Homeಮುಖಪುಟದೇಶಪ್ರೇಮದ ಆಯಾಮಗಳನ್ನರಸುತ್ತ ಈ ಬಾರಿಯ ನಾವು-ನಮ್ಮಲ್ಲಿ ಗಂಗಾವತಿಯಲ್ಲಿ...

ದೇಶಪ್ರೇಮದ ಆಯಾಮಗಳನ್ನರಸುತ್ತ ಈ ಬಾರಿಯ ನಾವು-ನಮ್ಮಲ್ಲಿ ಗಂಗಾವತಿಯಲ್ಲಿ…

’ವರ್ತಮಾನ ಕರ್ನಾಟಕ’ಕ್ಕೆ ಸ್ಪಂದಿಸಬೇಕೆನ್ನುವ ತುಡಿತದಿಂದ 2010ರಿಂದ ಆರಂಭಗೊಂಡ ವಿಸ್ತಾರತೆ ಈ ಬಾರಿಯ ಗಂಗಾವತಿ ಕಾರ್ಯಕ್ರಮದ ಪರಿಕಲ್ಪನೆಯಾದ "ದೇಶಪ್ರೇಮದ ಆಯಾಮಗಳು"ಎಂಬುವಲ್ಲಿಗೆ ಬಂದು ನಿಂತಿದೆ.

- Advertisement -
- Advertisement -

ಯುವ ಬರಹಗಾರರು, ಸಾಹಿತಿಗಳು, ಚಿಂತಕರು ಒಂದೆಡೆ ಸೇರಿ ಸಮಕಾಲೀನ ಸಮಾಜಕ್ಕೆ ಮುಖಾಮುಖಿಯಾಗುತ್ತ ತಮ್ಮ ಓದು-ಬರಹವನ್ನು ತಾವೇ ಓರೆಗೆ ಹಚ್ಚುವ ವಿಭಿನ್ನ ಕಾರ್ಯಕ್ರಮ-ಕಮ್ಮಟವೇ ನಾವು-ನಮ್ಮಲ್ಲಿ. 2002ರಿಂದ ಆರಂಭವಾಗಿ ಹಲವು ಪುಟ್ಟ ಹೆಜ್ಜೆಗಳ ದಿಟ್ಟ ಪಯಣ ನಡೆಸುತ್ತಿರುವ ನಾವು-ನಮ್ಮಲ್ಲಿ ಕಮ್ಮಟವು ಈ ಬಾರಿ ಗಂಗಾವತಿಯಲ್ಲಿ ಜರುಗಲಿದೆ.

ಬಳ್ಳಾರಿ ಜಿಲ್ಲೆಯ ಕೊಟ್ಟೂರಿನ ಬಯಲು ಸಾಹಿತ್ಯ ವೇದಿಕೆಯ ಆಶ್ರಯದಲ್ಲಿ ಜರುಗುವ ನಾವು ನಮ್ಮಲ್ಲಿ ಬಳಗ ಪ್ರತಿವರ್ಷವೂ ಹಿಗ್ಗುತ್ತಲೇ ಇದೆ.  ಸಾಹಿತಿ-ಬರಹಗಾರರಿಗೆ ಮಾತ್ರ ಸೀಮಿತವಾಗದಿರುವುದು, ಸಮಕಾಲೀನತೆಗೆ ತೆರೆದುಕೊಂಡಿರುವುದು ಮತ್ತು ಎಲ್ಲಾ ಜೀವಪರರನ್ನು ಮುಕ್ತವಾಗಿ ಅಪ್ಪಿಕೊಳ್ಳುವುದು ಇದಕ್ಕೆ ಬಹುಮುಖ್ಯ ಕಾರಣವಾಗಿದೆ.

ನಾವು ನಮ್ಮ ಬರಹಗಳ ಆಚೆಗೂ ’ವರ್ತಮಾನ ಕರ್ನಾಟಕ’ಕ್ಕೆ ಸ್ಪಂದಿಸಬೇಕೆನ್ನುವ ತುಡಿತದಿಂದ 2010ರಿಂದ ಆರಂಭಗೊಂಡ ವಿಸ್ತಾರತೆ ಈ ಬಾರಿಯ ಗಂಗಾವತಿ ಕಾರ್ಯಕ್ರಮದ ಪರಿಕಲ್ಪನೆಯಾದ “ದೇಶಪ್ರೇಮದ ಆಯಾಮಗಳು”ಎಂಬುವಲ್ಲಿಗೆ ಬಂದು ನಿಂತಿದೆ.

