Homeಕರ್ನಾಟಕಮೈಸೂರು: ವಿವಾದಿತ ಮಾತೃಮಂಡಳಿ ವೃತ್ತ ನೆಲಸಮ

ಮೈಸೂರು: ವಿವಾದಿತ ಮಾತೃಮಂಡಳಿ ವೃತ್ತ ನೆಲಸಮ

- Advertisement -
- Advertisement -

ಮೈಸೂರು ಜಿಲ್ಲೆಯಲ್ಲಿ ವಿವಾದದ ಕೇಂದ್ರವಾಗಿದ್ದ ನಗರದ ಮಾತೃಮಂಡಳಿ ವೃತ್ತವನ್ನು ಗುರುವಾರದಂದು ನೆಲಸಮ ಮಾಡಲಾಗಿದೆ. ವೃತ್ತದಲ್ಲಿ ಪ್ರತಿಮೆಗಳನ್ನು ಇಡುವ ವಿಚಾರದಲ್ಲಿ ಇತ್ತೀಚೆಗೆ ವಿವಾದ ಉಂಟಾಗಿತ್ತು.

ಒಂದು ಬಣ ಡಾ.ಬಿ.ಆರ್‌. ಅಂಬೇಡ್ಕರ್‌ ಅವರ ಪ್ರತಿಮೆಯನ್ನು ವೃತ್ತದಲ್ಲಿ ಇಡಬೇಕು ಎಂದು ಪ್ರತಿಪಾದಿಸಿದ್ದರೆ, ಮತ್ತೊಂದು ಬಣ ಕುವೆಂಪು ಅವರ ಪ್ರತಿಮೆಯನ್ನು ಇಡಬೇಕು ಎಂದು ಒತ್ತಾಯಿಸುತ್ತಿತ್ತು.

ಇದನ್ನೂ ಓದಿ:ಮೈಸೂರು: ಅಂಬೇಡ್ಕರ್‌ ಪ್ರತಿಮೆ ತೆರವು; ಕತ್ತುಕೊಯ್ದುಕೊಂಡ ಯುವಕ; ಏನಿದು ವಿವಾದ?

ಈ ನಡುವೆ ಅನುಮತಿ ಪಡೆಯದೆ ಅಂಬೇಡ್ಕರ್‌ ಪ್ರತಿಮೆ ಇಟ್ಟಿರುವುದರಿಂದ ಪೊಲೀಸರು ಪ್ರತಿಮೆಯನ್ನು ತೆರವುಗೊಳಿಸಿದ್ದರು. ಇದರಿಂದ ಬೇಸರಗೊಂಡಿದ್ದ ಯುವಕನೊಬ್ಬ ಕತ್ತುಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದರು. ಈ ವೇಳೆ ತಕ್ಷಣ ಎಚ್ಚೆತ್ತುಕೊಂಡು ಪೊಲೀಸರು ಹಾಗೂ ಪಾಲಿಕೆ ಸಿಬ್ಬಂದಿ ಯುವಕನನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ. ಯುವಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.

ಎರಡು ಬಣಗಳ ನಡುವೆ ಕಚ್ಚಾಟದ ಹಿನ್ನೆಲೆಯಲ್ಲಿ ಇದೀಗ ಪೊಲೀಸ್‌ ಬಂದೋಬಸ್ತ್‌ನೊಂದಿಗೆ ವೃತ್ತವನ್ನು ಜೆಸಿಬಿ ಬಳಸಿ ತೆರವು ಮಾಡಲಾಗಿದೆ. ಇದನ್ನು ಖಂಡಿಸಿ ತಡೆಯಲು ಬಂದ ಕೆಲವರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಆಂದೋಲನ ಪತ್ರಿಕೆ ವರದಿ ಮಾಡಿದೆ.

ಇದನ್ನೂ ಓದಿ:Exclusive | ವಾರ್ಡನ್‌ಗಳು, ಕ್ಲರ್ಕ್‌ಗಳು ಸೇರಿ 46 ಲಕ್ಷ ರೂ. ನುಂಗಿದ್ದರು: ಮೈಸೂರು ವಿವಿ ಡೀನ್‌‌

