Homeಕರ್ನಾಟಕತಸ್ವೀರ್ ದಕ್ಷಿಣ ಏಷ್ಯಾ ಚಿತ್ರೋತ್ಸವ: ಅತ್ಯುತ್ತಮ LGBTQI+ ಚಿತ್ರ ಪ್ರಶಸ್ತಿ ಪಡೆದ ಕನ್ನಡದ ‘ನಾನು ಲೇಡಿಸ್’

ತಸ್ವೀರ್ ದಕ್ಷಿಣ ಏಷ್ಯಾ ಚಿತ್ರೋತ್ಸವ: ಅತ್ಯುತ್ತಮ LGBTQI+ ಚಿತ್ರ ಪ್ರಶಸ್ತಿ ಪಡೆದ ಕನ್ನಡದ ‘ನಾನು ಲೇಡಿಸ್’

- Advertisement -
- Advertisement -

ನಟಿ, ನಿರ್ದೇಶಕಿ, ಬರಹಗಾರ್ತಿ ಶೈಲಜಾ ಪಡಿಂದಲ ನಿರ್ದೇಶಿಸಿರುವ ಕನ್ನಡದ ಮೊದಲ ಲೆಸ್ಬಿಯನ್ ಪ್ರೇಮಕಥೆಯ ಚಿತ್ರ ‘ನಾನು ಲೇಡಿಸ್’ ತಸ್ವೀರ್ ದಕ್ಷಿಣ ಏಷ್ಯಾ ಚಿತ್ರೋತ್ಸವದಲ್ಲಿ ಅತ್ಯುತ್ತಮ LGBTQI+ ಚಿತ್ರ ಪ್ರಶಸ್ತಿ ದೊರೆತಿದೆ.

ಲೆಸ್ಬಿಯನ್ ಪ್ರೇಮಕಥೆಯನ್ನು ಆಧರಿಸಿರುವ ಕನ್ನಡದ ಚಿತ್ರ ‘ನಾನು ಲೇಡಿಸ್’ ಅಕ್ಟೋಬರ್‌ 1 ರಿಂದ 16 ರವರೆಗೆ ಅಮೆರಿಕದ ಸಿಯಾಟಲ್‌ನಲ್ಲಿ ನಡೆದ 16 ನೇ ತಸ್ವೀರ್ ದಕ್ಷಿಣ ಏಷ್ಯನ್ ಚಲನಚಿತ್ರೋತ್ಸವದಲ್ಲಿ ಈ ಚಿತ್ರವನ್ನು ಪ್ರದರ್ಶಿಸಲಾಗಿತ್ತು.

’ನಾನು ಲೇಡಿಸ್’ ಚಲನಚಿತ್ರವು ಇಬ್ಬರು ಯುವತಿಯರು ಈ ಸಮಾಜದಲ್ಲಿ ತಮ್ಮ ಪ್ರೇಮವನ್ನು ಉಳಿಸಿಕೊಳ್ಳಲು ಹೆಣಗಾಡುವ ಕಥೆಯ ಜೊತೆಗೆ ಮಧ್ಯಮ ವರ್ಗದ ಆರ್ಥಿಕ ಸಮಸ್ಯೆಗಳು, ಸಮಾಜ, ಆರ್ಥಿಕ ವ್ಯವಸ್ಥೆ, ಲಿಂಗತ್ವ, ಮದುವೆ, ಸಲಿಂಗಿಗಳ ಸಮುದಾಯದ ಸಂತಾನೋತ್ಪತ್ತಿ ಹಕ್ಕುಗಳಂತಹ ಅನೇಕ ಅಂಶಗಳ ಕುರಿತು ಮಾತನಾಡುತ್ತದೆ ಎಂದು ಶೈಲಜಾ ಪಡಿಂದಲ ತಿಳಿಸಿದ್ದಾರೆ.

