Homeಕರ್ನಾಟಕನಾನು ಪಕ್ಷದ ಆದೇಶ ಉಲ್ಲಂಘಿಸಿಲ್ಲ. ಇದು ಕಮ್ಯುನಿಕೇಷನ್ ಗ್ಯಾಪ್ ನಿಂದ ಹೀಗೆ ಆಗಿದೆ: ಎನ್.ಮಹೇಶ್

ನಾನು ಪಕ್ಷದ ಆದೇಶ ಉಲ್ಲಂಘಿಸಿಲ್ಲ. ಇದು ಕಮ್ಯುನಿಕೇಷನ್ ಗ್ಯಾಪ್ ನಿಂದ ಹೀಗೆ ಆಗಿದೆ: ಎನ್.ಮಹೇಶ್

- Advertisement -
- Advertisement -

ನಿನ್ನೆ ಸದನದಲ್ಲಿ ನಡೆದ ವಿಶ್ವಾಸಮತ ಯಾಚನೆಯ ಪ್ರಕ್ರಿಯೆಗೆ ಗೈರು ಹಾಜರಾಗುವ ಮೂಲಕ ಬಿ.ಎಸ್.ಪಿ ಪಕ್ಷದಿಂದ ಉಚ್ಚಾಟಿತರಾಗಿದ್ದ ಎನ್ ಮಹೇಶ್ ರವರು ಇಂದು ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ. ಅಲ್ಲಿ ನಾನು ಪಕ್ಷದ ಆದೇಶ ಉಲ್ಲಂಘಿಸಿಲ್ಲ. ಇದು ಕಮ್ಯುನಿಕೇಷನ್ ಗ್ಯಾಪ್ ನಿಂದ ಹೀಗೆ ಆಗಿದೆ ಎಂದು ಸ್ಪಷ್ಟೀಕರಣ ನೀಡಿದ್ದಾರೆ. ಎನ್ ಮಹೇಶ್ ರವರು ಮಾತಾಡಿದ ಪೂರ್ಣ ವಿವರ ಇಲ್ಲಿದೆ.

ನಾನು ಬೆಂಗಳೂರಿಗೆ ಬಂದಾಗ ಪ್ರಿಂಟ್ ಮಾಧ್ಯಮಗಳಲ್ಲಿ ನನ್ನನ್ನು ಉಚ್ಚಾಟನೆ ಮಾಡಿರುವ ಮಾಹಿತಿ ತಿಳಿಯಿತು. ಮುದ್ರಣ ಮಾಧ್ಯಮಗಳಲ್ಲಿ ಟ್ವಿಟ್ಟರ್ ಮೂಲಕ ಹೇಳಿದ್ದಾರೆ ಎಂದು ಗಮನಿಸಿದೆ. ಕಳೆದ ಒಂದು ವಾರದಿಂದ ನಡೆಯುತ್ತಿರುವ ಸದನದ ವಿಶ್ವಾಸಮತ ಮತದಾನದ ಪ್ರಕ್ರಿಯೆಯಲ್ಲಿ ನಾನು ಭಾಗವಹಿಸಿಲ್ಲ.. ಆ ಕಾರಣಕ್ಕೆ ಉಚ್ಚಾಟನೆ ಮಾಡಲಾಗಿದೆ ಎನ್ನಲಾಗಿದೆ. ಅದಕ್ಕೆ ಸ್ಪಷ್ಟೀಕರಣ ಕೊಡಲು ಈ ಪತ್ರಿಕಾಗೋಷ್ಠಿ ಆಯೋಜಿಸಿದ್ದೇನೆ.

