Homeಮುಖಪುಟನಚ್ಚತಿರಂ ನಗರ್ಗಿರದು: ಮನುವಾದಕ್ಕೆ ತಿರುಗೇಟು; ಮನಪರಿವರ್ತನೆಗೆ ಅವಕಾಶ- ಇದು ಪ.ರಂಜಿತ್‌ ಪ್ರೇಮಲೋಕ

ನಚ್ಚತಿರಂ ನಗರ್ಗಿರದು: ಮನುವಾದಕ್ಕೆ ತಿರುಗೇಟು; ಮನಪರಿವರ್ತನೆಗೆ ಅವಕಾಶ- ಇದು ಪ.ರಂಜಿತ್‌ ಪ್ರೇಮಲೋಕ

- Advertisement -
- Advertisement -

ದೇವನೂರ ಮಹಾದೇವ ಅವರು ತಮ್ಮ ಕೃತಿಗಳಲ್ಲಿ ಚಿತ್ರಿಸಿದ ಮಹಿಳಾ ಪಾತ್ರಗಳು ಎಂದಿಗೂ ಕನ್ನಡ ಸಾಹಿತ್ಯ ಲೋಕದಲ್ಲಿ ಅದ್ವಿತೀಯವಾಗಿ ನೆಲೆಸಿವೆ. ದಲಿತ ಕಥನಗಳಲ್ಲಿ ಬರುವ ಮಹಿಳೆಯರು, ಗಂಡಸರ ಮುಂದೆ ನಾಚುತ್ತಾ, ಹೆಬ್ಬೆರಳು ನೆಲಕ್ಕೆ ಸವರುತ್ತಾ, ಸೆರಗು ತಲೆಯ ಮೇಲೆ ಹಾಕಿಕೊಂಡು ನಿಲ್ಲುವುದಿಲ್ಲ. ಒಡಲಾಳದ ಸಾಕವ್ವನ ಲೋಕ, ಕುಸುಮಬಾಲೆಯ ಕೆಂಪಿ, ತೂರಮ್ಮ- ಹೀಗೆ ಈ ನೆಲದ ಗಟ್ಟಿಗಿತ್ತಿಯರ ಪಟ್ಟಿ ಬೆಳೆಯುತ್ತಾ ಹೋಗುತ್ತದೆ. ಪಿ.ಲಂಕೇಶರು ಕಂಡ ‘ಅವ್ವ’- ಈ ಮಣ್ಣಿನ ನಿಜದ ಹೆಣ್ಣಿನ ದರ್ಶನ. ‘ಆಕೆ- ಕಪ್ಪುನೆಲ, ಸುಟ್ಟಷ್ಟು ಕಸುವು, ನೊಂದಷ್ಟೂ ಹೂ ಹಣ್ಣು, ಬನದ ಕರಡಿ, ಭಗವದ್ಗೀತೆಯಾಚೆಯ ಬದುಕು’. ತಮಿಳು ಸಿನಿಮಾ ನಿರ್ದೇಶಕ ಪಾ.ರಂಜಿತ್‌ ಸೃಷ್ಟಿಸಿದ ಮಹಿಳಾ ಪಾತ್ರಗಳು ಕೂಡ ಇದಕ್ಕಿಂತ ಭಿನ್ನವೇನಲ್ಲ. ರಂಜಿತ್ ಸಿನಿಮಾಗಳಲ್ಲಿ ಪುರುಷ ಪಾತ್ರಗಳಿಗೆ ಎಷ್ಟು ಮಹತ್ವವಿದೆಯೋ ಅಷ್ಟೇ ಮಹತ್ವ ಮಹಿಳಾ ಪಾತ್ರಗಳಿಗೂ ಇದೆ. ರಂಜಿತ್ ನಿರ್ದೇಶನದ, ಇತ್ತೀಚೆಗೆ ತೆರೆಕಂಡ ‘ನಚ್ಚತಿರಂ ನಗರ್ಗಿರದು’ ಸಿನಿಮಾ ಈ ಗಟ್ಟಿತನವನ್ನು ಮತ್ತಷ್ಟು ವಿಸ್ತರಿಸಿದೆ.

