Homeಚಳವಳಿದೇಶವುಳಿಸಲು ಆಗ್ರಹಿಸಿ ಕಾರ್ಮಿಕ ಸಂಘಟನೆಗಳು, 'ನಾವು ಭಾರತೀಯರು' ಪ್ರತಿಭಟನೆ

ದೇಶವುಳಿಸಲು ಆಗ್ರಹಿಸಿ ಕಾರ್ಮಿಕ ಸಂಘಟನೆಗಳು, ‘ನಾವು ಭಾರತೀಯರು’ ಪ್ರತಿಭಟನೆ

- Advertisement -
- Advertisement -

ಕೋವಿಡ್ ಸನ್ನಿವೇಶವನ್ನು ಬಳಸಿಕೊಂಡು ಕಾರ್ಮಿಕ ಕಾನೂನು ಬದಲಾವಣೆ, ಎಪಿಎಂಸಿ ಕಾಯ್ದೆ, ಸುಧಾರಣೆ ಕಾಯ್ದೆ, ವಿದ್ಯುತ್ ಕಾಯ್ದೆ, ಅಗತ್ಯವಸ್ತುಗಳ ಕಾಯ್ದೆ, ಭೂಕಂದಾಯ ಕಾಯ್ದೆಗಳ ತಿದ್ದುಪಡಿಗೊಳಿಸುತ್ತಿರುವ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಕ್ರಮವನ್ನು ಖಂಡಿಸಿ ಕೇಂದ್ರ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ, ಎಐಕೆಎಸ್‍ಸಿಸಿ, ದಲಿತ ಸಂಘಟನೆಗಳ ಒಕ್ಕೂಟ, ತುಮಕೂರು ಜಿಲ್ಲಾ ಕೊಳಗೇರಿ ನಿವಾಸಿಗಳ ಹಿತರಕ್ಷಣಾ ಸಮಿತಿ, ನಾವು ಭಾರತೀಯರು ನೇತೃತ್ವದಲ್ಲಿ ತುಮಕೂರು ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಜನಪರ ಚಿಂತಕ ಕೆ.ದೊರೈರಾಜ್ ಮಾತನಾಡಿ ಪ್ರಭುತ್ವಗಳು ಕೊರೊನ ಸೋಂಕು ಭೀತಿ ಹುಟ್ಟಿಸಿ ದಮನಕಾರಿ ಕಾನೂನುಗಳ ಜಾರಿಗೆ ತರುತ್ತಿವೆ. ಇದು ರೈತ, ಕಾರ್ಮಿಕ ಮತ್ತು ಜನ ವಿರೋಧಿಯಾಗಿದ್ದು ಜನತೆಗೆ ದ್ರೋಹ ಬಗೆಯುತ್ತಿವೆ ಎಂದು ಆರೋಪಿಸಿದರು.

ಕೊರೊನಾ ಕಾಯಿಲೆಯನ್ನು ಭಯೋತ್ಪಾದನೆ ಎಂಬಂತೆ ಬಿಂಬಿಸಲಾಗುತ್ತಿದೆ. ಜನರ ಸಂಕಷ್ಟಗಳಿಗೆ ಸ್ಪಂದಿಸಬೇಕಾದ ಸರ್ಕಾರಗಳು ಬಂಡವಾಳಶಾಹಿ, ಶ್ರೀಮಂತರೊಂದಿಗೆ ಸೇರಿಕೋಂಡು ಕೋಮುವಾದಿ ಮತ್ತು ಜನ ವಿರೋಧಿ ನೀತಿಗಳನ್ನು ಜಾರಿಗೊಳಿಸುತ್ತಿವೆ. ಇಂತಹ ಸಂದರ್ಭದಲ್ಲಿ ಐಕ್ಯಹೋರಾಟಗಳು ಅಗತ್ಯ ಎಂದು ಪ್ರತಿಪಾದಿಸಿದರು.