ಮೊದಲನೇಯದಾಗಿ 2018ರ ವಿಧಾನಸಭಾ ಚುನಾವಣೆಯಲ್ಲಿ ಬಿಎಸ್‍ಪಿ ಮತ್ತು ಜೆಡಿಎಸ್ ಪಕ್ಷಗಳು ಚುನಾವಣಾ ಪೂರ್ವ ಹೊಂದಾಣಿಕೆ ಮಾಡಿಕೊಂಡು ಚುನಾವಣೆ ಎದುರಿಸಿದೆವು. 20:204 ಆಧಾರದಲ್ಲಿ 20 ರಲ್ಲಿ ಕೊಳ್ಳೇಗಾಲ ಒಂದು ಕ್ಷೇತ್ರದಲ್ಲಿ ನಾನು ಗೆದ್ದಿದ್ದೆ. ಅತಂತ್ರ ವಿಧಾನಸಭೆಯಲ್ಲಿ ಜೆಡಿಎಸ್ ಕಾಂಗ್ರೆಸ್ ಮತ್ತು ಬಿಎಸ್‍ಪಿ ಮೈತ್ರಿ ಸರ್ಕಾರ ರಚನೆಯಾಯಿತು. ಬೆಹನ್ ಮಾಯಾವತಿಯವರ ಆದೇಶದ ಮೇರೆಗೆ ನಾನು ನಾಲ್ಕು ತಿಂಗಳ ಕಾಲ ಶಿಕ್ಷಣ ಸಚಿವನಾಗಿ ಯಶಸ್ವಿಯಾಗಿ ಕೆಲಸ ಮಾಡಿದ್ದೇನೆ

4 ತಿಂಗಳ ನಂತರ ಬೆಹನ್ ಜಿ ದೆಹಲಿಗೆ ಕರೆಸಿಕೊಂಡರು ಮತ್ತು ಮಂತ್ರಿ ಪದವಿಗೆ ರಾಜೀನಾಮೆ ಕೊಡು ಎಂದರು. ಕಾರಣ: ಮಧ್ಯಪ್ರದೆಶ ಮತ್ತು ರಾಜಸ್ಥಾನದಲ್ಲಿ ಮಹಾಘಟಬಂಧನ್ ಎಂಬ ತೀರ್ಮಾನಕ್ಕೆ ಕಾಂಗ್ರೆಸ್ ನವರು ಬದ್ಧರಾಗುತ್ತಿಲ್ಲ. ಹಾಗಾಗಿ ಕಾಂಗ್ರೆಸ್ ಜೊತೆಗಿರುವ ಕ್ಯಾಬಿನೆಟ್ ನಲ್ಲಿ ನೀನಿರುವುದು ಬೇಡ ಎಂದರು. ನಾನು ದೂಸರಾ ಮಾತಾಡದೇ ರಾಜೀನಾಮೆ ನೀಡಿದೆ.

ಮೂರ್ನಾಲ್ಕು ದಿನ ಮುಖ್ಯಮಂತ್ರಿಗಳು ರಾಜೀನಾಮೆ ಒಪ್ಪಿರಲಿಲ್ಲ. ಕೊನೆಗೆ ಮಾಯಾವತಿಯವರ ಸೂಚನೆಯ ಮೇರೆಗೆ ಒಪ್ಪಿಕೊಂಡರು. ಅದಾದಮೇಲೆ ನಾನು ನನ್ನ ಕ್ಷೇತ್ರದಲ್ಲಿ ಜನರ ಜೊತೆ ಕೆಲಸ ಮಾಡುತ್ತಿದ್ದೆ

2019ರ ಲೋಕಸಭಾ ಚುನಾವಣೆಯಲ್ಲಿ ಬೆಹನ್ ಮಾಯಾವತಿಯವರ ಆದೇಶದ ಮೇರೆಗೆ ಯಾರ ಜೊತೆಗೂ ಹೊಂದಾಣಿಕೆ ಮಾಡಿಕೊಳ್ಳದೇ 28 ಕ್ಷೇತ್ರಗಳಲ್ಲಿಯೂ ಅಭ್ಯರ್ಥಿಗಳನ್ನು ಹಾಕಿ ಸ್ವತಂತ್ರವಾಗಿ ಸ್ಪರ್ಧಿಸಿದೆವು. ಆಗ 4,12,382 ಮತ ಪಡೆದೆವು. 1.5% ಮತಪ್ರಮಾಣ ಬಂದಿತ್ತು. ಚುನಾವಣೆಯ ನಂತರ ರಿವ್ಯೂ ಮಾಡಲಿಕ್ಕೆ ಜೂನ್ 23ಕ್ಕೆ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ನಡೆಯಿತು.