ಇದನ್ನೂ ಓದಿ: ಸರ್ದಾರ್ ಉಧಮ್ ಸಿನಿಮಾ; ಪ್ರಭುತ್ವದ ಹಿಂಸೆಗೆ ಪ್ರತಿಯಾಗಿ ಕ್ರಾಂತಿಕಾರಿ ಮಾರ್ಗ ತುಳಿದ ಯುವಕನ ಕಥೆ

ನಾನು ಲೇಡಿಸ್ ಚಿತ್ರತಂಡ

ಐದು ವರ್ಷದ ಕೆಳಗೆ ಶೈಲಜಾ ‘ಮೆಮೋರೀಸ್ ಆಫ್ ಮೆಷೀನ್’ ಎಂಬ ಕಿರುಚಿತ್ರ ನಿರ್ದೇಶಿಸುವ ಮೂಲಕ ನಿರ್ದೇಶನಕ್ಕೆ ಕಾಲಿಟ್ಟಿದ್ದರು. ಸಾಕಷ್ಟು ಚರ್ಚೆಗೆ ಕಾರಣವಾಗಿದ್ದ ಆ ಕಿರುಚಿತ್ರ ಉತ್ತಮ ಪ್ರತಿಕ್ರಿಯೆಯನ್ನು ಪಡೆದಿತ್ತು.

ಚಿತ್ರದಲ್ಲಿ ಶೈಲಜಾ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ಅವರೊಂದಿಗೆ ಮೇದಿನಿ ಕೆಳಮನೆ, ಗುರು ಸೋಮಸುಂದರಮ್ ಮೊದಲಾದವರು ಬಣ್ಣ ಹಚ್ಚಿದ್ದಾರೆ. ಛಾಯಾಗ್ರಹಣದ ಹೊಣೆಯನ್ನು ಹೊಸಬರಾದ ಕೋಮಲ್ ಖಿಯಾನಿ ಮತ್ತು ಚೆಹೆಕ್ ಬಿಲ್ಗಿ ಹೊತ್ತಿದ್ದಾರೆ. ಹರಿಣಿ ದಡ್ಡಲ್ ಸಿನಿಮಾಗೆ ಬಂಡವಾಳ ಹೂಡಿದ್ದಾರೆ.

ಚಿತ್ರದ ಪ್ರಮುಖ ಕೆಲಸಗಳನ್ನು ಮಹಿಳೆಯರೇ ಮಾಡಿರುವುದು ಈ ಚಿತ್ರದ ಗರಿಮೆ ಎನ್ನುತ್ತಾರೆ ಶೈಲಜಾ. ಈ ವರ್ಷದ ಡಿಸೆಂಬರ್‌ನಲ್ಲಿ ಒಟಿಟಿಗೆ ಬಿಡುಗಡೆ ಮಾಡುವ ಬಗ್ಗೆ ನಿರ್ಧಾರ ಆಗಿದೆ. ಜೊತೆಗೆ ಚಿತ್ರಮಂದಿರಗಳಲ್ಲಿಯೂ ಬಿಡುಗಡೆ ಮಡುವ ಬಗ್ಗೆ ಚರ್ಚೆ ನೆಡಸುತ್ತಿದ್ದೇವೆ ಎಂದಿದ್ದಾರೆ ನಿರ್ದೇಶಕಿ ಶೈಲಜಾ ಪಡಿಂದಲ.

ನಾನು ಲೇಡಿಸ್ ಚಿತ್ರದ ಬಗ್ಗೆ ಶೈಲಜಾ ಪಡಿಂದಲ ಅವರ ಮಾತು ಕೇಳಲು ಇಲ್ಲಿ ಕ್ಲಿಕ್ ಮಾಡಿ.

 

ನಾನು ಲೇಡಿಸ್ ಚಿತ್ರದ ಟ್ರೈಲರ್ ಇಲ್ಲಿದೆ.


