Homeಕಥೆಕಠೋಪನಿಷತ್ತು - ಬಾಲಕನೊಬ್ಬನ ಬಂಡಾಯದ ಕತೆ: ಯೋಗೇಶ್ ಮಾಸ್ಟರ್

ಕಠೋಪನಿಷತ್ತು – ಬಾಲಕನೊಬ್ಬನ ಬಂಡಾಯದ ಕತೆ: ಯೋಗೇಶ್ ಮಾಸ್ಟರ್

- Advertisement -
- Advertisement -

ಆಚರಣೆಯು ಅನುಷ್ಠಾನದಿಂದ ಹೊರತಾಗಿರುವುದರ ವಿರುದ್ಧವಾಗಿ ಬಂಡಾಯವೇಳುವ ನಚಿಕೇತನೆಂಬ ಹುಡುಗನ ಕತೆ ಈ ಕಠೋಪನಿಷತ್ತು.

ಉದ್ದಾಲಕ ನಚಿಕೇತನ ತಂದೆ. ಅವನು ಸರ್ವವೇದಸ್ ಎಂಬ ಯಜ್ಞವನ್ನು ಮಾಡಿದ. ಅದರ ಪ್ರಕಾರ ತನ್ನಲ್ಲಿರುವ ಎಲ್ಲವನ್ನೂ ಕೂಡಾ ಯಜ್ಞಕರ್ತೃವು ಕೊಡಬೇಕು. ಹಸುಗಳೇ ಅವರ ಸಂಪತ್ತು. ಉದ್ದಾಲಕನು ತನ್ನಲ್ಲಿರುವ ಎಲ್ಲಾ ಹಸುಗಳನ್ನು ದಾನ ಮಾಡುವ ಬದಲು ಉತ್ತಮವಾದ ಹಸುಗಳನ್ನು ಇಟ್ಟುಕೊಂಡು ಗೊಡ್ಡು ಹಸುಗಳನ್ನು ಬಂದವರಿಗೆ ದಾನವಾಗಿ ನೀಡುತ್ತಿದ್ದ.

ಇದನ್ನು ನಚಿಕೇತ ಗಮನಿಸಿದ. ತನ್ನಲ್ಲಿರುವ ಸರ್ವಸ್ವವನ್ನೂ ಕೊಟ್ಟು ಲೌಕಿಕ ಭಾರದಿಂದ ಮುಕ್ತನಾಗಬೇಕಿದ್ದ ತಂದೆ ಆಚರಣೆಯಲ್ಲಿ ಹಾಗೆ ತೋರುತ್ತಿದ್ದಾನೆ ಆದರೆ ವಾಸ್ತವದಲ್ಲಿ ಲೋಭಿಯೇ ಆಗಿದ್ದಾನೆ. ನಡೆನುಡಿ ಹೊಂದದ, ಆಚರಣೆ ಅನುಷ್ಠಾನಗಳಿಗೆ ತಾಳೆಯಾಗದ ಈ ಯಜ್ಞವನ್ನು ಅವನು ಪ್ರತಿಭಟಿಸುವ ರೀತಿ ವಿಶಿಷ್ಟವಾಗಿದೆ.

ನಚಿಕೇತ ಅವರ ಮನೆಯಲ್ಲಿ ಜಾಣನಾಗಿ ಗುರುತಿಸಿಕೊಂಡಿರುವವನಲ್ಲ. ಒಂದು ರೀತಿಯಲ್ಲಿ ಕೆಲಸಕ್ಕೆ ಬಾರದವನು. ಏನೂ ಕೆಲಸಕ್ಕೆ ಬಾರದ ಹಸುಗಳನ್ನು ದಕ್ಷಿಣೆಯಾಗಿ ಕೊಡುತ್ತಿದ್ದ ತಂದೆಯ ಗಮನ ಸೆಳೆದು ಇದೇ ಕೆಲಸಕ್ಕೆ ಬಾರದ ಮಗ ಕೇಳಿದ “ನನ್ನನ್ನು ಯಾರಿಗೆ ಕೊಡುತ್ತೀರಿ?” ಎಂದು.