ದೇವನೂರು ಮಹಾದೇವ, ಭಾನುಮುಷ್ತಾಕ್, ಯು.ಆರ್.ಅನಂತಮೂರ್ತಿ, ಜಿ.ರಾಜಶೇಖರ್, ಫಣಿರಾಜ್, ಕೆ.ಟಿ.ಶಿವಪ್ರಸಾದ್‌, ಎಚ್‌.ನಾಗವೇಣಿ, ಹೆಚ್.ಎಸ್.ರಾಘವೇಂದ್ರರಾವ್, ಆಶಾದೇವಿ, ಓ.ಎಲ್.ನಾಗಭೂಷಣಸ್ವಾಮಿ, ವಿನಯಾ, ರಹಮತ್ ತರೀಕೆರೆ, ದಿನೇಶ್ ಅಮಿನ್ ಮಟ್ಟು, ಸುಗತ ಶ್ರೀನಿವಾಸರಾಜು, ಜಿ.ಎನ್.ದೇವಿ, ಅಜಿತ್ ಪಿಳ್ಳೆ, ಜಿ.ರಾಜಶೇಖರ್, ಫಣಿರಾಜು, ಕೆ.ನೀಲಾ, ಕೆ.ರಾಮಯ್ಯ, ರಾಜೇಂದ್ರ ಚೆನ್ನಿ ಒಳಗೊಂಡಂತೆ ಕರ್ನಾಟಕದ ಬಹುಪಾಲು ಹಿರಿ ಕಿರಿ ಬರಹಗಾರ್ತಿ ಬರಹಗಾರರು ನಾವುನಮ್ಮಲ್ಲಿ ಬಳಗದ ಬೆನ್ನಿಗಿರುವುದು ಕಾಲದ ಎಚ್ಚರವನ್ನು ಕಾಯ್ದುಕೊಳ್ಳಲು ನೆರವಾಗಿದೆ.

ಸ್ವಾತಂತ್ರ್ಯ ಚಳವಳಿಯ ಕಾಲ ಮತ್ತು ನಂತರದಲ್ಲಿ ಭಾರತೀಯರೆಲ್ಲರೂ ಒಂದು ಎಂಬ ಬೆಸುಗೆಗೆ ಕೆಲಸ ಮಾಡಿದ ದೇಶಪ್ರೇಮ ಎಂಬ ಪದವೀಗ ಜಾತಿ, ಧರ್ಮ, ಬಣ್ಣ, ಪ್ರದೇಶ, ಲಿಂಗದ ಆಧಾರದಲ್ಲಿ ಜನರನ್ನು ವಿಭಜಿಸಲು ಬಳಕೆಯಾಗುತ್ತಿರುವುದು ದುರಂತದ ಸಂಗತಿ. ಹಾಗಾಗಿ ನಿಜವಾದ ದೇಶಪ್ರೇಮವೆಂದರೇನು, ಅದರ ವಿವಿಧ ಆಯಾಮಗಳೇನು, ದೇಶಪ್ರೇಮದ ಅಪವ್ಯಾಖ್ಯಾನವನ್ನು ತಡೆಯಲು ನಾವು ಮಾಡಬೇಕಾದುದ್ದೇನು ಎಂಬುದರ ಮುಕ್ತ ಆರೋಗ್ಯಕರ ಚರ್ಚೆಗೆ ಈ ಬಾರಿಯ ನಾವು ನಮ್ಮಲ್ಲಿ ವೇದಿಕೆ ಸಿದ್ದಗೊಂಡಿದೆ.

