Homeಕಥೆಕಠೋಪನಿಷತ್ತು - ಬಾಲಕನೊಬ್ಬನ ಬಂಡಾಯದ ಕತೆ: ಯೋಗೇಶ್ ಮಾಸ್ಟರ್

ಕಠೋಪನಿಷತ್ತು – ಬಾಲಕನೊಬ್ಬನ ಬಂಡಾಯದ ಕತೆ: ಯೋಗೇಶ್ ಮಾಸ್ಟರ್

- Advertisement -
- Advertisement -

ಆಚರಣೆಯು ಅನುಷ್ಠಾನದಿಂದ ಹೊರತಾಗಿರುವುದರ ವಿರುದ್ಧವಾಗಿ ಬಂಡಾಯವೇಳುವ ನಚಿಕೇತನೆಂಬ ಹುಡುಗನ ಕತೆ ಈ ಕಠೋಪನಿಷತ್ತು.

ಉದ್ದಾಲಕ ನಚಿಕೇತನ ತಂದೆ. ಅವನು ಸರ್ವವೇದಸ್ ಎಂಬ ಯಜ್ಞವನ್ನು ಮಾಡಿದ. ಅದರ ಪ್ರಕಾರ ತನ್ನಲ್ಲಿರುವ ಎಲ್ಲವನ್ನೂ ಕೂಡಾ ಯಜ್ಞಕರ್ತೃವು ಕೊಡಬೇಕು. ಹಸುಗಳೇ ಅವರ ಸಂಪತ್ತು. ಉದ್ದಾಲಕನು ತನ್ನಲ್ಲಿರುವ ಎಲ್ಲಾ ಹಸುಗಳನ್ನು ದಾನ ಮಾಡುವ ಬದಲು ಉತ್ತಮವಾದ ಹಸುಗಳನ್ನು ಇಟ್ಟುಕೊಂಡು ಗೊಡ್ಡು ಹಸುಗಳನ್ನು ಬಂದವರಿಗೆ ದಾನವಾಗಿ ನೀಡುತ್ತಿದ್ದ.

ಇದನ್ನು ನಚಿಕೇತ ಗಮನಿಸಿದ. ತನ್ನಲ್ಲಿರುವ ಸರ್ವಸ್ವವನ್ನೂ ಕೊಟ್ಟು ಲೌಕಿಕ ಭಾರದಿಂದ ಮುಕ್ತನಾಗಬೇಕಿದ್ದ ತಂದೆ ಆಚರಣೆಯಲ್ಲಿ ಹಾಗೆ ತೋರುತ್ತಿದ್ದಾನೆ ಆದರೆ ವಾಸ್ತವದಲ್ಲಿ ಲೋಭಿಯೇ ಆಗಿದ್ದಾನೆ. ನಡೆನುಡಿ ಹೊಂದದ, ಆಚರಣೆ ಅನುಷ್ಠಾನಗಳಿಗೆ ತಾಳೆಯಾಗದ ಈ ಯಜ್ಞವನ್ನು ಅವನು ಪ್ರತಿಭಟಿಸುವ ರೀತಿ ವಿಶಿಷ್ಟವಾಗಿದೆ.

ನಚಿಕೇತ ಅವರ ಮನೆಯಲ್ಲಿ ಜಾಣನಾಗಿ ಗುರುತಿಸಿಕೊಂಡಿರುವವನಲ್ಲ. ಒಂದು ರೀತಿಯಲ್ಲಿ ಕೆಲಸಕ್ಕೆ ಬಾರದವನು. ಏನೂ ಕೆಲಸಕ್ಕೆ ಬಾರದ ಹಸುಗಳನ್ನು ದಕ್ಷಿಣೆಯಾಗಿ ಕೊಡುತ್ತಿದ್ದ ತಂದೆಯ ಗಮನ ಸೆಳೆದು ಇದೇ ಕೆಲಸಕ್ಕೆ ಬಾರದ ಮಗ ಕೇಳಿದ “ನನ್ನನ್ನು ಯಾರಿಗೆ ಕೊಡುತ್ತೀರಿ?” ಎಂದು.

