Homeಕರ್ನಾಟಕಮೈಸೂರು: ವಿವಾದಿತ ಮಾತೃಮಂಡಳಿ ವೃತ್ತ ನೆಲಸಮ

ಮೈಸೂರು: ವಿವಾದಿತ ಮಾತೃಮಂಡಳಿ ವೃತ್ತ ನೆಲಸಮ

- Advertisement -
- Advertisement -

ಮೈಸೂರು ಜಿಲ್ಲೆಯಲ್ಲಿ ವಿವಾದದ ಕೇಂದ್ರವಾಗಿದ್ದ ನಗರದ ಮಾತೃಮಂಡಳಿ ವೃತ್ತವನ್ನು ಗುರುವಾರದಂದು ನೆಲಸಮ ಮಾಡಲಾಗಿದೆ. ವೃತ್ತದಲ್ಲಿ ಪ್ರತಿಮೆಗಳನ್ನು ಇಡುವ ವಿಚಾರದಲ್ಲಿ ಇತ್ತೀಚೆಗೆ ವಿವಾದ ಉಂಟಾಗಿತ್ತು.

ಒಂದು ಬಣ ಡಾ.ಬಿ.ಆರ್‌. ಅಂಬೇಡ್ಕರ್‌ ಅವರ ಪ್ರತಿಮೆಯನ್ನು ವೃತ್ತದಲ್ಲಿ ಇಡಬೇಕು ಎಂದು ಪ್ರತಿಪಾದಿಸಿದ್ದರೆ, ಮತ್ತೊಂದು ಬಣ ಕುವೆಂಪು ಅವರ ಪ್ರತಿಮೆಯನ್ನು ಇಡಬೇಕು ಎಂದು ಒತ್ತಾಯಿಸುತ್ತಿತ್ತು.

ಇದನ್ನೂ ಓದಿ:ಮೈಸೂರು: ಅಂಬೇಡ್ಕರ್‌ ಪ್ರತಿಮೆ ತೆರವು; ಕತ್ತುಕೊಯ್ದುಕೊಂಡ ಯುವಕ; ಏನಿದು ವಿವಾದ?

ಈ ನಡುವೆ ಅನುಮತಿ ಪಡೆಯದೆ ಅಂಬೇಡ್ಕರ್‌ ಪ್ರತಿಮೆ ಇಟ್ಟಿರುವುದರಿಂದ ಪೊಲೀಸರು ಪ್ರತಿಮೆಯನ್ನು ತೆರವುಗೊಳಿಸಿದ್ದರು. ಇದರಿಂದ ಬೇಸರಗೊಂಡಿದ್ದ ಯುವಕನೊಬ್ಬ ಕತ್ತುಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದರು. ಈ ವೇಳೆ ತಕ್ಷಣ ಎಚ್ಚೆತ್ತುಕೊಂಡು ಪೊಲೀಸರು ಹಾಗೂ ಪಾಲಿಕೆ ಸಿಬ್ಬಂದಿ ಯುವಕನನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ. ಯುವಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.

ಎರಡು ಬಣಗಳ ನಡುವೆ ಕಚ್ಚಾಟದ ಹಿನ್ನೆಲೆಯಲ್ಲಿ ಇದೀಗ ಪೊಲೀಸ್‌ ಬಂದೋಬಸ್ತ್‌ನೊಂದಿಗೆ ವೃತ್ತವನ್ನು ಜೆಸಿಬಿ ಬಳಸಿ ತೆರವು ಮಾಡಲಾಗಿದೆ. ಇದನ್ನು ಖಂಡಿಸಿ ತಡೆಯಲು ಬಂದ ಕೆಲವರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಆಂದೋಲನ ಪತ್ರಿಕೆ ವರದಿ ಮಾಡಿದೆ.

ಇದನ್ನೂ ಓದಿ:Exclusive | ವಾರ್ಡನ್‌ಗಳು, ಕ್ಲರ್ಕ್‌ಗಳು ಸೇರಿ 46 ಲಕ್ಷ ರೂ. ನುಂಗಿದ್ದರು: ಮೈಸೂರು ವಿವಿ ಡೀನ್‌‌

