Homeಕರ್ನಾಟಕನ್ಯಾಕ್ ಲಂಚ ಪ್ರಕರಣ : ದಾವಣಗೆರೆ ವಿವಿ ಪ್ರೊ.ಗಾಯತ್ರಿ ದೇವರಾಜ್ ಅಮಾನತು

ನ್ಯಾಕ್ ಲಂಚ ಪ್ರಕರಣ : ದಾವಣಗೆರೆ ವಿವಿ ಪ್ರೊ.ಗಾಯತ್ರಿ ದೇವರಾಜ್ ಅಮಾನತು

- Advertisement -
- Advertisement -

ನ್ಯಾಕ್ ಪರಿಶೀಲನಾ ಸಮಿತಿಯ ಲಂಚ ಪ್ರಕರಣದಲ್ಲಿ ಸಿಬಿಐನಿಂದ ಬಂಧಿತರಾಗಿರುವ ದಾವಣಗೆರೆ ವಿಶ್ವವಿದ್ಯಾಲಯದ ಮೈಕ್ರೋ ಬಯಾಲಜಿ ವಿಭಾಗದ ಪ್ರಾಧ್ಯಾಪಕಿ ಪ್ರೊ. ಗಾಯತ್ರಿ ದೇವರಾಜ್ ಅವರನ್ನು ಕರ್ತವ್ಯದಿಂದ ಅಮಾನತುಗೊಳಿಸಲಾಗಿದೆ.

ಗುರುವಾರ (ಫೆ.6) ನಡೆದ ದಾವಣಗೆರೆ ವಿಶ್ವವಿದ್ಯಾಲಯದ ವಿಶೇಷ ಸಿಂಡಿಕೇಟ್ ಸಭೆಯಲ್ಲಿ ಈ ವಿಷಯದ ಬಗ್ಗೆ ಚರ್ಚಿಸಿ ಗಾಯತ್ರಿ ಅವರನ್ನು ಆರು ತಿಂಗಳ ಅವಧಿಗೆ ಅಮಾನತುಗೊಳಿಸಲು ನಿರ್ಧರಿಸಲಾಗಿದೆ ಎಂದು ಡೆಕ್ಕನ್ ಹೆರಾಲ್ಡ್ ವರದಿ ಮಾಡಿದೆ.

“ಕೆಸಿಎಸ್ಆರ್ ನಿಯಮಗಳ ಪ್ರಕಾರ ಪ್ರೊಫೆಸರ್ ಗಾಯತ್ರಿ ದೇವರಾಜ್ ಅವರನ್ನು ಅಮಾನತುಗೊಳಿಸಲಾಗಿದೆ. ಆದೇಶದ ಪ್ರತಿಯನ್ನು ರಾಜ್ಯಪಾಲರು ಮತ್ತು ಸರ್ಕಾರಕ್ಕೆ ಕಳುಹಿಸಲಾಗುವುದು” ಎಂದು ವಿಶ್ವವಿದ್ಯಾಲಯದ ಉಪಕುಲಪತಿ ಬಿ.ಡಿ ಕುಂಬಾರ್ ತಿಳಿಸಿದ್ದಾಗಿ ವರದಿ ಹೇಳಿದೆ.

ನ್ಯಾಕ್ ಪರಿಶೀಲನಾ ಸಮಿತಿಯ ಸದಸ್ಯರೂ ಆಗಿರುವ ಗಾಯತ್ರಿ ಅವರನ್ನು ಇತ್ತೀಚೆಗೆ ಸಿಬಿಐ ಅಧಿಕಾರಿಗಳು ಲಂಚ ಸ್ವೀಕರಿಸಿದ ಆರೋಪದ ಮೇಲೆ ವಿಚಾರಣೆ ನಡೆಸಿ ಬಂಧಿಸಿದ್ದರು.

