Homeಮುಖಪುಟನಚ್ಚತಿರಂ ನಗರ್ಗಿರದು: ಮನುವಾದಕ್ಕೆ ತಿರುಗೇಟು; ಮನಪರಿವರ್ತನೆಗೆ ಅವಕಾಶ- ಇದು ಪ.ರಂಜಿತ್‌ ಪ್ರೇಮಲೋಕ

ನಚ್ಚತಿರಂ ನಗರ್ಗಿರದು: ಮನುವಾದಕ್ಕೆ ತಿರುಗೇಟು; ಮನಪರಿವರ್ತನೆಗೆ ಅವಕಾಶ- ಇದು ಪ.ರಂಜಿತ್‌ ಪ್ರೇಮಲೋಕ

- Advertisement -
- Advertisement -

ದೇವನೂರ ಮಹಾದೇವ ಅವರು ತಮ್ಮ ಕೃತಿಗಳಲ್ಲಿ ಚಿತ್ರಿಸಿದ ಮಹಿಳಾ ಪಾತ್ರಗಳು ಎಂದಿಗೂ ಕನ್ನಡ ಸಾಹಿತ್ಯ ಲೋಕದಲ್ಲಿ ಅದ್ವಿತೀಯವಾಗಿ ನೆಲೆಸಿವೆ. ದಲಿತ ಕಥನಗಳಲ್ಲಿ ಬರುವ ಮಹಿಳೆಯರು, ಗಂಡಸರ ಮುಂದೆ ನಾಚುತ್ತಾ, ಹೆಬ್ಬೆರಳು ನೆಲಕ್ಕೆ ಸವರುತ್ತಾ, ಸೆರಗು ತಲೆಯ ಮೇಲೆ ಹಾಕಿಕೊಂಡು ನಿಲ್ಲುವುದಿಲ್ಲ. ಒಡಲಾಳದ ಸಾಕವ್ವನ ಲೋಕ, ಕುಸುಮಬಾಲೆಯ ಕೆಂಪಿ, ತೂರಮ್ಮ- ಹೀಗೆ ಈ ನೆಲದ ಗಟ್ಟಿಗಿತ್ತಿಯರ ಪಟ್ಟಿ ಬೆಳೆಯುತ್ತಾ ಹೋಗುತ್ತದೆ. ಪಿ.ಲಂಕೇಶರು ಕಂಡ ‘ಅವ್ವ’- ಈ ಮಣ್ಣಿನ ನಿಜದ ಹೆಣ್ಣಿನ ದರ್ಶನ. ‘ಆಕೆ- ಕಪ್ಪುನೆಲ, ಸುಟ್ಟಷ್ಟು ಕಸುವು, ನೊಂದಷ್ಟೂ ಹೂ ಹಣ್ಣು, ಬನದ ಕರಡಿ, ಭಗವದ್ಗೀತೆಯಾಚೆಯ ಬದುಕು’. ತಮಿಳು ಸಿನಿಮಾ ನಿರ್ದೇಶಕ ಪಾ.ರಂಜಿತ್‌ ಸೃಷ್ಟಿಸಿದ ಮಹಿಳಾ ಪಾತ್ರಗಳು ಕೂಡ ಇದಕ್ಕಿಂತ ಭಿನ್ನವೇನಲ್ಲ. ರಂಜಿತ್ ಸಿನಿಮಾಗಳಲ್ಲಿ ಪುರುಷ ಪಾತ್ರಗಳಿಗೆ ಎಷ್ಟು ಮಹತ್ವವಿದೆಯೋ ಅಷ್ಟೇ ಮಹತ್ವ ಮಹಿಳಾ ಪಾತ್ರಗಳಿಗೂ ಇದೆ. ರಂಜಿತ್ ನಿರ್ದೇಶನದ, ಇತ್ತೀಚೆಗೆ ತೆರೆಕಂಡ ‘ನಚ್ಚತಿರಂ ನಗರ್ಗಿರದು’ ಸಿನಿಮಾ ಈ ಗಟ್ಟಿತನವನ್ನು ಮತ್ತಷ್ಟು ವಿಸ್ತರಿಸಿದೆ.

