Homeಕರ್ನಾಟಕನಾನು ಪಕ್ಷದ ಆದೇಶ ಉಲ್ಲಂಘಿಸಿಲ್ಲ. ಇದು ಕಮ್ಯುನಿಕೇಷನ್ ಗ್ಯಾಪ್ ನಿಂದ ಹೀಗೆ ಆಗಿದೆ: ಎನ್.ಮಹೇಶ್

ನಾನು ಪಕ್ಷದ ಆದೇಶ ಉಲ್ಲಂಘಿಸಿಲ್ಲ. ಇದು ಕಮ್ಯುನಿಕೇಷನ್ ಗ್ಯಾಪ್ ನಿಂದ ಹೀಗೆ ಆಗಿದೆ: ಎನ್.ಮಹೇಶ್

- Advertisement -
- Advertisement -

ನಿನ್ನೆ ಸದನದಲ್ಲಿ ನಡೆದ ವಿಶ್ವಾಸಮತ ಯಾಚನೆಯ ಪ್ರಕ್ರಿಯೆಗೆ ಗೈರು ಹಾಜರಾಗುವ ಮೂಲಕ ಬಿ.ಎಸ್.ಪಿ ಪಕ್ಷದಿಂದ ಉಚ್ಚಾಟಿತರಾಗಿದ್ದ ಎನ್ ಮಹೇಶ್ ರವರು ಇಂದು ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ. ಅಲ್ಲಿ ನಾನು ಪಕ್ಷದ ಆದೇಶ ಉಲ್ಲಂಘಿಸಿಲ್ಲ. ಇದು ಕಮ್ಯುನಿಕೇಷನ್ ಗ್ಯಾಪ್ ನಿಂದ ಹೀಗೆ ಆಗಿದೆ ಎಂದು ಸ್ಪಷ್ಟೀಕರಣ ನೀಡಿದ್ದಾರೆ. ಎನ್ ಮಹೇಶ್ ರವರು ಮಾತಾಡಿದ ಪೂರ್ಣ ವಿವರ ಇಲ್ಲಿದೆ.

ನಾನು ಬೆಂಗಳೂರಿಗೆ ಬಂದಾಗ ಪ್ರಿಂಟ್ ಮಾಧ್ಯಮಗಳಲ್ಲಿ ನನ್ನನ್ನು ಉಚ್ಚಾಟನೆ ಮಾಡಿರುವ ಮಾಹಿತಿ ತಿಳಿಯಿತು. ಮುದ್ರಣ ಮಾಧ್ಯಮಗಳಲ್ಲಿ ಟ್ವಿಟ್ಟರ್ ಮೂಲಕ ಹೇಳಿದ್ದಾರೆ ಎಂದು ಗಮನಿಸಿದೆ. ಕಳೆದ ಒಂದು ವಾರದಿಂದ ನಡೆಯುತ್ತಿರುವ ಸದನದ ವಿಶ್ವಾಸಮತ ಮತದಾನದ ಪ್ರಕ್ರಿಯೆಯಲ್ಲಿ ನಾನು ಭಾಗವಹಿಸಿಲ್ಲ.. ಆ ಕಾರಣಕ್ಕೆ ಉಚ್ಚಾಟನೆ ಮಾಡಲಾಗಿದೆ ಎನ್ನಲಾಗಿದೆ. ಅದಕ್ಕೆ ಸ್ಪಷ್ಟೀಕರಣ ಕೊಡಲು ಈ ಪತ್ರಿಕಾಗೋಷ್ಠಿ ಆಯೋಜಿಸಿದ್ದೇನೆ.

