Homeಕರ್ನಾಟಕಮೈಸೂರು: ವಿವಾದಿತ ಮಾತೃಮಂಡಳಿ ವೃತ್ತ ನೆಲಸಮ

ಮೈಸೂರು: ವಿವಾದಿತ ಮಾತೃಮಂಡಳಿ ವೃತ್ತ ನೆಲಸಮ

- Advertisement -
- Advertisement -

ಮೈಸೂರು ಜಿಲ್ಲೆಯಲ್ಲಿ ವಿವಾದದ ಕೇಂದ್ರವಾಗಿದ್ದ ನಗರದ ಮಾತೃಮಂಡಳಿ ವೃತ್ತವನ್ನು ಗುರುವಾರದಂದು ನೆಲಸಮ ಮಾಡಲಾಗಿದೆ. ವೃತ್ತದಲ್ಲಿ ಪ್ರತಿಮೆಗಳನ್ನು ಇಡುವ ವಿಚಾರದಲ್ಲಿ ಇತ್ತೀಚೆಗೆ ವಿವಾದ ಉಂಟಾಗಿತ್ತು.

ಒಂದು ಬಣ ಡಾ.ಬಿ.ಆರ್‌. ಅಂಬೇಡ್ಕರ್‌ ಅವರ ಪ್ರತಿಮೆಯನ್ನು ವೃತ್ತದಲ್ಲಿ ಇಡಬೇಕು ಎಂದು ಪ್ರತಿಪಾದಿಸಿದ್ದರೆ, ಮತ್ತೊಂದು ಬಣ ಕುವೆಂಪು ಅವರ ಪ್ರತಿಮೆಯನ್ನು ಇಡಬೇಕು ಎಂದು ಒತ್ತಾಯಿಸುತ್ತಿತ್ತು.

ಇದನ್ನೂ ಓದಿ:ಮೈಸೂರು: ಅಂಬೇಡ್ಕರ್‌ ಪ್ರತಿಮೆ ತೆರವು; ಕತ್ತುಕೊಯ್ದುಕೊಂಡ ಯುವಕ; ಏನಿದು ವಿವಾದ?

ಈ ನಡುವೆ ಅನುಮತಿ ಪಡೆಯದೆ ಅಂಬೇಡ್ಕರ್‌ ಪ್ರತಿಮೆ ಇಟ್ಟಿರುವುದರಿಂದ ಪೊಲೀಸರು ಪ್ರತಿಮೆಯನ್ನು ತೆರವುಗೊಳಿಸಿದ್ದರು. ಇದರಿಂದ ಬೇಸರಗೊಂಡಿದ್ದ ಯುವಕನೊಬ್ಬ ಕತ್ತುಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದರು. ಈ ವೇಳೆ ತಕ್ಷಣ ಎಚ್ಚೆತ್ತುಕೊಂಡು ಪೊಲೀಸರು ಹಾಗೂ ಪಾಲಿಕೆ ಸಿಬ್ಬಂದಿ ಯುವಕನನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ. ಯುವಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.

ಎರಡು ಬಣಗಳ ನಡುವೆ ಕಚ್ಚಾಟದ ಹಿನ್ನೆಲೆಯಲ್ಲಿ ಇದೀಗ ಪೊಲೀಸ್‌ ಬಂದೋಬಸ್ತ್‌ನೊಂದಿಗೆ ವೃತ್ತವನ್ನು ಜೆಸಿಬಿ ಬಳಸಿ ತೆರವು ಮಾಡಲಾಗಿದೆ. ಇದನ್ನು ಖಂಡಿಸಿ ತಡೆಯಲು ಬಂದ ಕೆಲವರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಆಂದೋಲನ ಪತ್ರಿಕೆ ವರದಿ ಮಾಡಿದೆ.

ಇದನ್ನೂ ಓದಿ:Exclusive | ವಾರ್ಡನ್‌ಗಳು, ಕ್ಲರ್ಕ್‌ಗಳು ಸೇರಿ 46 ಲಕ್ಷ ರೂ. ನುಂಗಿದ್ದರು: ಮೈಸೂರು ವಿವಿ ಡೀನ್‌‌

