Homeಕಥೆಕಠೋಪನಿಷತ್ತು - ಬಾಲಕನೊಬ್ಬನ ಬಂಡಾಯದ ಕತೆ: ಯೋಗೇಶ್ ಮಾಸ್ಟರ್

ಕಠೋಪನಿಷತ್ತು – ಬಾಲಕನೊಬ್ಬನ ಬಂಡಾಯದ ಕತೆ: ಯೋಗೇಶ್ ಮಾಸ್ಟರ್

- Advertisement -
- Advertisement -

ಆಚರಣೆಯು ಅನುಷ್ಠಾನದಿಂದ ಹೊರತಾಗಿರುವುದರ ವಿರುದ್ಧವಾಗಿ ಬಂಡಾಯವೇಳುವ ನಚಿಕೇತನೆಂಬ ಹುಡುಗನ ಕತೆ ಈ ಕಠೋಪನಿಷತ್ತು.

ಉದ್ದಾಲಕ ನಚಿಕೇತನ ತಂದೆ. ಅವನು ಸರ್ವವೇದಸ್ ಎಂಬ ಯಜ್ಞವನ್ನು ಮಾಡಿದ. ಅದರ ಪ್ರಕಾರ ತನ್ನಲ್ಲಿರುವ ಎಲ್ಲವನ್ನೂ ಕೂಡಾ ಯಜ್ಞಕರ್ತೃವು ಕೊಡಬೇಕು. ಹಸುಗಳೇ ಅವರ ಸಂಪತ್ತು. ಉದ್ದಾಲಕನು ತನ್ನಲ್ಲಿರುವ ಎಲ್ಲಾ ಹಸುಗಳನ್ನು ದಾನ ಮಾಡುವ ಬದಲು ಉತ್ತಮವಾದ ಹಸುಗಳನ್ನು ಇಟ್ಟುಕೊಂಡು ಗೊಡ್ಡು ಹಸುಗಳನ್ನು ಬಂದವರಿಗೆ ದಾನವಾಗಿ ನೀಡುತ್ತಿದ್ದ.

ಇದನ್ನು ನಚಿಕೇತ ಗಮನಿಸಿದ. ತನ್ನಲ್ಲಿರುವ ಸರ್ವಸ್ವವನ್ನೂ ಕೊಟ್ಟು ಲೌಕಿಕ ಭಾರದಿಂದ ಮುಕ್ತನಾಗಬೇಕಿದ್ದ ತಂದೆ ಆಚರಣೆಯಲ್ಲಿ ಹಾಗೆ ತೋರುತ್ತಿದ್ದಾನೆ ಆದರೆ ವಾಸ್ತವದಲ್ಲಿ ಲೋಭಿಯೇ ಆಗಿದ್ದಾನೆ. ನಡೆನುಡಿ ಹೊಂದದ, ಆಚರಣೆ ಅನುಷ್ಠಾನಗಳಿಗೆ ತಾಳೆಯಾಗದ ಈ ಯಜ್ಞವನ್ನು ಅವನು ಪ್ರತಿಭಟಿಸುವ ರೀತಿ ವಿಶಿಷ್ಟವಾಗಿದೆ.

ನಚಿಕೇತ ಅವರ ಮನೆಯಲ್ಲಿ ಜಾಣನಾಗಿ ಗುರುತಿಸಿಕೊಂಡಿರುವವನಲ್ಲ. ಒಂದು ರೀತಿಯಲ್ಲಿ ಕೆಲಸಕ್ಕೆ ಬಾರದವನು. ಏನೂ ಕೆಲಸಕ್ಕೆ ಬಾರದ ಹಸುಗಳನ್ನು ದಕ್ಷಿಣೆಯಾಗಿ ಕೊಡುತ್ತಿದ್ದ ತಂದೆಯ ಗಮನ ಸೆಳೆದು ಇದೇ ಕೆಲಸಕ್ಕೆ ಬಾರದ ಮಗ ಕೇಳಿದ “ನನ್ನನ್ನು ಯಾರಿಗೆ ಕೊಡುತ್ತೀರಿ?” ಎಂದು.

ಈ ಪ್ರಶ್ನೆಯೇ ಅವನ ಪ್ರತಿಭಟನೆ. ಈ ಪ್ರಶ್ನೆಯಲ್ಲಿ ತಂದೆಯ ಡಾಂಭಿಕತನವನ್ನು ಪ್ರಶ್ನಿಸುತ್ತಾನೆ. ಶುಷ್ಕ ಆಚರಣೆಗಳನ್ನು, ಆಧ್ಯಾತ್ಮ ಮೌಲ್ಯಗಳನ್ನು ಗ್ರಹಿಸದ ವಿಧಿಗಳನ್ನು, ತನ್ನ ಸಂಪತ್ತನ್ನು ದಾನ ತೆಗೆದುಕೊಳ್ಳಿ ಎಂದು ಪೊಳ್ಳನ್ನು ಕೊಡುವ ಮೋಸವನ್ನು ಪ್ರಶ್ನಿಸುತ್ತಾನೆ. ಕೆಲಸಕ್ಕೆ ಬಾರದ ಮಗನನ್ನು ಏನು ಮಾಡುತ್ತೀಯಾ ಎಂದು ಕೆಲಸಕ್ಕೆ ಬಾರದವೆಂದು ಹಸುಗಳನ್ನು ದಾನದ ಹೆಸರಲ್ಲಿ ಕೈ ತೊಳೆದುಕೊಳ್ಳುವ ಮನುಷ್ಯನ ವ್ಯಾಮೋಹವನ್ನು ಪ್ರಶ್ನಿಸುತ್ತಾನೆ.

ನಚಿಕೇತ ಎಲ್ಲೋ ಮೂಲೆಯಲ್ಲಿ ಕೇಳಲಿಲ್ಲ. ಯಜ್ಞ ನಡೆಯುವಲ್ಲಿ ಎಲ್ಲರ ಮುಂದೆ ಕೇಳಿದ. ಮುಜುಗರಗೊಂಡ ತಂದೆ ಉತ್ತರಿಸದೇ ತಪ್ಪಿಸಿಕೊಳ್ಳುತ್ತಾನೆ. ಆದರೆ ಇವನು ಬಿಡದೇ ಮೂರು ಬಾರಿ ಕೇಳುತ್ತಾನೆ. ಕೆರಳಿದ ತಂದೆ ನಿನ್ನ ಸಾವಿಗೆ ಕೊಡುತ್ತೇನೆ ಎನ್ನುತ್ತಾನೆ.

ಮಾತು ಮತ್ತು ಕೃತಿಗಳ ಮೌಲ್ಯವನ್ನು ಎತ್ತಿ ಹಿಡಿಯುವ ನಚಿಕೇತನ ಪ್ರತಿಭಟನೆ ಮುಂದುವರಿಯುತ್ತದೆ. ನಾನು ಸಾವಿಗೆ ಹೋಗುತ್ತೇನೆ ಎಂದು ಹೋಗುತ್ತಾನೆ ನಚಿಕೇತ.
ಮುಂದಿನ ಭಾಗ ರೂಪಕ. ಏಕೆಂದರೆ ಮೃತ್ಯುವಿನ ದೇವತೆಯಾದ ಯಮನಿಗಾಗಿ ಮೂರು ದಿನಗಳ ಕಾಲ ಕಾದು ನಂತರ ಅವನನ್ನು ಸಂಧಿಸಿ ಮರಣದಾಚೆಯ ಬದುಕಿನ ಬಗ್ಗೆ ತಿಳಿದುಕೊಳ್ಳುತ್ತಾನೆ.