ಈ ಪ್ರಶ್ನೆಯೇ ಅವನ ಪ್ರತಿಭಟನೆ. ಈ ಪ್ರಶ್ನೆಯಲ್ಲಿ ತಂದೆಯ ಡಾಂಭಿಕತನವನ್ನು ಪ್ರಶ್ನಿಸುತ್ತಾನೆ. ಶುಷ್ಕ ಆಚರಣೆಗಳನ್ನು, ಆಧ್ಯಾತ್ಮ ಮೌಲ್ಯಗಳನ್ನು ಗ್ರಹಿಸದ ವಿಧಿಗಳನ್ನು, ತನ್ನ ಸಂಪತ್ತನ್ನು ದಾನ ತೆಗೆದುಕೊಳ್ಳಿ ಎಂದು ಪೊಳ್ಳನ್ನು ಕೊಡುವ ಮೋಸವನ್ನು ಪ್ರಶ್ನಿಸುತ್ತಾನೆ. ಕೆಲಸಕ್ಕೆ ಬಾರದ ಮಗನನ್ನು ಏನು ಮಾಡುತ್ತೀಯಾ ಎಂದು ಕೆಲಸಕ್ಕೆ ಬಾರದವೆಂದು ಹಸುಗಳನ್ನು ದಾನದ ಹೆಸರಲ್ಲಿ ಕೈ ತೊಳೆದುಕೊಳ್ಳುವ ಮನುಷ್ಯನ ವ್ಯಾಮೋಹವನ್ನು ಪ್ರಶ್ನಿಸುತ್ತಾನೆ.

ನಚಿಕೇತ ಎಲ್ಲೋ ಮೂಲೆಯಲ್ಲಿ ಕೇಳಲಿಲ್ಲ. ಯಜ್ಞ ನಡೆಯುವಲ್ಲಿ ಎಲ್ಲರ ಮುಂದೆ ಕೇಳಿದ. ಮುಜುಗರಗೊಂಡ ತಂದೆ ಉತ್ತರಿಸದೇ ತಪ್ಪಿಸಿಕೊಳ್ಳುತ್ತಾನೆ. ಆದರೆ ಇವನು ಬಿಡದೇ ಮೂರು ಬಾರಿ ಕೇಳುತ್ತಾನೆ. ಕೆರಳಿದ ತಂದೆ ನಿನ್ನ ಸಾವಿಗೆ ಕೊಡುತ್ತೇನೆ ಎನ್ನುತ್ತಾನೆ.

ಮಾತು ಮತ್ತು ಕೃತಿಗಳ ಮೌಲ್ಯವನ್ನು ಎತ್ತಿ ಹಿಡಿಯುವ ನಚಿಕೇತನ ಪ್ರತಿಭಟನೆ ಮುಂದುವರಿಯುತ್ತದೆ. ನಾನು ಸಾವಿಗೆ ಹೋಗುತ್ತೇನೆ ಎಂದು ಹೋಗುತ್ತಾನೆ ನಚಿಕೇತ.
ಮುಂದಿನ ಭಾಗ ರೂಪಕ. ಏಕೆಂದರೆ ಮೃತ್ಯುವಿನ ದೇವತೆಯಾದ ಯಮನಿಗಾಗಿ ಮೂರು ದಿನಗಳ ಕಾಲ ಕಾದು ನಂತರ ಅವನನ್ನು ಸಂಧಿಸಿ ಮರಣದಾಚೆಯ ಬದುಕಿನ ಬಗ್ಗೆ ತಿಳಿದುಕೊಳ್ಳುತ್ತಾನೆ.