ಇದನ್ನೂ ಓದಿ: ಕನ್ನಡದ ಮೊದಲ ಲೆಸ್ಬಿಯನ್ ಚಿತ್ರ ’ನಾನು ಲೇಡಿಸ್’ ತಸ್ವೀರ್ ದಕ್ಷಿಣ ಏಷ್ಯಾ ಚಿತ್ರೋತ್ಸವಕ್ಕೆ ಆಯ್ಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಧ್ಯಪ್ರಾಚ್ಯ ಸಂಘರ್ಷ| ಇರಾನ್ ಮೇಲಿನ ದಾಳಿಗೆ ಅಮೆರಿಕಾ ಭಾರತದ ಬಂದರುಗಳನ್ನು ಬಳಸುತ್ತಿದೆ ಎಂಬ ಹೇಳಿಕೆ ವೈರಲ್: ಭಾರತದ ಪ್ರತಿಕ್ರಿಯೆ ಏನು?

ಇರಾನ್ ಮೇಲೆ ನೌಕಾ ದಾಳಿ ನಡೆಸಲು ಅಮೆರಿಕ ಭಾರತದ ಬಂದರುಗಳನ್ನು ಬಳಸುತ್ತಿದೆ ಎಂಬ ವೈರಲ್ ಹೇಳಿಕೆಗಳನ್ನು ಭಾರತ ಬಲವಾಗಿ ತಿರಸ್ಕರಿಸಿದೆ. ಅಲ್ಲದೇ ಈ ಆರೋಪಗಳನ್ನು "ನಕಲಿ"  ಮತ್ತು “ಆಧಾರರಹಿತ” ಎಂದು ಕರೆದಿದೆ. ಬುಧವಾರ ವಿದೇಶಾಂಗ...

ಬಾಬಾ ಬುಡನ್‌ ಗಿರಿಯಲ್ಲಿ ಉರುಸ್ ನಡೆಸಲು ಅನುಮತಿ ನೀಡುವಂತೆ ‘ಪ್ರಗತಿಪರ ಸೌಹಾರ್ದ ಸಂಘಟನೆಗಳ’ ಆಗ್ರಹ

ಚಿಕ್ಕಮಗಳೂರಿನ ಬಾಬಾ ಬುಡನ್‌ ಗಿರಿಯಲ್ಲಿ ಉರುಸ್ ನಡೆಸಲು ಅನುಮತಿ ನೀಡುವಂತೆ ಆಗ್ರಹಿಸಿದ ಕರ್ನಾಟಕ ಸಮಸ್ತ ಪ್ರಗತಿಪರ ಸೌಹಾರ್ದ ಸಂಘಟನೆಗಳ ಮುಖಂಡರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬಹಿರಂಗ ಪತ್ರ ಬರೆದು ಆಗ್ರಹಿಸಿದ್ದಾರೆ. ಚಿಕ್ಕಮಗಳೂರಿನ ಬಾಬಾ ಬುಡನ್‌...

ಖಮೇನಿ ನಿಧನಕ್ಕೆ ತಡವಾಗಿ ಸಂತಾಪ ಸೂಚಿಸಿದ ಭಾರತ; ಇರಾನ್‌ ರಾಯಭಾರ ಕಚೇರಿಯಲ್ಲಿನ ಪುಸ್ತಕದಲ್ಲಿ ವಿಕ್ರಮ್ ಮಿಶ್ರಿ ಸಹಿ

ಇರಾನಿನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ನಿಧನಕ್ಕೆ ಭಾರತ ತಡವಾಗಿ ಸಂತಾಪ ಸೂಚಿಸಿದೆ. ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ ಗುರುವಾರ ನವದೆಹಲಿಯ ಇರಾನಿನ ರಾಯಭಾರ ಕಚೇರಿಯಲ್ಲಿ ಸಂತಾಪ ಸೂಚಿಸುವ ಪುಸ್ತಕಕ್ಕೆ...