‘ನಚ್ಚತಿರಂ ನಗರ್ಗಿರದು’ (ನಕ್ಷತ್ರ ಚಲಿಸುತ್ತಿವೆ) ಎಂಬ ಹೆಸರು ರೂಪಕದಂತಿದೆ. ಇದೊಂದು ಆಶಾವಾದದ ಸಂಕೇತ. ಬೆಳಕಿನುಂಡೆಯೊಂದು ನೆಲವನ್ನು ಸ್ಪರ್ಶಿಸುವ ಕೌತುಕದ ಕ್ಷಣ. ಇಲ್ಲಿನ ಬಹುತೇಕ ಪಾತ್ರಗಳೂ ಆ ಚಲಿಸುವ ನಕ್ಷತ್ರಕ್ಕಾಗಿ ಧ್ಯಾನಿಸುತ್ತಿವೆ. ಪ್ರೀತಿಯ ಅನ್ವೇಷಣೆಯಲ್ಲಿ ತೊಡಗಿರುವ ಇಲ್ಲಿನ ಪ್ರತಿ ಪಾತ್ರಕ್ಕೂ ಮಹತ್ವವಿದೆ. ಆದರೆ ಆ ಕಥೆ ಚಲನೆ ಪಡೆಯುವುದು ರೆನೆ ಎಂಬ ದಲಿತ ಹುಡುಗಿಯ ಸುತ್ತ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ರೆನೆ- ಅಂಬೇಡ್ಕರ್‌ವಾದಿ. ನೋವುಂಡು ಬೆಳೆದ ಅವಳಲ್ಲಿ ತನ್ನ ಅಸ್ಮಿತೆಯ ಕುರಿತು ಯಾವುದೇ ಅಂಜಿಕೆಯಿಲ್ಲ. ‘ಇದು ನಿಮ್ಮ ಸಮಸ್ಯೆಯೇ ಹೊರತು ನನ್ನದ್ದಲ್ಲ’ ಎಂದು ದಿಟ್ಟವಾಗಿ ಹೇಳಬಲ್ಲ ಹೆಣ್ಣುಮಗಳಾಕೆ. ‘ನಾನು ಹೇಗಿರಬೇಕೆಂದು ಇನ್ನೊಬ್ಬರ ಅಪ್ಪಣೆ ನೀಡಬೇಕಿಲ್ಲ’ ಎನ್ನುವ ರೆನೆ ದನದ ಮಾಂಸ ತಿನ್ನುತ್ತಾ, ‘ಇದು ನನ್ನ ಅಸ್ಮಿತೆ’ ಎನ್ನುವವಳು. ಜಾತಿ, ಧರ್ಮಗಳ ಸಂಕೋಲೆಯಲ್ಲಿ ಸಿಲುಕಿರುವ ಮನಸ್ಸುಗಳನ್ನು ನೋಡಿ ಗಹಗಹಿಸಿ ನಗುವವಳು. ‘ತಮಿಳ್‌’ ಎಂಬ ಹೆಸರಿನ ಹುಡುಗಿ ‘ರೆನೆ’ಯಾಗಿ ಗುರುತಿಸಿಕೊಂಡಿದ್ದಾಳೆ. ಈಕೆಯ ಹೆಸರು ‘ತಮಿಳ್‌’ ಎಂದೂ, ಅವಳ ಮೂಲವನ್ನು ಹಂಗಿಸುವ ಜಾತೀಯ ಸುಪ್ತ ಮನಸ್ಥಿತಿಗಳು ಇಲ್ಲಿ ಅನಾವರಣವಾಗುತ್ತವೆ. ಅದ್ಯಾವುದಕ್ಕೂ ಕ್ಯಾರೇ ಎನ್ನದೆ, ಓದಿನ ಮೂಲಕ ಗಟ್ಟಿಯಾದವಳು ರೆನೆ.