ಆಗಸ್ಟ್‌ ಆರಂಭದಲ್ಲಿ ನಡೆಯಬೇಕಿದ್ದ ಈ ಬಾರಿಯ ನಾವು ನಮ್ಮಲ್ಲಿ ಕಾರ್ಯಕ್ರಮ ಕರ್ನಾಟಕಕ್ಕೆ ಅಪ್ಪಳಿಸಿದ ಪ್ರವಾಹ ಕಾರಣಕ್ಕೆ ಮೂಂದೂಡಿ ಈಗ ನವೆಂಬರ್‌ 16-17ರ ಶನಿವಾರ-ಭಾನುವಾರಕ್ಕೆ ನಿಗಧಿಯಾಗಿದೆ. ಗಂಗಾವತಿಯ ಐಎಂಎ ಸಭಾಂಗಣದಲ್ಲಿ ನಡೆಯುವ ನಾವು-ನಮ್ಮಲ್ಲಿ ಕಮ್ಮಟವನ್ನು ನವೆಂಬರ್‌ 16ರ ಶನಿವಾರ ಬೆಳಿಗ್ಗೆ 10:30ಕ್ಕೆ ಹಿರಿಯ ಚಿಂತಕರು ಮತ್ತು ಹೋರಾಟಗಾರರಾದ ಜಿ.ರಾಮಕೃಷ್ಣರವರು ಉದ್ಘಾಟಿಸಲಿದ್ದಾರೆ. ಹೋರಾಟಗಾರ್ತಿ, ಚಿಂತಕಿ ಕೆ.ನೀಲಾರವರು ಉದ್ಘಾಟನಾ ಗೋಷ್ಟಿಯ ಅಧ್ಯಕ್ಷತೆ ವಹಿಸಲಿದ್ದು, ಶೈಲಜಾ ಹಿರೇಮಠ, ಜೆ.ಭಾರದ್ವಾಜ್‌, ಸಿ.ಎಚ್‌ ನಾರಿನಾಳ್‌ ಉಪಸ್ಥಿತರಿರುತ್ತಾರೆ.

ಮಧ್ಯಾಹ್ನ 2 ಗಂಟೆಗೆ “ಭಾರತೀಯತೆಯ ವ್ಯಾಖ್ಯಾನಗಳು” ಗೋಷ್ಠಿ ಜರುಗಲಿದ್ದು ಚಿಂತಕರಾದ ಶಿವಸುಂದರ್‌ ಮತ್ತು ಅಂಕಣಕಾರರಾದ ಎ.ನಾರಾಯಣರವರು ಮಾತನಾಡಲಿದ್ದಾರೆ. ಡಾ.ಪ್ರಕಾಶ್‌ ಬಡವನಹಳ್ಳಿ ಮತ್ತು ಡಾ.ನರಸಿಂಹಮೂರ್ತಿ ಹಳೇಹಟ್ಟಿಯವರು ಪ್ರತಿಕ್ರಿಯೆ ನೀಡಲಿದ್ದಾರೆ. ಸಂಜೆ 4ಗಂಟೆಗೆ ಅರ್ಹನಿಶಿ ಪ್ರಕಾಶನ ಹೊರತಂದಿರುವ ನಾಗರಾಜ ಕೋರಿಯವರ “ತನುಬಿಂದಿಗೆ” ಕಥಾಸಂಕಲನ ಬಿಡುಗಡೆಯಾಗಲಿದೆ. ಯುವ ಲೇಖಕರಾದ ಚಿದಾನಂದಸಾಲಿ ಪುಸ್ತಕ ಬಿಡುಗಡೆ ಮಾಡಲಿದ್ದು ಅಮರೇಶ ನುಗಡೋಣಿಯವರು ಅಧ್ಯಕ್ಷೀಯ ನುಡಿಗಳನ್ನಾಡಲಿದ್ದಾರೆ.

ಸಂಜೆ 5:30ಕ್ಕೆ ಎಲ್ಲರ ಮೆಚ್ಚಿನ ಕವಿಗೋಷ್ಠಿ ನಡೆಯಲಿದ್ದು ಗಜಲ್‌ ಕವಿ ಆರಿಫ್‌ ರಾಜಾ ಆಶಯ ಮಾತುಗಳನ್ನಾಡಿದರೆ, ಹಿರಿಯ ಸಾಹಿತಿಗಳಾದ ಮಾಲತಿ ಪಟ್ಟಣಶೆಟ್ಟಿಯವರು ಕವಿಗೋಷ್ಠಿಯ ಅಧ್ಯಕ್ಷತೆ ವಹಿಸಲಿದ್ದಾರೆ. ನಾಡಿನ ಮತ್ತು ಮುಖ್ಯವಾಗಿ ಹೈದರಾಬಾದ್‌ ಕರ್ನಾಟಕದ ಯುವಕವಿಗಳು ಕವನ ವಾಚಿಸಲು ಸಿದ್ದರಿದ್ದಾರೆ. ಅಲ್ಲಿಗೆ ಮೊದಲ ದಿನ ಕಮ್ಮಟ ಕೊನೆಗೊಳ್ಳಲಿದೆ.