‘ನಚ್ಚತಿರಂ ನಗರ್ಗಿರದು’ (ನಕ್ಷತ್ರ ಚಲಿಸುತ್ತಿವೆ) ಎಂಬ ಹೆಸರು ರೂಪಕದಂತಿದೆ. ಇದೊಂದು ಆಶಾವಾದದ ಸಂಕೇತ. ಬೆಳಕಿನುಂಡೆಯೊಂದು ನೆಲವನ್ನು ಸ್ಪರ್ಶಿಸುವ ಕೌತುಕದ ಕ್ಷಣ. ಇಲ್ಲಿನ ಬಹುತೇಕ ಪಾತ್ರಗಳೂ ಆ ಚಲಿಸುವ ನಕ್ಷತ್ರಕ್ಕಾಗಿ ಧ್ಯಾನಿಸುತ್ತಿವೆ. ಪ್ರೀತಿಯ ಅನ್ವೇಷಣೆಯಲ್ಲಿ ತೊಡಗಿರುವ ಇಲ್ಲಿನ ಪ್ರತಿ ಪಾತ್ರಕ್ಕೂ ಮಹತ್ವವಿದೆ. ಆದರೆ ಆ ಕಥೆ ಚಲನೆ ಪಡೆಯುವುದು ರೆನೆ ಎಂಬ ದಲಿತ ಹುಡುಗಿಯ ಸುತ್ತ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ರೆನೆ- ಅಂಬೇಡ್ಕರ್‌ವಾದಿ. ನೋವುಂಡು ಬೆಳೆದ ಅವಳಲ್ಲಿ ತನ್ನ ಅಸ್ಮಿತೆಯ ಕುರಿತು ಯಾವುದೇ ಅಂಜಿಕೆಯಿಲ್ಲ. ‘ಇದು ನಿಮ್ಮ ಸಮಸ್ಯೆಯೇ ಹೊರತು ನನ್ನದ್ದಲ್ಲ’ ಎಂದು ದಿಟ್ಟವಾಗಿ ಹೇಳಬಲ್ಲ ಹೆಣ್ಣುಮಗಳಾಕೆ. ‘ನಾನು ಹೇಗಿರಬೇಕೆಂದು ಇನ್ನೊಬ್ಬರ ಅಪ್ಪಣೆ ನೀಡಬೇಕಿಲ್ಲ’ ಎನ್ನುವ ರೆನೆ ದನದ ಮಾಂಸ ತಿನ್ನುತ್ತಾ, ‘ಇದು ನನ್ನ ಅಸ್ಮಿತೆ’ ಎನ್ನುವವಳು. ಜಾತಿ, ಧರ್ಮಗಳ ಸಂಕೋಲೆಯಲ್ಲಿ ಸಿಲುಕಿರುವ ಮನಸ್ಸುಗಳನ್ನು ನೋಡಿ ಗಹಗಹಿಸಿ ನಗುವವಳು. ‘ತಮಿಳ್‌’ ಎಂಬ ಹೆಸರಿನ ಹುಡುಗಿ ‘ರೆನೆ’ಯಾಗಿ ಗುರುತಿಸಿಕೊಂಡಿದ್ದಾಳೆ. ಈಕೆಯ ಹೆಸರು ‘ತಮಿಳ್‌’ ಎಂದೂ, ಅವಳ ಮೂಲವನ್ನು ಹಂಗಿಸುವ ಜಾತೀಯ ಸುಪ್ತ ಮನಸ್ಥಿತಿಗಳು ಇಲ್ಲಿ ಅನಾವರಣವಾಗುತ್ತವೆ. ಅದ್ಯಾವುದಕ್ಕೂ ಕ್ಯಾರೇ ಎನ್ನದೆ, ಓದಿನ ಮೂಲಕ ಗಟ್ಟಿಯಾದವಳು ರೆನೆ.

