Homeಚಳವಳಿದೇಶವುಳಿಸಲು ಆಗ್ರಹಿಸಿ ಕಾರ್ಮಿಕ ಸಂಘಟನೆಗಳು, 'ನಾವು ಭಾರತೀಯರು' ಪ್ರತಿಭಟನೆ

ದೇಶವುಳಿಸಲು ಆಗ್ರಹಿಸಿ ಕಾರ್ಮಿಕ ಸಂಘಟನೆಗಳು, ‘ನಾವು ಭಾರತೀಯರು’ ಪ್ರತಿಭಟನೆ

- Advertisement -
- Advertisement -

ಕೋವಿಡ್ ಸನ್ನಿವೇಶವನ್ನು ಬಳಸಿಕೊಂಡು ಕಾರ್ಮಿಕ ಕಾನೂನು ಬದಲಾವಣೆ, ಎಪಿಎಂಸಿ ಕಾಯ್ದೆ, ಸುಧಾರಣೆ ಕಾಯ್ದೆ, ವಿದ್ಯುತ್ ಕಾಯ್ದೆ, ಅಗತ್ಯವಸ್ತುಗಳ ಕಾಯ್ದೆ, ಭೂಕಂದಾಯ ಕಾಯ್ದೆಗಳ ತಿದ್ದುಪಡಿಗೊಳಿಸುತ್ತಿರುವ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಕ್ರಮವನ್ನು ಖಂಡಿಸಿ ಕೇಂದ್ರ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ, ಎಐಕೆಎಸ್‍ಸಿಸಿ, ದಲಿತ ಸಂಘಟನೆಗಳ ಒಕ್ಕೂಟ, ತುಮಕೂರು ಜಿಲ್ಲಾ ಕೊಳಗೇರಿ ನಿವಾಸಿಗಳ ಹಿತರಕ್ಷಣಾ ಸಮಿತಿ, ನಾವು ಭಾರತೀಯರು ನೇತೃತ್ವದಲ್ಲಿ ತುಮಕೂರು ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಜನಪರ ಚಿಂತಕ ಕೆ.ದೊರೈರಾಜ್ ಮಾತನಾಡಿ ಪ್ರಭುತ್ವಗಳು ಕೊರೊನ ಸೋಂಕು ಭೀತಿ ಹುಟ್ಟಿಸಿ ದಮನಕಾರಿ ಕಾನೂನುಗಳ ಜಾರಿಗೆ ತರುತ್ತಿವೆ. ಇದು ರೈತ, ಕಾರ್ಮಿಕ ಮತ್ತು ಜನ ವಿರೋಧಿಯಾಗಿದ್ದು ಜನತೆಗೆ ದ್ರೋಹ ಬಗೆಯುತ್ತಿವೆ ಎಂದು ಆರೋಪಿಸಿದರು.

ಕೊರೊನಾ ಕಾಯಿಲೆಯನ್ನು ಭಯೋತ್ಪಾದನೆ ಎಂಬಂತೆ ಬಿಂಬಿಸಲಾಗುತ್ತಿದೆ. ಜನರ ಸಂಕಷ್ಟಗಳಿಗೆ ಸ್ಪಂದಿಸಬೇಕಾದ ಸರ್ಕಾರಗಳು ಬಂಡವಾಳಶಾಹಿ, ಶ್ರೀಮಂತರೊಂದಿಗೆ ಸೇರಿಕೋಂಡು ಕೋಮುವಾದಿ ಮತ್ತು ಜನ ವಿರೋಧಿ ನೀತಿಗಳನ್ನು ಜಾರಿಗೊಳಿಸುತ್ತಿವೆ. ಇಂತಹ ಸಂದರ್ಭದಲ್ಲಿ ಐಕ್ಯಹೋರಾಟಗಳು ಅಗತ್ಯ ಎಂದು ಪ್ರತಿಪಾದಿಸಿದರು.

