Homeಕರ್ನಾಟಕನಾನು ಪಕ್ಷದ ಆದೇಶ ಉಲ್ಲಂಘಿಸಿಲ್ಲ. ಇದು ಕಮ್ಯುನಿಕೇಷನ್ ಗ್ಯಾಪ್ ನಿಂದ ಹೀಗೆ ಆಗಿದೆ: ಎನ್.ಮಹೇಶ್

ನಾನು ಪಕ್ಷದ ಆದೇಶ ಉಲ್ಲಂಘಿಸಿಲ್ಲ. ಇದು ಕಮ್ಯುನಿಕೇಷನ್ ಗ್ಯಾಪ್ ನಿಂದ ಹೀಗೆ ಆಗಿದೆ: ಎನ್.ಮಹೇಶ್

- Advertisement -
- Advertisement -

ನಿನ್ನೆ ಸದನದಲ್ಲಿ ನಡೆದ ವಿಶ್ವಾಸಮತ ಯಾಚನೆಯ ಪ್ರಕ್ರಿಯೆಗೆ ಗೈರು ಹಾಜರಾಗುವ ಮೂಲಕ ಬಿ.ಎಸ್.ಪಿ ಪಕ್ಷದಿಂದ ಉಚ್ಚಾಟಿತರಾಗಿದ್ದ ಎನ್ ಮಹೇಶ್ ರವರು ಇಂದು ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ. ಅಲ್ಲಿ ನಾನು ಪಕ್ಷದ ಆದೇಶ ಉಲ್ಲಂಘಿಸಿಲ್ಲ. ಇದು ಕಮ್ಯುನಿಕೇಷನ್ ಗ್ಯಾಪ್ ನಿಂದ ಹೀಗೆ ಆಗಿದೆ ಎಂದು ಸ್ಪಷ್ಟೀಕರಣ ನೀಡಿದ್ದಾರೆ. ಎನ್ ಮಹೇಶ್ ರವರು ಮಾತಾಡಿದ ಪೂರ್ಣ ವಿವರ ಇಲ್ಲಿದೆ.

ನಾನು ಬೆಂಗಳೂರಿಗೆ ಬಂದಾಗ ಪ್ರಿಂಟ್ ಮಾಧ್ಯಮಗಳಲ್ಲಿ ನನ್ನನ್ನು ಉಚ್ಚಾಟನೆ ಮಾಡಿರುವ ಮಾಹಿತಿ ತಿಳಿಯಿತು. ಮುದ್ರಣ ಮಾಧ್ಯಮಗಳಲ್ಲಿ ಟ್ವಿಟ್ಟರ್ ಮೂಲಕ ಹೇಳಿದ್ದಾರೆ ಎಂದು ಗಮನಿಸಿದೆ. ಕಳೆದ ಒಂದು ವಾರದಿಂದ ನಡೆಯುತ್ತಿರುವ ಸದನದ ವಿಶ್ವಾಸಮತ ಮತದಾನದ ಪ್ರಕ್ರಿಯೆಯಲ್ಲಿ ನಾನು ಭಾಗವಹಿಸಿಲ್ಲ.. ಆ ಕಾರಣಕ್ಕೆ ಉಚ್ಚಾಟನೆ ಮಾಡಲಾಗಿದೆ ಎನ್ನಲಾಗಿದೆ. ಅದಕ್ಕೆ ಸ್ಪಷ್ಟೀಕರಣ ಕೊಡಲು ಈ ಪತ್ರಿಕಾಗೋಷ್ಠಿ ಆಯೋಜಿಸಿದ್ದೇನೆ.

ಮೊದಲನೇಯದಾಗಿ 2018ರ ವಿಧಾನಸಭಾ ಚುನಾವಣೆಯಲ್ಲಿ ಬಿಎಸ್‍ಪಿ ಮತ್ತು ಜೆಡಿಎಸ್ ಪಕ್ಷಗಳು ಚುನಾವಣಾ ಪೂರ್ವ ಹೊಂದಾಣಿಕೆ ಮಾಡಿಕೊಂಡು ಚುನಾವಣೆ ಎದುರಿಸಿದೆವು. 20:204 ಆಧಾರದಲ್ಲಿ 20 ರಲ್ಲಿ ಕೊಳ್ಳೇಗಾಲ ಒಂದು ಕ್ಷೇತ್ರದಲ್ಲಿ ನಾನು ಗೆದ್ದಿದ್ದೆ. ಅತಂತ್ರ ವಿಧಾನಸಭೆಯಲ್ಲಿ ಜೆಡಿಎಸ್ ಕಾಂಗ್ರೆಸ್ ಮತ್ತು ಬಿಎಸ್‍ಪಿ ಮೈತ್ರಿ ಸರ್ಕಾರ ರಚನೆಯಾಯಿತು. ಬೆಹನ್ ಮಾಯಾವತಿಯವರ ಆದೇಶದ ಮೇರೆಗೆ ನಾನು ನಾಲ್ಕು ತಿಂಗಳ ಕಾಲ ಶಿಕ್ಷಣ ಸಚಿವನಾಗಿ ಯಶಸ್ವಿಯಾಗಿ ಕೆಲಸ ಮಾಡಿದ್ದೇನೆ