ಅಲ್ಲಿ ನಾನು ಮುಂಚೆ ಈ ಸಮ್ಮಿಶ್ರ ಸರ್ಕಾರಕ್ಕೆ ನಾನು ಬೆಂಬಲಿಗನಾಗಿ ಇದ್ದೆ. ಲೋಕಸಭೆಯಲ್ಲಿ ಅವರ ವಿರುದ್ಧ ಹೋರಾಟ ಮಾಡಿರುವುದರಿಂದ ಈಗ ನಾನು ಏನು ಮಾಡಬೇಕೆಂದು ಕೇಳಿದ್ದೆ. ಆಗ ಅವರು ಸ್ವತಂತ್ರವಾಗಿರು ಎಂದಿದ್ದರು. ವಿರೋಧ ಪಕ್ಷಕ್ಕೂ ಬೆಂಬಲ ಕೊಡಬೇಡ ಅಂದಿದ್ದರು.
ಹಾಗಾಗಿ ನಾನು ಸ್ಪೀಕರ್ ರವರಿಗೆ ಪತ್ರ ಬರೆದು ಪ್ರತ್ಯೇಕ ಆಸನ ಕೊಡಿ ಎಂದು ಕೇಳಿದ್ದೆ. ಅದು ನಿಗಧಿಯಾಯಿತು. ವಿಶ್ವಾಸಮತ ಯಾಚನೆ ಪ್ರಕ್ರಿಯೆ ಶುರುವಾಯಿತು.

ಡಾ. ಅಶೋಕ್ ಸಿದ್ಧಾರ್ಥ್ ಸಾಹೇಬರು, ಉತ್ತರ ಪ್ರದೇಶದ ರಾಜ್ಯಸಭಾ ಸದಸ್ಯರು. ನಮಗೆ ಉಸ್ತುವಾರಿ ಅವರೆ. ಅವರ ಬಳಿ ಈ ವಿಶ್ವಾಸಮತ ಯಾಚನೆಯಲ್ಲಿ ನಾನು ಏನು ಮಾಡಬೇಕು ಎಂದು ಕೇಳಿದೆ. ಅವರು ಮಾಯಾವತಿಯವರೊಡನೆ ಮಾತನಾಡಿ ಹೇಳುತ್ತೇನೆ ಎಂದಿದ್ದರು. ಕೊನೆಗ ಮಾತನಾಡಿ ಅವರು ತಟಸ್ಥವಾಗಿರು ಎಂದು ಹೇಳಿದ್ದರು. ಅವರು ತಟಸ್ಥವಾಗಿರುವಂತೆ ಹೇಳಿದ್ದರಿಂದ ನಾನು ವಿಧಾನಸಭೆಗೆ ಭಾಗವಹಿಸಲಿಲ್ಲ. ನಾನು ನನ್ನ ಕ್ಷೇತ್ರದಲ್ಲಿದ್ದೆ.

15 ನೇ ಸೋಮವಾರ ನನ್ನ ಕ್ಷೇತ್ರದ ಅಗರ ಗ್ರಾ.ಪಂ ಸದಸ್ಯ ಅಪಘಾತದಲ್ಲಿ ಅಕಾಲಿಕ ಮರಣದಲ್ಲಿ ತುತ್ತಾಗಿದ್ದರಿಂದ ಅವರ ಕುಟುಂಬದ ಜೊತೆ ಇದ್ದೆ. ಅಸೆಂಬ್ಲಿಗೆ ಹಾಜರಾಗುವುದಿಲ್ಲ ಎಂದು ಮೊದಲೇ ತಿಳಿಸಿದ್ದೆ. ಇಷ್ಟು ದಿನ ನಾನು ಹೊರಗೆ ಇದ್ದೆ. ಇಂದು ಬೆಂಗಳೂರಿಗೆ ಬಂದಿದ್ದೇನೆ.

ನಾನು ನಮ್ಮ ಹೈಕಮಾಂಡ್ ನ ಯಾವುದೇ ಆದೇಶವನ್ನು ಉಲ್ಲಂಘನೆ ಮಾಡಿಲ್ಲ. ನಾನು ಅಶಿಸ್ತಿನಿಂದ ನಡೆದುಕೊಂಡಿಲ್ಲ. ಮಯಾವತಿಯವರು ಟ್ವೀಟ್ ಮಾಡಿದ್ದಾರೆ ಎಂದು ಹೇಳಿದ್ದಾರೆ. ನನಗೆ ಟ್ವಿಟ್ ಎಲ್ಲಾ ಗೊತ್ತಾಗೋಲ್ಲ. ಅದು ನನಗೆ ಬರೋದು ಇಲ್ಲ.

