Homeಕರ್ನಾಟಕನಾನು ಪಕ್ಷದ ಆದೇಶ ಉಲ್ಲಂಘಿಸಿಲ್ಲ. ಇದು ಕಮ್ಯುನಿಕೇಷನ್ ಗ್ಯಾಪ್ ನಿಂದ ಹೀಗೆ ಆಗಿದೆ: ಎನ್.ಮಹೇಶ್

ನಾನು ಪಕ್ಷದ ಆದೇಶ ಉಲ್ಲಂಘಿಸಿಲ್ಲ. ಇದು ಕಮ್ಯುನಿಕೇಷನ್ ಗ್ಯಾಪ್ ನಿಂದ ಹೀಗೆ ಆಗಿದೆ: ಎನ್.ಮಹೇಶ್

- Advertisement -
- Advertisement -

ನಿನ್ನೆ ಸದನದಲ್ಲಿ ನಡೆದ ವಿಶ್ವಾಸಮತ ಯಾಚನೆಯ ಪ್ರಕ್ರಿಯೆಗೆ ಗೈರು ಹಾಜರಾಗುವ ಮೂಲಕ ಬಿ.ಎಸ್.ಪಿ ಪಕ್ಷದಿಂದ ಉಚ್ಚಾಟಿತರಾಗಿದ್ದ ಎನ್ ಮಹೇಶ್ ರವರು ಇಂದು ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ. ಅಲ್ಲಿ ನಾನು ಪಕ್ಷದ ಆದೇಶ ಉಲ್ಲಂಘಿಸಿಲ್ಲ. ಇದು ಕಮ್ಯುನಿಕೇಷನ್ ಗ್ಯಾಪ್ ನಿಂದ ಹೀಗೆ ಆಗಿದೆ ಎಂದು ಸ್ಪಷ್ಟೀಕರಣ ನೀಡಿದ್ದಾರೆ. ಎನ್ ಮಹೇಶ್ ರವರು ಮಾತಾಡಿದ ಪೂರ್ಣ ವಿವರ ಇಲ್ಲಿದೆ.

ನಾನು ಬೆಂಗಳೂರಿಗೆ ಬಂದಾಗ ಪ್ರಿಂಟ್ ಮಾಧ್ಯಮಗಳಲ್ಲಿ ನನ್ನನ್ನು ಉಚ್ಚಾಟನೆ ಮಾಡಿರುವ ಮಾಹಿತಿ ತಿಳಿಯಿತು. ಮುದ್ರಣ ಮಾಧ್ಯಮಗಳಲ್ಲಿ ಟ್ವಿಟ್ಟರ್ ಮೂಲಕ ಹೇಳಿದ್ದಾರೆ ಎಂದು ಗಮನಿಸಿದೆ. ಕಳೆದ ಒಂದು ವಾರದಿಂದ ನಡೆಯುತ್ತಿರುವ ಸದನದ ವಿಶ್ವಾಸಮತ ಮತದಾನದ ಪ್ರಕ್ರಿಯೆಯಲ್ಲಿ ನಾನು ಭಾಗವಹಿಸಿಲ್ಲ.. ಆ ಕಾರಣಕ್ಕೆ ಉಚ್ಚಾಟನೆ ಮಾಡಲಾಗಿದೆ ಎನ್ನಲಾಗಿದೆ. ಅದಕ್ಕೆ ಸ್ಪಷ್ಟೀಕರಣ ಕೊಡಲು ಈ ಪತ್ರಿಕಾಗೋಷ್ಠಿ ಆಯೋಜಿಸಿದ್ದೇನೆ.

