Homeಕರ್ನಾಟಕನಾನು ಪಕ್ಷದ ಆದೇಶ ಉಲ್ಲಂಘಿಸಿಲ್ಲ. ಇದು ಕಮ್ಯುನಿಕೇಷನ್ ಗ್ಯಾಪ್ ನಿಂದ ಹೀಗೆ ಆಗಿದೆ: ಎನ್.ಮಹೇಶ್

ನಾನು ಪಕ್ಷದ ಆದೇಶ ಉಲ್ಲಂಘಿಸಿಲ್ಲ. ಇದು ಕಮ್ಯುನಿಕೇಷನ್ ಗ್ಯಾಪ್ ನಿಂದ ಹೀಗೆ ಆಗಿದೆ: ಎನ್.ಮಹೇಶ್

- Advertisement -
- Advertisement -

ನಿನ್ನೆ ಸದನದಲ್ಲಿ ನಡೆದ ವಿಶ್ವಾಸಮತ ಯಾಚನೆಯ ಪ್ರಕ್ರಿಯೆಗೆ ಗೈರು ಹಾಜರಾಗುವ ಮೂಲಕ ಬಿ.ಎಸ್.ಪಿ ಪಕ್ಷದಿಂದ ಉಚ್ಚಾಟಿತರಾಗಿದ್ದ ಎನ್ ಮಹೇಶ್ ರವರು ಇಂದು ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ. ಅಲ್ಲಿ ನಾನು ಪಕ್ಷದ ಆದೇಶ ಉಲ್ಲಂಘಿಸಿಲ್ಲ. ಇದು ಕಮ್ಯುನಿಕೇಷನ್ ಗ್ಯಾಪ್ ನಿಂದ ಹೀಗೆ ಆಗಿದೆ ಎಂದು ಸ್ಪಷ್ಟೀಕರಣ ನೀಡಿದ್ದಾರೆ. ಎನ್ ಮಹೇಶ್ ರವರು ಮಾತಾಡಿದ ಪೂರ್ಣ ವಿವರ ಇಲ್ಲಿದೆ.

ನಾನು ಬೆಂಗಳೂರಿಗೆ ಬಂದಾಗ ಪ್ರಿಂಟ್ ಮಾಧ್ಯಮಗಳಲ್ಲಿ ನನ್ನನ್ನು ಉಚ್ಚಾಟನೆ ಮಾಡಿರುವ ಮಾಹಿತಿ ತಿಳಿಯಿತು. ಮುದ್ರಣ ಮಾಧ್ಯಮಗಳಲ್ಲಿ ಟ್ವಿಟ್ಟರ್ ಮೂಲಕ ಹೇಳಿದ್ದಾರೆ ಎಂದು ಗಮನಿಸಿದೆ. ಕಳೆದ ಒಂದು ವಾರದಿಂದ ನಡೆಯುತ್ತಿರುವ ಸದನದ ವಿಶ್ವಾಸಮತ ಮತದಾನದ ಪ್ರಕ್ರಿಯೆಯಲ್ಲಿ ನಾನು ಭಾಗವಹಿಸಿಲ್ಲ.. ಆ ಕಾರಣಕ್ಕೆ ಉಚ್ಚಾಟನೆ ಮಾಡಲಾಗಿದೆ ಎನ್ನಲಾಗಿದೆ. ಅದಕ್ಕೆ ಸ್ಪಷ್ಟೀಕರಣ ಕೊಡಲು ಈ ಪತ್ರಿಕಾಗೋಷ್ಠಿ ಆಯೋಜಿಸಿದ್ದೇನೆ.

ಮೊದಲನೇಯದಾಗಿ 2018ರ ವಿಧಾನಸಭಾ ಚುನಾವಣೆಯಲ್ಲಿ ಬಿಎಸ್‍ಪಿ ಮತ್ತು ಜೆಡಿಎಸ್ ಪಕ್ಷಗಳು ಚುನಾವಣಾ ಪೂರ್ವ ಹೊಂದಾಣಿಕೆ ಮಾಡಿಕೊಂಡು ಚುನಾವಣೆ ಎದುರಿಸಿದೆವು. 20:204 ಆಧಾರದಲ್ಲಿ 20 ರಲ್ಲಿ ಕೊಳ್ಳೇಗಾಲ ಒಂದು ಕ್ಷೇತ್ರದಲ್ಲಿ ನಾನು ಗೆದ್ದಿದ್ದೆ. ಅತಂತ್ರ ವಿಧಾನಸಭೆಯಲ್ಲಿ ಜೆಡಿಎಸ್ ಕಾಂಗ್ರೆಸ್ ಮತ್ತು ಬಿಎಸ್‍ಪಿ ಮೈತ್ರಿ ಸರ್ಕಾರ ರಚನೆಯಾಯಿತು. ಬೆಹನ್ ಮಾಯಾವತಿಯವರ ಆದೇಶದ ಮೇರೆಗೆ ನಾನು ನಾಲ್ಕು ತಿಂಗಳ ಕಾಲ ಶಿಕ್ಷಣ ಸಚಿವನಾಗಿ ಯಶಸ್ವಿಯಾಗಿ ಕೆಲಸ ಮಾಡಿದ್ದೇನೆ

