Homeಕರ್ನಾಟಕನಾನು ಪಕ್ಷದ ಆದೇಶ ಉಲ್ಲಂಘಿಸಿಲ್ಲ. ಇದು ಕಮ್ಯುನಿಕೇಷನ್ ಗ್ಯಾಪ್ ನಿಂದ ಹೀಗೆ ಆಗಿದೆ: ಎನ್.ಮಹೇಶ್

ನಾನು ಪಕ್ಷದ ಆದೇಶ ಉಲ್ಲಂಘಿಸಿಲ್ಲ. ಇದು ಕಮ್ಯುನಿಕೇಷನ್ ಗ್ಯಾಪ್ ನಿಂದ ಹೀಗೆ ಆಗಿದೆ: ಎನ್.ಮಹೇಶ್

- Advertisement -
- Advertisement -

ನಿನ್ನೆ ಸದನದಲ್ಲಿ ನಡೆದ ವಿಶ್ವಾಸಮತ ಯಾಚನೆಯ ಪ್ರಕ್ರಿಯೆಗೆ ಗೈರು ಹಾಜರಾಗುವ ಮೂಲಕ ಬಿ.ಎಸ್.ಪಿ ಪಕ್ಷದಿಂದ ಉಚ್ಚಾಟಿತರಾಗಿದ್ದ ಎನ್ ಮಹೇಶ್ ರವರು ಇಂದು ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ. ಅಲ್ಲಿ ನಾನು ಪಕ್ಷದ ಆದೇಶ ಉಲ್ಲಂಘಿಸಿಲ್ಲ. ಇದು ಕಮ್ಯುನಿಕೇಷನ್ ಗ್ಯಾಪ್ ನಿಂದ ಹೀಗೆ ಆಗಿದೆ ಎಂದು ಸ್ಪಷ್ಟೀಕರಣ ನೀಡಿದ್ದಾರೆ. ಎನ್ ಮಹೇಶ್ ರವರು ಮಾತಾಡಿದ ಪೂರ್ಣ ವಿವರ ಇಲ್ಲಿದೆ.

ನಾನು ಬೆಂಗಳೂರಿಗೆ ಬಂದಾಗ ಪ್ರಿಂಟ್ ಮಾಧ್ಯಮಗಳಲ್ಲಿ ನನ್ನನ್ನು ಉಚ್ಚಾಟನೆ ಮಾಡಿರುವ ಮಾಹಿತಿ ತಿಳಿಯಿತು. ಮುದ್ರಣ ಮಾಧ್ಯಮಗಳಲ್ಲಿ ಟ್ವಿಟ್ಟರ್ ಮೂಲಕ ಹೇಳಿದ್ದಾರೆ ಎಂದು ಗಮನಿಸಿದೆ. ಕಳೆದ ಒಂದು ವಾರದಿಂದ ನಡೆಯುತ್ತಿರುವ ಸದನದ ವಿಶ್ವಾಸಮತ ಮತದಾನದ ಪ್ರಕ್ರಿಯೆಯಲ್ಲಿ ನಾನು ಭಾಗವಹಿಸಿಲ್ಲ.. ಆ ಕಾರಣಕ್ಕೆ ಉಚ್ಚಾಟನೆ ಮಾಡಲಾಗಿದೆ ಎನ್ನಲಾಗಿದೆ. ಅದಕ್ಕೆ ಸ್ಪಷ್ಟೀಕರಣ ಕೊಡಲು ಈ ಪತ್ರಿಕಾಗೋಷ್ಠಿ ಆಯೋಜಿಸಿದ್ದೇನೆ.

