Homeಚಳವಳಿದೇಶವುಳಿಸಲು ಆಗ್ರಹಿಸಿ ಕಾರ್ಮಿಕ ಸಂಘಟನೆಗಳು, 'ನಾವು ಭಾರತೀಯರು' ಪ್ರತಿಭಟನೆ

ದೇಶವುಳಿಸಲು ಆಗ್ರಹಿಸಿ ಕಾರ್ಮಿಕ ಸಂಘಟನೆಗಳು, ‘ನಾವು ಭಾರತೀಯರು’ ಪ್ರತಿಭಟನೆ

- Advertisement -
- Advertisement -

ಕೋವಿಡ್ ಸನ್ನಿವೇಶವನ್ನು ಬಳಸಿಕೊಂಡು ಕಾರ್ಮಿಕ ಕಾನೂನು ಬದಲಾವಣೆ, ಎಪಿಎಂಸಿ ಕಾಯ್ದೆ, ಸುಧಾರಣೆ ಕಾಯ್ದೆ, ವಿದ್ಯುತ್ ಕಾಯ್ದೆ, ಅಗತ್ಯವಸ್ತುಗಳ ಕಾಯ್ದೆ, ಭೂಕಂದಾಯ ಕಾಯ್ದೆಗಳ ತಿದ್ದುಪಡಿಗೊಳಿಸುತ್ತಿರುವ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಕ್ರಮವನ್ನು ಖಂಡಿಸಿ ಕೇಂದ್ರ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ, ಎಐಕೆಎಸ್‍ಸಿಸಿ, ದಲಿತ ಸಂಘಟನೆಗಳ ಒಕ್ಕೂಟ, ತುಮಕೂರು ಜಿಲ್ಲಾ ಕೊಳಗೇರಿ ನಿವಾಸಿಗಳ ಹಿತರಕ್ಷಣಾ ಸಮಿತಿ, ನಾವು ಭಾರತೀಯರು ನೇತೃತ್ವದಲ್ಲಿ ತುಮಕೂರು ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಜನಪರ ಚಿಂತಕ ಕೆ.ದೊರೈರಾಜ್ ಮಾತನಾಡಿ ಪ್ರಭುತ್ವಗಳು ಕೊರೊನ ಸೋಂಕು ಭೀತಿ ಹುಟ್ಟಿಸಿ ದಮನಕಾರಿ ಕಾನೂನುಗಳ ಜಾರಿಗೆ ತರುತ್ತಿವೆ. ಇದು ರೈತ, ಕಾರ್ಮಿಕ ಮತ್ತು ಜನ ವಿರೋಧಿಯಾಗಿದ್ದು ಜನತೆಗೆ ದ್ರೋಹ ಬಗೆಯುತ್ತಿವೆ ಎಂದು ಆರೋಪಿಸಿದರು.

ಕೊರೊನಾ ಕಾಯಿಲೆಯನ್ನು ಭಯೋತ್ಪಾದನೆ ಎಂಬಂತೆ ಬಿಂಬಿಸಲಾಗುತ್ತಿದೆ. ಜನರ ಸಂಕಷ್ಟಗಳಿಗೆ ಸ್ಪಂದಿಸಬೇಕಾದ ಸರ್ಕಾರಗಳು ಬಂಡವಾಳಶಾಹಿ, ಶ್ರೀಮಂತರೊಂದಿಗೆ ಸೇರಿಕೋಂಡು ಕೋಮುವಾದಿ ಮತ್ತು ಜನ ವಿರೋಧಿ ನೀತಿಗಳನ್ನು ಜಾರಿಗೊಳಿಸುತ್ತಿವೆ. ಇಂತಹ ಸಂದರ್ಭದಲ್ಲಿ ಐಕ್ಯಹೋರಾಟಗಳು ಅಗತ್ಯ ಎಂದು ಪ್ರತಿಪಾದಿಸಿದರು.