4 ತಿಂಗಳ ನಂತರ ಬೆಹನ್ ಜಿ ದೆಹಲಿಗೆ ಕರೆಸಿಕೊಂಡರು ಮತ್ತು ಮಂತ್ರಿ ಪದವಿಗೆ ರಾಜೀನಾಮೆ ಕೊಡು ಎಂದರು. ಕಾರಣ: ಮಧ್ಯಪ್ರದೆಶ ಮತ್ತು ರಾಜಸ್ಥಾನದಲ್ಲಿ ಮಹಾಘಟಬಂಧನ್ ಎಂಬ ತೀರ್ಮಾನಕ್ಕೆ ಕಾಂಗ್ರೆಸ್ ನವರು ಬದ್ಧರಾಗುತ್ತಿಲ್ಲ. ಹಾಗಾಗಿ ಕಾಂಗ್ರೆಸ್ ಜೊತೆಗಿರುವ ಕ್ಯಾಬಿನೆಟ್ ನಲ್ಲಿ ನೀನಿರುವುದು ಬೇಡ ಎಂದರು. ನಾನು ದೂಸರಾ ಮಾತಾಡದೇ ರಾಜೀನಾಮೆ ನೀಡಿದೆ.

ಮೂರ್ನಾಲ್ಕು ದಿನ ಮುಖ್ಯಮಂತ್ರಿಗಳು ರಾಜೀನಾಮೆ ಒಪ್ಪಿರಲಿಲ್ಲ. ಕೊನೆಗೆ ಮಾಯಾವತಿಯವರ ಸೂಚನೆಯ ಮೇರೆಗೆ ಒಪ್ಪಿಕೊಂಡರು. ಅದಾದಮೇಲೆ ನಾನು ನನ್ನ ಕ್ಷೇತ್ರದಲ್ಲಿ ಜನರ ಜೊತೆ ಕೆಲಸ ಮಾಡುತ್ತಿದ್ದೆ

2019ರ ಲೋಕಸಭಾ ಚುನಾವಣೆಯಲ್ಲಿ ಬೆಹನ್ ಮಾಯಾವತಿಯವರ ಆದೇಶದ ಮೇರೆಗೆ ಯಾರ ಜೊತೆಗೂ ಹೊಂದಾಣಿಕೆ ಮಾಡಿಕೊಳ್ಳದೇ 28 ಕ್ಷೇತ್ರಗಳಲ್ಲಿಯೂ ಅಭ್ಯರ್ಥಿಗಳನ್ನು ಹಾಕಿ ಸ್ವತಂತ್ರವಾಗಿ ಸ್ಪರ್ಧಿಸಿದೆವು. ಆಗ 4,12,382 ಮತ ಪಡೆದೆವು. 1.5% ಮತಪ್ರಮಾಣ ಬಂದಿತ್ತು. ಚುನಾವಣೆಯ ನಂತರ ರಿವ್ಯೂ ಮಾಡಲಿಕ್ಕೆ ಜೂನ್ 23ಕ್ಕೆ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ನಡೆಯಿತು.

ಅಲ್ಲಿ ನಾನು ಮುಂಚೆ ಈ ಸಮ್ಮಿಶ್ರ ಸರ್ಕಾರಕ್ಕೆ ನಾನು ಬೆಂಬಲಿಗನಾಗಿ ಇದ್ದೆ. ಲೋಕಸಭೆಯಲ್ಲಿ ಅವರ ವಿರುದ್ಧ ಹೋರಾಟ ಮಾಡಿರುವುದರಿಂದ ಈಗ ನಾನು ಏನು ಮಾಡಬೇಕೆಂದು ಕೇಳಿದ್ದೆ. ಆಗ ಅವರು ಸ್ವತಂತ್ರವಾಗಿರು ಎಂದಿದ್ದರು. ವಿರೋಧ ಪಕ್ಷಕ್ಕೂ ಬೆಂಬಲ ಕೊಡಬೇಡ ಅಂದಿದ್ದರು.
ಹಾಗಾಗಿ ನಾನು ಸ್ಪೀಕರ್ ರವರಿಗೆ ಪತ್ರ ಬರೆದು ಪ್ರತ್ಯೇಕ ಆಸನ ಕೊಡಿ ಎಂದು ಕೇಳಿದ್ದೆ. ಅದು ನಿಗಧಿಯಾಯಿತು. ವಿಶ್ವಾಸಮತ ಯಾಚನೆ ಪ್ರಕ್ರಿಯೆ ಶುರುವಾಯಿತು.