ಇದನ್ನೂ ಓದಿರಿ: ಗಾಳಿಪಟ-2: ಯೋಗರಾಜ ಭಟ್ರ ಕಥೆಯಲ್ಲಿ ಲಾಜಿಕ್ಕೂ ಇಲ್ಲ ಮ್ಯಾಜಿಕ್ಕೂ ಇಲ್ಲ!

ಅದೊಂದು ರಂಗಭೂಮಿ ಕಲಾವಿದರ ಪುಟ್ಟ ತಂಡ. ಪ್ರೀತಿಯ ಬಗ್ಗೆ ನಾಟಕವೊಂದನ್ನು ಮಾಡಬೇಕೆಂದು ಹೊರಟಿದೆ. ಪ್ರೀತಿ ಎಂದರೇನು? ಅದಕ್ಕಿರುವ ಮಾನದಂಡ ಯಾವುದು? ಯಾವುದನ್ನು ತೆರೆಯ ಮೇಲೆ ತರಬೇಕೆಂಬ ಚರ್ಚೆಯಲ್ಲಿರುವ ತಂಡವು, ಪ್ರೀತಿಯ ಸುತ್ತಲಿನ ರಾಜಕಾರಣದ ಕುರಿತು ಮಾತನಾಡುತ್ತದೆ. ರಂಜಿತ್‌ ಶೋಧಿಸಲು ಹೊರಟಿದ್ದು ಇದನ್ನೇ. ಪ್ರೀತಿಯೆಂದರೆ ಕೇವಲ ಗಂಡು- ಹೆಣ್ಣಿನ ಸಂಬಂಧಗಳಿಗೆ ಸೀಮಿತ ಜನಪ್ರಿಯ ಗ್ರಹಿಕೆಯನ್ನು ಒಡೆಯುತ್ತಾರೆ ರಂಜಿತ್‌.

ಲೆಸ್ಬಿಯನ್, ಗೇ, ಟ್ರಾನ್ಸ್‌ಜೆಂಡರ್‌, ಗಂಡು- ಹೆಣ್ಣಿನ ನಡುವಿನ ಸಂಬಂಧ- ಇದೆಲ್ಲವನ್ನೂ ಸಮಾಜ ಒಳಗೊಂಡಿದೆ ಎಂಬುದನ್ನು ಚಿತ್ರಿಸುತ್ತಲೇ, ಪ್ರಧಾನವಾಗಿ ರಂಜಿತ್‌ ಚರ್ಚಿಸಿರುವುದು ಜಾತಿ ಸುತ್ತಲಿನ ಪ್ರೀತಿಯ ಕುರಿತು. ಮರ್ಯಾದೆಗೇಡು ಹತ್ಯೆಗಳ ಸುತ್ತಲಿನ ರಾಜಕೀಯದ ಚರ್ಚೆ ನಡೆಸುತ್ತಲೇ ಇಲ್ಲಿನ ಸಂಪ್ರದಾಯವಾದಿ ಮನಸ್ಸುಗಳ ಪರಿವರ್ತನೆಗೆ ಅವಕಾಶ ನೀಡಬೇಕೆಂಬ ಆಶಯವನ್ನು ರಂಜಿತ್ ವ್ಯಕ್ತಪಡಿಸಿದ್ದಾರೆ. ಆದರೆ ತೀವ್ರ ಮೂಲಭೂತವಾದಿಗಳಿಗೆ ‘ಗೂಸಾ’ ಕೊಡುವುದೂ ಅನಿವಾರ್ಯವೆಂದು ರಂಜಿತ್ ನಂಬಿದಂತಿದೆ.