ಮೊದಲನೇಯದಾಗಿ 2018ರ ವಿಧಾನಸಭಾ ಚುನಾವಣೆಯಲ್ಲಿ ಬಿಎಸ್‍ಪಿ ಮತ್ತು ಜೆಡಿಎಸ್ ಪಕ್ಷಗಳು ಚುನಾವಣಾ ಪೂರ್ವ ಹೊಂದಾಣಿಕೆ ಮಾಡಿಕೊಂಡು ಚುನಾವಣೆ ಎದುರಿಸಿದೆವು. 20:204 ಆಧಾರದಲ್ಲಿ 20 ರಲ್ಲಿ ಕೊಳ್ಳೇಗಾಲ ಒಂದು ಕ್ಷೇತ್ರದಲ್ಲಿ ನಾನು ಗೆದ್ದಿದ್ದೆ. ಅತಂತ್ರ ವಿಧಾನಸಭೆಯಲ್ಲಿ ಜೆಡಿಎಸ್ ಕಾಂಗ್ರೆಸ್ ಮತ್ತು ಬಿಎಸ್‍ಪಿ ಮೈತ್ರಿ ಸರ್ಕಾರ ರಚನೆಯಾಯಿತು. ಬೆಹನ್ ಮಾಯಾವತಿಯವರ ಆದೇಶದ ಮೇರೆಗೆ ನಾನು ನಾಲ್ಕು ತಿಂಗಳ ಕಾಲ ಶಿಕ್ಷಣ ಸಚಿವನಾಗಿ ಯಶಸ್ವಿಯಾಗಿ ಕೆಲಸ ಮಾಡಿದ್ದೇನೆ

4 ತಿಂಗಳ ನಂತರ ಬೆಹನ್ ಜಿ ದೆಹಲಿಗೆ ಕರೆಸಿಕೊಂಡರು ಮತ್ತು ಮಂತ್ರಿ ಪದವಿಗೆ ರಾಜೀನಾಮೆ ಕೊಡು ಎಂದರು. ಕಾರಣ: ಮಧ್ಯಪ್ರದೆಶ ಮತ್ತು ರಾಜಸ್ಥಾನದಲ್ಲಿ ಮಹಾಘಟಬಂಧನ್ ಎಂಬ ತೀರ್ಮಾನಕ್ಕೆ ಕಾಂಗ್ರೆಸ್ ನವರು ಬದ್ಧರಾಗುತ್ತಿಲ್ಲ. ಹಾಗಾಗಿ ಕಾಂಗ್ರೆಸ್ ಜೊತೆಗಿರುವ ಕ್ಯಾಬಿನೆಟ್ ನಲ್ಲಿ ನೀನಿರುವುದು ಬೇಡ ಎಂದರು. ನಾನು ದೂಸರಾ ಮಾತಾಡದೇ ರಾಜೀನಾಮೆ ನೀಡಿದೆ.

ಮೂರ್ನಾಲ್ಕು ದಿನ ಮುಖ್ಯಮಂತ್ರಿಗಳು ರಾಜೀನಾಮೆ ಒಪ್ಪಿರಲಿಲ್ಲ. ಕೊನೆಗೆ ಮಾಯಾವತಿಯವರ ಸೂಚನೆಯ ಮೇರೆಗೆ ಒಪ್ಪಿಕೊಂಡರು. ಅದಾದಮೇಲೆ ನಾನು ನನ್ನ ಕ್ಷೇತ್ರದಲ್ಲಿ ಜನರ ಜೊತೆ ಕೆಲಸ ಮಾಡುತ್ತಿದ್ದೆ

2019ರ ಲೋಕಸಭಾ ಚುನಾವಣೆಯಲ್ಲಿ ಬೆಹನ್ ಮಾಯಾವತಿಯವರ ಆದೇಶದ ಮೇರೆಗೆ ಯಾರ ಜೊತೆಗೂ ಹೊಂದಾಣಿಕೆ ಮಾಡಿಕೊಳ್ಳದೇ 28 ಕ್ಷೇತ್ರಗಳಲ್ಲಿಯೂ ಅಭ್ಯರ್ಥಿಗಳನ್ನು ಹಾಕಿ ಸ್ವತಂತ್ರವಾಗಿ ಸ್ಪರ್ಧಿಸಿದೆವು. ಆಗ 4,12,382 ಮತ ಪಡೆದೆವು. 1.5% ಮತಪ್ರಮಾಣ ಬಂದಿತ್ತು. ಚುನಾವಣೆಯ ನಂತರ ರಿವ್ಯೂ ಮಾಡಲಿಕ್ಕೆ ಜೂನ್ 23ಕ್ಕೆ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ನಡೆಯಿತು.