ಮೊದಲನೇಯದಾಗಿ 2018ರ ವಿಧಾನಸಭಾ ಚುನಾವಣೆಯಲ್ಲಿ ಬಿಎಸ್‍ಪಿ ಮತ್ತು ಜೆಡಿಎಸ್ ಪಕ್ಷಗಳು ಚುನಾವಣಾ ಪೂರ್ವ ಹೊಂದಾಣಿಕೆ ಮಾಡಿಕೊಂಡು ಚುನಾವಣೆ ಎದುರಿಸಿದೆವು. 20:204 ಆಧಾರದಲ್ಲಿ 20 ರಲ್ಲಿ ಕೊಳ್ಳೇಗಾಲ ಒಂದು ಕ್ಷೇತ್ರದಲ್ಲಿ ನಾನು ಗೆದ್ದಿದ್ದೆ. ಅತಂತ್ರ ವಿಧಾನಸಭೆಯಲ್ಲಿ ಜೆಡಿಎಸ್ ಕಾಂಗ್ರೆಸ್ ಮತ್ತು ಬಿಎಸ್‍ಪಿ ಮೈತ್ರಿ ಸರ್ಕಾರ ರಚನೆಯಾಯಿತು. ಬೆಹನ್ ಮಾಯಾವತಿಯವರ ಆದೇಶದ ಮೇರೆಗೆ ನಾನು ನಾಲ್ಕು ತಿಂಗಳ ಕಾಲ ಶಿಕ್ಷಣ ಸಚಿವನಾಗಿ ಯಶಸ್ವಿಯಾಗಿ ಕೆಲಸ ಮಾಡಿದ್ದೇನೆ

4 ತಿಂಗಳ ನಂತರ ಬೆಹನ್ ಜಿ ದೆಹಲಿಗೆ ಕರೆಸಿಕೊಂಡರು ಮತ್ತು ಮಂತ್ರಿ ಪದವಿಗೆ ರಾಜೀನಾಮೆ ಕೊಡು ಎಂದರು. ಕಾರಣ: ಮಧ್ಯಪ್ರದೆಶ ಮತ್ತು ರಾಜಸ್ಥಾನದಲ್ಲಿ ಮಹಾಘಟಬಂಧನ್ ಎಂಬ ತೀರ್ಮಾನಕ್ಕೆ ಕಾಂಗ್ರೆಸ್ ನವರು ಬದ್ಧರಾಗುತ್ತಿಲ್ಲ. ಹಾಗಾಗಿ ಕಾಂಗ್ರೆಸ್ ಜೊತೆಗಿರುವ ಕ್ಯಾಬಿನೆಟ್ ನಲ್ಲಿ ನೀನಿರುವುದು ಬೇಡ ಎಂದರು. ನಾನು ದೂಸರಾ ಮಾತಾಡದೇ ರಾಜೀನಾಮೆ ನೀಡಿದೆ.

ಮೂರ್ನಾಲ್ಕು ದಿನ ಮುಖ್ಯಮಂತ್ರಿಗಳು ರಾಜೀನಾಮೆ ಒಪ್ಪಿರಲಿಲ್ಲ. ಕೊನೆಗೆ ಮಾಯಾವತಿಯವರ ಸೂಚನೆಯ ಮೇರೆಗೆ ಒಪ್ಪಿಕೊಂಡರು. ಅದಾದಮೇಲೆ ನಾನು ನನ್ನ ಕ್ಷೇತ್ರದಲ್ಲಿ ಜನರ ಜೊತೆ ಕೆಲಸ ಮಾಡುತ್ತಿದ್ದೆ

2019ರ ಲೋಕಸಭಾ ಚುನಾವಣೆಯಲ್ಲಿ ಬೆಹನ್ ಮಾಯಾವತಿಯವರ ಆದೇಶದ ಮೇರೆಗೆ ಯಾರ ಜೊತೆಗೂ ಹೊಂದಾಣಿಕೆ ಮಾಡಿಕೊಳ್ಳದೇ 28 ಕ್ಷೇತ್ರಗಳಲ್ಲಿಯೂ ಅಭ್ಯರ್ಥಿಗಳನ್ನು ಹಾಕಿ ಸ್ವತಂತ್ರವಾಗಿ ಸ್ಪರ್ಧಿಸಿದೆವು. ಆಗ 4,12,382 ಮತ ಪಡೆದೆವು. 1.5% ಮತಪ್ರಮಾಣ ಬಂದಿತ್ತು. ಚುನಾವಣೆಯ ನಂತರ ರಿವ್ಯೂ ಮಾಡಲಿಕ್ಕೆ ಜೂನ್ 23ಕ್ಕೆ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ನಡೆಯಿತು.

