Homeಕರ್ನಾಟಕನಾನು ಪಕ್ಷದ ಆದೇಶ ಉಲ್ಲಂಘಿಸಿಲ್ಲ. ಇದು ಕಮ್ಯುನಿಕೇಷನ್ ಗ್ಯಾಪ್ ನಿಂದ ಹೀಗೆ ಆಗಿದೆ: ಎನ್.ಮಹೇಶ್

ನಾನು ಪಕ್ಷದ ಆದೇಶ ಉಲ್ಲಂಘಿಸಿಲ್ಲ. ಇದು ಕಮ್ಯುನಿಕೇಷನ್ ಗ್ಯಾಪ್ ನಿಂದ ಹೀಗೆ ಆಗಿದೆ: ಎನ್.ಮಹೇಶ್

- Advertisement -
- Advertisement -

ನಿನ್ನೆ ಸದನದಲ್ಲಿ ನಡೆದ ವಿಶ್ವಾಸಮತ ಯಾಚನೆಯ ಪ್ರಕ್ರಿಯೆಗೆ ಗೈರು ಹಾಜರಾಗುವ ಮೂಲಕ ಬಿ.ಎಸ್.ಪಿ ಪಕ್ಷದಿಂದ ಉಚ್ಚಾಟಿತರಾಗಿದ್ದ ಎನ್ ಮಹೇಶ್ ರವರು ಇಂದು ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ. ಅಲ್ಲಿ ನಾನು ಪಕ್ಷದ ಆದೇಶ ಉಲ್ಲಂಘಿಸಿಲ್ಲ. ಇದು ಕಮ್ಯುನಿಕೇಷನ್ ಗ್ಯಾಪ್ ನಿಂದ ಹೀಗೆ ಆಗಿದೆ ಎಂದು ಸ್ಪಷ್ಟೀಕರಣ ನೀಡಿದ್ದಾರೆ. ಎನ್ ಮಹೇಶ್ ರವರು ಮಾತಾಡಿದ ಪೂರ್ಣ ವಿವರ ಇಲ್ಲಿದೆ.

ನಾನು ಬೆಂಗಳೂರಿಗೆ ಬಂದಾಗ ಪ್ರಿಂಟ್ ಮಾಧ್ಯಮಗಳಲ್ಲಿ ನನ್ನನ್ನು ಉಚ್ಚಾಟನೆ ಮಾಡಿರುವ ಮಾಹಿತಿ ತಿಳಿಯಿತು. ಮುದ್ರಣ ಮಾಧ್ಯಮಗಳಲ್ಲಿ ಟ್ವಿಟ್ಟರ್ ಮೂಲಕ ಹೇಳಿದ್ದಾರೆ ಎಂದು ಗಮನಿಸಿದೆ. ಕಳೆದ ಒಂದು ವಾರದಿಂದ ನಡೆಯುತ್ತಿರುವ ಸದನದ ವಿಶ್ವಾಸಮತ ಮತದಾನದ ಪ್ರಕ್ರಿಯೆಯಲ್ಲಿ ನಾನು ಭಾಗವಹಿಸಿಲ್ಲ.. ಆ ಕಾರಣಕ್ಕೆ ಉಚ್ಚಾಟನೆ ಮಾಡಲಾಗಿದೆ ಎನ್ನಲಾಗಿದೆ. ಅದಕ್ಕೆ ಸ್ಪಷ್ಟೀಕರಣ ಕೊಡಲು ಈ ಪತ್ರಿಕಾಗೋಷ್ಠಿ ಆಯೋಜಿಸಿದ್ದೇನೆ.

ಮೊದಲನೇಯದಾಗಿ 2018ರ ವಿಧಾನಸಭಾ ಚುನಾವಣೆಯಲ್ಲಿ ಬಿಎಸ್‍ಪಿ ಮತ್ತು ಜೆಡಿಎಸ್ ಪಕ್ಷಗಳು ಚುನಾವಣಾ ಪೂರ್ವ ಹೊಂದಾಣಿಕೆ ಮಾಡಿಕೊಂಡು ಚುನಾವಣೆ ಎದುರಿಸಿದೆವು. 20:204 ಆಧಾರದಲ್ಲಿ 20 ರಲ್ಲಿ ಕೊಳ್ಳೇಗಾಲ ಒಂದು ಕ್ಷೇತ್ರದಲ್ಲಿ ನಾನು ಗೆದ್ದಿದ್ದೆ. ಅತಂತ್ರ ವಿಧಾನಸಭೆಯಲ್ಲಿ ಜೆಡಿಎಸ್ ಕಾಂಗ್ರೆಸ್ ಮತ್ತು ಬಿಎಸ್‍ಪಿ ಮೈತ್ರಿ ಸರ್ಕಾರ ರಚನೆಯಾಯಿತು. ಬೆಹನ್ ಮಾಯಾವತಿಯವರ ಆದೇಶದ ಮೇರೆಗೆ ನಾನು ನಾಲ್ಕು ತಿಂಗಳ ಕಾಲ ಶಿಕ್ಷಣ ಸಚಿವನಾಗಿ ಯಶಸ್ವಿಯಾಗಿ ಕೆಲಸ ಮಾಡಿದ್ದೇನೆ

