Homeಮುಖಪುಟನಚ್ಚತಿರಂ ನಗರ್ಗಿರದು: ಮನುವಾದಕ್ಕೆ ತಿರುಗೇಟು; ಮನಪರಿವರ್ತನೆಗೆ ಅವಕಾಶ- ಇದು ಪ.ರಂಜಿತ್‌ ಪ್ರೇಮಲೋಕ

ನಚ್ಚತಿರಂ ನಗರ್ಗಿರದು: ಮನುವಾದಕ್ಕೆ ತಿರುಗೇಟು; ಮನಪರಿವರ್ತನೆಗೆ ಅವಕಾಶ- ಇದು ಪ.ರಂಜಿತ್‌ ಪ್ರೇಮಲೋಕ

- Advertisement -
- Advertisement -

ದೇವನೂರ ಮಹಾದೇವ ಅವರು ತಮ್ಮ ಕೃತಿಗಳಲ್ಲಿ ಚಿತ್ರಿಸಿದ ಮಹಿಳಾ ಪಾತ್ರಗಳು ಎಂದಿಗೂ ಕನ್ನಡ ಸಾಹಿತ್ಯ ಲೋಕದಲ್ಲಿ ಅದ್ವಿತೀಯವಾಗಿ ನೆಲೆಸಿವೆ. ದಲಿತ ಕಥನಗಳಲ್ಲಿ ಬರುವ ಮಹಿಳೆಯರು, ಗಂಡಸರ ಮುಂದೆ ನಾಚುತ್ತಾ, ಹೆಬ್ಬೆರಳು ನೆಲಕ್ಕೆ ಸವರುತ್ತಾ, ಸೆರಗು ತಲೆಯ ಮೇಲೆ ಹಾಕಿಕೊಂಡು ನಿಲ್ಲುವುದಿಲ್ಲ. ಒಡಲಾಳದ ಸಾಕವ್ವನ ಲೋಕ, ಕುಸುಮಬಾಲೆಯ ಕೆಂಪಿ, ತೂರಮ್ಮ- ಹೀಗೆ ಈ ನೆಲದ ಗಟ್ಟಿಗಿತ್ತಿಯರ ಪಟ್ಟಿ ಬೆಳೆಯುತ್ತಾ ಹೋಗುತ್ತದೆ. ಪಿ.ಲಂಕೇಶರು ಕಂಡ ‘ಅವ್ವ’- ಈ ಮಣ್ಣಿನ ನಿಜದ ಹೆಣ್ಣಿನ ದರ್ಶನ. ‘ಆಕೆ- ಕಪ್ಪುನೆಲ, ಸುಟ್ಟಷ್ಟು ಕಸುವು, ನೊಂದಷ್ಟೂ ಹೂ ಹಣ್ಣು, ಬನದ ಕರಡಿ, ಭಗವದ್ಗೀತೆಯಾಚೆಯ ಬದುಕು’. ತಮಿಳು ಸಿನಿಮಾ ನಿರ್ದೇಶಕ ಪಾ.ರಂಜಿತ್‌ ಸೃಷ್ಟಿಸಿದ ಮಹಿಳಾ ಪಾತ್ರಗಳು ಕೂಡ ಇದಕ್ಕಿಂತ ಭಿನ್ನವೇನಲ್ಲ. ರಂಜಿತ್ ಸಿನಿಮಾಗಳಲ್ಲಿ ಪುರುಷ ಪಾತ್ರಗಳಿಗೆ ಎಷ್ಟು ಮಹತ್ವವಿದೆಯೋ ಅಷ್ಟೇ ಮಹತ್ವ ಮಹಿಳಾ ಪಾತ್ರಗಳಿಗೂ ಇದೆ. ರಂಜಿತ್ ನಿರ್ದೇಶನದ, ಇತ್ತೀಚೆಗೆ ತೆರೆಕಂಡ ‘ನಚ್ಚತಿರಂ ನಗರ್ಗಿರದು’ ಸಿನಿಮಾ ಈ ಗಟ್ಟಿತನವನ್ನು ಮತ್ತಷ್ಟು ವಿಸ್ತರಿಸಿದೆ.

‘ನಚ್ಚತಿರಂ ನಗರ್ಗಿರದು’ (ನಕ್ಷತ್ರ ಚಲಿಸುತ್ತಿವೆ) ಎಂಬ ಹೆಸರು ರೂಪಕದಂತಿದೆ. ಇದೊಂದು ಆಶಾವಾದದ ಸಂಕೇತ. ಬೆಳಕಿನುಂಡೆಯೊಂದು ನೆಲವನ್ನು ಸ್ಪರ್ಶಿಸುವ ಕೌತುಕದ ಕ್ಷಣ. ಇಲ್ಲಿನ ಬಹುತೇಕ ಪಾತ್ರಗಳೂ ಆ ಚಲಿಸುವ ನಕ್ಷತ್ರಕ್ಕಾಗಿ ಧ್ಯಾನಿಸುತ್ತಿವೆ. ಪ್ರೀತಿಯ ಅನ್ವೇಷಣೆಯಲ್ಲಿ ತೊಡಗಿರುವ ಇಲ್ಲಿನ ಪ್ರತಿ ಪಾತ್ರಕ್ಕೂ ಮಹತ್ವವಿದೆ. ಆದರೆ ಆ ಕಥೆ ಚಲನೆ ಪಡೆಯುವುದು ರೆನೆ ಎಂಬ ದಲಿತ ಹುಡುಗಿಯ ಸುತ್ತ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ರೆನೆ- ಅಂಬೇಡ್ಕರ್‌ವಾದಿ. ನೋವುಂಡು ಬೆಳೆದ ಅವಳಲ್ಲಿ ತನ್ನ ಅಸ್ಮಿತೆಯ ಕುರಿತು ಯಾವುದೇ ಅಂಜಿಕೆಯಿಲ್ಲ. ‘ಇದು ನಿಮ್ಮ ಸಮಸ್ಯೆಯೇ ಹೊರತು ನನ್ನದ್ದಲ್ಲ’ ಎಂದು ದಿಟ್ಟವಾಗಿ ಹೇಳಬಲ್ಲ ಹೆಣ್ಣುಮಗಳಾಕೆ. ‘ನಾನು ಹೇಗಿರಬೇಕೆಂದು ಇನ್ನೊಬ್ಬರ ಅಪ್ಪಣೆ ನೀಡಬೇಕಿಲ್ಲ’ ಎನ್ನುವ ರೆನೆ ದನದ ಮಾಂಸ ತಿನ್ನುತ್ತಾ, ‘ಇದು ನನ್ನ ಅಸ್ಮಿತೆ’ ಎನ್ನುವವಳು. ಜಾತಿ, ಧರ್ಮಗಳ ಸಂಕೋಲೆಯಲ್ಲಿ ಸಿಲುಕಿರುವ ಮನಸ್ಸುಗಳನ್ನು ನೋಡಿ ಗಹಗಹಿಸಿ ನಗುವವಳು. ‘ತಮಿಳ್‌’ ಎಂಬ ಹೆಸರಿನ ಹುಡುಗಿ ‘ರೆನೆ’ಯಾಗಿ ಗುರುತಿಸಿಕೊಂಡಿದ್ದಾಳೆ. ಈಕೆಯ ಹೆಸರು ‘ತಮಿಳ್‌’ ಎಂದೂ, ಅವಳ ಮೂಲವನ್ನು ಹಂಗಿಸುವ ಜಾತೀಯ ಸುಪ್ತ ಮನಸ್ಥಿತಿಗಳು ಇಲ್ಲಿ ಅನಾವರಣವಾಗುತ್ತವೆ. ಅದ್ಯಾವುದಕ್ಕೂ ಕ್ಯಾರೇ ಎನ್ನದೆ, ಓದಿನ ಮೂಲಕ ಗಟ್ಟಿಯಾದವಳು ರೆನೆ.

ಇದನ್ನೂ ಓದಿರಿ: ಗಾಳಿಪಟ-2: ಯೋಗರಾಜ ಭಟ್ರ ಕಥೆಯಲ್ಲಿ ಲಾಜಿಕ್ಕೂ ಇಲ್ಲ ಮ್ಯಾಜಿಕ್ಕೂ ಇಲ್ಲ!

ಅದೊಂದು ರಂಗಭೂಮಿ ಕಲಾವಿದರ ಪುಟ್ಟ ತಂಡ. ಪ್ರೀತಿಯ ಬಗ್ಗೆ ನಾಟಕವೊಂದನ್ನು ಮಾಡಬೇಕೆಂದು ಹೊರಟಿದೆ. ಪ್ರೀತಿ ಎಂದರೇನು? ಅದಕ್ಕಿರುವ ಮಾನದಂಡ ಯಾವುದು? ಯಾವುದನ್ನು ತೆರೆಯ ಮೇಲೆ ತರಬೇಕೆಂಬ ಚರ್ಚೆಯಲ್ಲಿರುವ ತಂಡವು, ಪ್ರೀತಿಯ ಸುತ್ತಲಿನ ರಾಜಕಾರಣದ ಕುರಿತು ಮಾತನಾಡುತ್ತದೆ. ರಂಜಿತ್‌ ಶೋಧಿಸಲು ಹೊರಟಿದ್ದು ಇದನ್ನೇ. ಪ್ರೀತಿಯೆಂದರೆ ಕೇವಲ ಗಂಡು- ಹೆಣ್ಣಿನ ಸಂಬಂಧಗಳಿಗೆ ಸೀಮಿತ ಜನಪ್ರಿಯ ಗ್ರಹಿಕೆಯನ್ನು ಒಡೆಯುತ್ತಾರೆ ರಂಜಿತ್‌.

ಲೆಸ್ಬಿಯನ್, ಗೇ, ಟ್ರಾನ್ಸ್‌ಜೆಂಡರ್‌, ಗಂಡು- ಹೆಣ್ಣಿನ ನಡುವಿನ ಸಂಬಂಧ- ಇದೆಲ್ಲವನ್ನೂ ಸಮಾಜ ಒಳಗೊಂಡಿದೆ ಎಂಬುದನ್ನು ಚಿತ್ರಿಸುತ್ತಲೇ, ಪ್ರಧಾನವಾಗಿ ರಂಜಿತ್‌ ಚರ್ಚಿಸಿರುವುದು ಜಾತಿ ಸುತ್ತಲಿನ ಪ್ರೀತಿಯ ಕುರಿತು. ಮರ್ಯಾದೆಗೇಡು ಹತ್ಯೆಗಳ ಸುತ್ತಲಿನ ರಾಜಕೀಯದ ಚರ್ಚೆ ನಡೆಸುತ್ತಲೇ ಇಲ್ಲಿನ ಸಂಪ್ರದಾಯವಾದಿ ಮನಸ್ಸುಗಳ ಪರಿವರ್ತನೆಗೆ ಅವಕಾಶ ನೀಡಬೇಕೆಂಬ ಆಶಯವನ್ನು ರಂಜಿತ್ ವ್ಯಕ್ತಪಡಿಸಿದ್ದಾರೆ. ಆದರೆ ತೀವ್ರ ಮೂಲಭೂತವಾದಿಗಳಿಗೆ ‘ಗೂಸಾ’ ಕೊಡುವುದೂ ಅನಿವಾರ್ಯವೆಂದು ರಂಜಿತ್ ನಂಬಿದಂತಿದೆ.