ಎಐಕೆಎಸ್‍ಸಿಸಿ ಜಿಲ್ಲಾ ಸಂಚಾಲಕ ಸಿ.ಯತಿರಾಜು, ನೂತನ ಶಿಕ್ಷಣ ನೀತಿ ಜಾರಿಯನ್ನು ಕೈಬಿಟ್ಟು, ಆನ್ ಲೈನ್ ಶಿಕ್ಷಣ ಮತ್ತು ಪರೀಕ್ಷೆಗಳನ್ನು ಈ ಅವಧಿಯಲ್ಲಿ ನಿಷೇಧಿಸಬೇಕು, ಎಲ್ಲಾ ಕೃಷಿ ಸಾಲವನ್ನು ಮನ್ನಾ ಮಾಡಬೇಕು ಮತ್ತು ಹೊಸದಾಗಿ ಸಾಲ ನೀಡಬೇಕೆಂದು ಒತ್ತಾಯಿಸಿದರು.

ಆದಾಯ ತೆರಿಗೆ ಮಿತಿಯ ಹೊರಗಿರುವ ಎಲ್ಲಾ ಕುಟುಂಬಳಿಗೆ ಮುಂದಿನ ಆರು ತಿಂಗಳು ಮಾಸಿಕ 7,500 ಹಾಗೂ ಉಚಿತ ಪಡಿತರ ಸಾಮಗ್ರಿಗಳನ್ನು ವಿತರಣೆ ಮಾಡಬೇಕು. ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿಯಲ್ಲಿ ಕೆಲಸದ ದಿನಗಳನ್ನು 200 ದಿನಗಳಿಗೆ ಹೆಚ್ಚಿಸಬೇಕು. ನಗರ ಪ್ರದೇಶಗಳಿಗೆ ಯೋಜನೆ ವಿಸ್ತರಿಸಬೇಕು ಎಂದರು

ಸಿಐಟಿಯು ಜಿಲ್ಲಾಧ್ಯಕ್ಷ ಸೈಯದ್ ಮುಜೀಬ್ ಮಾತನಾಡಿ ಜನಸಾಮಾನ್ಯರು ತೀವ್ರ ಸಂಕಷ್ಟದಲ್ಲಿರುವ ಸಂದರ್ಭದಲ್ಲಿ ಸರ್ಕಾರ ಜನರ ನೆರವಿಗೆ ಧಾವಿಸದೆ ಜನತೆಯ ಆಸ್ತಿಯಾದ ರೈಲ್ವೆ, ರಕ್ಷಣಾ ವಲಯದ ಕಾರ್ಖಾನೆಗಳು, ಜೀವ ವಿಮಾ ನಿಗಮ, ಬ್ಯಾಂಕ್‍ಗಳು, ಬಂದರು, ವಿಮಾನ ನಿಲ್ದಾಣಗಳು ಮತ್ತು ಮತ್ತಿತರ ಸಾರ್ವಜನಿಕ ವಲಯದ ಕಂಪನಿಗಳನ್ನು ಖಾಸಗೀಕರಣಗೊಳಿಸುತ್ತಿದೆ. ಇದನ್ನು ಈ ಕೂಡಲೇ ತಡೆಯಬೇಕು ಹಾಗೂ ಅಸಂಘಟಿತ ವಲಯದ ಕೋಟ್ಯಂತರ ಕಾರ್ಮಿಕರಿಗೆ ಸಹಾಯಹಸ್ತ ನೀಡಬೇಕು. ವಿಪರೀತ ಹೆಚ್ಚಿರುವ ನಿರುದ್ಯೋಗಕ್ಕೆ ಪರಿಹಾರ ಕಾಣಲು ಉದ್ಯೋಗ ಸೃಷ್ಟಿಯ ದಿನಗಳನ್ನು ಸೃಷ್ಟಿಸಬೇಕು ಎಂದು ಆಗ್ರಹಿಸಿದರು.

ಎಐಟಿಯುಸಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗಿರೀಶ್ ಮಾತನಾಡಿ, ಮಾಲಿಕರ ವಿರುದ್ಧ ಕೈಗಾರಿಕಾ ವಿವಾದಗಳನ್ನು,ದೂರುಗಳನ್ನು ಅಂಗೀಕರಿಸುವಲ್ಲಿ ವಿಳಂಬ, ಸರಿಯಾದ ತನಿಖೆಯಿಲ್ಲದೆ ಕಾರ್ಮಿಕರ ಸಮಸ್ಯೆಗಳನ್ನು ಆಲಿಸದೆ, ಲೇ-ಆಫ್, ರಿಟ್ರೆಂಚ್ಮೆಂಟ್, ಮುಚ್ಚುವಿಕೆಗಳಿಗೆ ಶೀಘ್ರ ಅನುಮತಿ ಇತ್ಯಾದಿಗಳ ಮೂಲಕ ಕಾರ್ಮಿಕ ಇಲಾಖೆ ಕಾನೂನು ಜಾರಿಯಲ್ಲಿ ನಿರ್ಲಕ್ಷ್ಯ ಧೋರಣೆ ತಾಳಿರುವುದನ್ನು ಸರಿಯಲ್ಲ ಎಂದರು.