ಅಲ್ಲಿ ನಾನು ಮುಂಚೆ ಈ ಸಮ್ಮಿಶ್ರ ಸರ್ಕಾರಕ್ಕೆ ನಾನು ಬೆಂಬಲಿಗನಾಗಿ ಇದ್ದೆ. ಲೋಕಸಭೆಯಲ್ಲಿ ಅವರ ವಿರುದ್ಧ ಹೋರಾಟ ಮಾಡಿರುವುದರಿಂದ ಈಗ ನಾನು ಏನು ಮಾಡಬೇಕೆಂದು ಕೇಳಿದ್ದೆ. ಆಗ ಅವರು ಸ್ವತಂತ್ರವಾಗಿರು ಎಂದಿದ್ದರು. ವಿರೋಧ ಪಕ್ಷಕ್ಕೂ ಬೆಂಬಲ ಕೊಡಬೇಡ ಅಂದಿದ್ದರು.
ಹಾಗಾಗಿ ನಾನು ಸ್ಪೀಕರ್ ರವರಿಗೆ ಪತ್ರ ಬರೆದು ಪ್ರತ್ಯೇಕ ಆಸನ ಕೊಡಿ ಎಂದು ಕೇಳಿದ್ದೆ. ಅದು ನಿಗಧಿಯಾಯಿತು. ವಿಶ್ವಾಸಮತ ಯಾಚನೆ ಪ್ರಕ್ರಿಯೆ ಶುರುವಾಯಿತು.

ಡಾ. ಅಶೋಕ್ ಸಿದ್ಧಾರ್ಥ್ ಸಾಹೇಬರು, ಉತ್ತರ ಪ್ರದೇಶದ ರಾಜ್ಯಸಭಾ ಸದಸ್ಯರು. ನಮಗೆ ಉಸ್ತುವಾರಿ ಅವರೆ. ಅವರ ಬಳಿ ಈ ವಿಶ್ವಾಸಮತ ಯಾಚನೆಯಲ್ಲಿ ನಾನು ಏನು ಮಾಡಬೇಕು ಎಂದು ಕೇಳಿದೆ. ಅವರು ಮಾಯಾವತಿಯವರೊಡನೆ ಮಾತನಾಡಿ ಹೇಳುತ್ತೇನೆ ಎಂದಿದ್ದರು. ಕೊನೆಗ ಮಾತನಾಡಿ ಅವರು ತಟಸ್ಥವಾಗಿರು ಎಂದು ಹೇಳಿದ್ದರು. ಅವರು ತಟಸ್ಥವಾಗಿರುವಂತೆ ಹೇಳಿದ್ದರಿಂದ ನಾನು ವಿಧಾನಸಭೆಗೆ ಭಾಗವಹಿಸಲಿಲ್ಲ. ನಾನು ನನ್ನ ಕ್ಷೇತ್ರದಲ್ಲಿದ್ದೆ.

15 ನೇ ಸೋಮವಾರ ನನ್ನ ಕ್ಷೇತ್ರದ ಅಗರ ಗ್ರಾ.ಪಂ ಸದಸ್ಯ ಅಪಘಾತದಲ್ಲಿ ಅಕಾಲಿಕ ಮರಣದಲ್ಲಿ ತುತ್ತಾಗಿದ್ದರಿಂದ ಅವರ ಕುಟುಂಬದ ಜೊತೆ ಇದ್ದೆ. ಅಸೆಂಬ್ಲಿಗೆ ಹಾಜರಾಗುವುದಿಲ್ಲ ಎಂದು ಮೊದಲೇ ತಿಳಿಸಿದ್ದೆ. ಇಷ್ಟು ದಿನ ನಾನು ಹೊರಗೆ ಇದ್ದೆ. ಇಂದು ಬೆಂಗಳೂರಿಗೆ ಬಂದಿದ್ದೇನೆ.