ನಾನು ಪಕ್ಷದ ಆದೇಶ ಉಲ್ಲಂಘಿಸಿಲ್ಲ. ಇದು ಕಮ್ಯುನಿಕೇಷನ್ ಗ್ಯಾಪ್ ನಿಂದ ಹೀಗೆ ಆಗಿದೆ. ಇದು ಸರಿ ಹೋಗುತ್ತೆ. ನಾನು ರಾಜ್ಯದ ಮೂರು ಪಕ್ಷಗಳಲ್ಲಿ ಯಾರ ಪರವೂ ಇಲ್ಲ, ಯಾರ ವಿರುದ್ಧವೂ ಇಲ್ಲ. ತಟಸ್ಥನಾಗಿದ್ದೇನೆ. ಇದನ್ನು ಮಹಾಜನತೆಗೆ ತಿಳಿಸಬೇಕೆಂದು ಕೋರುತ್ತೇನೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಮತಾ ಬ್ಯಾನರ್ಜಿಗೆ ಬಿಗ್ ಶಾಕ್: ನೇಮಕಗೊಂಡ ತಿಂಗಳಲ್ಲೇ ಟಿಎಂಸಿ ರಾಜ್ಯಾಧ್ಯಕ್ಷೆ ಚಂದ್ರಿಮಾ ಭಟ್ಟಾಚಾರ್ಯ ರಾಜೀನಾಮೆ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಹೀನಾಯ ಸೋಲಿನ ಹಿನ್ನೆಲೆಯಲ್ಲಿ, ಅತ್ಯಂತ ನಿರ್ಣಾಯಕವಾದ ಸಾಂಸ್ಥಿಕ ಜವಾಬ್ದಾರಿಗೆ ನೇಮಕಗೊಂಡ ಕೇವಲ ಒಂದು ತಿಂಗಳ ಒಳಗಾಗಿಯೇ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ರಾಜ್ಯ ಘಟಕದ ಅಧ್ಯಕ್ಷೆ ಚಂದ್ರಿಮಾ...

ಜಿಲ್ಲಾ ನ್ಯಾಯಾಧೀಶೆ ತಬಸ್ಸುಮ್ ಖಾನ್‌ಗೆ ಬಲಪಂಥೀಯರಿಂದ ಬೆದರಿಕೆ : ಗಂಭೀರವಾಗಿ ಪರಿಗಣಿಸಿದ ಹೈಕೋರ್ಟ್

ನರ್ಮದಾಪುರಂ ಜಿಲ್ಲಾ ನ್ಯಾಯಾಧೀಶರಾದ ತಬಸ್ಸುಮ್ ಖಾನ್ ಅವರು ತಮ್ಮ ಕರ್ತವ್ಯ ನಿರ್ವಹಣೆಯ ಕಾರಣಕ್ಕಾಗಿ ಬೆದರಿಕೆ ಮತ್ತು ನಿಂದನೆಗೆ ಒಳಗಾಗಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಮಧ್ಯಪ್ರದೇಶ ಹೈಕೋರ್ಟ್, ಅವರಿಗೆ ಸೂಕ್ತ ರಕ್ಷಣೆ ನೀಡುವಂತೆ ಮತ್ತು ಅಪರಾಧಿಗಳನ್ನು ಪತ್ತೆಹಚ್ಚಲು ಕೈಗೊಂಡಿರುವ...

ಎಸ್ಐಆರ್ ಪ್ರಕ್ರಿಯೆಯಲ್ಲಿ ಚುನಾವಣಾ ಆಯೋಗದ ಪಕ್ಷಪಾತದ ಬಗ್ಗೆ ಸಿಜೆಐಗೆ ಪ್ರತಿಪಕ್ಷಗಳಿಂದ ಪತ್ರ: ‘ಪ್ರಜಾಪ್ರಭುತ್ವ ಅಪಾಯದಲ್ಲಿದೆ’ ಎಂದು ಆರೋಪ

ದೇಶದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರತೀಯ ಚುನಾವಣಾ ಆಯೋಗವು (ECI) ಪಕ್ಷಪಾತ ಧೋರಣೆ ತಳೆದಿದೆ ಎಂದು ಆರೋಪಿಸಿ, 24 ವಿರೋಧ ಪಕ್ಷಗಳ ನಾಯಕರು ಹಾಗೂ ಒಬ್ಬರು ಸ್ವತಂತ್ರ...