ರೆನೆಯ ‘ನೇಚರ್‌’ (ಬುದ್ಧಿ/ಜಾತೀಯ ಗುಣ) ಬಗ್ಗೆ ಮೂದಲಿಸುವ ಆಕೆಯ ಪ್ರಿಯಕರ ಇನಿಯನ್‌ ಆನಂತರದಲ್ಲಿ ಪರಿತಪಿಸುತ್ತಾನೆ. ಆತನ ಮೂದಲಿಕೆಯನ್ನೆಲ್ಲ ಮೂಲೆಗೆ ತಳ್ಳಿ, ಸ್ವತಂತ್ರವಾಗಿ, ಸ್ವಚ್ಛಂದವಾಗಿ ಇರುವ ರೆನೆಯನ್ನು ಕಂಡು ಆತ ಹೊಟ್ಟೆಕಿಚ್ಚು ಪಡುತ್ತಿರುವವನಂತೆ ಭಾಸವಾದರೂ ಇಂಚಿಂಚೆ ಪಶ್ಚಾತ್ತಾಪವನ್ನೂ ಪಡುತ್ತಿದ್ದಾನೆ. ಇನಿಯನ್‌ನಂತೆಯೇ ಅರ್ಜುನ್ ಎಂಬ ಪಾತ್ರವನ್ನು ನೋಡಬೇಕಾಗುತ್ತದೆ. ಈ ರಂಗತಂಡವನ್ನು ಸೇರಿದ ಅರ್ಜುನ್‌ ಸಂಪ್ರದಾಯವಾದಿಯೂ ಹೌದು. ಗೇ ಸೆಕ್ಸ್‌, ಟಾನ್ಸ್‌ಜೆಂಡರ್‌ ಪ್ರೀತಿ- ಇದ್ಯಾವುದನ್ನೂ ಮುಕ್ತವಾಗಿ ನೋಡದ ಆತ, ರೆನೆಯೊಂದಿಗೆ ಅನುಚಿತವಾಗಿ ವರ್ತಿಸುತ್ತಾನೆ. ಆದರೆ ರೆನೆ ಕ್ಷಮಿಸುವ ಗುಣ ತೋರುತ್ತಾಳೆ. ಆತನ ಮನಪರಿವರ್ತನೆಗೆ ಅವಕಾಶ ನೀಡುತ್ತಾಳೆ.

ಈ ಕಲಾತಂಡ ಪ್ರದರ್ಶಿಸಲಿರುವ ನಾಟಕದಲ್ಲಿ ಮಾರ್ಯಾದೆಗೇಡು ಹತ್ಯೆಯನ್ನು ಢಾಳಾಗಿ ತೋರಿಸಲು ಇಚ್ಚಿಸಿರುವ ನಿರ್ದೇಶಕನಿಗೆ ಕೆಲವು ಸಲಹೆಗಳನ್ನು ಅರ್ಜುನ್ ನೀಡುವ ಮಟ್ಟಕ್ಕೆ ಬದಲಾಗುತ್ತಾನೆ. “ಹೆತ್ತ ಮಗಳನ್ನು ತಂದೆ ಕೊಲ್ಲುವುದು ಸರಿಯೇ? ಇಲ್ಲಿಗೆ ಬರುವ ಮುನ್ನ conservative ಆಗಿದ್ದ ನಾನು ಈಗ ಎಷ್ಟೊಂದು ಬದಲಾಗಿದ್ದೇನೆ. ಸಮಾಜದ ಬದಲಾವಣೆಗೂ ಅವಕಾಶ ನೀಡಬೇಕು” ಎಂಬ ಆಶಯವನ್ನು ಅರ್ಜುನ್ ವ್ಯಕ್ತಪಡಿಸುತ್ತಾನೆ. ರೆನೆಯ ಸ್ವಾಭಿಮಾನ, ದಿಟ್ಟತನಗಳಿಗೆ ಮನಸೋಲುವ ಅರ್ಜುನ್‌, ತನ್ನ ಜಾತಿವಾದಿ ಕೌಟುಂಬಿಕ ವ್ಯವಸ್ಥೆಯಿಂದ ಹೊರಗೆ ಕಾಲಿಡಲು ನಿರ್ಧರಿಸಿರುವುದು ಇದರ ಮುಂದುವರಿದ ಭಾಗ.