ಇದನ್ನೂ ಓದಿರಿ: ಗಾಳಿಪಟ-2: ಯೋಗರಾಜ ಭಟ್ರ ಕಥೆಯಲ್ಲಿ ಲಾಜಿಕ್ಕೂ ಇಲ್ಲ ಮ್ಯಾಜಿಕ್ಕೂ ಇಲ್ಲ!

ಅದೊಂದು ರಂಗಭೂಮಿ ಕಲಾವಿದರ ಪುಟ್ಟ ತಂಡ. ಪ್ರೀತಿಯ ಬಗ್ಗೆ ನಾಟಕವೊಂದನ್ನು ಮಾಡಬೇಕೆಂದು ಹೊರಟಿದೆ. ಪ್ರೀತಿ ಎಂದರೇನು? ಅದಕ್ಕಿರುವ ಮಾನದಂಡ ಯಾವುದು? ಯಾವುದನ್ನು ತೆರೆಯ ಮೇಲೆ ತರಬೇಕೆಂಬ ಚರ್ಚೆಯಲ್ಲಿರುವ ತಂಡವು, ಪ್ರೀತಿಯ ಸುತ್ತಲಿನ ರಾಜಕಾರಣದ ಕುರಿತು ಮಾತನಾಡುತ್ತದೆ. ರಂಜಿತ್‌ ಶೋಧಿಸಲು ಹೊರಟಿದ್ದು ಇದನ್ನೇ. ಪ್ರೀತಿಯೆಂದರೆ ಕೇವಲ ಗಂಡು- ಹೆಣ್ಣಿನ ಸಂಬಂಧಗಳಿಗೆ ಸೀಮಿತ ಜನಪ್ರಿಯ ಗ್ರಹಿಕೆಯನ್ನು ಒಡೆಯುತ್ತಾರೆ ರಂಜಿತ್‌.

ಲೆಸ್ಬಿಯನ್, ಗೇ, ಟ್ರಾನ್ಸ್‌ಜೆಂಡರ್‌, ಗಂಡು- ಹೆಣ್ಣಿನ ನಡುವಿನ ಸಂಬಂಧ- ಇದೆಲ್ಲವನ್ನೂ ಸಮಾಜ ಒಳಗೊಂಡಿದೆ ಎಂಬುದನ್ನು ಚಿತ್ರಿಸುತ್ತಲೇ, ಪ್ರಧಾನವಾಗಿ ರಂಜಿತ್‌ ಚರ್ಚಿಸಿರುವುದು ಜಾತಿ ಸುತ್ತಲಿನ ಪ್ರೀತಿಯ ಕುರಿತು. ಮರ್ಯಾದೆಗೇಡು ಹತ್ಯೆಗಳ ಸುತ್ತಲಿನ ರಾಜಕೀಯದ ಚರ್ಚೆ ನಡೆಸುತ್ತಲೇ ಇಲ್ಲಿನ ಸಂಪ್ರದಾಯವಾದಿ ಮನಸ್ಸುಗಳ ಪರಿವರ್ತನೆಗೆ ಅವಕಾಶ ನೀಡಬೇಕೆಂಬ ಆಶಯವನ್ನು ರಂಜಿತ್ ವ್ಯಕ್ತಪಡಿಸಿದ್ದಾರೆ. ಆದರೆ ತೀವ್ರ ಮೂಲಭೂತವಾದಿಗಳಿಗೆ ‘ಗೂಸಾ’ ಕೊಡುವುದೂ ಅನಿವಾರ್ಯವೆಂದು ರಂಜಿತ್ ನಂಬಿದಂತಿದೆ.