ಬೆಂಗಳೂರು| ಕೆ.ಆರ್. ವೃತ್ತದ ಬಳಿ ಬಿಎಂಟಿಸಿ ಬಸ್‌ಗಳ ನಡುವೆ ಅಪಘಾತ; ಹಲವರಿಗೆ ಗಾಯ

ಇಂದು ಬೆಳಿಗ್ಗೆ ವಿಧಾನಸೌಧದಿಂದ ಸ್ವಲ್ಪ ದೂರದಲ್ಲಿರುವ ಜನನಿಬಿಡ ಕೆ.ಆರ್. ವೃತ್ತ ಜಂಕ್ಷನ್ ಬಳಿ ಎರಡು ಬಿಎಂಟಿಸಿ ಬಸ್‌ಗಳು ಡಿಕ್ಕಿ ಹೊಡೆದ ಪರಿಣಾಮ ಹಲವಾರು ಪ್ರಯಾಣಿಕರು ಗಾಯಗೊಂಡರು. ಡಿಕ್ಕಿಯ ಪರಿಣಾಮ ಬಸ್ಸಿನೊಳಗೆ ಹಲವಾರು ಪ್ರಯಾಣಿಕರು...

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಲೋಪ ಆರೋಪ; ಕೋಲಾರ-ಮೈಸೂರಿನ ಅಧಿಕಾರಿಗಳಿಗೆ ನೋಟಿಸ್ ಜಾರಿ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್)ಗೆ ಸಂಬಂಧಿಸಿದಂತೆ, ಕೋಲಾರ ಮತ್ತು ಮೈಸೂರಿನಲ್ಲಿ ನಡೆದ ಕಾರ್ಯವಿಧಾನದಲ್ಲಿ ನಿಯಮ ಉಲ್ಲಂಘನೆ ಆರೋಪ ಕೇಳಿಬಂದೆ. ಕೋಲಾರದಲ್ಲಿ, ಪರಿಷ್ಕರಣಾ ಕಾರ್ಯದ ಸಮಯದಲ್ಲಿ ಕರ್ತವ್ಯ...

ಸೂರತ್ ಧ್ವಂಸ ಕಾರ್ಯಾಚರಣೆ ಸಂಪೂರ್ಣ ‘ಕಾನೂನುಬಾಹಿರ’: 100 ನಿರಾಶ್ರಿತ ಕುಟುಂಬಗಳ ಪುನರ್ವಸತಿಗೆ ಗುಜರಾತ್ ಹೈಕೋರ್ಟ್ ಆದೇಶ

ಅಹಮದಾಬಾದ್: ಗುಜರಾತ್‌ನ ಸೂರತ್‌ನ ನಾಸಿರ್ ನಗರದಲ್ಲಿ ನಡೆದ ಮನೆಗಳ ಧ್ವಂಸ ಕಾರ್ಯಾಚರಣೆಯನ್ನು ತೀವ್ರವಾಗಿ ಖಂಡಿಸಿರುವ ಗುಜರಾತ್ ಹೈಕೋರ್ಟ್, ಇದನ್ನು "ಸಂಪೂರ್ಣ ಕಾನೂನುಬಾಹಿರ" ಎಂದು ಕರೆದಿದೆ. ಮೇ 30 ರಂದು ನಡೆದ ಈ "ಅನಧಿಕೃತ"...

ವಿದ್ಯುತ್ ಖಾಸಗೀಕರಣ ವಿರುದ್ದದ ಹೋರಾಟಕ್ಕೆ ಗೆಲುವು: ಅರ್ಜಿ ಹಿಂಪಡೆದ ಟಾಟಾ ಪವರ್ ಕಂಪನಿ

ರಾಜ್ಯದಲ್ಲಿ ವಿದ್ಯುತ್ ಕ್ಷೇತ್ರದಲ್ಲಿ ಖಾಸಗೀಕರಣದ ಹೆಜ್ಜೆ ಇಡಲು ಮುಂದಾಗಿದ್ದ ಟಾಟಾ ಪವರ್ ಕಂಪನಿಗೆ ಭಾರಿ ಹಿನ್ನಡೆಯಾಗಿದೆ. ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗದ (KERC) ಮುಂದೆ ರಾಜ್ಯದ 19 ಕಂದಾಯ ಜಿಲ್ಲೆಗಳಿಗೆ ಸಂಬಂಧಿಸಿದಂತೆ ತಾನು...