ಎಐಟಿಯುಟಿಯುಸಿ ಸಂಚಾಲಕಿ ಮಂಜುಳ ಮಾತನಾಡಿ, ಕೋವಿಡ್ ಅವಧಿಯಲ್ಲಿ ಹೆಚ್ಚಿರುವ ಮಹಿಳೆಯರು, ದಲಿತರು ಮತ್ತು ಅಲ್ಪಸಂಖ್ಯಾರ ಮೇಲೆ ದೌರ್ಜನ್ಯಗಳು ಹೆಚ್ಚುತ್ತಿವೆ. ಇದನ್ನು ತಡೆಯುವಲ್ಲಿ ಸರ್ಕಾರಗಳು ವಿಫಲವಾಗಿವೆ ಎಂದು ಹೇಳಿದರು.

ದಲಿತ ಸಂಘರ್ಷ ಸಮಿತಿ ಜಿಲ್ಲಾಧ್ಯಕ್ಷ ಪಿ.ಎನ್.ರಾಮಯ್ಯ ಕೋವಿಡ್ ನಿಯಂತ್ರಣ ಮಾಡಬೇಕಾದ ಸರ್ಕಾರಗಳು ಯಾವುದೇ ಕ್ರಮವನ್ನು ಕೈಗೊಳ್ಳುತ್ತಿಲ್ಲ. ಕೇಂದ್ರದ ನರೇಂದ್ರ ಮೋದಿ ಸರ್ಕಾರ ಸತ್ತುಹೋಗಿದೆ. ಹಾಗೆಯೇ ರಾಜ್ಯದಲ್ಲಿ ಯಡಿಯೂರಪ್ಪ ಸರ್ಕಾರ ಇಲ್ಲವಾಗಿದೆ ಎಂದು ವಾಗ್ದಾಳಿ ನಡೆಸಿದರು.

ಸಮಾಜ ಸೇವಕ ತಾಜುದ್ದೀನ್ ಷರೀಫ್ ಮಾತನಾಡಿ ದೇಶದಲ್ಲಿ ಪ್ರತಿಪರ  ಚಿಂತಕರನ್ನು ಬಂಧಿಸುವ, ಅವರನ್ನು ಸುಳ್ಳು ಮೊಕದ್ದಮೆಗಳಲ್ಲಿ ಸಿಲುಕಿಸಿ ಜೈಲಿಗೆ ಕಳೆಸುವ ಸೇಡಿನ ಕ್ರಮವನ್ನು ಸರ್ಕಾರಗಳು ನಿಲ್ಲಿಸಬೇಕು ಎಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಕೊಳಗೇರಿ ನಿವಾಸಿಗಳ ಹಿತರಕ್ಷಣಾ ಸಮಿತಿ ಜಿಲ್ಲಾಧ್ಯಕ್ಷ ಎ.ನರಸಿಂಹಮೂರ್ತಿ, ಕರ್ನಾಟಕ ಪ್ರಾಂತ ರೈತ ಸಂಘದ ಸಿ.ಅಜ್ಜಪ್ಪ,  ಪ್ರಾಂತ ರೈತ ಸಂಘದ ಬಿ.ಉಮೇಶ್, ಸಿಐಟಿಯು ತಾಲೂಕು ಕಾರ್ಯದರ್ಶಿ ರಂಗಧಾಮಯ್ಯ, ಎಐಟಿಯುಸಿ ಮುಖಂಡ ಕಂಬೇಗೌಡ, ಪದ್ಮನಾಭ್, ನಾಗಣ್ಣ ಅಂಗನವಾಡಿ ನೌಕರರ ಸಂಘದ ಗೌರಮ್ಮ, ಜಬೀನ, ಗಂಗಾ ಮೊದಲಾದವರು ಉಪಸ್ಥಿತರಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...