Homeಮುಖಪುಟನಚ್ಚತಿರಂ ನಗರ್ಗಿರದು: ಮನುವಾದಕ್ಕೆ ತಿರುಗೇಟು; ಮನಪರಿವರ್ತನೆಗೆ ಅವಕಾಶ- ಇದು ಪ.ರಂಜಿತ್‌ ಪ್ರೇಮಲೋಕ

ನಚ್ಚತಿರಂ ನಗರ್ಗಿರದು: ಮನುವಾದಕ್ಕೆ ತಿರುಗೇಟು; ಮನಪರಿವರ್ತನೆಗೆ ಅವಕಾಶ- ಇದು ಪ.ರಂಜಿತ್‌ ಪ್ರೇಮಲೋಕ

- Advertisement -
- Advertisement -

ದೇವನೂರ ಮಹಾದೇವ ಅವರು ತಮ್ಮ ಕೃತಿಗಳಲ್ಲಿ ಚಿತ್ರಿಸಿದ ಮಹಿಳಾ ಪಾತ್ರಗಳು ಎಂದಿಗೂ ಕನ್ನಡ ಸಾಹಿತ್ಯ ಲೋಕದಲ್ಲಿ ಅದ್ವಿತೀಯವಾಗಿ ನೆಲೆಸಿವೆ. ದಲಿತ ಕಥನಗಳಲ್ಲಿ ಬರುವ ಮಹಿಳೆಯರು, ಗಂಡಸರ ಮುಂದೆ ನಾಚುತ್ತಾ, ಹೆಬ್ಬೆರಳು ನೆಲಕ್ಕೆ ಸವರುತ್ತಾ, ಸೆರಗು ತಲೆಯ ಮೇಲೆ ಹಾಕಿಕೊಂಡು ನಿಲ್ಲುವುದಿಲ್ಲ. ಒಡಲಾಳದ ಸಾಕವ್ವನ ಲೋಕ, ಕುಸುಮಬಾಲೆಯ ಕೆಂಪಿ, ತೂರಮ್ಮ- ಹೀಗೆ ಈ ನೆಲದ ಗಟ್ಟಿಗಿತ್ತಿಯರ ಪಟ್ಟಿ ಬೆಳೆಯುತ್ತಾ ಹೋಗುತ್ತದೆ. ಪಿ.ಲಂಕೇಶರು ಕಂಡ ‘ಅವ್ವ’- ಈ ಮಣ್ಣಿನ ನಿಜದ ಹೆಣ್ಣಿನ ದರ್ಶನ. ‘ಆಕೆ- ಕಪ್ಪುನೆಲ, ಸುಟ್ಟಷ್ಟು ಕಸುವು, ನೊಂದಷ್ಟೂ ಹೂ ಹಣ್ಣು, ಬನದ ಕರಡಿ, ಭಗವದ್ಗೀತೆಯಾಚೆಯ ಬದುಕು’. ತಮಿಳು ಸಿನಿಮಾ ನಿರ್ದೇಶಕ ಪಾ.ರಂಜಿತ್‌ ಸೃಷ್ಟಿಸಿದ ಮಹಿಳಾ ಪಾತ್ರಗಳು ಕೂಡ ಇದಕ್ಕಿಂತ ಭಿನ್ನವೇನಲ್ಲ. ರಂಜಿತ್ ಸಿನಿಮಾಗಳಲ್ಲಿ ಪುರುಷ ಪಾತ್ರಗಳಿಗೆ ಎಷ್ಟು ಮಹತ್ವವಿದೆಯೋ ಅಷ್ಟೇ ಮಹತ್ವ ಮಹಿಳಾ ಪಾತ್ರಗಳಿಗೂ ಇದೆ. ರಂಜಿತ್ ನಿರ್ದೇಶನದ, ಇತ್ತೀಚೆಗೆ ತೆರೆಕಂಡ ‘ನಚ್ಚತಿರಂ ನಗರ್ಗಿರದು’ ಸಿನಿಮಾ ಈ ಗಟ್ಟಿತನವನ್ನು ಮತ್ತಷ್ಟು ವಿಸ್ತರಿಸಿದೆ.