ಅಲ್ಲಿ ನಾನು ಮುಂಚೆ ಈ ಸಮ್ಮಿಶ್ರ ಸರ್ಕಾರಕ್ಕೆ ನಾನು ಬೆಂಬಲಿಗನಾಗಿ ಇದ್ದೆ. ಲೋಕಸಭೆಯಲ್ಲಿ ಅವರ ವಿರುದ್ಧ ಹೋರಾಟ ಮಾಡಿರುವುದರಿಂದ ಈಗ ನಾನು ಏನು ಮಾಡಬೇಕೆಂದು ಕೇಳಿದ್ದೆ. ಆಗ ಅವರು ಸ್ವತಂತ್ರವಾಗಿರು ಎಂದಿದ್ದರು. ವಿರೋಧ ಪಕ್ಷಕ್ಕೂ ಬೆಂಬಲ ಕೊಡಬೇಡ ಅಂದಿದ್ದರು.
ಹಾಗಾಗಿ ನಾನು ಸ್ಪೀಕರ್ ರವರಿಗೆ ಪತ್ರ ಬರೆದು ಪ್ರತ್ಯೇಕ ಆಸನ ಕೊಡಿ ಎಂದು ಕೇಳಿದ್ದೆ. ಅದು ನಿಗಧಿಯಾಯಿತು. ವಿಶ್ವಾಸಮತ ಯಾಚನೆ ಪ್ರಕ್ರಿಯೆ ಶುರುವಾಯಿತು.

ಡಾ. ಅಶೋಕ್ ಸಿದ್ಧಾರ್ಥ್ ಸಾಹೇಬರು, ಉತ್ತರ ಪ್ರದೇಶದ ರಾಜ್ಯಸಭಾ ಸದಸ್ಯರು. ನಮಗೆ ಉಸ್ತುವಾರಿ ಅವರೆ. ಅವರ ಬಳಿ ಈ ವಿಶ್ವಾಸಮತ ಯಾಚನೆಯಲ್ಲಿ ನಾನು ಏನು ಮಾಡಬೇಕು ಎಂದು ಕೇಳಿದೆ. ಅವರು ಮಾಯಾವತಿಯವರೊಡನೆ ಮಾತನಾಡಿ ಹೇಳುತ್ತೇನೆ ಎಂದಿದ್ದರು. ಕೊನೆಗ ಮಾತನಾಡಿ ಅವರು ತಟಸ್ಥವಾಗಿರು ಎಂದು ಹೇಳಿದ್ದರು. ಅವರು ತಟಸ್ಥವಾಗಿರುವಂತೆ ಹೇಳಿದ್ದರಿಂದ ನಾನು ವಿಧಾನಸಭೆಗೆ ಭಾಗವಹಿಸಲಿಲ್ಲ. ನಾನು ನನ್ನ ಕ್ಷೇತ್ರದಲ್ಲಿದ್ದೆ.

15 ನೇ ಸೋಮವಾರ ನನ್ನ ಕ್ಷೇತ್ರದ ಅಗರ ಗ್ರಾ.ಪಂ ಸದಸ್ಯ ಅಪಘಾತದಲ್ಲಿ ಅಕಾಲಿಕ ಮರಣದಲ್ಲಿ ತುತ್ತಾಗಿದ್ದರಿಂದ ಅವರ ಕುಟುಂಬದ ಜೊತೆ ಇದ್ದೆ. ಅಸೆಂಬ್ಲಿಗೆ ಹಾಜರಾಗುವುದಿಲ್ಲ ಎಂದು ಮೊದಲೇ ತಿಳಿಸಿದ್ದೆ. ಇಷ್ಟು ದಿನ ನಾನು ಹೊರಗೆ ಇದ್ದೆ. ಇಂದು ಬೆಂಗಳೂರಿಗೆ ಬಂದಿದ್ದೇನೆ.

ನಾನು ನಮ್ಮ ಹೈಕಮಾಂಡ್ ನ ಯಾವುದೇ ಆದೇಶವನ್ನು ಉಲ್ಲಂಘನೆ ಮಾಡಿಲ್ಲ. ನಾನು ಅಶಿಸ್ತಿನಿಂದ ನಡೆದುಕೊಂಡಿಲ್ಲ. ಮಯಾವತಿಯವರು ಟ್ವೀಟ್ ಮಾಡಿದ್ದಾರೆ ಎಂದು ಹೇಳಿದ್ದಾರೆ. ನನಗೆ ಟ್ವಿಟ್ ಎಲ್ಲಾ ಗೊತ್ತಾಗೋಲ್ಲ. ಅದು ನನಗೆ ಬರೋದು ಇಲ್ಲ.