ಎಐಕೆಎಸ್‍ಸಿಸಿ ಜಿಲ್ಲಾ ಸಂಚಾಲಕ ಸಿ.ಯತಿರಾಜು, ನೂತನ ಶಿಕ್ಷಣ ನೀತಿ ಜಾರಿಯನ್ನು ಕೈಬಿಟ್ಟು, ಆನ್ ಲೈನ್ ಶಿಕ್ಷಣ ಮತ್ತು ಪರೀಕ್ಷೆಗಳನ್ನು ಈ ಅವಧಿಯಲ್ಲಿ ನಿಷೇಧಿಸಬೇಕು, ಎಲ್ಲಾ ಕೃಷಿ ಸಾಲವನ್ನು ಮನ್ನಾ ಮಾಡಬೇಕು ಮತ್ತು ಹೊಸದಾಗಿ ಸಾಲ ನೀಡಬೇಕೆಂದು ಒತ್ತಾಯಿಸಿದರು.

ಆದಾಯ ತೆರಿಗೆ ಮಿತಿಯ ಹೊರಗಿರುವ ಎಲ್ಲಾ ಕುಟುಂಬಳಿಗೆ ಮುಂದಿನ ಆರು ತಿಂಗಳು ಮಾಸಿಕ 7,500 ಹಾಗೂ ಉಚಿತ ಪಡಿತರ ಸಾಮಗ್ರಿಗಳನ್ನು ವಿತರಣೆ ಮಾಡಬೇಕು. ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿಯಲ್ಲಿ ಕೆಲಸದ ದಿನಗಳನ್ನು 200 ದಿನಗಳಿಗೆ ಹೆಚ್ಚಿಸಬೇಕು. ನಗರ ಪ್ರದೇಶಗಳಿಗೆ ಯೋಜನೆ ವಿಸ್ತರಿಸಬೇಕು ಎಂದರು

ಸಿಐಟಿಯು ಜಿಲ್ಲಾಧ್ಯಕ್ಷ ಸೈಯದ್ ಮುಜೀಬ್ ಮಾತನಾಡಿ ಜನಸಾಮಾನ್ಯರು ತೀವ್ರ ಸಂಕಷ್ಟದಲ್ಲಿರುವ ಸಂದರ್ಭದಲ್ಲಿ ಸರ್ಕಾರ ಜನರ ನೆರವಿಗೆ ಧಾವಿಸದೆ ಜನತೆಯ ಆಸ್ತಿಯಾದ ರೈಲ್ವೆ, ರಕ್ಷಣಾ ವಲಯದ ಕಾರ್ಖಾನೆಗಳು, ಜೀವ ವಿಮಾ ನಿಗಮ, ಬ್ಯಾಂಕ್‍ಗಳು, ಬಂದರು, ವಿಮಾನ ನಿಲ್ದಾಣಗಳು ಮತ್ತು ಮತ್ತಿತರ ಸಾರ್ವಜನಿಕ ವಲಯದ ಕಂಪನಿಗಳನ್ನು ಖಾಸಗೀಕರಣಗೊಳಿಸುತ್ತಿದೆ. ಇದನ್ನು ಈ ಕೂಡಲೇ ತಡೆಯಬೇಕು ಹಾಗೂ ಅಸಂಘಟಿತ ವಲಯದ ಕೋಟ್ಯಂತರ ಕಾರ್ಮಿಕರಿಗೆ ಸಹಾಯಹಸ್ತ ನೀಡಬೇಕು. ವಿಪರೀತ ಹೆಚ್ಚಿರುವ ನಿರುದ್ಯೋಗಕ್ಕೆ ಪರಿಹಾರ ಕಾಣಲು ಉದ್ಯೋಗ ಸೃಷ್ಟಿಯ ದಿನಗಳನ್ನು ಸೃಷ್ಟಿಸಬೇಕು ಎಂದು ಆಗ್ರಹಿಸಿದರು.

ಎಐಟಿಯುಸಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗಿರೀಶ್ ಮಾತನಾಡಿ, ಮಾಲಿಕರ ವಿರುದ್ಧ ಕೈಗಾರಿಕಾ ವಿವಾದಗಳನ್ನು,ದೂರುಗಳನ್ನು ಅಂಗೀಕರಿಸುವಲ್ಲಿ ವಿಳಂಬ, ಸರಿಯಾದ ತನಿಖೆಯಿಲ್ಲದೆ ಕಾರ್ಮಿಕರ ಸಮಸ್ಯೆಗಳನ್ನು ಆಲಿಸದೆ, ಲೇ-ಆಫ್, ರಿಟ್ರೆಂಚ್ಮೆಂಟ್, ಮುಚ್ಚುವಿಕೆಗಳಿಗೆ ಶೀಘ್ರ ಅನುಮತಿ ಇತ್ಯಾದಿಗಳ ಮೂಲಕ ಕಾರ್ಮಿಕ ಇಲಾಖೆ ಕಾನೂನು ಜಾರಿಯಲ್ಲಿ ನಿರ್ಲಕ್ಷ್ಯ ಧೋರಣೆ ತಾಳಿರುವುದನ್ನು ಸರಿಯಲ್ಲ ಎಂದರು.