ಉಕ್ರೇನ್, ಪಶ್ಚಿಮ ಏಷ್ಯಾದಲ್ಲಿನ ಸಂಘರ್ಷ ತ್ವರಿತವಾಗಿ ಕೊನೆಗೊಳಿಸಲು ಬೆಂಬಲಿಸುತ್ತೇನೆ: ಫಿನ್ಲೆಂಡ್‌ನಲ್ಲಿ ಪ್ರಧಾನಿ ಮೋದಿ

ನವದೆಹಲಿ: ಪಶ್ಚಿಮ ಏಷ್ಯಾ ಮತ್ತು ಉಕ್ರೇನ್‌ನಲ್ಲಿನ ಸಂಘರ್ಷಗಳಿಗೆ "ತ್ವರಿತ ಅಂತ್ಯ" ವನ್ನು ತರಲು ಪ್ರಧಾನಿ ನರೇಂದ್ರ ಮೋದಿ ಗುರುವಾರ ಕರೆ ನೀಡಿದ್ದಾರೆ, ಯಾವುದೇ ಸಮಸ್ಯೆಯನ್ನು ಮಿಲಿಟರಿ ಮುಖಾಮುಖಿಯ ಮೂಲಕ ಪರಿಹರಿಸಲು ಸಾಧ್ಯವಿಲ್ಲ ಎಂದು...

ಮಹಾರಾಷ್ಟ್ರ| ಬಣ್ಣ ಎರಚಿದ ಮೊಮ್ಮಗನ ಮೇಲೆ ಬಿಸಿ ನೀರು ಸುರಿದ ಮಹಿಳೆ; ಬಾಲಕನ ಸ್ಥಿತಿ ಗಂಭೀರ

ಮಹಾರಾಷ್ಟ್ರದ ನಾಗ್ಪುರ ಜಿಲ್ಲೆಯ ಕೊರಾಡಿ ಪ್ರದೇಶದಲ್ಲಿ ಹೋಲಿ ಆಡುತ್ತಿದ್ದಾಗ ನಾಲ್ಕು ವರ್ಷದ ಮೊಮ್ಮಗ ತನ್ನ ಮೇಲೆ ಬಣ್ಣ ಎರಚಿದ್ದರಿಂದ ಕೋಪಗೊಂಡ ಅಜ್ಜಿ ಮಗುವಿನ ಮೇಲೆ ಕುದಿಯುವ ನೀರನ್ನು ಸುರಿದಿರುವ ವಿಡಿಯೋ ಇದೀಗ ವೈರಲ್...

ಭಾರತದ ಕಾಲ ಬುಡದಲ್ಲಿ ಇರಾನ್ ನೌಕೆ ಮೇಲೆ ಅಮೆರಿಕ ದಾಳಿ : 100ರಷ್ಟು ಸಿಬ್ಬಂದಿ ಸಾವಿಗೀಡಾದರೂ ಮೋದಿ ಸರ್ಕಾರ ಮೌನ!

ಭಾರತದಿಂದ ಕೇವಲ 300 ಕಿಲೋ ಮೀಟರ್ ದೂರದಲ್ಲಿ ಇರಾನ್‌ನ ಅತ್ಯಾಧುನಿಕ ಯುದ್ಧನೌಕೆ 'ಐಆರ್‌ಐಎಸ್ ದೆನಾ' ಮೇಲೆ ಅಮೆರಿಕ ಜಲಾಂತರ್ಗಾಮಿ ಬುಧವಾರ (ಮಾ.4) ಭೀಕರ ದಾಳಿ ನಡೆಸಿದೆ. ಈ ಘಟನೆಯಲ್ಲಿ ಇರಾನ್‌ ನೌಕೆಯಲ್ಲಿದ್ದ 180 ಸಿಬ್ಬಂದಿಯ...

ಹಿಂದೂ ಮಹಾಸಾಗರದಲ್ಲಿ ಇರಾನ್ ನೌಕೆ ಮೇಲೆ ದಾಳಿ: ‘ರಾಜಿ ಮಾಡಿಕೊಂಡ ಪ್ರಧಾನಿ ಕಾರ್ಯತಂತ್ರದ ಸ್ವಾಯತ್ತತೆ ಬಿಟ್ಟುಕೊಟ್ಟರು: ರಾಹುಲ್ ಟೀಕೆ

ಹಿಂದೂ ಮಹಾಸಾಗರದಲ್ಲಿ ಇರಾನ್ ಯುದ್ಧನೌಕೆ ಐರಿಸ್ ದೇನಾದ ಮೇಲೆ ಅಮೆರಿಕಾ ದಾಳಿ ಮಾಡಿದ ಒಂದು ದಿನದ ನಂತರ, ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಪ್ರಧಾನಿ ನರೇಂದ್ರ ಮೋದಿ ಅವರ ಮೇಲೆ ವಾಗ್ದಾಳಿ...