ರೆನೆಯ ‘ನೇಚರ್‌’ (ಬುದ್ಧಿ/ಜಾತೀಯ ಗುಣ) ಬಗ್ಗೆ ಮೂದಲಿಸುವ ಆಕೆಯ ಪ್ರಿಯಕರ ಇನಿಯನ್‌ ಆನಂತರದಲ್ಲಿ ಪರಿತಪಿಸುತ್ತಾನೆ. ಆತನ ಮೂದಲಿಕೆಯನ್ನೆಲ್ಲ ಮೂಲೆಗೆ ತಳ್ಳಿ, ಸ್ವತಂತ್ರವಾಗಿ, ಸ್ವಚ್ಛಂದವಾಗಿ ಇರುವ ರೆನೆಯನ್ನು ಕಂಡು ಆತ ಹೊಟ್ಟೆಕಿಚ್ಚು ಪಡುತ್ತಿರುವವನಂತೆ ಭಾಸವಾದರೂ ಇಂಚಿಂಚೆ ಪಶ್ಚಾತ್ತಾಪವನ್ನೂ ಪಡುತ್ತಿದ್ದಾನೆ. ಇನಿಯನ್‌ನಂತೆಯೇ ಅರ್ಜುನ್ ಎಂಬ ಪಾತ್ರವನ್ನು ನೋಡಬೇಕಾಗುತ್ತದೆ. ಈ ರಂಗತಂಡವನ್ನು ಸೇರಿದ ಅರ್ಜುನ್‌ ಸಂಪ್ರದಾಯವಾದಿಯೂ ಹೌದು. ಗೇ ಸೆಕ್ಸ್‌, ಟಾನ್ಸ್‌ಜೆಂಡರ್‌ ಪ್ರೀತಿ- ಇದ್ಯಾವುದನ್ನೂ ಮುಕ್ತವಾಗಿ ನೋಡದ ಆತ, ರೆನೆಯೊಂದಿಗೆ ಅನುಚಿತವಾಗಿ ವರ್ತಿಸುತ್ತಾನೆ. ಆದರೆ ರೆನೆ ಕ್ಷಮಿಸುವ ಗುಣ ತೋರುತ್ತಾಳೆ. ಆತನ ಮನಪರಿವರ್ತನೆಗೆ ಅವಕಾಶ ನೀಡುತ್ತಾಳೆ.

ಈ ಕಲಾತಂಡ ಪ್ರದರ್ಶಿಸಲಿರುವ ನಾಟಕದಲ್ಲಿ ಮಾರ್ಯಾದೆಗೇಡು ಹತ್ಯೆಯನ್ನು ಢಾಳಾಗಿ ತೋರಿಸಲು ಇಚ್ಚಿಸಿರುವ ನಿರ್ದೇಶಕನಿಗೆ ಕೆಲವು ಸಲಹೆಗಳನ್ನು ಅರ್ಜುನ್ ನೀಡುವ ಮಟ್ಟಕ್ಕೆ ಬದಲಾಗುತ್ತಾನೆ. “ಹೆತ್ತ ಮಗಳನ್ನು ತಂದೆ ಕೊಲ್ಲುವುದು ಸರಿಯೇ? ಇಲ್ಲಿಗೆ ಬರುವ ಮುನ್ನ conservative ಆಗಿದ್ದ ನಾನು ಈಗ ಎಷ್ಟೊಂದು ಬದಲಾಗಿದ್ದೇನೆ. ಸಮಾಜದ ಬದಲಾವಣೆಗೂ ಅವಕಾಶ ನೀಡಬೇಕು” ಎಂಬ ಆಶಯವನ್ನು ಅರ್ಜುನ್ ವ್ಯಕ್ತಪಡಿಸುತ್ತಾನೆ. ರೆನೆಯ ಸ್ವಾಭಿಮಾನ, ದಿಟ್ಟತನಗಳಿಗೆ ಮನಸೋಲುವ ಅರ್ಜುನ್‌, ತನ್ನ ಜಾತಿವಾದಿ ಕೌಟುಂಬಿಕ ವ್ಯವಸ್ಥೆಯಿಂದ ಹೊರಗೆ ಕಾಲಿಡಲು ನಿರ್ಧರಿಸಿರುವುದು ಇದರ ಮುಂದುವರಿದ ಭಾಗ.