SIR: ಮತದಾರರ ಮನೆಗೆ ಹೋಗದೆ ಕಚೇರಿಯಲ್ಲೇ ಕುಳಿತು ಫಾರ್ಮ್ ವಿತರಣೆ ಆರೋಪ, BLO ಗಳಿಗೆ ಎಚ್ಚರಿಕೆ ನೀಡಿದ ಆಯೋಗ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಂದ ವ್ಯಾಪಕ ದೂರುಗಳು ಕೇಳಿಬಂದ ಬೆನ್ನಲ್ಲೇ, ರಾಜ್ಯ ಚುನಾವಣಾ ಆಯೋಗವು ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಮತದಾರರ ಮನೆ-ಮನೆಗೆ ಭೇಟಿ...

ಅಳುವ ಕಂದಮ್ಮಗಳನ್ನು ವಾಷಿಂಗ್ ಮೆಷಿನ್‌ನಲ್ಲಿ ಕೂಡಿಹಾಕ್ತಿದ್ದ ಇಬ್ಬರು ಕೇರ್‌ಟೇಕರ್ ಅರೆಸ್ಟ್

ಸಿಲಿಕಾನ್ ಸಿಟಿಯ ಬ್ರೂಕ್‌ಫೀಲ್ಡ್‌ನಲ್ಲಿರುವ ಪ್ರಮುಖ ಐಟಿ ಸಂಸ್ಥೆ 'ಕ್ಯಾಪ್‌ಜೆಮಿನಿ' ಕ್ಯಾಂಪಸ್‌ನ ಡೇ-ಕೇರ್ ಸೆಂಟರ್‌ನಲ್ಲಿ ಪುಟ್ಟ ಕಂದಮ್ಮಗಳನ್ನು ಬಾತ್‌ರೂಮ್ ಹಾಗೂ ವಾಷಿಂಗ್ ಮೆಷಿನ್‌ಗಳಲ್ಲಿ ಕೂಡಿಹಾಕಿ ವಿಕೃತಿ ಮೆರೆದಿದ್ದ ಪ್ರಕರಣದಲ್ಲಿ ಪೊಲೀಸರು ಭರ್ಜರಿ ಬೇಟೆಯಾಡಿದ್ದಾರೆ. ಪ್ರಕರಣದ...

“ನಾಗರಿಕರು ಸರ್ಕಾರದ ಗುಲಾಮರಲ್ಲ”: ಸಿಎಎ, ಜ್ಞಾನವಾಪಿ ವಿರೋಧಿ ಪ್ರತಿಭಟನೆ ಸಂಬಂಧ ಎಸ್‌ಡಿಪಿಐ ನಾಯಕನ ಗಡಿಪಾರು ಪ್ರಶ್ನಿಸಿದ ಬಾಂಬೆ ಹೈಕೋರ್ಟ್

“ದೇಶದ ನಾಗರಿಕರು ಸರ್ಕಾರದ ಗುಲಾಮರಲ್ಲ. ಕೇವಲ ಸರ್ಕಾರದ ನಿರ್ಧಾರಗಳನ್ನು ವಿರೋಧಿಸುವುದು ಅಥವಾ ಆಡಳಿತ ವ್ಯವಸ್ಥೆಯ ವಿರುದ್ಧ ಘೋಷಣೆಗಳನ್ನು ಕೂಗುವುದು ಒಬ್ಬ ನಾಗರಿಕನನ್ನು ಗಡಿಪಾರು ಮಾಡಲು ಕಾನೂನಾತ್ಮಕ ಕಾರಣವಾಗಲಾರದು,” ಎಂದು ಬಾಂಬೆ ಹೈಕೋರ್ಟ್‌ ಐತಿಹಾಸಿಕ...