ದಾರ್ಶನಿಕರ ಹೆಸರಲ್ಲಿ ಜಗಳ ಸಲ್ಲದು

ಸಂವಿಧಾನ ಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್‌, ರಾಷ್ಟ್ರಕವಿ ಕುವೆಂಪು ಅವರು ದೇಶಕಂಡ ಮಹಾನ್‌ ಮಾನವತಾವಾದಿಗಳು ಹಾಗೂ ದಾರ್ಶಕನಿಕರು. ಆದರೆ ಜಾತಿವಾದಿ ಸಮಾಜ ಈ ದಾರ್ಶನಿಕರನ್ನು ಜಾತಿಯ ಗೂಟಕ್ಕೆ ಕಟ್ಟಿರುವುದು ವಿಷಾದನೀಯ. ಈ ಇಬ್ಬರು ಮಹಾನೀಯರು ಸಮಾಜದಲ್ಲಿನ ಅಸಮಾನತೆ, ಶ್ರೇಣಿಕೃತ ವ್ಯವಸ್ಥೆಯನ್ನು ಪ್ರಶ್ನಿಸಿದವರು. ದುರಾದೃಷ್ಟವಶಾತ್‌ ಅಂಬೇಡ್ಕರ್‌ ಎಂದರೆ ದಲಿತರಿಗೆ, ಕುವೆಂಪು ಎಂದರೆ ಒಕ್ಕಲಿಗರಿಗೆ ಎಂಬ ವಿಂಗಡಣೆ ಆಗಿರುವುದು ಮಾತ್ರ ವಿಷಾದನೀಯ ಎಂದು ಸ್ಥಳೀಯರೊಬ್ಬರು ಬೇಸರ ವ್ಯಕ್ತಪಡಿಸಿದ್ದಾರೆ.

“ಕುವೆಂಪು ಹಾಗೂ ಅಂಬೇಡ್ಕರ್‌ ಅವರನ್ನು ಸಮಾನ ದೂರದಲ್ಲಿಟ್ಟು ಅಣಕ ಮಾಡುವ ರಾಜಕೀಯ ವ್ಯವಸ್ಥೆ ಒಂದು ಕಡೆ ಇದ್ದರೆ, ಈ ಇಬ್ಬರ ಹೆಸರಲ್ಲಿ ಜಗಳ ಆಡುತ್ತಿರುವ ಜನವರ್ಗ ಒಂದು ಕಡೆ ಇದೆ. ನಿನ್ನೆ ಆಗಿರುವ ಘಟನೆಗೂ ಇಂಥದ್ದೇ ಕಾರಣವಿದೆ” ಎಂದು ಅವರು ಹೇಳಿದ್ದಾರೆ.

ಮೈಸೂರು ನಗರದ ಪಡುವಾರಹಳ್ಳಿ, ಒಂಟಿಕೊಪ್ಪಲು ಭಾಗದಲ್ಲಿ ಇರುವ ಮಾತೃಮಂಡಳಿ ವೃತ್ತದಲ್ಲಿ ಅಂಬೇಡ್ಕರ್‌ ಪ್ರತಿಮೆ ಇಡಬೇಕೆಂದು ದಲಿತರು ಆಗ್ರಹಿಸುತ್ತಿದ್ದರೆ, ಕುವೆಂಪು ಪ್ರತಿಮೆ ಇಡಬೇಕೆಂದು ಒಕ್ಕಲಿಗರು ಬಯಸುತ್ತಿದ್ದರು. ಈ ಭಾಗದಲ್ಲಿ ದಲಿತರು, ನಾಯಕರು ಹಾಗೂ ಒಕ್ಕಲಿಗರು ಹೆಚ್ಚಿನ ಸಂಖ್ಯೆಯಲ್ಲಿ ವಾಸವಿದ್ದಾರೆ.

ಇದನ್ನೂ ಓದಿ:ಮೈಸೂರು: ಬಹುರೂಪಿ ರಾಷ್ಟ್ರೀಯ ನಾಟಕೋತ್ಸವ ಮುಂದೂಡಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಅಂಬೇಡ್ಕರ್ ಅವರ ಪ್ರತಿಮೆಗೆ ಒಕ್ಕಲಿಗರು ವಿರೋಧಿಸಿದ್ದು, ಕುವೆಂಪು ಅವರ ಪ್ರತಿಮೆಗೆ ದಲಿತರು ವಿರೋಧಿಸಿದ್ದು, ಈ ಎರಡೂ ತಪ್ಪು. ಈ ಎರಡು ಮಹಾನ್ ಚೇತನಗಳನ್ನು ಒಂದು ಜಾತಿಗೆ ಸೀಮಿತಗೊಳಿಸುವುದು ಅಪರಾಧ.

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...