ನಾನು ನಮ್ಮ ಹೈಕಮಾಂಡ್ ನ ಯಾವುದೇ ಆದೇಶವನ್ನು ಉಲ್ಲಂಘನೆ ಮಾಡಿಲ್ಲ. ನಾನು ಅಶಿಸ್ತಿನಿಂದ ನಡೆದುಕೊಂಡಿಲ್ಲ. ಮಯಾವತಿಯವರು ಟ್ವೀಟ್ ಮಾಡಿದ್ದಾರೆ ಎಂದು ಹೇಳಿದ್ದಾರೆ. ನನಗೆ ಟ್ವಿಟ್ ಎಲ್ಲಾ ಗೊತ್ತಾಗೋಲ್ಲ. ಅದು ನನಗೆ ಬರೋದು ಇಲ್ಲ.

ನಾನು ಪಕ್ಷದ ಆದೇಶ ಉಲ್ಲಂಘಿಸಿಲ್ಲ. ಇದು ಕಮ್ಯುನಿಕೇಷನ್ ಗ್ಯಾಪ್ ನಿಂದ ಹೀಗೆ ಆಗಿದೆ. ಇದು ಸರಿ ಹೋಗುತ್ತೆ. ನಾನು ರಾಜ್ಯದ ಮೂರು ಪಕ್ಷಗಳಲ್ಲಿ ಯಾರ ಪರವೂ ಇಲ್ಲ, ಯಾರ ವಿರುದ್ಧವೂ ಇಲ್ಲ. ತಟಸ್ಥನಾಗಿದ್ದೇನೆ. ಇದನ್ನು ಮಹಾಜನತೆಗೆ ತಿಳಿಸಬೇಕೆಂದು ಕೋರುತ್ತೇನೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಲ್ಲಿಕಾರ್ಜುನ ಖರ್ಗೆ ಸಭೆಯ ನಂತರ ‘ಶುದ್ಧೀಕರಣ’ ವಿವಾದ: ಅಪರಿಚಿತರ ವಿರುದ್ಧ ಎಫ್‌ಐಆರ್, ತೀವ್ರ ಆಕ್ರೋಶ ವ್ಯಕ್ತಪಡಿಸಿದ ಕಾಂಗ್ರೆಸ್!

ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸಾರ್ವಜನಿಕ ಸಭೆ ನಡೆದ ನಂತರ, ಆ ಮೈದಾನವನ್ನು 'ಶುದ್ಧೀಕರಣ' (ಶುದ್ಧೀಕರಣ ಯಜ್ಞ) ಗೊಳಿಸಿದ ವಿವಾದಾತ್ಮಕ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲ್ದ್ವಾನಿಯ ಕೊತ್ವಾಲಿ...

ದೆಹಲಿ ಮತದಾರರ ಪಟ್ಟಿಗೆ ರಾಘವ್ ಚಡ್ಡಾ ಹೆಸರು ಸೇರ್ಪಡೆ; ಸೂಕ್ತ ಪ್ರಕ್ರಿಯೆ ಅನುಸರಿಸಿಲ್ಲ ಎಂದು ಎಎಪಿ ಆರೋಪ

ರಾಷ್ಟ್ರ ರಾಜಧಾನಿಯ ಮತದಾರರ ಪಟ್ಟಿಯ ಪ್ರಸ್ತುತ ನಡೆಯುತ್ತಿರುವ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಅಡಿಯಲ್ಲಿ, ಪಂಜಾಬ್‌ನ ಬಿಜೆಪಿ ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರನ್ನು ದೆಹಲಿಯ ಮತದಾರರ ಪಟ್ಟಿಗೆ ಸೇರಿಸಲಾಗಿದೆ ಎಂದು ಚುನಾವಣಾ...