‘ನಚ್ಚತಿರಂ ನಗರ್ಗಿರದು’ (ನಕ್ಷತ್ರ ಚಲಿಸುತ್ತಿವೆ) ಎಂಬ ಹೆಸರು ರೂಪಕದಂತಿದೆ. ಇದೊಂದು ಆಶಾವಾದದ ಸಂಕೇತ. ಬೆಳಕಿನುಂಡೆಯೊಂದು ನೆಲವನ್ನು ಸ್ಪರ್ಶಿಸುವ ಕೌತುಕದ ಕ್ಷಣ. ಇಲ್ಲಿನ ಬಹುತೇಕ ಪಾತ್ರಗಳೂ ಆ ಚಲಿಸುವ ನಕ್ಷತ್ರಕ್ಕಾಗಿ ಧ್ಯಾನಿಸುತ್ತಿವೆ. ಪ್ರೀತಿಯ ಅನ್ವೇಷಣೆಯಲ್ಲಿ ತೊಡಗಿರುವ ಇಲ್ಲಿನ ಪ್ರತಿ ಪಾತ್ರಕ್ಕೂ ಮಹತ್ವವಿದೆ. ಆದರೆ ಆ ಕಥೆ ಚಲನೆ ಪಡೆಯುವುದು ರೆನೆ ಎಂಬ ದಲಿತ ಹುಡುಗಿಯ ಸುತ್ತ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ರೆನೆ- ಅಂಬೇಡ್ಕರ್‌ವಾದಿ. ನೋವುಂಡು ಬೆಳೆದ ಅವಳಲ್ಲಿ ತನ್ನ ಅಸ್ಮಿತೆಯ ಕುರಿತು ಯಾವುದೇ ಅಂಜಿಕೆಯಿಲ್ಲ. ‘ಇದು ನಿಮ್ಮ ಸಮಸ್ಯೆಯೇ ಹೊರತು ನನ್ನದ್ದಲ್ಲ’ ಎಂದು ದಿಟ್ಟವಾಗಿ ಹೇಳಬಲ್ಲ ಹೆಣ್ಣುಮಗಳಾಕೆ. ‘ನಾನು ಹೇಗಿರಬೇಕೆಂದು ಇನ್ನೊಬ್ಬರ ಅಪ್ಪಣೆ ನೀಡಬೇಕಿಲ್ಲ’ ಎನ್ನುವ ರೆನೆ ದನದ ಮಾಂಸ ತಿನ್ನುತ್ತಾ, ‘ಇದು ನನ್ನ ಅಸ್ಮಿತೆ’ ಎನ್ನುವವಳು. ಜಾತಿ, ಧರ್ಮಗಳ ಸಂಕೋಲೆಯಲ್ಲಿ ಸಿಲುಕಿರುವ ಮನಸ್ಸುಗಳನ್ನು ನೋಡಿ ಗಹಗಹಿಸಿ ನಗುವವಳು. ‘ತಮಿಳ್‌’ ಎಂಬ ಹೆಸರಿನ ಹುಡುಗಿ ‘ರೆನೆ’ಯಾಗಿ ಗುರುತಿಸಿಕೊಂಡಿದ್ದಾಳೆ. ಈಕೆಯ ಹೆಸರು ‘ತಮಿಳ್‌’ ಎಂದೂ, ಅವಳ ಮೂಲವನ್ನು ಹಂಗಿಸುವ ಜಾತೀಯ ಸುಪ್ತ ಮನಸ್ಥಿತಿಗಳು ಇಲ್ಲಿ ಅನಾವರಣವಾಗುತ್ತವೆ. ಅದ್ಯಾವುದಕ್ಕೂ ಕ್ಯಾರೇ ಎನ್ನದೆ, ಓದಿನ ಮೂಲಕ ಗಟ್ಟಿಯಾದವಳು ರೆನೆ.