4 ತಿಂಗಳ ನಂತರ ಬೆಹನ್ ಜಿ ದೆಹಲಿಗೆ ಕರೆಸಿಕೊಂಡರು ಮತ್ತು ಮಂತ್ರಿ ಪದವಿಗೆ ರಾಜೀನಾಮೆ ಕೊಡು ಎಂದರು. ಕಾರಣ: ಮಧ್ಯಪ್ರದೆಶ ಮತ್ತು ರಾಜಸ್ಥಾನದಲ್ಲಿ ಮಹಾಘಟಬಂಧನ್ ಎಂಬ ತೀರ್ಮಾನಕ್ಕೆ ಕಾಂಗ್ರೆಸ್ ನವರು ಬದ್ಧರಾಗುತ್ತಿಲ್ಲ. ಹಾಗಾಗಿ ಕಾಂಗ್ರೆಸ್ ಜೊತೆಗಿರುವ ಕ್ಯಾಬಿನೆಟ್ ನಲ್ಲಿ ನೀನಿರುವುದು ಬೇಡ ಎಂದರು. ನಾನು ದೂಸರಾ ಮಾತಾಡದೇ ರಾಜೀನಾಮೆ ನೀಡಿದೆ.

ಮೂರ್ನಾಲ್ಕು ದಿನ ಮುಖ್ಯಮಂತ್ರಿಗಳು ರಾಜೀನಾಮೆ ಒಪ್ಪಿರಲಿಲ್ಲ. ಕೊನೆಗೆ ಮಾಯಾವತಿಯವರ ಸೂಚನೆಯ ಮೇರೆಗೆ ಒಪ್ಪಿಕೊಂಡರು. ಅದಾದಮೇಲೆ ನಾನು ನನ್ನ ಕ್ಷೇತ್ರದಲ್ಲಿ ಜನರ ಜೊತೆ ಕೆಲಸ ಮಾಡುತ್ತಿದ್ದೆ

2019ರ ಲೋಕಸಭಾ ಚುನಾವಣೆಯಲ್ಲಿ ಬೆಹನ್ ಮಾಯಾವತಿಯವರ ಆದೇಶದ ಮೇರೆಗೆ ಯಾರ ಜೊತೆಗೂ ಹೊಂದಾಣಿಕೆ ಮಾಡಿಕೊಳ್ಳದೇ 28 ಕ್ಷೇತ್ರಗಳಲ್ಲಿಯೂ ಅಭ್ಯರ್ಥಿಗಳನ್ನು ಹಾಕಿ ಸ್ವತಂತ್ರವಾಗಿ ಸ್ಪರ್ಧಿಸಿದೆವು. ಆಗ 4,12,382 ಮತ ಪಡೆದೆವು. 1.5% ಮತಪ್ರಮಾಣ ಬಂದಿತ್ತು. ಚುನಾವಣೆಯ ನಂತರ ರಿವ್ಯೂ ಮಾಡಲಿಕ್ಕೆ ಜೂನ್ 23ಕ್ಕೆ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ನಡೆಯಿತು.

ಅಲ್ಲಿ ನಾನು ಮುಂಚೆ ಈ ಸಮ್ಮಿಶ್ರ ಸರ್ಕಾರಕ್ಕೆ ನಾನು ಬೆಂಬಲಿಗನಾಗಿ ಇದ್ದೆ. ಲೋಕಸಭೆಯಲ್ಲಿ ಅವರ ವಿರುದ್ಧ ಹೋರಾಟ ಮಾಡಿರುವುದರಿಂದ ಈಗ ನಾನು ಏನು ಮಾಡಬೇಕೆಂದು ಕೇಳಿದ್ದೆ. ಆಗ ಅವರು ಸ್ವತಂತ್ರವಾಗಿರು ಎಂದಿದ್ದರು. ವಿರೋಧ ಪಕ್ಷಕ್ಕೂ ಬೆಂಬಲ ಕೊಡಬೇಡ ಅಂದಿದ್ದರು.
ಹಾಗಾಗಿ ನಾನು ಸ್ಪೀಕರ್ ರವರಿಗೆ ಪತ್ರ ಬರೆದು ಪ್ರತ್ಯೇಕ ಆಸನ ಕೊಡಿ ಎಂದು ಕೇಳಿದ್ದೆ. ಅದು ನಿಗಧಿಯಾಯಿತು. ವಿಶ್ವಾಸಮತ ಯಾಚನೆ ಪ್ರಕ್ರಿಯೆ ಶುರುವಾಯಿತು.