ಮನುವಾದಿ ವ್ಯವಸ್ಥೆ ಭಾರತೀಯತೆಯ ಬೇರುಗಳ ಬಗ್ಗೆ ಸದಾ ಮಾತನಾಡುತ್ತದೆ. ಈ ಬೇರುಗಳಲ್ಲಿ ಜಾತಿ ಮೀರಿದ ಪ್ರೀತಿ ನಿಷಿದ್ಧ, ವರ್ಗ ಮೀರಿದ ಸಂಬಂಧ ನಿಷಿದ್ಧ, ಹೆಣ್ಣು-ಗಂಡಿನ ಪ್ರೀತಿಯಾಚೆಯ ಗೇ ಸೆಕ್ಸ್‌, ಲೆಸ್ಬಿಯನ್‌ ಸೆಕ್ಸ್ ನಿಷಿದ್ಧ. ಇದ್ಯಾವುದೂ ನಮ್ಮ ಬೇರುಗಳಲ್ಲ ಎನ್ನುತ್ತದೆ ಮನುವಾದ. ಯಥಾಸ್ಥಿತಿಯನ್ನು ಸಂಪ್ರದಾಯವಾದಿಗಳು ಬಯಸುತ್ತಾರೆ. ಯಾವುದನ್ನು ಭಾರತದ ಬೇರುಗಳೆಂದು ಧಾರ್ಮಿಕ ಮೂಲಭೂತವಾದಿಗಳು ವಾದಿಸುತ್ತಿದ್ದಾರೋ ಅದಕ್ಕೆ ಬಲವಾದ ಕೊಡಲಿಪೆಟ್ಟು ಕೊಟ್ಟಿದ್ದು- ಬಾಬಾ ಸಾಹೇಬ್‌ ಡಾ.ಬಿ.ಆರ್‌.ಅಂಬೇಡ್ಕರ್‌ ಅವರು ಬರೆದ ಸಂವಿಧಾನ. ಬುದ್ಧನ ಪ್ರೀತಿ, ಕಾರುಣ್ಯ, ಬಸವಾದಿ ಶರಣರ ಪ್ರಜಾಪ್ರಭುತ್ವ ಪರಿಕಲ್ಪನೆಯೇ ಈ ನೆಲದ ನಿಜವಾದ ಬೇರುಗಳು. ಈ ನಿಜದ ಬೇರನ್ನು ಅಲುಗಾಡಿಸಲು ಬರುವ ಮೂಲಭೂತವಾದಿಗಳನ್ನು, ಅಂಬೇಡ್ಕರ್‌ ಆಶಯದಲ್ಲಿ ನಂಬಿಕೆ ಇಟ್ಟ ಮನಸ್ಸುಗಳು ಒಂದಾಗಿ ಹೊಡೆದೋಡಿಸಬೇಕೆಂಬ ಸಂದೇಶವನ್ನು ರಂಜಿತ್‌ ನೀಡಿದ್ದಾರೆ. ಎಳೆಯ ಮಕ್ಕಳ ಮನಸ್ಸಿಗೆ ಮನುವಾದವನ್ನು ತುರುಕುವ ಪ್ರಯತ್ನ ರಾಷ್ಟ್ರೀಯ ಶಿಕ್ಷಣ ನೀತಿಯ ಮೂಲಕ ನಡೆಯುತ್ತಿರುವ ಹೊತ್ತಿನಲ್ಲಿ ರಂಜಿತ್‌, ‘ನಕ್ಷತ್ರಗಳು ಚಲಿಸುತ್ತಿವೆ’ ನೋಡಿದಿರಾ ಎಂದಿದ್ದಾರೆ.