ಮೊದಲನೇಯದಾಗಿ 2018ರ ವಿಧಾನಸಭಾ ಚುನಾವಣೆಯಲ್ಲಿ ಬಿಎಸ್‍ಪಿ ಮತ್ತು ಜೆಡಿಎಸ್ ಪಕ್ಷಗಳು ಚುನಾವಣಾ ಪೂರ್ವ ಹೊಂದಾಣಿಕೆ ಮಾಡಿಕೊಂಡು ಚುನಾವಣೆ ಎದುರಿಸಿದೆವು. 20:204 ಆಧಾರದಲ್ಲಿ 20 ರಲ್ಲಿ ಕೊಳ್ಳೇಗಾಲ ಒಂದು ಕ್ಷೇತ್ರದಲ್ಲಿ ನಾನು ಗೆದ್ದಿದ್ದೆ. ಅತಂತ್ರ ವಿಧಾನಸಭೆಯಲ್ಲಿ ಜೆಡಿಎಸ್ ಕಾಂಗ್ರೆಸ್ ಮತ್ತು ಬಿಎಸ್‍ಪಿ ಮೈತ್ರಿ ಸರ್ಕಾರ ರಚನೆಯಾಯಿತು. ಬೆಹನ್ ಮಾಯಾವತಿಯವರ ಆದೇಶದ ಮೇರೆಗೆ ನಾನು ನಾಲ್ಕು ತಿಂಗಳ ಕಾಲ ಶಿಕ್ಷಣ ಸಚಿವನಾಗಿ ಯಶಸ್ವಿಯಾಗಿ ಕೆಲಸ ಮಾಡಿದ್ದೇನೆ

4 ತಿಂಗಳ ನಂತರ ಬೆಹನ್ ಜಿ ದೆಹಲಿಗೆ ಕರೆಸಿಕೊಂಡರು ಮತ್ತು ಮಂತ್ರಿ ಪದವಿಗೆ ರಾಜೀನಾಮೆ ಕೊಡು ಎಂದರು. ಕಾರಣ: ಮಧ್ಯಪ್ರದೆಶ ಮತ್ತು ರಾಜಸ್ಥಾನದಲ್ಲಿ ಮಹಾಘಟಬಂಧನ್ ಎಂಬ ತೀರ್ಮಾನಕ್ಕೆ ಕಾಂಗ್ರೆಸ್ ನವರು ಬದ್ಧರಾಗುತ್ತಿಲ್ಲ. ಹಾಗಾಗಿ ಕಾಂಗ್ರೆಸ್ ಜೊತೆಗಿರುವ ಕ್ಯಾಬಿನೆಟ್ ನಲ್ಲಿ ನೀನಿರುವುದು ಬೇಡ ಎಂದರು. ನಾನು ದೂಸರಾ ಮಾತಾಡದೇ ರಾಜೀನಾಮೆ ನೀಡಿದೆ.

ಮೂರ್ನಾಲ್ಕು ದಿನ ಮುಖ್ಯಮಂತ್ರಿಗಳು ರಾಜೀನಾಮೆ ಒಪ್ಪಿರಲಿಲ್ಲ. ಕೊನೆಗೆ ಮಾಯಾವತಿಯವರ ಸೂಚನೆಯ ಮೇರೆಗೆ ಒಪ್ಪಿಕೊಂಡರು. ಅದಾದಮೇಲೆ ನಾನು ನನ್ನ ಕ್ಷೇತ್ರದಲ್ಲಿ ಜನರ ಜೊತೆ ಕೆಲಸ ಮಾಡುತ್ತಿದ್ದೆ

2019ರ ಲೋಕಸಭಾ ಚುನಾವಣೆಯಲ್ಲಿ ಬೆಹನ್ ಮಾಯಾವತಿಯವರ ಆದೇಶದ ಮೇರೆಗೆ ಯಾರ ಜೊತೆಗೂ ಹೊಂದಾಣಿಕೆ ಮಾಡಿಕೊಳ್ಳದೇ 28 ಕ್ಷೇತ್ರಗಳಲ್ಲಿಯೂ ಅಭ್ಯರ್ಥಿಗಳನ್ನು ಹಾಕಿ ಸ್ವತಂತ್ರವಾಗಿ ಸ್ಪರ್ಧಿಸಿದೆವು. ಆಗ 4,12,382 ಮತ ಪಡೆದೆವು. 1.5% ಮತಪ್ರಮಾಣ ಬಂದಿತ್ತು. ಚುನಾವಣೆಯ ನಂತರ ರಿವ್ಯೂ ಮಾಡಲಿಕ್ಕೆ ಜೂನ್ 23ಕ್ಕೆ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ನಡೆಯಿತು.

