Homeಕರ್ನಾಟಕ'ನಾ ಖಾನೇ ದೂಂಗಾವಾಲ ಮೋದಿ ಅವ್ರೇ, ಶಾಸಕರ ಕಮಿಷನ್ ಹಣದಲ್ಲಿ ನಿಮ್ಮ ಪಾಲೆಷ್ಟು?': ಬಿಕೆ ಹರಿಪ್ರಸಾದ್...

‘ನಾ ಖಾನೇ ದೂಂಗಾವಾಲ ಮೋದಿ ಅವ್ರೇ, ಶಾಸಕರ ಕಮಿಷನ್ ಹಣದಲ್ಲಿ ನಿಮ್ಮ ಪಾಲೆಷ್ಟು?’: ಬಿಕೆ ಹರಿಪ್ರಸಾದ್ ಪ್ರಶ್ನೆ

- Advertisement -
- Advertisement -

ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರ ಮನೆಯಲ್ಲಿ ಏಳು ಕೋಟಿ ಹಣ ಪತ್ತೆಯಾದ ಬೆನ್ನಲ್ಲೇ ಕಾಂಗ್ರೆಸ್ ನಾಯಕರು ಸರ್ಕಾರದ ವಿರುದ್ದ ಮುಗಿಬಿದ್ದಿದ್ದಾರೆ. ಈ ಹಿಂದೆ ಕಾಂಗ್ರೆಸ್, ರಾಜ್ಯ ಸರ್ಕಾರದ ವಿರುದ್ಧ ಪೇಸಿಎಂ ಅಭಿಯಾನ ಮಾಡಿತ್ತು. ಈಗ ಕೈ ನಾಯಕರು ಅದನ್ನು ನೆನಪಿಸಿದ್ದು ಈ ಕಮೀಷನ್ ಹಣದಲ್ಲಿ ನಿಮ್ಮ ಪಾಲು ಎಷ್ಟು? ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಬಿಕೆ ಹರಿಪ್ರಸಾದ್ ಪ್ರಶ್ನೆ ಮಾಡಿದ್ದಾರೆ.

ಈ ಬಗ್ಗೆ ಸರಣಿ ಟ್ವೀಟ್‌ ಮಾಡಿರುವ ಹರಿಪ್ರಸಾದ್, ಬಿಜೆಪಿಗೆ ಸುಳ್ಳು ಮನೆ ದೇವರಾದರೆ, ಭ್ರಷ್ಟಾಚಾರ ಪಕ್ಷದ ಅಧಿಕೃತ ಕಾರ್ಯಕ್ರಮ. ದಾಖಲೆ ಸಮೇತ ಕಂತು ಕಂತಿನ ನೋಟುಗಳು ಮಂಚದ ಮೇಲೆ ಸಿಕ್ಕ ಮೇಲೂ ಬಿಜೆಪಿ ಶಾಸಕರ ಮೇಲೆ ಕ್ರಮ ಯಾಕಿಲ್ಲ ಬಸವರಾಜ ಬೊಮ್ಮಾಯಿ ಅವ್ರೇ? ಎಂದು ಪ್ರಶ್ನಿಸಿದ್ದಾರೆ.

ನಾ ಖಾನೇ ದೂಂಗಾವಾಲ ನರೇಂದ್ರ ಮೋದಿ ಅವ್ರೇ, ಶಾಸಕರ ಕಮಿಷನ್ ವ್ಯವಹಾರದಲ್ಲಿ ನಿಮ್ಮ ಮೌನದ ಪಾಲೆಷ್ಟು? ಎಂದು ಪ್ರಶ್ನಿಸಿದ್ದಾರೆ.