ನಾನು ಪಕ್ಷದ ಆದೇಶ ಉಲ್ಲಂಘಿಸಿಲ್ಲ. ಇದು ಕಮ್ಯುನಿಕೇಷನ್ ಗ್ಯಾಪ್ ನಿಂದ ಹೀಗೆ ಆಗಿದೆ. ಇದು ಸರಿ ಹೋಗುತ್ತೆ. ನಾನು ರಾಜ್ಯದ ಮೂರು ಪಕ್ಷಗಳಲ್ಲಿ ಯಾರ ಪರವೂ ಇಲ್ಲ, ಯಾರ ವಿರುದ್ಧವೂ ಇಲ್ಲ. ತಟಸ್ಥನಾಗಿದ್ದೇನೆ. ಇದನ್ನು ಮಹಾಜನತೆಗೆ ತಿಳಿಸಬೇಕೆಂದು ಕೋರುತ್ತೇನೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...

ಗುಜರಾತ್| ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಹಲ್ಲೆ

ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಮಡಿ ಗ್ರಾಮದಲ್ಲಿ ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡುತ್ತಿದ್ದ ದಲಿತ ವರನ ಮೇಲೆ ಮೇಲ್ಜಾತಿಯ ಪುರುಷರ ಗುಂಪೊಂದು ಜಾತಿ ನಿಂದನೆ ಮಾಡಿ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಮೇ 10 ರಂದು...

ಆತಂಕಕಾರಿಯಾದ ಆನೆ ದಾಳಿ

ಆನೆ ದಾಳಿ ಹಿಂದೆಂದಿಗಿಂತಲೂ ದುಪ್ಪಟ್ಟಾಗಿದೆ. ಅರಣ್ಯಮಂತ್ರಿ ಈಶ್ವರ್ ಖಂಡ್ರೆಯವರ ಪ್ರಕಾರ ಆನೆಗಳ ಸಂಖ್ಯೆ ದುಪ್ಪಟ್ಟಾಗಿದೆ. ಕಾಡಿನ ಪ್ರಮಾಣ ಅಷ್ಟೆ ಇದೆ. ಅಂದರೆ ಕಾಡಿನ ಪ್ರಮಾಣ ಹೆಚ್ಚು ಮಾಡಬೇಕೆಂದರೆ ಮನುಷ್ಯರ ಆವಾಸ ಇಲ್ಲದೆ ಆನೆಗಳಿಗಾಗಿ...

ವೈದ್ಯಕೀಯ ಸೀಟುಗಳ ಹಂಚಿಕೆ ಕೇಂದ್ರೀಕರಣಕ್ಕೆ ದಕ್ಷಿಣದ ವಿರೋಧ; ನೀಟ್ ಪರೀಕ್ಷೆಯನ್ನೇ ರದ್ದುಗೊಳಿಸಲು ಇದು ಸಕಾಲ

ರಾಜ್ಯಪಟ್ಟಿಯಲ್ಲಿದ್ದ ಶಿಕ್ಷಣದ ಹಕ್ಕನ್ನು ನೀಟ್‌ ಹೆಸರಿನಲ್ಲಿ ಕೇಂದ್ರದ ಜಂಟಿ ಪಟ್ಟಿಗೆ ಸೇರಿಸುವ ಒಕ್ಕೂಟ ಸರ್ಕಾರದ ನಿರ್ಧಾರದಿಂದ ದಕ್ಷಿಣದ ರಾಜ್ಯಗಳು ಭಾರಿ ನಷ್ಟ ಅನುಭವಿಸುತ್ತಿವೆ. ಜೊತೆಗೆ, ನೀಟ್ ಪಾಸ್‌ ಮಾಡುವ ಒತ್ತಡ ತಾಳಲಾರದೆ ದೇಶದಾದ್ಯಂತ...

‘ಮತ’ ವ್ಯರ್ಥ ಮಾಡದ ಮತದಾರ: 2026ರಲ್ಲಿ ಕುಸಿಯಿತು ‘ನೋಟಾ’ ಅಬ್ಬರ

2026ರ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಾದ್ಯಂತ ಸುಮಾರು 10.9 ಲಕ್ಷ ಮತಗಳು 'ನೋಟಾ' (ಯಾರಿಗೂ ಮತವಿಲ್ಲ) ಪಾಲಾಗಿವೆ. ಆದರೆ, 2016 ಮತ್ತು 2021ರ ಚುನಾವಣೆಗಳಿಗೆ ಹೋಲಿಸಿದರೆ...

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...