ಟ್ರಂಪ್ ಬೆದರಿಕೆಗೆ ಹೆದರದ ಸ್ಪೇನ್ ಪ್ರಧಾನಿ; ಇರಾನ್ ಮೇಲಿನ ದಾಳಿಗೆ ಸೇನಾ ನೆಲೆ ಬಳಸಲು ಅನುಮತಿ ನಿರಾಕರಿಸಿದ ಪೆಡ್ರೊ ಸ್ಯಾಂಚೆಜ್

ಇರಾನ್ ಮೇಲೆ ದಾಳಿ ಮಾಡಲು ಅಮೆರಿಕದ ವಿಮಾನಗಳು ತನ್ನ ನೆಲೆಗಳನ್ನು ಬಳಸಲು ಅನುಮತಿಸಲು ಮ್ಯಾಡ್ರಿಡ್ ನಿರಾಕರಿಸಿದ್ದಕ್ಕೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾಡಿದ ಟೀಕೆಗಳಿಗೆ ಬುಧವಾರ ಸ್ಪ್ಯಾನಿಷ್ ಪ್ರಧಾನಿ ಪೆಡ್ರೊ ಸ್ಯಾಂಚೆಜ್ ತಿರುಗೇಟು...

ಭಾರತದಿಂದ ಹಿಂದಿರುಗುತ್ತಿದ್ದ ಯುದ್ಧನೌಕೆ ಮೇಲೆ ಹಠಾತ್ ದಾಳಿ : ಅಮೆರಿಕ ಪಶ್ಚಾತ್ತಾಪ ಪಡಲಿದೆ ಎಂದ ಇರಾನ್

ಭಾರತೀಯ ನೌಕಾಪಡೆಯ ಆಹ್ವಾನದ ಮೇರೆಗೆ ಸಮರಾಭ್ಯಾಸದಲ್ಲಿ ಭಾಗವಹಿಸಿ ಹಿಂದಿರುಗುತ್ತಿದ್ದ ಇರಾನ್‌ನ ಅತ್ಯಾಧುನಿಕ ಯುದ್ಧನೌಕೆ ಐಆರ್‌ಐಎಸ್ ದೆನಾ ಮೇಲೆ ಅಮೆರಿಕದ ಜಲಾಂತರ್ಗಾಮಿ ದಾಳಿ ನಡೆಸಿ ಅದನ್ನು ಮುಳುಗಿಸಿದೆ. ಮಾರ್ಚ್ 4ರಂದು ಶ್ರೀಲಂಕಾದ ದಕ್ಷಿಣ ಕರಾವಳಿಯಿಂದ ಸುಮಾರು 40 ನಾಟಿಕಲ್...

ದೆಹಲಿ| ಹೋಳಿ ಹಬ್ಬ ಸಡಗರದಲ್ಲಿ ಕುಡಿದು ವಾಹನ ಚಾಲನೆ; 1,200 ಕ್ಕೂ ಹೆಚ್ಚು ಜನರ ಮೇಲೆ ಪ್ರಕರಣ ದಾಖಲು

ಹೋಳಿ ಹಬ್ಬದಂದು ನಗರದಾದ್ಯಂತ ನಡೆಸಿದ ವಿಶೇಷ ಪರಿಶೀಲನೆಯಲ್ಲಿ ದೆಹಲಿ ಸಂಚಾರ ಪೊಲೀಸರು 1,200 ಕ್ಕೂ ಹೆಚ್ಚು ವಾಹನ ಚಾಲಕರ ವಿರುದ್ಧ ಕುಡಿದು ವಾಹನ ಚಲಾಯಿಸಿದ್ದಕ್ಕಾಗಿ ಪ್ರಕರಣ ದಾಖಲಿಸಿದ್ದಾರೆ. ಪಶ್ಚಿಮ ವಲಯದಿಂದ ಅತಿ ಹೆಚ್ಚು...