ಇದನ್ನೂ ಓದಿರಿ: ಫಾಸಿಲ್‌ ನಟನೆಯ ‘ಮಲಯನ್‌ಕುಂಜು’ ಸಿನಿಮಾ ‘ಜಾತಿವಾದಿ ಮನಸ್ಥಿತಿ’ಯ ಕುರಿತು ಅನುಕಂಪ ಸೃಷ್ಟಿಸಿದೆಯೇ?

ಪ್ರೀತಿಯ ಉದಾತ್ತ ಆಶಯವನ್ನು ಪ್ರದರ್ಶಿಸುತ್ತಿರುವ ಕಲಾತಂಡದ ಮೇಲೆ ‘ಫ್ರಿಂಜ್‌ ಎಲಿಮೆಂಟ್’ ಒಬ್ಬ ದಾಳಿ ಮಾಡುತ್ತಾನೆ (ನಮ್ಮ ಕರ್ನಾಟಕದ ಶಿವಮೊಗ್ಗದಲ್ಲಿ ‘ಜೊತೆಗಿರುವನು ಚಂದಿರ’ ನಾಟಕಕ್ಕೆ ಅಡ್ಡಿಪಡಿಸಿದ್ದನ್ನು ನೆನೆಯಬಹುದು). ಇಂತಹ ಫ್ರಿಂಜ್‌ಗಳ ಹಿಂದೆ ಮಾಸ್ಟರ್‌ಗಳಿದ್ದಾರೆ, ಪೊಲೀಸ್ ವ್ಯವಸ್ಥೆಯ ರಕ್ಷಣೆ ಇದೆ. ಆದರೆ ಇದೆಲ್ಲವನ್ನೂ ಅಂಬೇಡ್ಕರ್‌ ಎಂಬ ಅಸ್ತ್ರದ ಮೂಲಕ ಸೋಲಿಸಬೇಕಿರುವುದು ಅನಿವಾರ್ಯ. ಇದಕ್ಕೆ ಎಲ್ಲರ ಸಹಕಾರ ಅಗತ್ಯ ಎಂಬುದನ್ನು ರಂಜಿತ್‌ ಮನಗಾಣಿಸಿದ್ದಾರೆ.

ಇಡೀ ಸಿನಿಮಾದುದ್ದಕ್ಕೂ ಹರಿದಿರುವ ಕಲಾನಿರ್ದೇಶನದ ಸೊಗಸು, ಕಥೆಯ ಸಂದೇಶದ ತೀವ್ರತೆಯನ್ನು ಹೆಚ್ಚಿಸುವ ತೆನ್ಮಾ ಅವರ ಸಂಗೀತ, ಪ್ರೀತಿಯ ಜಿಜ್ಞಾಸೆಗೆ ಬಳಸಿರುವ ಅರ್ಥಪೂರ್ಣ ಸಂಭಾಷಣೆ, ಜಾನಪದೀಯ ರೂಪಕವಾಗಿ ಚಿತ್ರಿಸಲಾಗಿರುವ ಮಾರ್ಯಾದೆ ಹತ್ಯೆಗಳು- ಇವೆಲ್ಲವೂ ‘ನಚ್ಚತಿರಂ ನಗರ್ಗಿರದು’ ಸಿನಿಮಾದ ಕಲಾತ್ಮಕತೆಯನ್ನು ಹೆಚ್ಚಿಸಿವೆ. ರೆನೆಯಾಗಿ ದುಶಾರಾ ವಿಜಯನ್‌, ಇನಿಯನ್‌ ಪಾತ್ರದಲ್ಲಿ ಕಾಳಿದಾಸ್ ಜಯರಾಮ್‌, ಅರ್ಜುನ್ ಆಗಿ ಕಲೈ ಅರಸನ್‌- ಹೀಗೆ ಎಲ್ಲ ಕಲಾವಿದರು ಮನೋಜ್ಞವಾಗಿ ನಟಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...