ಮಲ್ಲಿಕಾರ್ಜುನ ಖರ್ಗೆ ಭಾಷಣ ಮಾಡಿದ ವೇದಿಕೆ ‘ಶುದ್ಧೀಕರಣ’ : 29 ದಿನಗಳ ನಂತರ ಎಫ್‌ಐಆರ್ ದಾಖಲು

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ್ದ ಉತ್ತರಾಖಂಡದ ಹಲ್ದ್ವಾನಿಯ ವೇದಿಕೆಯೊಂದರಲ್ಲಿ 'ಶುದ್ಧೀಕರಣ' ನಡೆದ ಇಪ್ಪತ್ತೊಂಬತ್ತು ದಿನಗಳ ನಂತರ, ಪೊಲೀಸರು ಮಂಗಳವಾರ (ಸೆಪ್ಟೆಂಬರ್ 8) ಎಸ್‌ಸಿ/ಎಸ್‌ಟಿ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ...

‘ಪ್ರೊ. ಸಿಎನ್ಆರ್ ರಾವ್‌ ಅವರಿಗೆ ನೋಟಿಸ್ ಕೊಟ್ಟಿಲ್ಲ..’; ಚುನಾವಣಾ ಆಯೋಗದ ಸ್ಪಷ್ಟನೆ

ಕರ್ನಾಟಕದ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (ಎಸ್‌ಐಆರ್) ವೇಳೆ ಹೆಸರಿನ ಕಾಗುಣಿತದಲ್ಲಿನ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ, ದೇಶದ ಪ್ರಸಿದ್ಧ ವಿಜ್ಞಾನಿಗಳಲ್ಲಿ ಒಬ್ಬರಾದ ಭಾರತರತ್ನ ಪ್ರೊ. ಸಿ.ಎನ್.ಆರ್. ರಾವ್ ಅವರಿಗೆ ತಮ್ಮ ಗುರುತನ್ನು ಸಾಬೀತುಪಡಿಸಲು...

‘ಬಂಗಾಳಿಗಳು ಮೀನು ಇಲ್ಲದೆ ಬದುಕಲು ಸಾಧ್ಯವಿಲ್ಲ’; ಆಹಾರ ಪದ್ಧತಿ ನಿರ್ಧಾರ ಬಿಜೆಪಿ ಕೆಲಸವಲ್ಲ: ಬಿಜೆಪಿ ಮುಖ್ಯಸ್ಥ ಸಮಿಕ್ ಭಟ್ಟಾಚಾರ್ಯ 

ಕೊಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಕೆಲವೇ ತಿಂಗಳುಗಳಲ್ಲಿ ದುರ್ಗಾ ಪೂಜೆ ಮತ್ತು ನವರಾತ್ರಿ ಆಚರಣೆಗಳ ಸಂದರ್ಭದಲ್ಲಿ ಆಹಾರ ಪದ್ಧತಿಯ ಕುರಿತು ಕೆಲವು ಧಾರ್ಮಿಕ ನಾಯಕರು ಹಾಗೂ ವಿಶ್ವ ಹಿಂದೂ...

ಮತದಾರ ಇರುವುದು ವಿದೇಶದಲ್ಲಿ, ಆದರೆ ವಿಚಾರಣೆ ನಡೆಯುತ್ತಿರುವುದು ಇಲ್ಲಿ: ಕರ್ನಾಟಕ SIR ತಂದಿಟ್ಟ ಧರ್ಮಸಂಕಟ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ, ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿದ್ದ ಅನೇಕ ಅನಿವಾಸಿ ಕನ್ನಡಿಗರಿಗೆ ಬಿಸಿ ತುಪ್ಪವಾಗಿ ಪರಿಣಮಿಸಿದೆ. ಹೆಸರಿನಲ್ಲಿನ ವ್ಯತ್ಯಾಸ, ವಯಸ್ಸಿನ ವ್ಯತ್ಯಾಸ...