ಮನುವಾದಿ ವ್ಯವಸ್ಥೆ ಭಾರತೀಯತೆಯ ಬೇರುಗಳ ಬಗ್ಗೆ ಸದಾ ಮಾತನಾಡುತ್ತದೆ. ಈ ಬೇರುಗಳಲ್ಲಿ ಜಾತಿ ಮೀರಿದ ಪ್ರೀತಿ ನಿಷಿದ್ಧ, ವರ್ಗ ಮೀರಿದ ಸಂಬಂಧ ನಿಷಿದ್ಧ, ಹೆಣ್ಣು-ಗಂಡಿನ ಪ್ರೀತಿಯಾಚೆಯ ಗೇ ಸೆಕ್ಸ್‌, ಲೆಸ್ಬಿಯನ್‌ ಸೆಕ್ಸ್ ನಿಷಿದ್ಧ. ಇದ್ಯಾವುದೂ ನಮ್ಮ ಬೇರುಗಳಲ್ಲ ಎನ್ನುತ್ತದೆ ಮನುವಾದ. ಯಥಾಸ್ಥಿತಿಯನ್ನು ಸಂಪ್ರದಾಯವಾದಿಗಳು ಬಯಸುತ್ತಾರೆ. ಯಾವುದನ್ನು ಭಾರತದ ಬೇರುಗಳೆಂದು ಧಾರ್ಮಿಕ ಮೂಲಭೂತವಾದಿಗಳು ವಾದಿಸುತ್ತಿದ್ದಾರೋ ಅದಕ್ಕೆ ಬಲವಾದ ಕೊಡಲಿಪೆಟ್ಟು ಕೊಟ್ಟಿದ್ದು- ಬಾಬಾ ಸಾಹೇಬ್‌ ಡಾ.ಬಿ.ಆರ್‌.ಅಂಬೇಡ್ಕರ್‌ ಅವರು ಬರೆದ ಸಂವಿಧಾನ. ಬುದ್ಧನ ಪ್ರೀತಿ, ಕಾರುಣ್ಯ, ಬಸವಾದಿ ಶರಣರ ಪ್ರಜಾಪ್ರಭುತ್ವ ಪರಿಕಲ್ಪನೆಯೇ ಈ ನೆಲದ ನಿಜವಾದ ಬೇರುಗಳು. ಈ ನಿಜದ ಬೇರನ್ನು ಅಲುಗಾಡಿಸಲು ಬರುವ ಮೂಲಭೂತವಾದಿಗಳನ್ನು, ಅಂಬೇಡ್ಕರ್‌ ಆಶಯದಲ್ಲಿ ನಂಬಿಕೆ ಇಟ್ಟ ಮನಸ್ಸುಗಳು ಒಂದಾಗಿ ಹೊಡೆದೋಡಿಸಬೇಕೆಂಬ ಸಂದೇಶವನ್ನು ರಂಜಿತ್‌ ನೀಡಿದ್ದಾರೆ. ಎಳೆಯ ಮಕ್ಕಳ ಮನಸ್ಸಿಗೆ ಮನುವಾದವನ್ನು ತುರುಕುವ ಪ್ರಯತ್ನ ರಾಷ್ಟ್ರೀಯ ಶಿಕ್ಷಣ ನೀತಿಯ ಮೂಲಕ ನಡೆಯುತ್ತಿರುವ ಹೊತ್ತಿನಲ್ಲಿ ರಂಜಿತ್‌, ‘ನಕ್ಷತ್ರಗಳು ಚಲಿಸುತ್ತಿವೆ’ ನೋಡಿದಿರಾ ಎಂದಿದ್ದಾರೆ.

