೈಸೂರು ವಿಶ್ವವಿದ್ಯಾಲಯದಲ್ಲಿ ಎಲ್.ಎಲ್.ಬಿ ಪದವಿ ಪಡೆದಿದ್ದರು. ಭ್ರಷ್ಟಾಚಾರವನ್ನು ಮಟ್ಟ ಹಾಕಲೆಂದು ಕರ್ನಾಟಕದಲ್ಲಿ 1984ರಲ್ಲಿ ಲೋಕಾಯುಕ್ತ ಸಂಸ್ಥೆಯನ್ನು ಸ್ಥಾಪಿಸಲಾಯಿತು. 2001ರಲ್ಲಿ ನ್ಯಾಯಮೂರ್ತಿ ಎನ್.ವೆಂಕಟಾಚಲ ಅವರು ಲೋಕಾಯುಕ್ತರಾಗಿ ನೇಮಕವಾದ ನಂತರ ಜನಸಾಮಾನ್ಯರಲ್ಲಿ ಅರಿವು ಮೂಡಿಸಿದ್ದರು. ಕೆಳಮಟ್ಟದ ಕಚೇರಿಗಳ ಕಾರ್ಯವೈಖರಿಗೆ ಚುರುಕು ಮುಟ್ಟಿಸಿದ್ದರು. ಉಪಲೋಕಾಯುಕ್ತರ ನೇಮಕದಲ್ಲಿ ವಿಳಂಬವಾದಾಗ ತಾವು ಸ್ವತಃ ಉಪಲೋಕಾಯುಕ್ತರಾಗಿಯೂ ಕೆಲಸ ಮಾಡಿದ್ದರು. ಲೋಕಾಯುಕ್ತ ಸಂಸ್ಥೆಗೆ ಜೀವ ತುಂಬಿದ್ದ ಅವರು ಭ್ರಷ್ಟರಿಗೆ ಮುಳುವಾಗಿದ್ದರು.

ಆಡಳಿತದಲ್ಲಿ ನಡೆಯುವ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಲು ಲೋಕಾಯುಕ್ತಕ್ಕೆ ಹೊಸ ರೂಪುರೇಷೆ ನೀಡಿದ್ದರು. ರಾಜ್ಯದ ಪ್ರತಿ ಜಿಲ್ಲೆ, ತಾಲೂಕುಗಳಲ್ಲಿ ಸಭೆ ನಡೆಸಿ ದೂರು ಮತ್ತು ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ಒದಗಿಸುವ ಕೆಲಸ ಮಾಡಿದ್ದರು. ಅಲ್ಲದೇ ಬ್ರಿಟನ್ ನಲ್ಲಿ ಭ್ರಷ್ಟಾಚಾರವನ್ನು ಮಟ್ಟ ಹಾಕಲು ತಂದಿರುವ ಕಾನೂನನ್ನು ಭಾರತದಲ್ಲಿಯೂ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು. ಹೀಗೆ ಮಾಡಿದರೆ ಪ್ರಧಾನಿ ಕಚೇರಿಯಿಂದ ಹಿಡಿದು ಕೆಳಹಂತದವರೆಗಿನ ಎಲ್ಲ ಇಲಾಖೆಯಲ್ಲಿನ ಭ್ರಷ್ಟಾಚಾರವನ್ನು ಬಯಲಿಗೆ ಎಳೆಯಬಹುದು ಎಂದು ಹೇಳುತ್ತಿದ್ದರು. ಎಸ್.ಎಂ.ಕೃಷ್ಣ ನೇತೃತ್ವದ ಕಾಂಗ್ರೆಸ್ ಆಡಳಿತವಿದ್ದಾಗ ಎನ್.ವೆಂಕಟಾಚಲ ಅವರ ನೇಮಕವಾಗಿತ್ತು. ರಾಜಕಾರಣಿಗಳ ಭ್ರಷ್ಟಾಚಾರವನ್ನು ಬಯಲಿಗೆಳೆದಿದ್ದ ಅವರು ರಾಜಕಾರಣಿಗಳ ಕೆಂಗಣ್ಣಿಗೂ ಗುರಿಯಾಗಿದ್ದರು.

ಇನ್ನು ವೆಂಕಟಾಚಲ ಅವರ ನಿಧನಕ್ಕೆ ಗಣ್ಯರು ಸಂತಾಪ ಸೂಚಿಸಿದ್ದಾರೆ. ಮಾಜಿ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿ, ನ್ಯಾ.ವೆಂಕಟಾಚಲ ಅವರು ಲೋಕಾಯುಕ್ತರಾಗಿ ಭ್ರಷ್ಟರ ವಿರುದ್ಧ ಸಮರ ಸಾರಿ, ರಾಜ್ಯದಲ್ಲಿ ಸಂಚಲನ ಸೃಷ್ಟಿಸಿದ್ದರು ಎಂದು ಸಂತಾಪ ಸೂಚಿಸಿದ್ದಾರೆ. ಮಾಜಿ ಸಿಎಂ ಕುಮಾರಸ್ವಾಮಿ ಕೂಡ ಟ್ವೀಟ್ ಮಾಡಿ ಸಂತಾಪ ಸೂಚಿಸಿದ್ದಾರೆ. ವೈಯಾಲಿಕಾವಲ್ ನ ವೆಂಕಟಾಚಲ ಅವರ ಪಾರ್ಥಿವ ಶರೀರವನ್ನು ಅಂತಿಮ ದರ್ಶನಕ್ಕೆ ಇರಿಸಲಾಗುವುದು ಎಂದು ಮೂಲಗಳು ತಿಳಿಸಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...