4 ತಿಂಗಳ ನಂತರ ಬೆಹನ್ ಜಿ ದೆಹಲಿಗೆ ಕರೆಸಿಕೊಂಡರು ಮತ್ತು ಮಂತ್ರಿ ಪದವಿಗೆ ರಾಜೀನಾಮೆ ಕೊಡು ಎಂದರು. ಕಾರಣ: ಮಧ್ಯಪ್ರದೆಶ ಮತ್ತು ರಾಜಸ್ಥಾನದಲ್ಲಿ ಮಹಾಘಟಬಂಧನ್ ಎಂಬ ತೀರ್ಮಾನಕ್ಕೆ ಕಾಂಗ್ರೆಸ್ ನವರು ಬದ್ಧರಾಗುತ್ತಿಲ್ಲ. ಹಾಗಾಗಿ ಕಾಂಗ್ರೆಸ್ ಜೊತೆಗಿರುವ ಕ್ಯಾಬಿನೆಟ್ ನಲ್ಲಿ ನೀನಿರುವುದು ಬೇಡ ಎಂದರು. ನಾನು ದೂಸರಾ ಮಾತಾಡದೇ ರಾಜೀನಾಮೆ ನೀಡಿದೆ.

ಮೂರ್ನಾಲ್ಕು ದಿನ ಮುಖ್ಯಮಂತ್ರಿಗಳು ರಾಜೀನಾಮೆ ಒಪ್ಪಿರಲಿಲ್ಲ. ಕೊನೆಗೆ ಮಾಯಾವತಿಯವರ ಸೂಚನೆಯ ಮೇರೆಗೆ ಒಪ್ಪಿಕೊಂಡರು. ಅದಾದಮೇಲೆ ನಾನು ನನ್ನ ಕ್ಷೇತ್ರದಲ್ಲಿ ಜನರ ಜೊತೆ ಕೆಲಸ ಮಾಡುತ್ತಿದ್ದೆ

2019ರ ಲೋಕಸಭಾ ಚುನಾವಣೆಯಲ್ಲಿ ಬೆಹನ್ ಮಾಯಾವತಿಯವರ ಆದೇಶದ ಮೇರೆಗೆ ಯಾರ ಜೊತೆಗೂ ಹೊಂದಾಣಿಕೆ ಮಾಡಿಕೊಳ್ಳದೇ 28 ಕ್ಷೇತ್ರಗಳಲ್ಲಿಯೂ ಅಭ್ಯರ್ಥಿಗಳನ್ನು ಹಾಕಿ ಸ್ವತಂತ್ರವಾಗಿ ಸ್ಪರ್ಧಿಸಿದೆವು. ಆಗ 4,12,382 ಮತ ಪಡೆದೆವು. 1.5% ಮತಪ್ರಮಾಣ ಬಂದಿತ್ತು. ಚುನಾವಣೆಯ ನಂತರ ರಿವ್ಯೂ ಮಾಡಲಿಕ್ಕೆ ಜೂನ್ 23ಕ್ಕೆ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ನಡೆಯಿತು.

ಅಲ್ಲಿ ನಾನು ಮುಂಚೆ ಈ ಸಮ್ಮಿಶ್ರ ಸರ್ಕಾರಕ್ಕೆ ನಾನು ಬೆಂಬಲಿಗನಾಗಿ ಇದ್ದೆ. ಲೋಕಸಭೆಯಲ್ಲಿ ಅವರ ವಿರುದ್ಧ ಹೋರಾಟ ಮಾಡಿರುವುದರಿಂದ ಈಗ ನಾನು ಏನು ಮಾಡಬೇಕೆಂದು ಕೇಳಿದ್ದೆ. ಆಗ ಅವರು ಸ್ವತಂತ್ರವಾಗಿರು ಎಂದಿದ್ದರು. ವಿರೋಧ ಪಕ್ಷಕ್ಕೂ ಬೆಂಬಲ ಕೊಡಬೇಡ ಅಂದಿದ್ದರು.
ಹಾಗಾಗಿ ನಾನು ಸ್ಪೀಕರ್ ರವರಿಗೆ ಪತ್ರ ಬರೆದು ಪ್ರತ್ಯೇಕ ಆಸನ ಕೊಡಿ ಎಂದು ಕೇಳಿದ್ದೆ. ಅದು ನಿಗಧಿಯಾಯಿತು. ವಿಶ್ವಾಸಮತ ಯಾಚನೆ ಪ್ರಕ್ರಿಯೆ ಶುರುವಾಯಿತು.