ವೈದಿಕರ ಯಾವ ಯಜ್ಞವನ್ನು ವಿರೋಧಿಸಿ ಮಾತು ಕೃತಿಗಳ ಮೌಲ್ಯವನ್ನು ಎತ್ತಿ ಹಿಡಿದನೋ ಆ ನಚಿಕೇತನೇ ಮುಂದೆ ಯಮನಿಂದ ಯಜ್ಞ ಮಾಡುವುದನ್ನು ಕಲಿತುಕೊಳ್ಳುವುದನ್ನು ಸೂಚಿಸುತ್ತದೆ. ಆದರೆ ಅದು ಸಮಿತ್ತುಗಳನ್ನಿಟ್ಟು ಅಗ್ನಿಕಾರ್ಯದಿಂದ ಮಾಡುವ ಯಜ್ಞವಾಗಿರದೇ ಆಂತರಿಕ ಯಜ್ಞವಾಗಿ ಅನಾವರಣಗೊಳ್ಳುತ್ತದೆ.

ಅದೇನೇ ಇರಲಿ, ಒಬ್ಬ ಪ್ರತಿಭಟನಾಕಾರನಿಗೆ ಇರಬೇಕಾದ ಆತ್ಮವಿಶ್ವಾಸವನ್ನು ನಚಿಕೇತ ಅಲ್ಲಿ ತೋರುತ್ತಾನೆ. “ನಿನ್ನನ್ನು ಮೃತ್ಯುವಿಗೆ ಕೊಡುತ್ತೇನೆ” ಎಂದು ತಂದೆ ಹೇಳಿದಾಗ, “ಬಹುಜನರಲ್ಲಿ ಪ್ರಥಮನಾಗಿ, ಬಹುಜನರಲ್ಲಿ ಮಧ್ಯಮನಾಗಿರುವ ನನ್ನಿಂದ ಯಾವ ಕೆಲಸ ಮೃತ್ಯುವಿಗೆ ಆಗುತ್ತದೆ?” ಎಂದು ಯೋಚಿಸುತ್ತಾನೆ. ತಾನು ಅಧಮನಲ್ಲ ಎಂಬ ಆತ್ಮವಿಶ್ವಾಸವಿದೆ ಅವನಲ್ಲಿ. ಅಷ್ಟೇಅಲ್ಲದೇ ತಾನು ಪ್ರತಿಭಟಿಸಿದ ತಂದೆಗೆ ನಿದ್ರೆಗಳಿಂದ ಕೂಡಿರುವ ರಾತ್ರಿಯಿರಲಿ ಎಂದು ಒತ್ತಡರಹಿತವಾದ ಮನಸ್ಥಿತಿ ಬಯಸುತ್ತಾನೆ. ಪ್ರತಿಭಟನೆ ಮತ್ತು ಪ್ರೀತಿ ತೋರುವ ಆತ್ಮೀಯ ಭಾವ ನಚಿಕೇತದಲ್ಲಿ.

ಕಠೋಪನಿಷತ್ತಿನಲ್ಲಿ ಮೂಲಕತೆಯೊಂದಿಗೆ ನುಸುಳುವಿಕೆಗಳಿವೆ ಎಂದು ತೋರುತ್ತದೆ. ಆದರೆ, ನಚಿಕೇತನೆಂಬ ಸಾತ್ವಿಕ ಬಂಡಾಯಗಾರನ ಪ್ರತಿಮೆ ಮಾತ್ರ ಅತ್ಯಂತ ಆಪ್ತ. ಇದನ್ನೇ ಆಧರಿಸಿ ತ ರಾ ಸು “ಬೆಳಕು ತಂದ ಬಾಲಕ” ಎಂಬ ಕಾದಂಬರಿ ರಚಿಸಿದ್ದಾರೆ. ಇದೂ ಕೂಡಾ ನಚಿಕೇತನ ವ್ಯಕ್ತಿತ್ವದ ದರ್ಶನ ಮಾಡಿಸುವಂತದ್ದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...