ದಾರ್ಶನಿಕರ ಹೆಸರಲ್ಲಿ ಜಗಳ ಸಲ್ಲದು

ಸಂವಿಧಾನ ಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್‌, ರಾಷ್ಟ್ರಕವಿ ಕುವೆಂಪು ಅವರು ದೇಶಕಂಡ ಮಹಾನ್‌ ಮಾನವತಾವಾದಿಗಳು ಹಾಗೂ ದಾರ್ಶಕನಿಕರು. ಆದರೆ ಜಾತಿವಾದಿ ಸಮಾಜ ಈ ದಾರ್ಶನಿಕರನ್ನು ಜಾತಿಯ ಗೂಟಕ್ಕೆ ಕಟ್ಟಿರುವುದು ವಿಷಾದನೀಯ. ಈ ಇಬ್ಬರು ಮಹಾನೀಯರು ಸಮಾಜದಲ್ಲಿನ ಅಸಮಾನತೆ, ಶ್ರೇಣಿಕೃತ ವ್ಯವಸ್ಥೆಯನ್ನು ಪ್ರಶ್ನಿಸಿದವರು. ದುರಾದೃಷ್ಟವಶಾತ್‌ ಅಂಬೇಡ್ಕರ್‌ ಎಂದರೆ ದಲಿತರಿಗೆ, ಕುವೆಂಪು ಎಂದರೆ ಒಕ್ಕಲಿಗರಿಗೆ ಎಂಬ ವಿಂಗಡಣೆ ಆಗಿರುವುದು ಮಾತ್ರ ವಿಷಾದನೀಯ ಎಂದು ಸ್ಥಳೀಯರೊಬ್ಬರು ಬೇಸರ ವ್ಯಕ್ತಪಡಿಸಿದ್ದಾರೆ.

“ಕುವೆಂಪು ಹಾಗೂ ಅಂಬೇಡ್ಕರ್‌ ಅವರನ್ನು ಸಮಾನ ದೂರದಲ್ಲಿಟ್ಟು ಅಣಕ ಮಾಡುವ ರಾಜಕೀಯ ವ್ಯವಸ್ಥೆ ಒಂದು ಕಡೆ ಇದ್ದರೆ, ಈ ಇಬ್ಬರ ಹೆಸರಲ್ಲಿ ಜಗಳ ಆಡುತ್ತಿರುವ ಜನವರ್ಗ ಒಂದು ಕಡೆ ಇದೆ. ನಿನ್ನೆ ಆಗಿರುವ ಘಟನೆಗೂ ಇಂಥದ್ದೇ ಕಾರಣವಿದೆ” ಎಂದು ಅವರು ಹೇಳಿದ್ದಾರೆ.

ಮೈಸೂರು ನಗರದ ಪಡುವಾರಹಳ್ಳಿ, ಒಂಟಿಕೊಪ್ಪಲು ಭಾಗದಲ್ಲಿ ಇರುವ ಮಾತೃಮಂಡಳಿ ವೃತ್ತದಲ್ಲಿ ಅಂಬೇಡ್ಕರ್‌ ಪ್ರತಿಮೆ ಇಡಬೇಕೆಂದು ದಲಿತರು ಆಗ್ರಹಿಸುತ್ತಿದ್ದರೆ, ಕುವೆಂಪು ಪ್ರತಿಮೆ ಇಡಬೇಕೆಂದು ಒಕ್ಕಲಿಗರು ಬಯಸುತ್ತಿದ್ದರು. ಈ ಭಾಗದಲ್ಲಿ ದಲಿತರು, ನಾಯಕರು ಹಾಗೂ ಒಕ್ಕಲಿಗರು ಹೆಚ್ಚಿನ ಸಂಖ್ಯೆಯಲ್ಲಿ ವಾಸವಿದ್ದಾರೆ.

ಇದನ್ನೂ ಓದಿ:ಮೈಸೂರು: ಬಹುರೂಪಿ ರಾಷ್ಟ್ರೀಯ ನಾಟಕೋತ್ಸವ ಮುಂದೂಡಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಅಂಬೇಡ್ಕರ್ ಅವರ ಪ್ರತಿಮೆಗೆ ಒಕ್ಕಲಿಗರು ವಿರೋಧಿಸಿದ್ದು, ಕುವೆಂಪು ಅವರ ಪ್ರತಿಮೆಗೆ ದಲಿತರು ವಿರೋಧಿಸಿದ್ದು, ಈ ಎರಡೂ ತಪ್ಪು. ಈ ಎರಡು ಮಹಾನ್ ಚೇತನಗಳನ್ನು ಒಂದು ಜಾತಿಗೆ ಸೀಮಿತಗೊಳಿಸುವುದು ಅಪರಾಧ.

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...