ನವೆಂಬರ್‌ 17ರ ಭಾನುವಾರ ಬೆಳಿಗ್ಗೆ 9:30ಕ್ಕೆ ಎರಡನೇ ದಿನ ಕಮ್ಮಟ ಆರಂಭವಾಗಲಿದ್ದು ಮೊದಲ ಗೋಷ್ಠಿ “ಈ ಹೊತ್ತಿನ ಚುನಾವಣಾ ಬಿಕ್ಕಟ್ಟುಗಳು” ಕುರಿತು ನಡೆಯಲಿದೆ. ಬಸವತತ್ವದ ಶಾಸಕ ಎಂದೇ ಖ್ಯಾತರಾದ ಬಸವಕಲ್ಯಾಣದ ಶಾಸಕರಾದ ಬಿ.ನಾರಾಯಣ್‌ರಾವ್‌ ಮತ್ತು ಹೋರಾಟಗಾರರಾದ ಸಿದ್ದನಗೌಡ ಪಾಟೀಲ್‌ರವರು ಮಾತನಾಡಲಿದ್ದು, ನಯನಾ ಮೋಟಮ್ಮ ಮತ್ತು ಲಿಂಗರಾಜ ಹಟ್ಟಿಯವರು ಪ್ರತಿಕ್ರಿಯೆ ನೀಡಲಿದ್ದಾರೆ.

ಮಧ್ಯಾಹ್ನ 12 ಗಂಟೆಗೆ ಪ್ರಜಾಪ್ರಭುತ್ವ: ಆಶಯ ಮತ್ತು ಕನಸು ಗೋಷ್ಟಿ ನಡೆಯಲಿದ್ದು ಆರ್‌.ಪ್ರತಿಭಾ, ಅಶ್ವಿನಿ ಮದನಕರ, ಕೊಟ್ರಪ್ಪ ಹಿರೇಮಾಗಡಿಯವರು ಮಾತನಾಡಲಿದ್ದಾರೆ. ಹೈದರಾಬಾದ್‌ ಕರ್ನಾಟಕ ಹೋರಾಟಗಾರ ರಝಾಕ್‌ ಉಸ್ತಾದ್‌ರವರು ಗೋಷ್ಠಿಯ ಅಧ್ಯಕ್ಷತೆ ವಹಿಸಲಿದ್ದಾರೆ. ಕೊನೆಯದಾಗಿ ಮಧ್ಯಾಹ್ನ 3;30ಕ್ಕೆ ಸಮಾರೋಪ ಗೋಷ್ಠಿ ಜರುಗಲಿದ್ದು ಬಳ್ಳಾರಿಯ ಲೋಹಿಯಾ ಪ್ರಕಾಶನದ ಚನ್ನಬಸವಣ್ಣನವರು ಸಮಾರೋಪ ಮಾತುಗಳನ್ನಾಡಲಿದ್ದು, ವಿಜಯಪುರ ಅಕ್ಕಮಹಾದೇವಿ ವಿ.ವಿಯ ಉಪಕುಲಪತಿಗಳಾದ ಡಾ.ಸಬೀಹಾರವರು ಗೋಷ್ಠಿಯ ಅಧ್ಯಕ್ಷೀಯ ಮಾತಗಳನ್ನಾಡಲಿದ್ದಾರೆ. ಡಾ.ಶಿವಕುಮಾರ ಮಾಲಿಪಾಟೀಲ್‌, ಸಂಗಮೇಶ ಸುಗ್ರೀವ ಮತ್ತು ಮಹಾಲಕ್ಷ್ಮಿ ಕೇಸರಹಟ್ಟಿಯವರು ಉಪಸ್ಥಿತರಿರುತ್ತಾರೆ.

ಒಟ್ಟಿನಲ್ಲಿ ಎರಡು ದಿನಗಳ ಕಾಲ ಸಮಾನ ಆಶಯದ ಮನಸ್ಸುಗಳು ಸಮಾಜದ ಕರೆಗೆ ಕಿವಿಯಾಗುವ, ದನಿಯಾಗುವ ಮಹತ್ವಪೂರ್ಣ ಕಾರ್ಯಕ್ರಮ ಇದಾಗಲಿದ್ದು ಭಾಗವಹಿಸಲು ಆಸಕ್ತಿಯುಳ್ಳವರು ನಾವು ನಮ್ಮಲ್ಲಿ ಬಳಗದ ಜಾಜಿ ದೇವೆಂದ್ರಪ್ಪ 9481662735 ಮತ್ತು ಟಿ.ಎಂ ಉಷಾರಾಣಿ: 9036550365 ಇವರನ್ನು ಸಂಪರ್ಕಿಸಬಹುದಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...