ಎಐಕೆಎಸ್‍ಸಿಸಿ ಜಿಲ್ಲಾ ಸಂಚಾಲಕ ಸಿ.ಯತಿರಾಜು, ನೂತನ ಶಿಕ್ಷಣ ನೀತಿ ಜಾರಿಯನ್ನು ಕೈಬಿಟ್ಟು, ಆನ್ ಲೈನ್ ಶಿಕ್ಷಣ ಮತ್ತು ಪರೀಕ್ಷೆಗಳನ್ನು ಈ ಅವಧಿಯಲ್ಲಿ ನಿಷೇಧಿಸಬೇಕು, ಎಲ್ಲಾ ಕೃಷಿ ಸಾಲವನ್ನು ಮನ್ನಾ ಮಾಡಬೇಕು ಮತ್ತು ಹೊಸದಾಗಿ ಸಾಲ ನೀಡಬೇಕೆಂದು ಒತ್ತಾಯಿಸಿದರು.

ಆದಾಯ ತೆರಿಗೆ ಮಿತಿಯ ಹೊರಗಿರುವ ಎಲ್ಲಾ ಕುಟುಂಬಳಿಗೆ ಮುಂದಿನ ಆರು ತಿಂಗಳು ಮಾಸಿಕ 7,500 ಹಾಗೂ ಉಚಿತ ಪಡಿತರ ಸಾಮಗ್ರಿಗಳನ್ನು ವಿತರಣೆ ಮಾಡಬೇಕು. ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿಯಲ್ಲಿ ಕೆಲಸದ ದಿನಗಳನ್ನು 200 ದಿನಗಳಿಗೆ ಹೆಚ್ಚಿಸಬೇಕು. ನಗರ ಪ್ರದೇಶಗಳಿಗೆ ಯೋಜನೆ ವಿಸ್ತರಿಸಬೇಕು ಎಂದರು

ಸಿಐಟಿಯು ಜಿಲ್ಲಾಧ್ಯಕ್ಷ ಸೈಯದ್ ಮುಜೀಬ್ ಮಾತನಾಡಿ ಜನಸಾಮಾನ್ಯರು ತೀವ್ರ ಸಂಕಷ್ಟದಲ್ಲಿರುವ ಸಂದರ್ಭದಲ್ಲಿ ಸರ್ಕಾರ ಜನರ ನೆರವಿಗೆ ಧಾವಿಸದೆ ಜನತೆಯ ಆಸ್ತಿಯಾದ ರೈಲ್ವೆ, ರಕ್ಷಣಾ ವಲಯದ ಕಾರ್ಖಾನೆಗಳು, ಜೀವ ವಿಮಾ ನಿಗಮ, ಬ್ಯಾಂಕ್‍ಗಳು, ಬಂದರು, ವಿಮಾನ ನಿಲ್ದಾಣಗಳು ಮತ್ತು ಮತ್ತಿತರ ಸಾರ್ವಜನಿಕ ವಲಯದ ಕಂಪನಿಗಳನ್ನು ಖಾಸಗೀಕರಣಗೊಳಿಸುತ್ತಿದೆ. ಇದನ್ನು ಈ ಕೂಡಲೇ ತಡೆಯಬೇಕು ಹಾಗೂ ಅಸಂಘಟಿತ ವಲಯದ ಕೋಟ್ಯಂತರ ಕಾರ್ಮಿಕರಿಗೆ ಸಹಾಯಹಸ್ತ ನೀಡಬೇಕು. ವಿಪರೀತ ಹೆಚ್ಚಿರುವ ನಿರುದ್ಯೋಗಕ್ಕೆ ಪರಿಹಾರ ಕಾಣಲು ಉದ್ಯೋಗ ಸೃಷ್ಟಿಯ ದಿನಗಳನ್ನು ಸೃಷ್ಟಿಸಬೇಕು ಎಂದು ಆಗ್ರಹಿಸಿದರು.

ಎಐಟಿಯುಸಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗಿರೀಶ್ ಮಾತನಾಡಿ, ಮಾಲಿಕರ ವಿರುದ್ಧ ಕೈಗಾರಿಕಾ ವಿವಾದಗಳನ್ನು,ದೂರುಗಳನ್ನು ಅಂಗೀಕರಿಸುವಲ್ಲಿ ವಿಳಂಬ, ಸರಿಯಾದ ತನಿಖೆಯಿಲ್ಲದೆ ಕಾರ್ಮಿಕರ ಸಮಸ್ಯೆಗಳನ್ನು ಆಲಿಸದೆ, ಲೇ-ಆಫ್, ರಿಟ್ರೆಂಚ್ಮೆಂಟ್, ಮುಚ್ಚುವಿಕೆಗಳಿಗೆ ಶೀಘ್ರ ಅನುಮತಿ ಇತ್ಯಾದಿಗಳ ಮೂಲಕ ಕಾರ್ಮಿಕ ಇಲಾಖೆ ಕಾನೂನು ಜಾರಿಯಲ್ಲಿ ನಿರ್ಲಕ್ಷ್ಯ ಧೋರಣೆ ತಾಳಿರುವುದನ್ನು ಸರಿಯಲ್ಲ ಎಂದರು.