ಡಾ. ಅಶೋಕ್ ಸಿದ್ಧಾರ್ಥ್ ಸಾಹೇಬರು, ಉತ್ತರ ಪ್ರದೇಶದ ರಾಜ್ಯಸಭಾ ಸದಸ್ಯರು. ನಮಗೆ ಉಸ್ತುವಾರಿ ಅವರೆ. ಅವರ ಬಳಿ ಈ ವಿಶ್ವಾಸಮತ ಯಾಚನೆಯಲ್ಲಿ ನಾನು ಏನು ಮಾಡಬೇಕು ಎಂದು ಕೇಳಿದೆ. ಅವರು ಮಾಯಾವತಿಯವರೊಡನೆ ಮಾತನಾಡಿ ಹೇಳುತ್ತೇನೆ ಎಂದಿದ್ದರು. ಕೊನೆಗ ಮಾತನಾಡಿ ಅವರು ತಟಸ್ಥವಾಗಿರು ಎಂದು ಹೇಳಿದ್ದರು. ಅವರು ತಟಸ್ಥವಾಗಿರುವಂತೆ ಹೇಳಿದ್ದರಿಂದ ನಾನು ವಿಧಾನಸಭೆಗೆ ಭಾಗವಹಿಸಲಿಲ್ಲ. ನಾನು ನನ್ನ ಕ್ಷೇತ್ರದಲ್ಲಿದ್ದೆ.

15 ನೇ ಸೋಮವಾರ ನನ್ನ ಕ್ಷೇತ್ರದ ಅಗರ ಗ್ರಾ.ಪಂ ಸದಸ್ಯ ಅಪಘಾತದಲ್ಲಿ ಅಕಾಲಿಕ ಮರಣದಲ್ಲಿ ತುತ್ತಾಗಿದ್ದರಿಂದ ಅವರ ಕುಟುಂಬದ ಜೊತೆ ಇದ್ದೆ. ಅಸೆಂಬ್ಲಿಗೆ ಹಾಜರಾಗುವುದಿಲ್ಲ ಎಂದು ಮೊದಲೇ ತಿಳಿಸಿದ್ದೆ. ಇಷ್ಟು ದಿನ ನಾನು ಹೊರಗೆ ಇದ್ದೆ. ಇಂದು ಬೆಂಗಳೂರಿಗೆ ಬಂದಿದ್ದೇನೆ.

ನಾನು ನಮ್ಮ ಹೈಕಮಾಂಡ್ ನ ಯಾವುದೇ ಆದೇಶವನ್ನು ಉಲ್ಲಂಘನೆ ಮಾಡಿಲ್ಲ. ನಾನು ಅಶಿಸ್ತಿನಿಂದ ನಡೆದುಕೊಂಡಿಲ್ಲ. ಮಯಾವತಿಯವರು ಟ್ವೀಟ್ ಮಾಡಿದ್ದಾರೆ ಎಂದು ಹೇಳಿದ್ದಾರೆ. ನನಗೆ ಟ್ವಿಟ್ ಎಲ್ಲಾ ಗೊತ್ತಾಗೋಲ್ಲ. ಅದು ನನಗೆ ಬರೋದು ಇಲ್ಲ.

ನಾನು ಪಕ್ಷದ ಆದೇಶ ಉಲ್ಲಂಘಿಸಿಲ್ಲ. ಇದು ಕಮ್ಯುನಿಕೇಷನ್ ಗ್ಯಾಪ್ ನಿಂದ ಹೀಗೆ ಆಗಿದೆ. ಇದು ಸರಿ ಹೋಗುತ್ತೆ. ನಾನು ರಾಜ್ಯದ ಮೂರು ಪಕ್ಷಗಳಲ್ಲಿ ಯಾರ ಪರವೂ ಇಲ್ಲ, ಯಾರ ವಿರುದ್ಧವೂ ಇಲ್ಲ. ತಟಸ್ಥನಾಗಿದ್ದೇನೆ. ಇದನ್ನು ಮಹಾಜನತೆಗೆ ತಿಳಿಸಬೇಕೆಂದು ಕೋರುತ್ತೇನೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...