ಅಧಿಕಾರಿಗಳು ದಾವಣಗೆರೆ ನಗರದಲ್ಲಿರುವ ಪ್ರೊ. ಗಾಯತ್ರಿ ಅವರ ಮನೆಗೂ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಗಾಯತ್ರಿ ಅವರು ಈ ಹಿಂದೆ ವಿಶ್ವವಿದ್ಯಾಲಯದ ರಿಜಿಸ್ಟ್ರಾರ್ ಆಗಿಯೂ ಕರ್ತವ್ಯ ನಿರ್ವಹಿಸಿದ್ದರು.

ವಿದ್ಯಾ ಸಂಸ್ಥೆಗೆ ನ್ಯಾಕ್​ ಗ್ರೇಡ್​​​​ ಕೊಡಲು ಲಂಚಕ್ಕೆ ಬೇಡಿಕೆ ಇಟ್ಟ ಆರೋಪದ ಮೇಲೆ ಪ್ರೊ.ಗಾಯತ್ರಿ ದೇವರಾಜ್ ಸೇರಿದಂತೆ ಹಲವರನ್ನು ಹೈದರಾಬಾದ್​​ನಲ್ಲಿ ಸಿಬಿಐ ಅಧಿಕಾರಿಗಳು ಬಂಧಿಸಿದ್ದಾರೆ.

ಗಾಯತ್ರಿ ಅವರು ರಾಷ್ಟ್ರೀಯ ಮೌಲ್ಯಮಾಪನ ಮತ್ತು ಮಾನ್ಯತೆ ಮಂಡಳಿಯ (NAAC) ಏಳು ಸದಸ್ಯರ ಪರಿಶೀಲನೆ ತಂಡದ ಭಾಗವಾಗಿದ್ದರು.

ಬಂಧಿತ ವ್ಯಕ್ತಿಗಳಲ್ಲಿ ಪರಿಶೀಲನಾ ಸಮಿತಿಯ ಅಧ್ಯಕ್ಷ, ಆರು ಸದಸ್ಯರು ಮತ್ತು ಆಂಧ್ರ ಪ್ರದೇಶದ ಗುಂಟೂರಿನಲ್ಲಿರುವ ಕೋನೇರು ಲಕ್ಷ್ಮಯ್ಯ ಶಿಕ್ಷಣ ಪ್ರತಿಷ್ಠಾನದ (ಕೆಎಲ್‌ಇಎಫ್) ಉಪಕುಲಪತಿ, ಇಬ್ಬರು ಕಾರ್ಯನಿರ್ವಾಹಕರು ಸೇರಿದ್ದಾರೆ ಎಂದು ತಿಳಿದು ಬಂದಿದೆ.

ವರದಿಗಳ ಪ್ರಕಾರ, ಕೆಎಲ್‌ಇಎಫ್ ಶಿಕ್ಷಣ ಸಂಸ್ಥೆಯ ಪದಾಧಿಕಾರಿಗಳು ಹಾಗೂ ನ್ಯಾಕ್ ಪರಿಶೀಲನಾ ತಂಡದ ಸದಸ್ಯರ ವಿರುದ್ಧ ಸಿಬಿಐ ಪ್ರಕರಣ ದಾಖಲಿಸಿದೆ. ನ್ಯಾಕ್ ತಂಡದವರು ಕೆಎಲ್‌ಇಎಫ್ ಸಂಸ್ಥೆಗೆ ಅನುಕೂಲಕರವಾದ ರೇಟಿಂಗ್‌ ಮತ್ತು A++ ಮಾನ್ಯತೆ ನೀಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎಂದು ಆರೋಪಿಸಲಾಗಿದೆ.

ಮಾನನಷ್ಟ ಪ್ರಕರಣ: ರಾಜಿ ಮಾಡಿಕೊಳ್ಳುವಂತೆ ರೂಪಾ ಮೌದ್ಗಿಲ್–ರೋಹಿಣಿ ಸಿಂಧೂರಿಗೆ ಕೋರ್ಟ್‌ ಸಲಹೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...