ಡಾ. ಅಶೋಕ್ ಸಿದ್ಧಾರ್ಥ್ ಸಾಹೇಬರು, ಉತ್ತರ ಪ್ರದೇಶದ ರಾಜ್ಯಸಭಾ ಸದಸ್ಯರು. ನಮಗೆ ಉಸ್ತುವಾರಿ ಅವರೆ. ಅವರ ಬಳಿ ಈ ವಿಶ್ವಾಸಮತ ಯಾಚನೆಯಲ್ಲಿ ನಾನು ಏನು ಮಾಡಬೇಕು ಎಂದು ಕೇಳಿದೆ. ಅವರು ಮಾಯಾವತಿಯವರೊಡನೆ ಮಾತನಾಡಿ ಹೇಳುತ್ತೇನೆ ಎಂದಿದ್ದರು. ಕೊನೆಗ ಮಾತನಾಡಿ ಅವರು ತಟಸ್ಥವಾಗಿರು ಎಂದು ಹೇಳಿದ್ದರು. ಅವರು ತಟಸ್ಥವಾಗಿರುವಂತೆ ಹೇಳಿದ್ದರಿಂದ ನಾನು ವಿಧಾನಸಭೆಗೆ ಭಾಗವಹಿಸಲಿಲ್ಲ. ನಾನು ನನ್ನ ಕ್ಷೇತ್ರದಲ್ಲಿದ್ದೆ.

15 ನೇ ಸೋಮವಾರ ನನ್ನ ಕ್ಷೇತ್ರದ ಅಗರ ಗ್ರಾ.ಪಂ ಸದಸ್ಯ ಅಪಘಾತದಲ್ಲಿ ಅಕಾಲಿಕ ಮರಣದಲ್ಲಿ ತುತ್ತಾಗಿದ್ದರಿಂದ ಅವರ ಕುಟುಂಬದ ಜೊತೆ ಇದ್ದೆ. ಅಸೆಂಬ್ಲಿಗೆ ಹಾಜರಾಗುವುದಿಲ್ಲ ಎಂದು ಮೊದಲೇ ತಿಳಿಸಿದ್ದೆ. ಇಷ್ಟು ದಿನ ನಾನು ಹೊರಗೆ ಇದ್ದೆ. ಇಂದು ಬೆಂಗಳೂರಿಗೆ ಬಂದಿದ್ದೇನೆ.

ನಾನು ನಮ್ಮ ಹೈಕಮಾಂಡ್ ನ ಯಾವುದೇ ಆದೇಶವನ್ನು ಉಲ್ಲಂಘನೆ ಮಾಡಿಲ್ಲ. ನಾನು ಅಶಿಸ್ತಿನಿಂದ ನಡೆದುಕೊಂಡಿಲ್ಲ. ಮಯಾವತಿಯವರು ಟ್ವೀಟ್ ಮಾಡಿದ್ದಾರೆ ಎಂದು ಹೇಳಿದ್ದಾರೆ. ನನಗೆ ಟ್ವಿಟ್ ಎಲ್ಲಾ ಗೊತ್ತಾಗೋಲ್ಲ. ಅದು ನನಗೆ ಬರೋದು ಇಲ್ಲ.

ನಾನು ಪಕ್ಷದ ಆದೇಶ ಉಲ್ಲಂಘಿಸಿಲ್ಲ. ಇದು ಕಮ್ಯುನಿಕೇಷನ್ ಗ್ಯಾಪ್ ನಿಂದ ಹೀಗೆ ಆಗಿದೆ. ಇದು ಸರಿ ಹೋಗುತ್ತೆ. ನಾನು ರಾಜ್ಯದ ಮೂರು ಪಕ್ಷಗಳಲ್ಲಿ ಯಾರ ಪರವೂ ಇಲ್ಲ, ಯಾರ ವಿರುದ್ಧವೂ ಇಲ್ಲ. ತಟಸ್ಥನಾಗಿದ್ದೇನೆ. ಇದನ್ನು ಮಹಾಜನತೆಗೆ ತಿಳಿಸಬೇಕೆಂದು ಕೋರುತ್ತೇನೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...