40% ಭ್ರಷ್ಟಾಚಾರದ ಸಾಕ್ಷಿ ಸಿಕ್ಕರೂ ತಾಕತ್ತು,ಧಮ್ಮು, ಹಮ್ಮು, ಬಿಮ್ಮುಗಳು ಯಾವ ಬಿಲದಲ್ಲಿ ಅಡಗಿ ಕುಳಿತಿವೆ? ಎಂದು ಪ್ರಶ್ನಿಸಿದ್ದಾರೆ. ರಾಜ್ಯವನ್ನ ಗುಡಿಸಿ ಗುಂಡಾಂತರ ಮಾಡಿರುವ ಭ್ರಷ್ಟ ಬಿಜೆಪಿ ಸರ್ಕಾರ, ದೇಶದ ಎದುರು ರಾಜ್ಯದ ಮಾನ ಹರಾಜಿಗಿಟ್ಟಿದೆ ಎಂದು ಕಿಡಿಕಾರಿದ್ದಾರೆ.

ವಾರಕ್ಕೆ ಎರಡು ಬಾರಿ ಚುನಾವಣಾ ಪ್ರವಾಸಿಗರಾದ ಮೋದಿ ಮತ್ತು ಶಾ ಜೋಡಿ ರಾಜ್ಯಕ್ಕೆ ಭೇಟಿ ನೀಡುತ್ತಿರುವುದು ವಸೂಲಾಗಿರುವ #payCm ಹಣದ ಪಾಲಿಗಾಗಿಯೇ? ರಾಜ್ಯದ ತೆರಿಗೆಯ ಬೊಕ್ಕಸವನ್ನು ಲೂಟಿ ಮಾಡಿ, ದೆಹಲಿ ಬಿಜೆಪಿಯ ಖಜಾನೆ ಭರ್ತಿ ಮಾಡಿದ ಪಾಪದ ಕೊಡ ತುಂಬಿದೆ ಟೀಕಿಸಿದ್ದಾರೆ.

ನಾಚಿಕೆ,ಮಾನ,ಮಾರ್ಯಾದೆ ಸ್ವಾಭಿಮಾನ ಎನ್ನುವ ಪದಗಳಿಗೆ ಕಿಂಚಿತ್ತಾದರೂ ಗೌರವ ಇದ್ದರೆ, ರಾಜ್ಯದ ಜನರಿಗೆ ಕ್ಷಮೆ ಕೇಳಿ, ಪಾಪದ ಪ್ರಾಯಶ್ಚಿತ್ತಕ್ಕೆ ರಾಜೀನಾಮೆ ಕೊಟ್ಟು ತೊಲಗಿ. ಘನತೆಯುತ ರಾಜ್ಯಕ್ಕೆ ಕಮಿಷನ್ ರಾಜ್ಯದ ಮಸಿ ಬಳಿದ ಬಿಜೆಪಿಗೆ ಜನರು ತಕ್ಕ ಪಾಠ ಕಲಿಸುವುದು ನಿಶ್ಚಿತವಾಗಿದೆ ಎಂದು .ಕೆ ಹರಿಪ್ರಸಾದ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಜ್ಯ ಸರ್ಕಾರದ ವಿರುದ್ಧ ಕಾಂಗ್ರೆಸ್ ಪಕ್ಷ 40% ಕಮಿಷನ್ ಆರೋಪ ಮಾಡಿದಾಗಲೆಲ್ಲಾ ಬಿಜೆಪಿ ನಾಯಕರು ಸಾಕ್ಷಿಗಳನ್ನು ಕೇಳುತ್ತಿದ್ದರು. ನಿಮ್ಮ ಬಳಿ ದಾಖಲೆ ಇದ್ದರೆ ಲೋಕಾಯುಕ್ತಕ್ಕೆ ನೀಡಿ ಎಂದು ಬಿಜೆಪಿ ನಾಯಕರು ಸವಾಲು ಹಾಕಿದ್ದರು. ಆದರೆ ಇದೀಗ ಲೋಕಾಯುಕ್ತ ದಾಳಿ ಆಡಳಿತ ಪಕ್ಷವನ್ನು ಇಕ್ಕಟ್ಟಿಗೆ ಸಿಲುಕಿಸಿದೆ.

ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರ ಪುತ್ರ ಪ್ರಶಾಂತ್ ಕಚೇರಿ ಹಾಗೂ ನಿವಾಸಕ್ಕೆ ಲೋಕಾಯುಕ್ತ ದಾಳಿ ನಡೆಸಿದ ಪ್ರಕರಣ ಆಡಳಿತ ಪಕ್ಷ ಬಿಜೆಪಿಗೆ ತೀವ್ರ ಮುಜುಗರ ಸೃಷ್ಟಿಸಿದೆ. ಚುನಾವಣಾ ಹೊಸ್ತಿಲಲ್ಲಿ ರಾಷ್ಟ್ರ ನಾಯಕರ ಸರಣಿ ರಾಜ್ಯ ಪ್ರವಾಸದ ಸಂದರ್ಭದಲ್ಲೇ ನಡೆದ ಈ ಪ್ರಸಂಗ ಬಿಜೆಪಿಗೆ ತಲೆನೋವು ಉಂಟು ಮಾಡಿದೆ. ಆದರೆ ಈ ಪ್ರಕರಣ ಕಾಂಗ್ರೆಸ್ ಪಾಲಿಗೆ ಇದೊಂದು ಪ್ರಬಲ ರಾಜಕೀಯ ಅಸ್ತ್ರವಾಗಿ ಸಿಕ್ಕಂತಾಗಿದೆ. ಇದೀಗ ಕಾಂಗ್ರೆಸ್ ನಾಯಕರು ರಾಜ್ಯ ಬಿಜೆಪಿ ನಾಯಕರ ಮೇಲೆ ಮುಗಿಬಿದ್ದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ: ಮಮತಾ ಸರ್ಕಾರ ಜಾರಿ ಮಾಡಿದ್ದ OBC ಮೀಸಲಾತಿಯನ್ನು ಕಿತ್ತೆಸೆದ ಸುವೇಂದು ನೇತೃತ್ವದ ಬಿಜೆಪಿ ಸರ್ಕಾರ

ಪಶ್ಚಿಮ ಬಂಗಾಳದ ಒಬಿಸಿ (ಇತರ ಹಿಂದುಳಿದ ವರ್ಗಗಳು) ಪಟ್ಟಿಯಲ್ಲಿದ್ದ ಮುಸ್ಲಿಂ ಸಮುದಾಯಗಳನ್ನು ಕೈಬಿಡುವ ಮೂಲಕ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರವು ಭಾರಿ ರಾಜಕೀಯ ಸಂಚಲನ ಸೃಷ್ಟಿಸಿದೆ. ಈ ಹಿಂದೆ...

ಸಾಮಾಜಿಕ ಹೋರಾಟಗಾರ ‘ಫರಿದುಲ್ ಇಸ್ಲಾಂ’ರನ್ನು ಸುಳ್ಳು ಪ್ರಕರಣದಲ್ಲಿ ಬಂಧಿಸಿದ ಕೋಲ್ಕತ್ತಾ ಪೊಲೀಸರು

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಇನ್ನು ಹತ್ತು ದಿನಗಳು ಕಳೆಯುವಷ್ಟರಲ್ಲೇ, ಸರ್ಕಾರದ ಆಡಳಿತವನ್ನು ಪ್ರಶ್ನಿಸುವವರ ಹಾಗೂ ಹೋರಾಟಗಾರರ ಧ್ವನಿಯನ್ನು ಹತ್ತಿಕ್ಕುವ ಕೆಲಸ ಆರಂಭವಾಗಿದೆ ಎಂಬ...

ಉಪ್ಪಿನಂಗಡಿ: ಸೂರ್ಯ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ, ಚಿಕಿತ್ಸೆಗೆಂದು ತೆರಳಿ ಶವವಾಗಿ ಮರಳಿದ ಬೀದಿಬದಿ ವ್ಯಾಪಾರಿ!

ಖಾಸಗಿ ಆಸ್ಪತ್ರೆಗಳ ಹಣದ ದಾಹ ಮತ್ತು ವೈದ್ಯಕೀಯ ಸಿಬ್ಬಂದಿಯ ಘೋರ ನಿರ್ಲಕ್ಷ್ಯಕ್ಕೆ ಮತ್ತೊಂದು ಬಡ ಜೀವ ಬಲಿಯಾಗಿದೆ. ಉಪ್ಪಿನಂಗಡಿಯ ಸೂರ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದ ಮೊಹಮ್ಮದ್ ಶರೀಫ್ (35) ಎಂಬ ಬೀದಿ ಬದಿ...