ಇದನ್ನೂ ಓದಿರಿ: ಗಾಳಿಪಟ-2: ಯೋಗರಾಜ ಭಟ್ರ ಕಥೆಯಲ್ಲಿ ಲಾಜಿಕ್ಕೂ ಇಲ್ಲ ಮ್ಯಾಜಿಕ್ಕೂ ಇಲ್ಲ!

ಅದೊಂದು ರಂಗಭೂಮಿ ಕಲಾವಿದರ ಪುಟ್ಟ ತಂಡ. ಪ್ರೀತಿಯ ಬಗ್ಗೆ ನಾಟಕವೊಂದನ್ನು ಮಾಡಬೇಕೆಂದು ಹೊರಟಿದೆ. ಪ್ರೀತಿ ಎಂದರೇನು? ಅದಕ್ಕಿರುವ ಮಾನದಂಡ ಯಾವುದು? ಯಾವುದನ್ನು ತೆರೆಯ ಮೇಲೆ ತರಬೇಕೆಂಬ ಚರ್ಚೆಯಲ್ಲಿರುವ ತಂಡವು, ಪ್ರೀತಿಯ ಸುತ್ತಲಿನ ರಾಜಕಾರಣದ ಕುರಿತು ಮಾತನಾಡುತ್ತದೆ. ರಂಜಿತ್‌ ಶೋಧಿಸಲು ಹೊರಟಿದ್ದು ಇದನ್ನೇ. ಪ್ರೀತಿಯೆಂದರೆ ಕೇವಲ ಗಂಡು- ಹೆಣ್ಣಿನ ಸಂಬಂಧಗಳಿಗೆ ಸೀಮಿತ ಜನಪ್ರಿಯ ಗ್ರಹಿಕೆಯನ್ನು ಒಡೆಯುತ್ತಾರೆ ರಂಜಿತ್‌.

ಲೆಸ್ಬಿಯನ್, ಗೇ, ಟ್ರಾನ್ಸ್‌ಜೆಂಡರ್‌, ಗಂಡು- ಹೆಣ್ಣಿನ ನಡುವಿನ ಸಂಬಂಧ- ಇದೆಲ್ಲವನ್ನೂ ಸಮಾಜ ಒಳಗೊಂಡಿದೆ ಎಂಬುದನ್ನು ಚಿತ್ರಿಸುತ್ತಲೇ, ಪ್ರಧಾನವಾಗಿ ರಂಜಿತ್‌ ಚರ್ಚಿಸಿರುವುದು ಜಾತಿ ಸುತ್ತಲಿನ ಪ್ರೀತಿಯ ಕುರಿತು. ಮರ್ಯಾದೆಗೇಡು ಹತ್ಯೆಗಳ ಸುತ್ತಲಿನ ರಾಜಕೀಯದ ಚರ್ಚೆ ನಡೆಸುತ್ತಲೇ ಇಲ್ಲಿನ ಸಂಪ್ರದಾಯವಾದಿ ಮನಸ್ಸುಗಳ ಪರಿವರ್ತನೆಗೆ ಅವಕಾಶ ನೀಡಬೇಕೆಂಬ ಆಶಯವನ್ನು ರಂಜಿತ್ ವ್ಯಕ್ತಪಡಿಸಿದ್ದಾರೆ. ಆದರೆ ತೀವ್ರ ಮೂಲಭೂತವಾದಿಗಳಿಗೆ ‘ಗೂಸಾ’ ಕೊಡುವುದೂ ಅನಿವಾರ್ಯವೆಂದು ರಂಜಿತ್ ನಂಬಿದಂತಿದೆ.

ರೆನೆಯ ‘ನೇಚರ್‌’ (ಬುದ್ಧಿ/ಜಾತೀಯ ಗುಣ) ಬಗ್ಗೆ ಮೂದಲಿಸುವ ಆಕೆಯ ಪ್ರಿಯಕರ ಇನಿಯನ್‌ ಆನಂತರದಲ್ಲಿ ಪರಿತಪಿಸುತ್ತಾನೆ. ಆತನ ಮೂದಲಿಕೆಯನ್ನೆಲ್ಲ ಮೂಲೆಗೆ ತಳ್ಳಿ, ಸ್ವತಂತ್ರವಾಗಿ, ಸ್ವಚ್ಛಂದವಾಗಿ ಇರುವ ರೆನೆಯನ್ನು ಕಂಡು ಆತ ಹೊಟ್ಟೆಕಿಚ್ಚು ಪಡುತ್ತಿರುವವನಂತೆ ಭಾಸವಾದರೂ ಇಂಚಿಂಚೆ ಪಶ್ಚಾತ್ತಾಪವನ್ನೂ ಪಡುತ್ತಿದ್ದಾನೆ. ಇನಿಯನ್‌ನಂತೆಯೇ ಅರ್ಜುನ್ ಎಂಬ ಪಾತ್ರವನ್ನು ನೋಡಬೇಕಾಗುತ್ತದೆ. ಈ ರಂಗತಂಡವನ್ನು ಸೇರಿದ ಅರ್ಜುನ್‌ ಸಂಪ್ರದಾಯವಾದಿಯೂ ಹೌದು. ಗೇ ಸೆಕ್ಸ್‌, ಟಾನ್ಸ್‌ಜೆಂಡರ್‌ ಪ್ರೀತಿ- ಇದ್ಯಾವುದನ್ನೂ ಮುಕ್ತವಾಗಿ ನೋಡದ ಆತ, ರೆನೆಯೊಂದಿಗೆ ಅನುಚಿತವಾಗಿ ವರ್ತಿಸುತ್ತಾನೆ. ಆದರೆ ರೆನೆ ಕ್ಷಮಿಸುವ ಗುಣ ತೋರುತ್ತಾಳೆ. ಆತನ ಮನಪರಿವರ್ತನೆಗೆ ಅವಕಾಶ ನೀಡುತ್ತಾಳೆ.

ಈ ಕಲಾತಂಡ ಪ್ರದರ್ಶಿಸಲಿರುವ ನಾಟಕದಲ್ಲಿ ಮಾರ್ಯಾದೆಗೇಡು ಹತ್ಯೆಯನ್ನು ಢಾಳಾಗಿ ತೋರಿಸಲು ಇಚ್ಚಿಸಿರುವ ನಿರ್ದೇಶಕನಿಗೆ ಕೆಲವು ಸಲಹೆಗಳನ್ನು ಅರ್ಜುನ್ ನೀಡುವ ಮಟ್ಟಕ್ಕೆ ಬದಲಾಗುತ್ತಾನೆ. “ಹೆತ್ತ ಮಗಳನ್ನು ತಂದೆ ಕೊಲ್ಲುವುದು ಸರಿಯೇ? ಇಲ್ಲಿಗೆ ಬರುವ ಮುನ್ನ conservative ಆಗಿದ್ದ ನಾನು ಈಗ ಎಷ್ಟೊಂದು ಬದಲಾಗಿದ್ದೇನೆ. ಸಮಾಜದ ಬದಲಾವಣೆಗೂ ಅವಕಾಶ ನೀಡಬೇಕು” ಎಂಬ ಆಶಯವನ್ನು ಅರ್ಜುನ್ ವ್ಯಕ್ತಪಡಿಸುತ್ತಾನೆ. ರೆನೆಯ ಸ್ವಾಭಿಮಾನ, ದಿಟ್ಟತನಗಳಿಗೆ ಮನಸೋಲುವ ಅರ್ಜುನ್‌, ತನ್ನ ಜಾತಿವಾದಿ ಕೌಟುಂಬಿಕ ವ್ಯವಸ್ಥೆಯಿಂದ ಹೊರಗೆ ಕಾಲಿಡಲು ನಿರ್ಧರಿಸಿರುವುದು ಇದರ ಮುಂದುವರಿದ ಭಾಗ.