SIR ತಂದಿಟ್ಟ ಸಂಕಷ್ಟ : ದಾಖಲೆ ಹೊಂದಿಸಲು ಅಲೆಮಾರಿಗಳ ಅಲೆದಾಟ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಭಾಗವಾಗಿ ಅನ್‌ಮ್ಯಾಪ್ಡ್ ಮತ್ತು ಅನಾಮಲಿಸ್ ಮತದಾರರಿಗೆ ನೋಟಿಸ್ ನೀಡಿ, ದಾಖಲೆಗಳ ಪರಿಶೀಲನೆ ಮಾಡುವ ಪ್ರಕ್ರಿಯೆ ನಡೆಯುತ್ತಿದೆ. ಈಗಾಗಲೇ 23,45,428 ಅನ್‌ ಮ್ಯಾಪ್ಡ್ (ಪ್ರೊಜೆನಿ ಮ್ಯಾಪಿಂಗ್...

ಸಚಿವ ಸತೀಶ್ ಜಾರಕಿಹೊಳಿ, ಪುತ್ರಿ ಪ್ರಿಯಾಂಕಾ ನಿವಾಸಗಳ ಮೇಲೆ ಇಡಿ ದಾಳಿ: 18ಕ್ಕೂ ಹೆಚ್ಚು ಸ್ಥಳಗಳಲ್ಲಿ ಶೋಧ

ಕರ್ನಾಟಕದ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹಾಗೂ ಅವರ ಪುತ್ರಿ, ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಅವರಿಗೆ ಸೇರಿದ ನಿವಾಸಗಳು ಮತ್ತು ಆಸ್ತಿಪಾಸ್ತಿಗಳ ಮೇಲೆ ಜಾರಿ ನಿರ್ದೇಶನಾಲಯ (ಇಡಿ)...

ಮೊಬೈಲ್ ಪತ್ತೆ ಪ್ರಕರಣ: ಪ್ರಜ್ವಲ್ ರೇವಣ್ಣ 2 ದಿನ ಪೊಲೀಸ್ ಕಸ್ಟಡಿಗೆ

ಅತ್ಯಾಚಾರ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿ ಸಜಾ ಕೈದಿಯಾಗಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಮತ್ತೊಂದು ಕಾನೂನು ಸಂಕಷ್ಟ ಎದುರಾಗಿದೆ. ಜೈಲಿನ ಅವರ ಕೊಠಡಿಯಲ್ಲಿ ಅಕ್ರಮವಾಗಿ ಮೊಬೈಲ್...

ರಾಜ್ಯದಲ್ಲಿ ಅವಧಿ ಮೀರಿದ ಆಹಾರ ಪೂರೈಕೆಯ ಬೃಹತ್ ದಂಧೆ: ₹1.43 ಕೋಟಿಯ ಉತ್ಪನ್ನಗಳು ಜಪ್ತಿ

ಆನ್‌ಲೈನ್ ಮತ್ತು ಇ-ಕಾಮರ್ಸ್ ವೇದಿಕೆಗಳ ಮೂಲಕ ಸಾರ್ವಜನಿಕರಿಗೆ ಅವಧಿ ಮೀರಿದ ಹಾಗೂ ಕಳಪೆ ಗುಣಮಟ್ಟದ ಆಹಾರ ಉತ್ಪನ್ನಗಳನ್ನು ಸರಬರಾಜು ಮಾಡುತ್ತಿದ್ದ ಬೃಹತ್ ದಂಧೆಯನ್ನು ಕರ್ನಾಟಕ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ...