Homeಕಥೆಕಠೋಪನಿಷತ್ತು - ಬಾಲಕನೊಬ್ಬನ ಬಂಡಾಯದ ಕತೆ: ಯೋಗೇಶ್ ಮಾಸ್ಟರ್

ಕಠೋಪನಿಷತ್ತು – ಬಾಲಕನೊಬ್ಬನ ಬಂಡಾಯದ ಕತೆ: ಯೋಗೇಶ್ ಮಾಸ್ಟರ್

- Advertisement -
- Advertisement -

ಆಚರಣೆಯು ಅನುಷ್ಠಾನದಿಂದ ಹೊರತಾಗಿರುವುದರ ವಿರುದ್ಧವಾಗಿ ಬಂಡಾಯವೇಳುವ ನಚಿಕೇತನೆಂಬ ಹುಡುಗನ ಕತೆ ಈ ಕಠೋಪನಿಷತ್ತು.

ಉದ್ದಾಲಕ ನಚಿಕೇತನ ತಂದೆ. ಅವನು ಸರ್ವವೇದಸ್ ಎಂಬ ಯಜ್ಞವನ್ನು ಮಾಡಿದ. ಅದರ ಪ್ರಕಾರ ತನ್ನಲ್ಲಿರುವ ಎಲ್ಲವನ್ನೂ ಕೂಡಾ ಯಜ್ಞಕರ್ತೃವು ಕೊಡಬೇಕು. ಹಸುಗಳೇ ಅವರ ಸಂಪತ್ತು. ಉದ್ದಾಲಕನು ತನ್ನಲ್ಲಿರುವ ಎಲ್ಲಾ ಹಸುಗಳನ್ನು ದಾನ ಮಾಡುವ ಬದಲು ಉತ್ತಮವಾದ ಹಸುಗಳನ್ನು ಇಟ್ಟುಕೊಂಡು ಗೊಡ್ಡು ಹಸುಗಳನ್ನು ಬಂದವರಿಗೆ ದಾನವಾಗಿ ನೀಡುತ್ತಿದ್ದ.

ಇದನ್ನು ನಚಿಕೇತ ಗಮನಿಸಿದ. ತನ್ನಲ್ಲಿರುವ ಸರ್ವಸ್ವವನ್ನೂ ಕೊಟ್ಟು ಲೌಕಿಕ ಭಾರದಿಂದ ಮುಕ್ತನಾಗಬೇಕಿದ್ದ ತಂದೆ ಆಚರಣೆಯಲ್ಲಿ ಹಾಗೆ ತೋರುತ್ತಿದ್ದಾನೆ ಆದರೆ ವಾಸ್ತವದಲ್ಲಿ ಲೋಭಿಯೇ ಆಗಿದ್ದಾನೆ. ನಡೆನುಡಿ ಹೊಂದದ, ಆಚರಣೆ ಅನುಷ್ಠಾನಗಳಿಗೆ ತಾಳೆಯಾಗದ ಈ ಯಜ್ಞವನ್ನು ಅವನು ಪ್ರತಿಭಟಿಸುವ ರೀತಿ ವಿಶಿಷ್ಟವಾಗಿದೆ.

ನಚಿಕೇತ ಅವರ ಮನೆಯಲ್ಲಿ ಜಾಣನಾಗಿ ಗುರುತಿಸಿಕೊಂಡಿರುವವನಲ್ಲ. ಒಂದು ರೀತಿಯಲ್ಲಿ ಕೆಲಸಕ್ಕೆ ಬಾರದವನು. ಏನೂ ಕೆಲಸಕ್ಕೆ ಬಾರದ ಹಸುಗಳನ್ನು ದಕ್ಷಿಣೆಯಾಗಿ ಕೊಡುತ್ತಿದ್ದ ತಂದೆಯ ಗಮನ ಸೆಳೆದು ಇದೇ ಕೆಲಸಕ್ಕೆ ಬಾರದ ಮಗ ಕೇಳಿದ “ನನ್ನನ್ನು ಯಾರಿಗೆ ಕೊಡುತ್ತೀರಿ?” ಎಂದು.

ಈ ಪ್ರಶ್ನೆಯೇ ಅವನ ಪ್ರತಿಭಟನೆ. ಈ ಪ್ರಶ್ನೆಯಲ್ಲಿ ತಂದೆಯ ಡಾಂಭಿಕತನವನ್ನು ಪ್ರಶ್ನಿಸುತ್ತಾನೆ. ಶುಷ್ಕ ಆಚರಣೆಗಳನ್ನು, ಆಧ್ಯಾತ್ಮ ಮೌಲ್ಯಗಳನ್ನು ಗ್ರಹಿಸದ ವಿಧಿಗಳನ್ನು, ತನ್ನ ಸಂಪತ್ತನ್ನು ದಾನ ತೆಗೆದುಕೊಳ್ಳಿ ಎಂದು ಪೊಳ್ಳನ್ನು ಕೊಡುವ ಮೋಸವನ್ನು ಪ್ರಶ್ನಿಸುತ್ತಾನೆ. ಕೆಲಸಕ್ಕೆ ಬಾರದ ಮಗನನ್ನು ಏನು ಮಾಡುತ್ತೀಯಾ ಎಂದು ಕೆಲಸಕ್ಕೆ ಬಾರದವೆಂದು ಹಸುಗಳನ್ನು ದಾನದ ಹೆಸರಲ್ಲಿ ಕೈ ತೊಳೆದುಕೊಳ್ಳುವ ಮನುಷ್ಯನ ವ್ಯಾಮೋಹವನ್ನು ಪ್ರಶ್ನಿಸುತ್ತಾನೆ.

ನಚಿಕೇತ ಎಲ್ಲೋ ಮೂಲೆಯಲ್ಲಿ ಕೇಳಲಿಲ್ಲ. ಯಜ್ಞ ನಡೆಯುವಲ್ಲಿ ಎಲ್ಲರ ಮುಂದೆ ಕೇಳಿದ. ಮುಜುಗರಗೊಂಡ ತಂದೆ ಉತ್ತರಿಸದೇ ತಪ್ಪಿಸಿಕೊಳ್ಳುತ್ತಾನೆ. ಆದರೆ ಇವನು ಬಿಡದೇ ಮೂರು ಬಾರಿ ಕೇಳುತ್ತಾನೆ. ಕೆರಳಿದ ತಂದೆ ನಿನ್ನ ಸಾವಿಗೆ ಕೊಡುತ್ತೇನೆ ಎನ್ನುತ್ತಾನೆ.

ಮಾತು ಮತ್ತು ಕೃತಿಗಳ ಮೌಲ್ಯವನ್ನು ಎತ್ತಿ ಹಿಡಿಯುವ ನಚಿಕೇತನ ಪ್ರತಿಭಟನೆ ಮುಂದುವರಿಯುತ್ತದೆ. ನಾನು ಸಾವಿಗೆ ಹೋಗುತ್ತೇನೆ ಎಂದು ಹೋಗುತ್ತಾನೆ ನಚಿಕೇತ.
ಮುಂದಿನ ಭಾಗ ರೂಪಕ. ಏಕೆಂದರೆ ಮೃತ್ಯುವಿನ ದೇವತೆಯಾದ ಯಮನಿಗಾಗಿ ಮೂರು ದಿನಗಳ ಕಾಲ ಕಾದು ನಂತರ ಅವನನ್ನು ಸಂಧಿಸಿ ಮರಣದಾಚೆಯ ಬದುಕಿನ ಬಗ್ಗೆ ತಿಳಿದುಕೊಳ್ಳುತ್ತಾನೆ.

ವೈದಿಕರ ಯಾವ ಯಜ್ಞವನ್ನು ವಿರೋಧಿಸಿ ಮಾತು ಕೃತಿಗಳ ಮೌಲ್ಯವನ್ನು ಎತ್ತಿ ಹಿಡಿದನೋ ಆ ನಚಿಕೇತನೇ ಮುಂದೆ ಯಮನಿಂದ ಯಜ್ಞ ಮಾಡುವುದನ್ನು ಕಲಿತುಕೊಳ್ಳುವುದನ್ನು ಸೂಚಿಸುತ್ತದೆ. ಆದರೆ ಅದು ಸಮಿತ್ತುಗಳನ್ನಿಟ್ಟು ಅಗ್ನಿಕಾರ್ಯದಿಂದ ಮಾಡುವ ಯಜ್ಞವಾಗಿರದೇ ಆಂತರಿಕ ಯಜ್ಞವಾಗಿ ಅನಾವರಣಗೊಳ್ಳುತ್ತದೆ.

ಅದೇನೇ ಇರಲಿ, ಒಬ್ಬ ಪ್ರತಿಭಟನಾಕಾರನಿಗೆ ಇರಬೇಕಾದ ಆತ್ಮವಿಶ್ವಾಸವನ್ನು ನಚಿಕೇತ ಅಲ್ಲಿ ತೋರುತ್ತಾನೆ. “ನಿನ್ನನ್ನು ಮೃತ್ಯುವಿಗೆ ಕೊಡುತ್ತೇನೆ” ಎಂದು ತಂದೆ ಹೇಳಿದಾಗ, “ಬಹುಜನರಲ್ಲಿ ಪ್ರಥಮನಾಗಿ, ಬಹುಜನರಲ್ಲಿ ಮಧ್ಯಮನಾಗಿರುವ ನನ್ನಿಂದ ಯಾವ ಕೆಲಸ ಮೃತ್ಯುವಿಗೆ ಆಗುತ್ತದೆ?” ಎಂದು ಯೋಚಿಸುತ್ತಾನೆ. ತಾನು ಅಧಮನಲ್ಲ ಎಂಬ ಆತ್ಮವಿಶ್ವಾಸವಿದೆ ಅವನಲ್ಲಿ. ಅಷ್ಟೇಅಲ್ಲದೇ ತಾನು ಪ್ರತಿಭಟಿಸಿದ ತಂದೆಗೆ ನಿದ್ರೆಗಳಿಂದ ಕೂಡಿರುವ ರಾತ್ರಿಯಿರಲಿ ಎಂದು ಒತ್ತಡರಹಿತವಾದ ಮನಸ್ಥಿತಿ ಬಯಸುತ್ತಾನೆ. ಪ್ರತಿಭಟನೆ ಮತ್ತು ಪ್ರೀತಿ ತೋರುವ ಆತ್ಮೀಯ ಭಾವ ನಚಿಕೇತದಲ್ಲಿ.

ಕಠೋಪನಿಷತ್ತಿನಲ್ಲಿ ಮೂಲಕತೆಯೊಂದಿಗೆ ನುಸುಳುವಿಕೆಗಳಿವೆ ಎಂದು ತೋರುತ್ತದೆ. ಆದರೆ, ನಚಿಕೇತನೆಂಬ ಸಾತ್ವಿಕ ಬಂಡಾಯಗಾರನ ಪ್ರತಿಮೆ ಮಾತ್ರ ಅತ್ಯಂತ ಆಪ್ತ. ಇದನ್ನೇ ಆಧರಿಸಿ ತ ರಾ ಸು “ಬೆಳಕು ತಂದ ಬಾಲಕ” ಎಂಬ ಕಾದಂಬರಿ ರಚಿಸಿದ್ದಾರೆ. ಇದೂ ಕೂಡಾ ನಚಿಕೇತನ ವ್ಯಕ್ತಿತ್ವದ ದರ್ಶನ ಮಾಡಿಸುವಂತದ್ದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...