ಮನುವಾದಿ ವ್ಯವಸ್ಥೆ ಭಾರತೀಯತೆಯ ಬೇರುಗಳ ಬಗ್ಗೆ ಸದಾ ಮಾತನಾಡುತ್ತದೆ. ಈ ಬೇರುಗಳಲ್ಲಿ ಜಾತಿ ಮೀರಿದ ಪ್ರೀತಿ ನಿಷಿದ್ಧ, ವರ್ಗ ಮೀರಿದ ಸಂಬಂಧ ನಿಷಿದ್ಧ, ಹೆಣ್ಣು-ಗಂಡಿನ ಪ್ರೀತಿಯಾಚೆಯ ಗೇ ಸೆಕ್ಸ್‌, ಲೆಸ್ಬಿಯನ್‌ ಸೆಕ್ಸ್ ನಿಷಿದ್ಧ. ಇದ್ಯಾವುದೂ ನಮ್ಮ ಬೇರುಗಳಲ್ಲ ಎನ್ನುತ್ತದೆ ಮನುವಾದ. ಯಥಾಸ್ಥಿತಿಯನ್ನು ಸಂಪ್ರದಾಯವಾದಿಗಳು ಬಯಸುತ್ತಾರೆ. ಯಾವುದನ್ನು ಭಾರತದ ಬೇರುಗಳೆಂದು ಧಾರ್ಮಿಕ ಮೂಲಭೂತವಾದಿಗಳು ವಾದಿಸುತ್ತಿದ್ದಾರೋ ಅದಕ್ಕೆ ಬಲವಾದ ಕೊಡಲಿಪೆಟ್ಟು ಕೊಟ್ಟಿದ್ದು- ಬಾಬಾ ಸಾಹೇಬ್‌ ಡಾ.ಬಿ.ಆರ್‌.ಅಂಬೇಡ್ಕರ್‌ ಅವರು ಬರೆದ ಸಂವಿಧಾನ. ಬುದ್ಧನ ಪ್ರೀತಿ, ಕಾರುಣ್ಯ, ಬಸವಾದಿ ಶರಣರ ಪ್ರಜಾಪ್ರಭುತ್ವ ಪರಿಕಲ್ಪನೆಯೇ ಈ ನೆಲದ ನಿಜವಾದ ಬೇರುಗಳು. ಈ ನಿಜದ ಬೇರನ್ನು ಅಲುಗಾಡಿಸಲು ಬರುವ ಮೂಲಭೂತವಾದಿಗಳನ್ನು, ಅಂಬೇಡ್ಕರ್‌ ಆಶಯದಲ್ಲಿ ನಂಬಿಕೆ ಇಟ್ಟ ಮನಸ್ಸುಗಳು ಒಂದಾಗಿ ಹೊಡೆದೋಡಿಸಬೇಕೆಂಬ ಸಂದೇಶವನ್ನು ರಂಜಿತ್‌ ನೀಡಿದ್ದಾರೆ. ಎಳೆಯ ಮಕ್ಕಳ ಮನಸ್ಸಿಗೆ ಮನುವಾದವನ್ನು ತುರುಕುವ ಪ್ರಯತ್ನ ರಾಷ್ಟ್ರೀಯ ಶಿಕ್ಷಣ ನೀತಿಯ ಮೂಲಕ ನಡೆಯುತ್ತಿರುವ ಹೊತ್ತಿನಲ್ಲಿ ರಂಜಿತ್‌, ‘ನಕ್ಷತ್ರಗಳು ಚಲಿಸುತ್ತಿವೆ’ ನೋಡಿದಿರಾ ಎಂದಿದ್ದಾರೆ.