ವೈದಿಕರ ಯಾವ ಯಜ್ಞವನ್ನು ವಿರೋಧಿಸಿ ಮಾತು ಕೃತಿಗಳ ಮೌಲ್ಯವನ್ನು ಎತ್ತಿ ಹಿಡಿದನೋ ಆ ನಚಿಕೇತನೇ ಮುಂದೆ ಯಮನಿಂದ ಯಜ್ಞ ಮಾಡುವುದನ್ನು ಕಲಿತುಕೊಳ್ಳುವುದನ್ನು ಸೂಚಿಸುತ್ತದೆ. ಆದರೆ ಅದು ಸಮಿತ್ತುಗಳನ್ನಿಟ್ಟು ಅಗ್ನಿಕಾರ್ಯದಿಂದ ಮಾಡುವ ಯಜ್ಞವಾಗಿರದೇ ಆಂತರಿಕ ಯಜ್ಞವಾಗಿ ಅನಾವರಣಗೊಳ್ಳುತ್ತದೆ.

ಅದೇನೇ ಇರಲಿ, ಒಬ್ಬ ಪ್ರತಿಭಟನಾಕಾರನಿಗೆ ಇರಬೇಕಾದ ಆತ್ಮವಿಶ್ವಾಸವನ್ನು ನಚಿಕೇತ ಅಲ್ಲಿ ತೋರುತ್ತಾನೆ. “ನಿನ್ನನ್ನು ಮೃತ್ಯುವಿಗೆ ಕೊಡುತ್ತೇನೆ” ಎಂದು ತಂದೆ ಹೇಳಿದಾಗ, “ಬಹುಜನರಲ್ಲಿ ಪ್ರಥಮನಾಗಿ, ಬಹುಜನರಲ್ಲಿ ಮಧ್ಯಮನಾಗಿರುವ ನನ್ನಿಂದ ಯಾವ ಕೆಲಸ ಮೃತ್ಯುವಿಗೆ ಆಗುತ್ತದೆ?” ಎಂದು ಯೋಚಿಸುತ್ತಾನೆ. ತಾನು ಅಧಮನಲ್ಲ ಎಂಬ ಆತ್ಮವಿಶ್ವಾಸವಿದೆ ಅವನಲ್ಲಿ. ಅಷ್ಟೇಅಲ್ಲದೇ ತಾನು ಪ್ರತಿಭಟಿಸಿದ ತಂದೆಗೆ ನಿದ್ರೆಗಳಿಂದ ಕೂಡಿರುವ ರಾತ್ರಿಯಿರಲಿ ಎಂದು ಒತ್ತಡರಹಿತವಾದ ಮನಸ್ಥಿತಿ ಬಯಸುತ್ತಾನೆ. ಪ್ರತಿಭಟನೆ ಮತ್ತು ಪ್ರೀತಿ ತೋರುವ ಆತ್ಮೀಯ ಭಾವ ನಚಿಕೇತದಲ್ಲಿ.

ಕಠೋಪನಿಷತ್ತಿನಲ್ಲಿ ಮೂಲಕತೆಯೊಂದಿಗೆ ನುಸುಳುವಿಕೆಗಳಿವೆ ಎಂದು ತೋರುತ್ತದೆ. ಆದರೆ, ನಚಿಕೇತನೆಂಬ ಸಾತ್ವಿಕ ಬಂಡಾಯಗಾರನ ಪ್ರತಿಮೆ ಮಾತ್ರ ಅತ್ಯಂತ ಆಪ್ತ. ಇದನ್ನೇ ಆಧರಿಸಿ ತ ರಾ ಸು “ಬೆಳಕು ತಂದ ಬಾಲಕ” ಎಂಬ ಕಾದಂಬರಿ ರಚಿಸಿದ್ದಾರೆ. ಇದೂ ಕೂಡಾ ನಚಿಕೇತನ ವ್ಯಕ್ತಿತ್ವದ ದರ್ಶನ ಮಾಡಿಸುವಂತದ್ದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...