Homeಕರ್ನಾಟಕಮೈಸೂರು: ವಿವಾದಿತ ಮಾತೃಮಂಡಳಿ ವೃತ್ತ ನೆಲಸಮ

ಮೈಸೂರು: ವಿವಾದಿತ ಮಾತೃಮಂಡಳಿ ವೃತ್ತ ನೆಲಸಮ

- Advertisement -
- Advertisement -

ಮೈಸೂರು ಜಿಲ್ಲೆಯಲ್ಲಿ ವಿವಾದದ ಕೇಂದ್ರವಾಗಿದ್ದ ನಗರದ ಮಾತೃಮಂಡಳಿ ವೃತ್ತವನ್ನು ಗುರುವಾರದಂದು ನೆಲಸಮ ಮಾಡಲಾಗಿದೆ. ವೃತ್ತದಲ್ಲಿ ಪ್ರತಿಮೆಗಳನ್ನು ಇಡುವ ವಿಚಾರದಲ್ಲಿ ಇತ್ತೀಚೆಗೆ ವಿವಾದ ಉಂಟಾಗಿತ್ತು.

ಒಂದು ಬಣ ಡಾ.ಬಿ.ಆರ್‌. ಅಂಬೇಡ್ಕರ್‌ ಅವರ ಪ್ರತಿಮೆಯನ್ನು ವೃತ್ತದಲ್ಲಿ ಇಡಬೇಕು ಎಂದು ಪ್ರತಿಪಾದಿಸಿದ್ದರೆ, ಮತ್ತೊಂದು ಬಣ ಕುವೆಂಪು ಅವರ ಪ್ರತಿಮೆಯನ್ನು ಇಡಬೇಕು ಎಂದು ಒತ್ತಾಯಿಸುತ್ತಿತ್ತು.

ಇದನ್ನೂ ಓದಿ:ಮೈಸೂರು: ಅಂಬೇಡ್ಕರ್‌ ಪ್ರತಿಮೆ ತೆರವು; ಕತ್ತುಕೊಯ್ದುಕೊಂಡ ಯುವಕ; ಏನಿದು ವಿವಾದ?

ಈ ನಡುವೆ ಅನುಮತಿ ಪಡೆಯದೆ ಅಂಬೇಡ್ಕರ್‌ ಪ್ರತಿಮೆ ಇಟ್ಟಿರುವುದರಿಂದ ಪೊಲೀಸರು ಪ್ರತಿಮೆಯನ್ನು ತೆರವುಗೊಳಿಸಿದ್ದರು. ಇದರಿಂದ ಬೇಸರಗೊಂಡಿದ್ದ ಯುವಕನೊಬ್ಬ ಕತ್ತುಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದರು. ಈ ವೇಳೆ ತಕ್ಷಣ ಎಚ್ಚೆತ್ತುಕೊಂಡು ಪೊಲೀಸರು ಹಾಗೂ ಪಾಲಿಕೆ ಸಿಬ್ಬಂದಿ ಯುವಕನನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ. ಯುವಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.

ಎರಡು ಬಣಗಳ ನಡುವೆ ಕಚ್ಚಾಟದ ಹಿನ್ನೆಲೆಯಲ್ಲಿ ಇದೀಗ ಪೊಲೀಸ್‌ ಬಂದೋಬಸ್ತ್‌ನೊಂದಿಗೆ ವೃತ್ತವನ್ನು ಜೆಸಿಬಿ ಬಳಸಿ ತೆರವು ಮಾಡಲಾಗಿದೆ. ಇದನ್ನು ಖಂಡಿಸಿ ತಡೆಯಲು ಬಂದ ಕೆಲವರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಆಂದೋಲನ ಪತ್ರಿಕೆ ವರದಿ ಮಾಡಿದೆ.

ಇದನ್ನೂ ಓದಿ:Exclusive | ವಾರ್ಡನ್‌ಗಳು, ಕ್ಲರ್ಕ್‌ಗಳು ಸೇರಿ 46 ಲಕ್ಷ ರೂ. ನುಂಗಿದ್ದರು: ಮೈಸೂರು ವಿವಿ ಡೀನ್‌‌