ಇದನ್ನೂ ಓದಿರಿ: ಫಾಸಿಲ್‌ ನಟನೆಯ ‘ಮಲಯನ್‌ಕುಂಜು’ ಸಿನಿಮಾ ‘ಜಾತಿವಾದಿ ಮನಸ್ಥಿತಿ’ಯ ಕುರಿತು ಅನುಕಂಪ ಸೃಷ್ಟಿಸಿದೆಯೇ?

ಪ್ರೀತಿಯ ಉದಾತ್ತ ಆಶಯವನ್ನು ಪ್ರದರ್ಶಿಸುತ್ತಿರುವ ಕಲಾತಂಡದ ಮೇಲೆ ‘ಫ್ರಿಂಜ್‌ ಎಲಿಮೆಂಟ್’ ಒಬ್ಬ ದಾಳಿ ಮಾಡುತ್ತಾನೆ (ನಮ್ಮ ಕರ್ನಾಟಕದ ಶಿವಮೊಗ್ಗದಲ್ಲಿ ‘ಜೊತೆಗಿರುವನು ಚಂದಿರ’ ನಾಟಕಕ್ಕೆ ಅಡ್ಡಿಪಡಿಸಿದ್ದನ್ನು ನೆನೆಯಬಹುದು). ಇಂತಹ ಫ್ರಿಂಜ್‌ಗಳ ಹಿಂದೆ ಮಾಸ್ಟರ್‌ಗಳಿದ್ದಾರೆ, ಪೊಲೀಸ್ ವ್ಯವಸ್ಥೆಯ ರಕ್ಷಣೆ ಇದೆ. ಆದರೆ ಇದೆಲ್ಲವನ್ನೂ ಅಂಬೇಡ್ಕರ್‌ ಎಂಬ ಅಸ್ತ್ರದ ಮೂಲಕ ಸೋಲಿಸಬೇಕಿರುವುದು ಅನಿವಾರ್ಯ. ಇದಕ್ಕೆ ಎಲ್ಲರ ಸಹಕಾರ ಅಗತ್ಯ ಎಂಬುದನ್ನು ರಂಜಿತ್‌ ಮನಗಾಣಿಸಿದ್ದಾರೆ.

ಇಡೀ ಸಿನಿಮಾದುದ್ದಕ್ಕೂ ಹರಿದಿರುವ ಕಲಾನಿರ್ದೇಶನದ ಸೊಗಸು, ಕಥೆಯ ಸಂದೇಶದ ತೀವ್ರತೆಯನ್ನು ಹೆಚ್ಚಿಸುವ ತೆನ್ಮಾ ಅವರ ಸಂಗೀತ, ಪ್ರೀತಿಯ ಜಿಜ್ಞಾಸೆಗೆ ಬಳಸಿರುವ ಅರ್ಥಪೂರ್ಣ ಸಂಭಾಷಣೆ, ಜಾನಪದೀಯ ರೂಪಕವಾಗಿ ಚಿತ್ರಿಸಲಾಗಿರುವ ಮಾರ್ಯಾದೆ ಹತ್ಯೆಗಳು- ಇವೆಲ್ಲವೂ ‘ನಚ್ಚತಿರಂ ನಗರ್ಗಿರದು’ ಸಿನಿಮಾದ ಕಲಾತ್ಮಕತೆಯನ್ನು ಹೆಚ್ಚಿಸಿವೆ. ರೆನೆಯಾಗಿ ದುಶಾರಾ ವಿಜಯನ್‌, ಇನಿಯನ್‌ ಪಾತ್ರದಲ್ಲಿ ಕಾಳಿದಾಸ್ ಜಯರಾಮ್‌, ಅರ್ಜುನ್ ಆಗಿ ಕಲೈ ಅರಸನ್‌- ಹೀಗೆ ಎಲ್ಲ ಕಲಾವಿದರು ಮನೋಜ್ಞವಾಗಿ ನಟಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...