ಬಿಸಿಲಿನ ಬೆಂಕಿಗೆ ‘ಎಲ್ ನಿನೊ’ ತುಪ್ಪ: 2026ರ ಮುಂಗಾರು ಕಥೆ ಏನು?

ದೇಶಾದ್ಯಂತ ತಾಪಮಾನ ದಿನೇ ದಿನೇ ಏರುತ್ತಿದ್ದು, ಭೀಕರ ಶಾಖದ ಅಲೆಗಳಿಗೆ (Heatwaves) ಜನ ತತ್ತರಿಸಿ ಹೋಗಿದ್ದಾರೆ. ಈ ಹೊತ್ತಿನಲ್ಲಿ ಎಲ್ಲರ ಕಣ್ಣುಗಳು ಸಾವಿರಾರು ಕಿಲೋಮೀಟರ್ ದೂರದ ಪೆಸಿಫಿಕ್ ಮಹಾಸಾಗರದಲ್ಲಿ ಸಂಭವಿಸುತ್ತಿರುವ ಹವಾಮಾನ ಬದಲಾವಣೆಯ...

ಸುಮಾರು 1 ಲಕ್ಷ ಶಾಲೆಗಳಲ್ಲಿ ಬಾಲಕಿಯರಿಗೆ ಶೌಚಾಲಯವಿಲ್ಲ, 61,000 ಶಾಲೆಗಳಲ್ಲಿ ಕ್ರಿಯಾತ್ಮಕ ಶೌಚಾಲಯಗಳಿಲ್ಲ: ನೀತಿ ಆಯೋಗ

ಶಿಕ್ಷಣವು ಒಂದು ದೇಶದ ಅಭಿವೃದ್ಧಿಯ ಬೆನ್ನೆಲುಬು ಅಂತಲೇ ಹೇಳಲಾಗುತ್ತದೆ. ಆದರೆ, ಭಾರತದ ಶಾಲಾ ಶಿಕ್ಷಣದ ಮೂಲಭೂತ ಸೌಕರ್ಯಗಳು ಮತ್ತು ವ್ಯವಸ್ಥೆಯ ಕುರಿತಾಗಿ ನೀತಿ ಆಯೋಗ ಹಾಗೂ ಯುಡಿಐಎಸ್ಇ+ (UDISE+ 2024–25) ಇತ್ತೀಚೆಗೆ ಬಿಡುಗಡೆ...

CJI ಹೇಳಿಕೆಯಿಂದ ರಾತ್ರೋರಾತ್ರಿ ಹುಟ್ಟಿಕೊಂಡ ‘ಕಾಕ್‌ರೋಚ್ ಜನತಾ ಪಾರ್ಟಿ’

ಒಂದು ರಾಜಕೀಯ ಪಕ್ಷವನ್ನು ಕಟ್ಟಿ, ಅದಕ್ಕೊಂದು ರೂಪ ಕೊಡಲು ಎಷ್ಟು ಸಮಯ ಬೇಕಾಗಬಹುದು? ಕೇವಲ 48 ಗಂಟೆಗಳು! ಹೌದು, ಕಳೆದ ಭಾನುವಾರ ನೀವು ಸಾಮಾಜಿಕ ಜಾಲತಾಣಗಳಲ್ಲಿ ಸ್ವಲ್ಪ ಸಮಯ ಕಳೆದಿದ್ದರೆ ನಿಮಗಿದು ಖಂಡಿತ...

ಬೆಂಗಳೂರು: ಗಂಗಸಂದ್ರ ದಲಿತರ ಭೂಮಿ ಕಿತ್ತುಕೊಳ್ಳಲು ಮುಗಿಬಿದ್ದ ಅರಣ್ಯ ಇಲಾಖೆ: ಮಿತಿಮೀರಿದ ಅಧಿಕಾರಿಗಳ ದರ್ಪ

ಕೆಂಗೇರಿ ಬಳಿಯ ಗಂಗಸಂದ್ರ ಗ್ರಾಮದಲ್ಲಿನ ದಲಿತರ ಭೂಮಿಯನ್ನು ಅರಣ್ಯ ಭೂಮಿಯೆಂದು ಅರಣ್ಯ ಇಲಾಖೆಯ ವಶಕ್ಕೆ ಪಡೆಯಲು ಅಧಿಕಾರಿಗಳು ಮುಂದಾಗಿದ್ದಾರೆ. 2026 ಮೇ 19ರ, ಮಂಗಳವಾರ  ಬೆಳ್ಳಂಬೆಳಗ್ಗೆಯೇ ಅಧಿಕಾರಿಗಳ ದರ್ಪ ತಾರಕಕ್ಕೇರಿದೆ. ದಲಿತ ನಿವಾಸಿಗಳ...