ಇದನ್ನೂ ಓದಿರಿ: ಫಾಸಿಲ್‌ ನಟನೆಯ ‘ಮಲಯನ್‌ಕುಂಜು’ ಸಿನಿಮಾ ‘ಜಾತಿವಾದಿ ಮನಸ್ಥಿತಿ’ಯ ಕುರಿತು ಅನುಕಂಪ ಸೃಷ್ಟಿಸಿದೆಯೇ?

ಪ್ರೀತಿಯ ಉದಾತ್ತ ಆಶಯವನ್ನು ಪ್ರದರ್ಶಿಸುತ್ತಿರುವ ಕಲಾತಂಡದ ಮೇಲೆ ‘ಫ್ರಿಂಜ್‌ ಎಲಿಮೆಂಟ್’ ಒಬ್ಬ ದಾಳಿ ಮಾಡುತ್ತಾನೆ (ನಮ್ಮ ಕರ್ನಾಟಕದ ಶಿವಮೊಗ್ಗದಲ್ಲಿ ‘ಜೊತೆಗಿರುವನು ಚಂದಿರ’ ನಾಟಕಕ್ಕೆ ಅಡ್ಡಿಪಡಿಸಿದ್ದನ್ನು ನೆನೆಯಬಹುದು). ಇಂತಹ ಫ್ರಿಂಜ್‌ಗಳ ಹಿಂದೆ ಮಾಸ್ಟರ್‌ಗಳಿದ್ದಾರೆ, ಪೊಲೀಸ್ ವ್ಯವಸ್ಥೆಯ ರಕ್ಷಣೆ ಇದೆ. ಆದರೆ ಇದೆಲ್ಲವನ್ನೂ ಅಂಬೇಡ್ಕರ್‌ ಎಂಬ ಅಸ್ತ್ರದ ಮೂಲಕ ಸೋಲಿಸಬೇಕಿರುವುದು ಅನಿವಾರ್ಯ. ಇದಕ್ಕೆ ಎಲ್ಲರ ಸಹಕಾರ ಅಗತ್ಯ ಎಂಬುದನ್ನು ರಂಜಿತ್‌ ಮನಗಾಣಿಸಿದ್ದಾರೆ.

ಇಡೀ ಸಿನಿಮಾದುದ್ದಕ್ಕೂ ಹರಿದಿರುವ ಕಲಾನಿರ್ದೇಶನದ ಸೊಗಸು, ಕಥೆಯ ಸಂದೇಶದ ತೀವ್ರತೆಯನ್ನು ಹೆಚ್ಚಿಸುವ ತೆನ್ಮಾ ಅವರ ಸಂಗೀತ, ಪ್ರೀತಿಯ ಜಿಜ್ಞಾಸೆಗೆ ಬಳಸಿರುವ ಅರ್ಥಪೂರ್ಣ ಸಂಭಾಷಣೆ, ಜಾನಪದೀಯ ರೂಪಕವಾಗಿ ಚಿತ್ರಿಸಲಾಗಿರುವ ಮಾರ್ಯಾದೆ ಹತ್ಯೆಗಳು- ಇವೆಲ್ಲವೂ ‘ನಚ್ಚತಿರಂ ನಗರ್ಗಿರದು’ ಸಿನಿಮಾದ ಕಲಾತ್ಮಕತೆಯನ್ನು ಹೆಚ್ಚಿಸಿವೆ. ರೆನೆಯಾಗಿ ದುಶಾರಾ ವಿಜಯನ್‌, ಇನಿಯನ್‌ ಪಾತ್ರದಲ್ಲಿ ಕಾಳಿದಾಸ್ ಜಯರಾಮ್‌, ಅರ್ಜುನ್ ಆಗಿ ಕಲೈ ಅರಸನ್‌- ಹೀಗೆ ಎಲ್ಲ ಕಲಾವಿದರು ಮನೋಜ್ಞವಾಗಿ ನಟಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...