Homeಕರ್ನಾಟಕ'ನಾ ಖಾನೇ ದೂಂಗಾವಾಲ ಮೋದಿ ಅವ್ರೇ, ಶಾಸಕರ ಕಮಿಷನ್ ಹಣದಲ್ಲಿ ನಿಮ್ಮ ಪಾಲೆಷ್ಟು?': ಬಿಕೆ ಹರಿಪ್ರಸಾದ್...

‘ನಾ ಖಾನೇ ದೂಂಗಾವಾಲ ಮೋದಿ ಅವ್ರೇ, ಶಾಸಕರ ಕಮಿಷನ್ ಹಣದಲ್ಲಿ ನಿಮ್ಮ ಪಾಲೆಷ್ಟು?’: ಬಿಕೆ ಹರಿಪ್ರಸಾದ್ ಪ್ರಶ್ನೆ

- Advertisement -
- Advertisement -

ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರ ಮನೆಯಲ್ಲಿ ಏಳು ಕೋಟಿ ಹಣ ಪತ್ತೆಯಾದ ಬೆನ್ನಲ್ಲೇ ಕಾಂಗ್ರೆಸ್ ನಾಯಕರು ಸರ್ಕಾರದ ವಿರುದ್ದ ಮುಗಿಬಿದ್ದಿದ್ದಾರೆ. ಈ ಹಿಂದೆ ಕಾಂಗ್ರೆಸ್, ರಾಜ್ಯ ಸರ್ಕಾರದ ವಿರುದ್ಧ ಪೇಸಿಎಂ ಅಭಿಯಾನ ಮಾಡಿತ್ತು. ಈಗ ಕೈ ನಾಯಕರು ಅದನ್ನು ನೆನಪಿಸಿದ್ದು ಈ ಕಮೀಷನ್ ಹಣದಲ್ಲಿ ನಿಮ್ಮ ಪಾಲು ಎಷ್ಟು? ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಬಿಕೆ ಹರಿಪ್ರಸಾದ್ ಪ್ರಶ್ನೆ ಮಾಡಿದ್ದಾರೆ.

ಈ ಬಗ್ಗೆ ಸರಣಿ ಟ್ವೀಟ್‌ ಮಾಡಿರುವ ಹರಿಪ್ರಸಾದ್, ಬಿಜೆಪಿಗೆ ಸುಳ್ಳು ಮನೆ ದೇವರಾದರೆ, ಭ್ರಷ್ಟಾಚಾರ ಪಕ್ಷದ ಅಧಿಕೃತ ಕಾರ್ಯಕ್ರಮ. ದಾಖಲೆ ಸಮೇತ ಕಂತು ಕಂತಿನ ನೋಟುಗಳು ಮಂಚದ ಮೇಲೆ ಸಿಕ್ಕ ಮೇಲೂ ಬಿಜೆಪಿ ಶಾಸಕರ ಮೇಲೆ ಕ್ರಮ ಯಾಕಿಲ್ಲ ಬಸವರಾಜ ಬೊಮ್ಮಾಯಿ ಅವ್ರೇ? ಎಂದು ಪ್ರಶ್ನಿಸಿದ್ದಾರೆ.

ನಾ ಖಾನೇ ದೂಂಗಾವಾಲ ನರೇಂದ್ರ ಮೋದಿ ಅವ್ರೇ, ಶಾಸಕರ ಕಮಿಷನ್ ವ್ಯವಹಾರದಲ್ಲಿ ನಿಮ್ಮ ಮೌನದ ಪಾಲೆಷ್ಟು? ಎಂದು ಪ್ರಶ್ನಿಸಿದ್ದಾರೆ.

40% ಭ್ರಷ್ಟಾಚಾರದ ಸಾಕ್ಷಿ ಸಿಕ್ಕರೂ ತಾಕತ್ತು,ಧಮ್ಮು, ಹಮ್ಮು, ಬಿಮ್ಮುಗಳು ಯಾವ ಬಿಲದಲ್ಲಿ ಅಡಗಿ ಕುಳಿತಿವೆ? ಎಂದು ಪ್ರಶ್ನಿಸಿದ್ದಾರೆ. ರಾಜ್ಯವನ್ನ ಗುಡಿಸಿ ಗುಂಡಾಂತರ ಮಾಡಿರುವ ಭ್ರಷ್ಟ ಬಿಜೆಪಿ ಸರ್ಕಾರ, ದೇಶದ ಎದುರು ರಾಜ್ಯದ ಮಾನ ಹರಾಜಿಗಿಟ್ಟಿದೆ ಎಂದು ಕಿಡಿಕಾರಿದ್ದಾರೆ.