ರೆನೆಯ ‘ನೇಚರ್‌’ (ಬುದ್ಧಿ/ಜಾತೀಯ ಗುಣ) ಬಗ್ಗೆ ಮೂದಲಿಸುವ ಆಕೆಯ ಪ್ರಿಯಕರ ಇನಿಯನ್‌ ಆನಂತರದಲ್ಲಿ ಪರಿತಪಿಸುತ್ತಾನೆ. ಆತನ ಮೂದಲಿಕೆಯನ್ನೆಲ್ಲ ಮೂಲೆಗೆ ತಳ್ಳಿ, ಸ್ವತಂತ್ರವಾಗಿ, ಸ್ವಚ್ಛಂದವಾಗಿ ಇರುವ ರೆನೆಯನ್ನು ಕಂಡು ಆತ ಹೊಟ್ಟೆಕಿಚ್ಚು ಪಡುತ್ತಿರುವವನಂತೆ ಭಾಸವಾದರೂ ಇಂಚಿಂಚೆ ಪಶ್ಚಾತ್ತಾಪವನ್ನೂ ಪಡುತ್ತಿದ್ದಾನೆ. ಇನಿಯನ್‌ನಂತೆಯೇ ಅರ್ಜುನ್ ಎಂಬ ಪಾತ್ರವನ್ನು ನೋಡಬೇಕಾಗುತ್ತದೆ. ಈ ರಂಗತಂಡವನ್ನು ಸೇರಿದ ಅರ್ಜುನ್‌ ಸಂಪ್ರದಾಯವಾದಿಯೂ ಹೌದು. ಗೇ ಸೆಕ್ಸ್‌, ಟಾನ್ಸ್‌ಜೆಂಡರ್‌ ಪ್ರೀತಿ- ಇದ್ಯಾವುದನ್ನೂ ಮುಕ್ತವಾಗಿ ನೋಡದ ಆತ, ರೆನೆಯೊಂದಿಗೆ ಅನುಚಿತವಾಗಿ ವರ್ತಿಸುತ್ತಾನೆ. ಆದರೆ ರೆನೆ ಕ್ಷಮಿಸುವ ಗುಣ ತೋರುತ್ತಾಳೆ. ಆತನ ಮನಪರಿವರ್ತನೆಗೆ ಅವಕಾಶ ನೀಡುತ್ತಾಳೆ.

ಈ ಕಲಾತಂಡ ಪ್ರದರ್ಶಿಸಲಿರುವ ನಾಟಕದಲ್ಲಿ ಮಾರ್ಯಾದೆಗೇಡು ಹತ್ಯೆಯನ್ನು ಢಾಳಾಗಿ ತೋರಿಸಲು ಇಚ್ಚಿಸಿರುವ ನಿರ್ದೇಶಕನಿಗೆ ಕೆಲವು ಸಲಹೆಗಳನ್ನು ಅರ್ಜುನ್ ನೀಡುವ ಮಟ್ಟಕ್ಕೆ ಬದಲಾಗುತ್ತಾನೆ. “ಹೆತ್ತ ಮಗಳನ್ನು ತಂದೆ ಕೊಲ್ಲುವುದು ಸರಿಯೇ? ಇಲ್ಲಿಗೆ ಬರುವ ಮುನ್ನ conservative ಆಗಿದ್ದ ನಾನು ಈಗ ಎಷ್ಟೊಂದು ಬದಲಾಗಿದ್ದೇನೆ. ಸಮಾಜದ ಬದಲಾವಣೆಗೂ ಅವಕಾಶ ನೀಡಬೇಕು” ಎಂಬ ಆಶಯವನ್ನು ಅರ್ಜುನ್ ವ್ಯಕ್ತಪಡಿಸುತ್ತಾನೆ. ರೆನೆಯ ಸ್ವಾಭಿಮಾನ, ದಿಟ್ಟತನಗಳಿಗೆ ಮನಸೋಲುವ ಅರ್ಜುನ್‌, ತನ್ನ ಜಾತಿವಾದಿ ಕೌಟುಂಬಿಕ ವ್ಯವಸ್ಥೆಯಿಂದ ಹೊರಗೆ ಕಾಲಿಡಲು ನಿರ್ಧರಿಸಿರುವುದು ಇದರ ಮುಂದುವರಿದ ಭಾಗ.