ಎಐಟಿಯುಟಿಯುಸಿ ಸಂಚಾಲಕಿ ಮಂಜುಳ ಮಾತನಾಡಿ, ಕೋವಿಡ್ ಅವಧಿಯಲ್ಲಿ ಹೆಚ್ಚಿರುವ ಮಹಿಳೆಯರು, ದಲಿತರು ಮತ್ತು ಅಲ್ಪಸಂಖ್ಯಾರ ಮೇಲೆ ದೌರ್ಜನ್ಯಗಳು ಹೆಚ್ಚುತ್ತಿವೆ. ಇದನ್ನು ತಡೆಯುವಲ್ಲಿ ಸರ್ಕಾರಗಳು ವಿಫಲವಾಗಿವೆ ಎಂದು ಹೇಳಿದರು.

ದಲಿತ ಸಂಘರ್ಷ ಸಮಿತಿ ಜಿಲ್ಲಾಧ್ಯಕ್ಷ ಪಿ.ಎನ್.ರಾಮಯ್ಯ ಕೋವಿಡ್ ನಿಯಂತ್ರಣ ಮಾಡಬೇಕಾದ ಸರ್ಕಾರಗಳು ಯಾವುದೇ ಕ್ರಮವನ್ನು ಕೈಗೊಳ್ಳುತ್ತಿಲ್ಲ. ಕೇಂದ್ರದ ನರೇಂದ್ರ ಮೋದಿ ಸರ್ಕಾರ ಸತ್ತುಹೋಗಿದೆ. ಹಾಗೆಯೇ ರಾಜ್ಯದಲ್ಲಿ ಯಡಿಯೂರಪ್ಪ ಸರ್ಕಾರ ಇಲ್ಲವಾಗಿದೆ ಎಂದು ವಾಗ್ದಾಳಿ ನಡೆಸಿದರು.

ಸಮಾಜ ಸೇವಕ ತಾಜುದ್ದೀನ್ ಷರೀಫ್ ಮಾತನಾಡಿ ದೇಶದಲ್ಲಿ ಪ್ರತಿಪರ  ಚಿಂತಕರನ್ನು ಬಂಧಿಸುವ, ಅವರನ್ನು ಸುಳ್ಳು ಮೊಕದ್ದಮೆಗಳಲ್ಲಿ ಸಿಲುಕಿಸಿ ಜೈಲಿಗೆ ಕಳೆಸುವ ಸೇಡಿನ ಕ್ರಮವನ್ನು ಸರ್ಕಾರಗಳು ನಿಲ್ಲಿಸಬೇಕು ಎಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಕೊಳಗೇರಿ ನಿವಾಸಿಗಳ ಹಿತರಕ್ಷಣಾ ಸಮಿತಿ ಜಿಲ್ಲಾಧ್ಯಕ್ಷ ಎ.ನರಸಿಂಹಮೂರ್ತಿ, ಕರ್ನಾಟಕ ಪ್ರಾಂತ ರೈತ ಸಂಘದ ಸಿ.ಅಜ್ಜಪ್ಪ,  ಪ್ರಾಂತ ರೈತ ಸಂಘದ ಬಿ.ಉಮೇಶ್, ಸಿಐಟಿಯು ತಾಲೂಕು ಕಾರ್ಯದರ್ಶಿ ರಂಗಧಾಮಯ್ಯ, ಎಐಟಿಯುಸಿ ಮುಖಂಡ ಕಂಬೇಗೌಡ, ಪದ್ಮನಾಭ್, ನಾಗಣ್ಣ ಅಂಗನವಾಡಿ ನೌಕರರ ಸಂಘದ ಗೌರಮ್ಮ, ಜಬೀನ, ಗಂಗಾ ಮೊದಲಾದವರು ಉಪಸ್ಥಿತರಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...