ವಾರಕ್ಕೆ ಎರಡು ಬಾರಿ ಚುನಾವಣಾ ಪ್ರವಾಸಿಗರಾದ ಮೋದಿ ಮತ್ತು ಶಾ ಜೋಡಿ ರಾಜ್ಯಕ್ಕೆ ಭೇಟಿ ನೀಡುತ್ತಿರುವುದು ವಸೂಲಾಗಿರುವ #payCm ಹಣದ ಪಾಲಿಗಾಗಿಯೇ? ರಾಜ್ಯದ ತೆರಿಗೆಯ ಬೊಕ್ಕಸವನ್ನು ಲೂಟಿ ಮಾಡಿ, ದೆಹಲಿ ಬಿಜೆಪಿಯ ಖಜಾನೆ ಭರ್ತಿ ಮಾಡಿದ ಪಾಪದ ಕೊಡ ತುಂಬಿದೆ ಟೀಕಿಸಿದ್ದಾರೆ.

ನಾಚಿಕೆ,ಮಾನ,ಮಾರ್ಯಾದೆ ಸ್ವಾಭಿಮಾನ ಎನ್ನುವ ಪದಗಳಿಗೆ ಕಿಂಚಿತ್ತಾದರೂ ಗೌರವ ಇದ್ದರೆ, ರಾಜ್ಯದ ಜನರಿಗೆ ಕ್ಷಮೆ ಕೇಳಿ, ಪಾಪದ ಪ್ರಾಯಶ್ಚಿತ್ತಕ್ಕೆ ರಾಜೀನಾಮೆ ಕೊಟ್ಟು ತೊಲಗಿ. ಘನತೆಯುತ ರಾಜ್ಯಕ್ಕೆ ಕಮಿಷನ್ ರಾಜ್ಯದ ಮಸಿ ಬಳಿದ ಬಿಜೆಪಿಗೆ ಜನರು ತಕ್ಕ ಪಾಠ ಕಲಿಸುವುದು ನಿಶ್ಚಿತವಾಗಿದೆ ಎಂದು .ಕೆ ಹರಿಪ್ರಸಾದ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಜ್ಯ ಸರ್ಕಾರದ ವಿರುದ್ಧ ಕಾಂಗ್ರೆಸ್ ಪಕ್ಷ 40% ಕಮಿಷನ್ ಆರೋಪ ಮಾಡಿದಾಗಲೆಲ್ಲಾ ಬಿಜೆಪಿ ನಾಯಕರು ಸಾಕ್ಷಿಗಳನ್ನು ಕೇಳುತ್ತಿದ್ದರು. ನಿಮ್ಮ ಬಳಿ ದಾಖಲೆ ಇದ್ದರೆ ಲೋಕಾಯುಕ್ತಕ್ಕೆ ನೀಡಿ ಎಂದು ಬಿಜೆಪಿ ನಾಯಕರು ಸವಾಲು ಹಾಕಿದ್ದರು. ಆದರೆ ಇದೀಗ ಲೋಕಾಯುಕ್ತ ದಾಳಿ ಆಡಳಿತ ಪಕ್ಷವನ್ನು ಇಕ್ಕಟ್ಟಿಗೆ ಸಿಲುಕಿಸಿದೆ.

ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರ ಪುತ್ರ ಪ್ರಶಾಂತ್ ಕಚೇರಿ ಹಾಗೂ ನಿವಾಸಕ್ಕೆ ಲೋಕಾಯುಕ್ತ ದಾಳಿ ನಡೆಸಿದ ಪ್ರಕರಣ ಆಡಳಿತ ಪಕ್ಷ ಬಿಜೆಪಿಗೆ ತೀವ್ರ ಮುಜುಗರ ಸೃಷ್ಟಿಸಿದೆ. ಚುನಾವಣಾ ಹೊಸ್ತಿಲಲ್ಲಿ ರಾಷ್ಟ್ರ ನಾಯಕರ ಸರಣಿ ರಾಜ್ಯ ಪ್ರವಾಸದ ಸಂದರ್ಭದಲ್ಲೇ ನಡೆದ ಈ ಪ್ರಸಂಗ ಬಿಜೆಪಿಗೆ ತಲೆನೋವು ಉಂಟು ಮಾಡಿದೆ. ಆದರೆ ಈ ಪ್ರಕರಣ ಕಾಂಗ್ರೆಸ್ ಪಾಲಿಗೆ ಇದೊಂದು ಪ್ರಬಲ ರಾಜಕೀಯ ಅಸ್ತ್ರವಾಗಿ ಸಿಕ್ಕಂತಾಗಿದೆ. ಇದೀಗ ಕಾಂಗ್ರೆಸ್ ನಾಯಕರು ರಾಜ್ಯ ಬಿಜೆಪಿ ನಾಯಕರ ಮೇಲೆ ಮುಗಿಬಿದ್ದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...