ಎಐಟಿಯುಟಿಯುಸಿ ಸಂಚಾಲಕಿ ಮಂಜುಳ ಮಾತನಾಡಿ, ಕೋವಿಡ್ ಅವಧಿಯಲ್ಲಿ ಹೆಚ್ಚಿರುವ ಮಹಿಳೆಯರು, ದಲಿತರು ಮತ್ತು ಅಲ್ಪಸಂಖ್ಯಾರ ಮೇಲೆ ದೌರ್ಜನ್ಯಗಳು ಹೆಚ್ಚುತ್ತಿವೆ. ಇದನ್ನು ತಡೆಯುವಲ್ಲಿ ಸರ್ಕಾರಗಳು ವಿಫಲವಾಗಿವೆ ಎಂದು ಹೇಳಿದರು.

ದಲಿತ ಸಂಘರ್ಷ ಸಮಿತಿ ಜಿಲ್ಲಾಧ್ಯಕ್ಷ ಪಿ.ಎನ್.ರಾಮಯ್ಯ ಕೋವಿಡ್ ನಿಯಂತ್ರಣ ಮಾಡಬೇಕಾದ ಸರ್ಕಾರಗಳು ಯಾವುದೇ ಕ್ರಮವನ್ನು ಕೈಗೊಳ್ಳುತ್ತಿಲ್ಲ. ಕೇಂದ್ರದ ನರೇಂದ್ರ ಮೋದಿ ಸರ್ಕಾರ ಸತ್ತುಹೋಗಿದೆ. ಹಾಗೆಯೇ ರಾಜ್ಯದಲ್ಲಿ ಯಡಿಯೂರಪ್ಪ ಸರ್ಕಾರ ಇಲ್ಲವಾಗಿದೆ ಎಂದು ವಾಗ್ದಾಳಿ ನಡೆಸಿದರು.

ಸಮಾಜ ಸೇವಕ ತಾಜುದ್ದೀನ್ ಷರೀಫ್ ಮಾತನಾಡಿ ದೇಶದಲ್ಲಿ ಪ್ರತಿಪರ  ಚಿಂತಕರನ್ನು ಬಂಧಿಸುವ, ಅವರನ್ನು ಸುಳ್ಳು ಮೊಕದ್ದಮೆಗಳಲ್ಲಿ ಸಿಲುಕಿಸಿ ಜೈಲಿಗೆ ಕಳೆಸುವ ಸೇಡಿನ ಕ್ರಮವನ್ನು ಸರ್ಕಾರಗಳು ನಿಲ್ಲಿಸಬೇಕು ಎಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಕೊಳಗೇರಿ ನಿವಾಸಿಗಳ ಹಿತರಕ್ಷಣಾ ಸಮಿತಿ ಜಿಲ್ಲಾಧ್ಯಕ್ಷ ಎ.ನರಸಿಂಹಮೂರ್ತಿ, ಕರ್ನಾಟಕ ಪ್ರಾಂತ ರೈತ ಸಂಘದ ಸಿ.ಅಜ್ಜಪ್ಪ,  ಪ್ರಾಂತ ರೈತ ಸಂಘದ ಬಿ.ಉಮೇಶ್, ಸಿಐಟಿಯು ತಾಲೂಕು ಕಾರ್ಯದರ್ಶಿ ರಂಗಧಾಮಯ್ಯ, ಎಐಟಿಯುಸಿ ಮುಖಂಡ ಕಂಬೇಗೌಡ, ಪದ್ಮನಾಭ್, ನಾಗಣ್ಣ ಅಂಗನವಾಡಿ ನೌಕರರ ಸಂಘದ ಗೌರಮ್ಮ, ಜಬೀನ, ಗಂಗಾ ಮೊದಲಾದವರು ಉಪಸ್ಥಿತರಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...