ಮನುವಾದಿ ವ್ಯವಸ್ಥೆ ಭಾರತೀಯತೆಯ ಬೇರುಗಳ ಬಗ್ಗೆ ಸದಾ ಮಾತನಾಡುತ್ತದೆ. ಈ ಬೇರುಗಳಲ್ಲಿ ಜಾತಿ ಮೀರಿದ ಪ್ರೀತಿ ನಿಷಿದ್ಧ, ವರ್ಗ ಮೀರಿದ ಸಂಬಂಧ ನಿಷಿದ್ಧ, ಹೆಣ್ಣು-ಗಂಡಿನ ಪ್ರೀತಿಯಾಚೆಯ ಗೇ ಸೆಕ್ಸ್‌, ಲೆಸ್ಬಿಯನ್‌ ಸೆಕ್ಸ್ ನಿಷಿದ್ಧ. ಇದ್ಯಾವುದೂ ನಮ್ಮ ಬೇರುಗಳಲ್ಲ ಎನ್ನುತ್ತದೆ ಮನುವಾದ. ಯಥಾಸ್ಥಿತಿಯನ್ನು ಸಂಪ್ರದಾಯವಾದಿಗಳು ಬಯಸುತ್ತಾರೆ. ಯಾವುದನ್ನು ಭಾರತದ ಬೇರುಗಳೆಂದು ಧಾರ್ಮಿಕ ಮೂಲಭೂತವಾದಿಗಳು ವಾದಿಸುತ್ತಿದ್ದಾರೋ ಅದಕ್ಕೆ ಬಲವಾದ ಕೊಡಲಿಪೆಟ್ಟು ಕೊಟ್ಟಿದ್ದು- ಬಾಬಾ ಸಾಹೇಬ್‌ ಡಾ.ಬಿ.ಆರ್‌.ಅಂಬೇಡ್ಕರ್‌ ಅವರು ಬರೆದ ಸಂವಿಧಾನ. ಬುದ್ಧನ ಪ್ರೀತಿ, ಕಾರುಣ್ಯ, ಬಸವಾದಿ ಶರಣರ ಪ್ರಜಾಪ್ರಭುತ್ವ ಪರಿಕಲ್ಪನೆಯೇ ಈ ನೆಲದ ನಿಜವಾದ ಬೇರುಗಳು. ಈ ನಿಜದ ಬೇರನ್ನು ಅಲುಗಾಡಿಸಲು ಬರುವ ಮೂಲಭೂತವಾದಿಗಳನ್ನು, ಅಂಬೇಡ್ಕರ್‌ ಆಶಯದಲ್ಲಿ ನಂಬಿಕೆ ಇಟ್ಟ ಮನಸ್ಸುಗಳು ಒಂದಾಗಿ ಹೊಡೆದೋಡಿಸಬೇಕೆಂಬ ಸಂದೇಶವನ್ನು ರಂಜಿತ್‌ ನೀಡಿದ್ದಾರೆ. ಎಳೆಯ ಮಕ್ಕಳ ಮನಸ್ಸಿಗೆ ಮನುವಾದವನ್ನು ತುರುಕುವ ಪ್ರಯತ್ನ ರಾಷ್ಟ್ರೀಯ ಶಿಕ್ಷಣ ನೀತಿಯ ಮೂಲಕ ನಡೆಯುತ್ತಿರುವ ಹೊತ್ತಿನಲ್ಲಿ ರಂಜಿತ್‌, ‘ನಕ್ಷತ್ರಗಳು ಚಲಿಸುತ್ತಿವೆ’ ನೋಡಿದಿರಾ ಎಂದಿದ್ದಾರೆ.