ದಾರ್ಶನಿಕರ ಹೆಸರಲ್ಲಿ ಜಗಳ ಸಲ್ಲದು

ಸಂವಿಧಾನ ಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್‌, ರಾಷ್ಟ್ರಕವಿ ಕುವೆಂಪು ಅವರು ದೇಶಕಂಡ ಮಹಾನ್‌ ಮಾನವತಾವಾದಿಗಳು ಹಾಗೂ ದಾರ್ಶಕನಿಕರು. ಆದರೆ ಜಾತಿವಾದಿ ಸಮಾಜ ಈ ದಾರ್ಶನಿಕರನ್ನು ಜಾತಿಯ ಗೂಟಕ್ಕೆ ಕಟ್ಟಿರುವುದು ವಿಷಾದನೀಯ. ಈ ಇಬ್ಬರು ಮಹಾನೀಯರು ಸಮಾಜದಲ್ಲಿನ ಅಸಮಾನತೆ, ಶ್ರೇಣಿಕೃತ ವ್ಯವಸ್ಥೆಯನ್ನು ಪ್ರಶ್ನಿಸಿದವರು. ದುರಾದೃಷ್ಟವಶಾತ್‌ ಅಂಬೇಡ್ಕರ್‌ ಎಂದರೆ ದಲಿತರಿಗೆ, ಕುವೆಂಪು ಎಂದರೆ ಒಕ್ಕಲಿಗರಿಗೆ ಎಂಬ ವಿಂಗಡಣೆ ಆಗಿರುವುದು ಮಾತ್ರ ವಿಷಾದನೀಯ ಎಂದು ಸ್ಥಳೀಯರೊಬ್ಬರು ಬೇಸರ ವ್ಯಕ್ತಪಡಿಸಿದ್ದಾರೆ.

“ಕುವೆಂಪು ಹಾಗೂ ಅಂಬೇಡ್ಕರ್‌ ಅವರನ್ನು ಸಮಾನ ದೂರದಲ್ಲಿಟ್ಟು ಅಣಕ ಮಾಡುವ ರಾಜಕೀಯ ವ್ಯವಸ್ಥೆ ಒಂದು ಕಡೆ ಇದ್ದರೆ, ಈ ಇಬ್ಬರ ಹೆಸರಲ್ಲಿ ಜಗಳ ಆಡುತ್ತಿರುವ ಜನವರ್ಗ ಒಂದು ಕಡೆ ಇದೆ. ನಿನ್ನೆ ಆಗಿರುವ ಘಟನೆಗೂ ಇಂಥದ್ದೇ ಕಾರಣವಿದೆ” ಎಂದು ಅವರು ಹೇಳಿದ್ದಾರೆ.

ಮೈಸೂರು ನಗರದ ಪಡುವಾರಹಳ್ಳಿ, ಒಂಟಿಕೊಪ್ಪಲು ಭಾಗದಲ್ಲಿ ಇರುವ ಮಾತೃಮಂಡಳಿ ವೃತ್ತದಲ್ಲಿ ಅಂಬೇಡ್ಕರ್‌ ಪ್ರತಿಮೆ ಇಡಬೇಕೆಂದು ದಲಿತರು ಆಗ್ರಹಿಸುತ್ತಿದ್ದರೆ, ಕುವೆಂಪು ಪ್ರತಿಮೆ ಇಡಬೇಕೆಂದು ಒಕ್ಕಲಿಗರು ಬಯಸುತ್ತಿದ್ದರು. ಈ ಭಾಗದಲ್ಲಿ ದಲಿತರು, ನಾಯಕರು ಹಾಗೂ ಒಕ್ಕಲಿಗರು ಹೆಚ್ಚಿನ ಸಂಖ್ಯೆಯಲ್ಲಿ ವಾಸವಿದ್ದಾರೆ.

ಇದನ್ನೂ ಓದಿ:ಮೈಸೂರು: ಬಹುರೂಪಿ ರಾಷ್ಟ್ರೀಯ ನಾಟಕೋತ್ಸವ ಮುಂದೂಡಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಅಂಬೇಡ್ಕರ್ ಅವರ ಪ್ರತಿಮೆಗೆ ಒಕ್ಕಲಿಗರು ವಿರೋಧಿಸಿದ್ದು, ಕುವೆಂಪು ಅವರ ಪ್ರತಿಮೆಗೆ ದಲಿತರು ವಿರೋಧಿಸಿದ್ದು, ಈ ಎರಡೂ ತಪ್ಪು. ಈ ಎರಡು ಮಹಾನ್ ಚೇತನಗಳನ್ನು ಒಂದು ಜಾತಿಗೆ ಸೀಮಿತಗೊಳಿಸುವುದು ಅಪರಾಧ.

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...