ದಾರ್ಶನಿಕರ ಹೆಸರಲ್ಲಿ ಜಗಳ ಸಲ್ಲದು

ಸಂವಿಧಾನ ಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್‌, ರಾಷ್ಟ್ರಕವಿ ಕುವೆಂಪು ಅವರು ದೇಶಕಂಡ ಮಹಾನ್‌ ಮಾನವತಾವಾದಿಗಳು ಹಾಗೂ ದಾರ್ಶಕನಿಕರು. ಆದರೆ ಜಾತಿವಾದಿ ಸಮಾಜ ಈ ದಾರ್ಶನಿಕರನ್ನು ಜಾತಿಯ ಗೂಟಕ್ಕೆ ಕಟ್ಟಿರುವುದು ವಿಷಾದನೀಯ. ಈ ಇಬ್ಬರು ಮಹಾನೀಯರು ಸಮಾಜದಲ್ಲಿನ ಅಸಮಾನತೆ, ಶ್ರೇಣಿಕೃತ ವ್ಯವಸ್ಥೆಯನ್ನು ಪ್ರಶ್ನಿಸಿದವರು. ದುರಾದೃಷ್ಟವಶಾತ್‌ ಅಂಬೇಡ್ಕರ್‌ ಎಂದರೆ ದಲಿತರಿಗೆ, ಕುವೆಂಪು ಎಂದರೆ ಒಕ್ಕಲಿಗರಿಗೆ ಎಂಬ ವಿಂಗಡಣೆ ಆಗಿರುವುದು ಮಾತ್ರ ವಿಷಾದನೀಯ ಎಂದು ಸ್ಥಳೀಯರೊಬ್ಬರು ಬೇಸರ ವ್ಯಕ್ತಪಡಿಸಿದ್ದಾರೆ.

“ಕುವೆಂಪು ಹಾಗೂ ಅಂಬೇಡ್ಕರ್‌ ಅವರನ್ನು ಸಮಾನ ದೂರದಲ್ಲಿಟ್ಟು ಅಣಕ ಮಾಡುವ ರಾಜಕೀಯ ವ್ಯವಸ್ಥೆ ಒಂದು ಕಡೆ ಇದ್ದರೆ, ಈ ಇಬ್ಬರ ಹೆಸರಲ್ಲಿ ಜಗಳ ಆಡುತ್ತಿರುವ ಜನವರ್ಗ ಒಂದು ಕಡೆ ಇದೆ. ನಿನ್ನೆ ಆಗಿರುವ ಘಟನೆಗೂ ಇಂಥದ್ದೇ ಕಾರಣವಿದೆ” ಎಂದು ಅವರು ಹೇಳಿದ್ದಾರೆ.

ಮೈಸೂರು ನಗರದ ಪಡುವಾರಹಳ್ಳಿ, ಒಂಟಿಕೊಪ್ಪಲು ಭಾಗದಲ್ಲಿ ಇರುವ ಮಾತೃಮಂಡಳಿ ವೃತ್ತದಲ್ಲಿ ಅಂಬೇಡ್ಕರ್‌ ಪ್ರತಿಮೆ ಇಡಬೇಕೆಂದು ದಲಿತರು ಆಗ್ರಹಿಸುತ್ತಿದ್ದರೆ, ಕುವೆಂಪು ಪ್ರತಿಮೆ ಇಡಬೇಕೆಂದು ಒಕ್ಕಲಿಗರು ಬಯಸುತ್ತಿದ್ದರು. ಈ ಭಾಗದಲ್ಲಿ ದಲಿತರು, ನಾಯಕರು ಹಾಗೂ ಒಕ್ಕಲಿಗರು ಹೆಚ್ಚಿನ ಸಂಖ್ಯೆಯಲ್ಲಿ ವಾಸವಿದ್ದಾರೆ.

ಇದನ್ನೂ ಓದಿ:ಮೈಸೂರು: ಬಹುರೂಪಿ ರಾಷ್ಟ್ರೀಯ ನಾಟಕೋತ್ಸವ ಮುಂದೂಡಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಅಂಬೇಡ್ಕರ್ ಅವರ ಪ್ರತಿಮೆಗೆ ಒಕ್ಕಲಿಗರು ವಿರೋಧಿಸಿದ್ದು, ಕುವೆಂಪು ಅವರ ಪ್ರತಿಮೆಗೆ ದಲಿತರು ವಿರೋಧಿಸಿದ್ದು, ಈ ಎರಡೂ ತಪ್ಪು. ಈ ಎರಡು ಮಹಾನ್ ಚೇತನಗಳನ್ನು ಒಂದು ಜಾತಿಗೆ ಸೀಮಿತಗೊಳಿಸುವುದು ಅಪರಾಧ.

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...