ಅಲ್ಲಿ ನಾನು ಮುಂಚೆ ಈ ಸಮ್ಮಿಶ್ರ ಸರ್ಕಾರಕ್ಕೆ ನಾನು ಬೆಂಬಲಿಗನಾಗಿ ಇದ್ದೆ. ಲೋಕಸಭೆಯಲ್ಲಿ ಅವರ ವಿರುದ್ಧ ಹೋರಾಟ ಮಾಡಿರುವುದರಿಂದ ಈಗ ನಾನು ಏನು ಮಾಡಬೇಕೆಂದು ಕೇಳಿದ್ದೆ. ಆಗ ಅವರು ಸ್ವತಂತ್ರವಾಗಿರು ಎಂದಿದ್ದರು. ವಿರೋಧ ಪಕ್ಷಕ್ಕೂ ಬೆಂಬಲ ಕೊಡಬೇಡ ಅಂದಿದ್ದರು.
ಹಾಗಾಗಿ ನಾನು ಸ್ಪೀಕರ್ ರವರಿಗೆ ಪತ್ರ ಬರೆದು ಪ್ರತ್ಯೇಕ ಆಸನ ಕೊಡಿ ಎಂದು ಕೇಳಿದ್ದೆ. ಅದು ನಿಗಧಿಯಾಯಿತು. ವಿಶ್ವಾಸಮತ ಯಾಚನೆ ಪ್ರಕ್ರಿಯೆ ಶುರುವಾಯಿತು.

ಡಾ. ಅಶೋಕ್ ಸಿದ್ಧಾರ್ಥ್ ಸಾಹೇಬರು, ಉತ್ತರ ಪ್ರದೇಶದ ರಾಜ್ಯಸಭಾ ಸದಸ್ಯರು. ನಮಗೆ ಉಸ್ತುವಾರಿ ಅವರೆ. ಅವರ ಬಳಿ ಈ ವಿಶ್ವಾಸಮತ ಯಾಚನೆಯಲ್ಲಿ ನಾನು ಏನು ಮಾಡಬೇಕು ಎಂದು ಕೇಳಿದೆ. ಅವರು ಮಾಯಾವತಿಯವರೊಡನೆ ಮಾತನಾಡಿ ಹೇಳುತ್ತೇನೆ ಎಂದಿದ್ದರು. ಕೊನೆಗ ಮಾತನಾಡಿ ಅವರು ತಟಸ್ಥವಾಗಿರು ಎಂದು ಹೇಳಿದ್ದರು. ಅವರು ತಟಸ್ಥವಾಗಿರುವಂತೆ ಹೇಳಿದ್ದರಿಂದ ನಾನು ವಿಧಾನಸಭೆಗೆ ಭಾಗವಹಿಸಲಿಲ್ಲ. ನಾನು ನನ್ನ ಕ್ಷೇತ್ರದಲ್ಲಿದ್ದೆ.

15 ನೇ ಸೋಮವಾರ ನನ್ನ ಕ್ಷೇತ್ರದ ಅಗರ ಗ್ರಾ.ಪಂ ಸದಸ್ಯ ಅಪಘಾತದಲ್ಲಿ ಅಕಾಲಿಕ ಮರಣದಲ್ಲಿ ತುತ್ತಾಗಿದ್ದರಿಂದ ಅವರ ಕುಟುಂಬದ ಜೊತೆ ಇದ್ದೆ. ಅಸೆಂಬ್ಲಿಗೆ ಹಾಜರಾಗುವುದಿಲ್ಲ ಎಂದು ಮೊದಲೇ ತಿಳಿಸಿದ್ದೆ. ಇಷ್ಟು ದಿನ ನಾನು ಹೊರಗೆ ಇದ್ದೆ. ಇಂದು ಬೆಂಗಳೂರಿಗೆ ಬಂದಿದ್ದೇನೆ.