ಜನಾಂಗೀಯ ದ್ವೇಷ: ಅಮೆರಿಕಾದ ಸ್ಯಾನ್ ಡಿಯಾಗೋ ಮಸೀದಿ ಸಂಕೀರ್ಣದಲ್ಲಿ ಗುಂಡಿನ ದಾಳಿ: ಮೂವರು ಸಾವು

ಸ್ಯಾನ್ ಡಿಯಾಗೋ: ಅಮೆರಿಕದ ಸ್ಯಾನ್ ಡಿಯಾಗೋ ನಗರದ ಇಸ್ಲಾಮಿಕ್ ಸೆಂಟರ್ ಆಫ್ ಸ್ಯಾನ್ ಡಿಯಾಗೋ (ICSD) ಮಸೀದಿ ಸಂಕೀರ್ಣದಲ್ಲಿ ಸೋಮವಾರ ನಡೆದ ಗುಂಡಿನ ದಾಳಿಯಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಈ ಘಟನೆಯನ್ನು ಸಂಭಾವ್ಯ...

ರಸ್ತೆಗಳಲ್ಲಿ ಮುಕ್ತವಾಗಿ ಓಡಾಡುವುದು ಜನರ ಹಕ್ಕು: ಬೀದಿ ನಾಯಿಗಳ ದಯಾಮರಣಕ್ಕೂ ಸುಪ್ರೀಂ ಅಸ್ತು

ಸುಪ್ರೀಂ ಕೋರ್ಟ್ ಇಂದು (ಮೇ 19, ಮಂಗಳವಾರ) ಬೀದಿ ನಾಯಿಗಳ ನಿಯಂತ್ರಣ ಮತ್ತು ನಿರ್ವಹಣೆಗೆ ಸಂಬಂಧಿಸಿದ ಎಲ್ಲಾ ಅರ್ಜಿಗಳನ್ನು ವಜಾಗೊಳಿಸಿ ಮಹತ್ವದ ತೀರ್ಪು ನೀಡಿದೆ. ಸಾರ್ವಜನಿಕ ಸ್ಥಳಗಳಲ್ಲಿ ಬೀದಿ ನಾಯಿಗಳ ದಾಳಿಯಿಂದಾಗಿ ಸಾರ್ವಜನಿಕರು...

ಹರಿಯಾಣದ ಕಾರ್ಮಿಕ ನಾಯಕ ಅಜಿತ್ ಸಿಂಗ್ ಬಂಧನ ‘ಅಕ್ರಮ’ ಎಂದ ಕೋರ್ಟ್; ಜಾಮೀನು ಮಂಜೂರು

ಬೆಲ್ಸೋನಿಕಾ ಆಟೋ ಕಾಂಪೊನೆಂಟ್ ಇಂಡಿಯಾ ಎಂಪ್ಲಾಯೀಸ್ ಯೂನಿಯನ್‌ನ ಪ್ರಧಾನ ಕಾರ್ಯದರ್ಶಿ ಅಜಿತ್ ಸಿಂಗ್ ಅವರಿಗೆ ಗುರುಗ್ರಾಮ್ ಜಿಲ್ಲಾ ನ್ಯಾಯಾಲಯವು (ಮೇ 18) ಜಾಮೀನು ನೀಡಿದೆ. ಅವರು ಮಾನೇಸರ್ ಕೈಗಾರಿಕಾ ಪ್ರದೇಶದಲ್ಲಿ ಕಾರ್ಮಿಕರ ಪ್ರತಿಭಟನೆಗಳ...