ಇದನ್ನೂ ಓದಿರಿ: ಫಾಸಿಲ್‌ ನಟನೆಯ ‘ಮಲಯನ್‌ಕುಂಜು’ ಸಿನಿಮಾ ‘ಜಾತಿವಾದಿ ಮನಸ್ಥಿತಿ’ಯ ಕುರಿತು ಅನುಕಂಪ ಸೃಷ್ಟಿಸಿದೆಯೇ?

ಪ್ರೀತಿಯ ಉದಾತ್ತ ಆಶಯವನ್ನು ಪ್ರದರ್ಶಿಸುತ್ತಿರುವ ಕಲಾತಂಡದ ಮೇಲೆ ‘ಫ್ರಿಂಜ್‌ ಎಲಿಮೆಂಟ್’ ಒಬ್ಬ ದಾಳಿ ಮಾಡುತ್ತಾನೆ (ನಮ್ಮ ಕರ್ನಾಟಕದ ಶಿವಮೊಗ್ಗದಲ್ಲಿ ‘ಜೊತೆಗಿರುವನು ಚಂದಿರ’ ನಾಟಕಕ್ಕೆ ಅಡ್ಡಿಪಡಿಸಿದ್ದನ್ನು ನೆನೆಯಬಹುದು). ಇಂತಹ ಫ್ರಿಂಜ್‌ಗಳ ಹಿಂದೆ ಮಾಸ್ಟರ್‌ಗಳಿದ್ದಾರೆ, ಪೊಲೀಸ್ ವ್ಯವಸ್ಥೆಯ ರಕ್ಷಣೆ ಇದೆ. ಆದರೆ ಇದೆಲ್ಲವನ್ನೂ ಅಂಬೇಡ್ಕರ್‌ ಎಂಬ ಅಸ್ತ್ರದ ಮೂಲಕ ಸೋಲಿಸಬೇಕಿರುವುದು ಅನಿವಾರ್ಯ. ಇದಕ್ಕೆ ಎಲ್ಲರ ಸಹಕಾರ ಅಗತ್ಯ ಎಂಬುದನ್ನು ರಂಜಿತ್‌ ಮನಗಾಣಿಸಿದ್ದಾರೆ.

ಇಡೀ ಸಿನಿಮಾದುದ್ದಕ್ಕೂ ಹರಿದಿರುವ ಕಲಾನಿರ್ದೇಶನದ ಸೊಗಸು, ಕಥೆಯ ಸಂದೇಶದ ತೀವ್ರತೆಯನ್ನು ಹೆಚ್ಚಿಸುವ ತೆನ್ಮಾ ಅವರ ಸಂಗೀತ, ಪ್ರೀತಿಯ ಜಿಜ್ಞಾಸೆಗೆ ಬಳಸಿರುವ ಅರ್ಥಪೂರ್ಣ ಸಂಭಾಷಣೆ, ಜಾನಪದೀಯ ರೂಪಕವಾಗಿ ಚಿತ್ರಿಸಲಾಗಿರುವ ಮಾರ್ಯಾದೆ ಹತ್ಯೆಗಳು- ಇವೆಲ್ಲವೂ ‘ನಚ್ಚತಿರಂ ನಗರ್ಗಿರದು’ ಸಿನಿಮಾದ ಕಲಾತ್ಮಕತೆಯನ್ನು ಹೆಚ್ಚಿಸಿವೆ. ರೆನೆಯಾಗಿ ದುಶಾರಾ ವಿಜಯನ್‌, ಇನಿಯನ್‌ ಪಾತ್ರದಲ್ಲಿ ಕಾಳಿದಾಸ್ ಜಯರಾಮ್‌, ಅರ್ಜುನ್ ಆಗಿ ಕಲೈ ಅರಸನ್‌- ಹೀಗೆ ಎಲ್ಲ ಕಲಾವಿದರು ಮನೋಜ್ಞವಾಗಿ ನಟಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...