ನಾನು ನಮ್ಮ ಹೈಕಮಾಂಡ್ ನ ಯಾವುದೇ ಆದೇಶವನ್ನು ಉಲ್ಲಂಘನೆ ಮಾಡಿಲ್ಲ. ನಾನು ಅಶಿಸ್ತಿನಿಂದ ನಡೆದುಕೊಂಡಿಲ್ಲ. ಮಯಾವತಿಯವರು ಟ್ವೀಟ್ ಮಾಡಿದ್ದಾರೆ ಎಂದು ಹೇಳಿದ್ದಾರೆ. ನನಗೆ ಟ್ವಿಟ್ ಎಲ್ಲಾ ಗೊತ್ತಾಗೋಲ್ಲ. ಅದು ನನಗೆ ಬರೋದು ಇಲ್ಲ.

ನಾನು ಪಕ್ಷದ ಆದೇಶ ಉಲ್ಲಂಘಿಸಿಲ್ಲ. ಇದು ಕಮ್ಯುನಿಕೇಷನ್ ಗ್ಯಾಪ್ ನಿಂದ ಹೀಗೆ ಆಗಿದೆ. ಇದು ಸರಿ ಹೋಗುತ್ತೆ. ನಾನು ರಾಜ್ಯದ ಮೂರು ಪಕ್ಷಗಳಲ್ಲಿ ಯಾರ ಪರವೂ ಇಲ್ಲ, ಯಾರ ವಿರುದ್ಧವೂ ಇಲ್ಲ. ತಟಸ್ಥನಾಗಿದ್ದೇನೆ. ಇದನ್ನು ಮಹಾಜನತೆಗೆ ತಿಳಿಸಬೇಕೆಂದು ಕೋರುತ್ತೇನೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...

ಉದ್ಯಮಿ ಸಿಜೆ ರಾಯ್ ಮರಣೋತ್ತರ ಪರೀಕ್ಷೆ; ಹೃದಯ-ಶ್ವಾಸಕೋಶದಲ್ಲಿ 6.35 ಎಂಎಂ ಗುಂಡಿನ ಗಾಯ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಅವರ ಆತ್ಮಹತ್ಯೆಯ ಮರಣೋತ್ತರ ಪರೀಕ್ಷೆಯ ವರದಿಗಯನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅರವಿಂದ್ ಎಂಎನ್ ವಿವರಿಸಿದ್ದಾರೆ. 6.35 ಎಂಎಂ ಗುಂಡಿನ ದಾಳಿಯು ತಕ್ಷಣದ...

ಮುಂಬೈ| ನಿರ್ದೇಶಕ ರೋಹಿತ್ ಶೆಟ್ಟಿ ಮನೆಯ ಹೊರಗೆ 4 ಸುತ್ತು ಗುಂಡು ಹಾರಿಸಿದ ಅಪರಿಚಿತರು

ಶನಿವಾರ ತಡರಾತ್ರಿ, ಬಾಲಿವುಡ್ ನಿರ್ದೇಶಕ ರೋಹಿತ್ ಶೆಟ್ಟಿ ಅವರ ಮುಂಬೈನ ಜುಹು ನಿವಾಸದ ಹೊರಗೆ ನಾಲ್ಕು ಸುತ್ತು ಗುಂಡು ಹಾರಿಸಲಾಗಿದ್ದು, ಘಟನೆಯಲ್ಲಿ ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಚಿತ್ರ ನಿರ್ಮಾಪಕ-ನಿರ್ದೇಶಕರ ಕಟ್ಟಡದ ಬಳಿ ಅಪರಿಚಿತ...

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...