ಡಾ. ಅಶೋಕ್ ಸಿದ್ಧಾರ್ಥ್ ಸಾಹೇಬರು, ಉತ್ತರ ಪ್ರದೇಶದ ರಾಜ್ಯಸಭಾ ಸದಸ್ಯರು. ನಮಗೆ ಉಸ್ತುವಾರಿ ಅವರೆ. ಅವರ ಬಳಿ ಈ ವಿಶ್ವಾಸಮತ ಯಾಚನೆಯಲ್ಲಿ ನಾನು ಏನು ಮಾಡಬೇಕು ಎಂದು ಕೇಳಿದೆ. ಅವರು ಮಾಯಾವತಿಯವರೊಡನೆ ಮಾತನಾಡಿ ಹೇಳುತ್ತೇನೆ ಎಂದಿದ್ದರು. ಕೊನೆಗ ಮಾತನಾಡಿ ಅವರು ತಟಸ್ಥವಾಗಿರು ಎಂದು ಹೇಳಿದ್ದರು. ಅವರು ತಟಸ್ಥವಾಗಿರುವಂತೆ ಹೇಳಿದ್ದರಿಂದ ನಾನು ವಿಧಾನಸಭೆಗೆ ಭಾಗವಹಿಸಲಿಲ್ಲ. ನಾನು ನನ್ನ ಕ್ಷೇತ್ರದಲ್ಲಿದ್ದೆ.

15 ನೇ ಸೋಮವಾರ ನನ್ನ ಕ್ಷೇತ್ರದ ಅಗರ ಗ್ರಾ.ಪಂ ಸದಸ್ಯ ಅಪಘಾತದಲ್ಲಿ ಅಕಾಲಿಕ ಮರಣದಲ್ಲಿ ತುತ್ತಾಗಿದ್ದರಿಂದ ಅವರ ಕುಟುಂಬದ ಜೊತೆ ಇದ್ದೆ. ಅಸೆಂಬ್ಲಿಗೆ ಹಾಜರಾಗುವುದಿಲ್ಲ ಎಂದು ಮೊದಲೇ ತಿಳಿಸಿದ್ದೆ. ಇಷ್ಟು ದಿನ ನಾನು ಹೊರಗೆ ಇದ್ದೆ. ಇಂದು ಬೆಂಗಳೂರಿಗೆ ಬಂದಿದ್ದೇನೆ.

ನಾನು ನಮ್ಮ ಹೈಕಮಾಂಡ್ ನ ಯಾವುದೇ ಆದೇಶವನ್ನು ಉಲ್ಲಂಘನೆ ಮಾಡಿಲ್ಲ. ನಾನು ಅಶಿಸ್ತಿನಿಂದ ನಡೆದುಕೊಂಡಿಲ್ಲ. ಮಯಾವತಿಯವರು ಟ್ವೀಟ್ ಮಾಡಿದ್ದಾರೆ ಎಂದು ಹೇಳಿದ್ದಾರೆ. ನನಗೆ ಟ್ವಿಟ್ ಎಲ್ಲಾ ಗೊತ್ತಾಗೋಲ್ಲ. ಅದು ನನಗೆ ಬರೋದು ಇಲ್ಲ.

ನಾನು ಪಕ್ಷದ ಆದೇಶ ಉಲ್ಲಂಘಿಸಿಲ್ಲ. ಇದು ಕಮ್ಯುನಿಕೇಷನ್ ಗ್ಯಾಪ್ ನಿಂದ ಹೀಗೆ ಆಗಿದೆ. ಇದು ಸರಿ ಹೋಗುತ್ತೆ. ನಾನು ರಾಜ್ಯದ ಮೂರು ಪಕ್ಷಗಳಲ್ಲಿ ಯಾರ ಪರವೂ ಇಲ್ಲ, ಯಾರ ವಿರುದ್ಧವೂ ಇಲ್ಲ. ತಟಸ್ಥನಾಗಿದ್ದೇನೆ. ಇದನ್ನು ಮಹಾಜನತೆಗೆ ತಿಳಿಸಬೇಕೆಂದು ಕೋರುತ್ತೇನೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...

ಸೋನಮ್ ವಾಂಗ್ಚುಕ್ ಮತ್ತು ಸರ್ಕಾರದ ಡೀಲ್‌ನಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಶವೇ ಇಲ್ಲ

ಕೇಂದ್ರದ ಮೋದಿ ಸರ್ಕಾರ ತನ್ನ ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡ ನಂತರ, ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಜುಲೈ 23ರ ಗುರುವಾರ ತಮ್ಮ 26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ....

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...