ಈ ಪ್ರಶ್ನೆಯೇ ಅವನ ಪ್ರತಿಭಟನೆ. ಈ ಪ್ರಶ್ನೆಯಲ್ಲಿ ತಂದೆಯ ಡಾಂಭಿಕತನವನ್ನು ಪ್ರಶ್ನಿಸುತ್ತಾನೆ. ಶುಷ್ಕ ಆಚರಣೆಗಳನ್ನು, ಆಧ್ಯಾತ್ಮ ಮೌಲ್ಯಗಳನ್ನು ಗ್ರಹಿಸದ ವಿಧಿಗಳನ್ನು, ತನ್ನ ಸಂಪತ್ತನ್ನು ದಾನ ತೆಗೆದುಕೊಳ್ಳಿ ಎಂದು ಪೊಳ್ಳನ್ನು ಕೊಡುವ ಮೋಸವನ್ನು ಪ್ರಶ್ನಿಸುತ್ತಾನೆ. ಕೆಲಸಕ್ಕೆ ಬಾರದ ಮಗನನ್ನು ಏನು ಮಾಡುತ್ತೀಯಾ ಎಂದು ಕೆಲಸಕ್ಕೆ ಬಾರದವೆಂದು ಹಸುಗಳನ್ನು ದಾನದ ಹೆಸರಲ್ಲಿ ಕೈ ತೊಳೆದುಕೊಳ್ಳುವ ಮನುಷ್ಯನ ವ್ಯಾಮೋಹವನ್ನು ಪ್ರಶ್ನಿಸುತ್ತಾನೆ.

ನಚಿಕೇತ ಎಲ್ಲೋ ಮೂಲೆಯಲ್ಲಿ ಕೇಳಲಿಲ್ಲ. ಯಜ್ಞ ನಡೆಯುವಲ್ಲಿ ಎಲ್ಲರ ಮುಂದೆ ಕೇಳಿದ. ಮುಜುಗರಗೊಂಡ ತಂದೆ ಉತ್ತರಿಸದೇ ತಪ್ಪಿಸಿಕೊಳ್ಳುತ್ತಾನೆ. ಆದರೆ ಇವನು ಬಿಡದೇ ಮೂರು ಬಾರಿ ಕೇಳುತ್ತಾನೆ. ಕೆರಳಿದ ತಂದೆ ನಿನ್ನ ಸಾವಿಗೆ ಕೊಡುತ್ತೇನೆ ಎನ್ನುತ್ತಾನೆ.

ಮಾತು ಮತ್ತು ಕೃತಿಗಳ ಮೌಲ್ಯವನ್ನು ಎತ್ತಿ ಹಿಡಿಯುವ ನಚಿಕೇತನ ಪ್ರತಿಭಟನೆ ಮುಂದುವರಿಯುತ್ತದೆ. ನಾನು ಸಾವಿಗೆ ಹೋಗುತ್ತೇನೆ ಎಂದು ಹೋಗುತ್ತಾನೆ ನಚಿಕೇತ.
ಮುಂದಿನ ಭಾಗ ರೂಪಕ. ಏಕೆಂದರೆ ಮೃತ್ಯುವಿನ ದೇವತೆಯಾದ ಯಮನಿಗಾಗಿ ಮೂರು ದಿನಗಳ ಕಾಲ ಕಾದು ನಂತರ ಅವನನ್ನು ಸಂಧಿಸಿ ಮರಣದಾಚೆಯ ಬದುಕಿನ ಬಗ್ಗೆ ತಿಳಿದುಕೊಳ್ಳುತ್ತಾನೆ.

ವೈದಿಕರ ಯಾವ ಯಜ್ಞವನ್ನು ವಿರೋಧಿಸಿ ಮಾತು ಕೃತಿಗಳ ಮೌಲ್ಯವನ್ನು ಎತ್ತಿ ಹಿಡಿದನೋ ಆ ನಚಿಕೇತನೇ ಮುಂದೆ ಯಮನಿಂದ ಯಜ್ಞ ಮಾಡುವುದನ್ನು ಕಲಿತುಕೊಳ್ಳುವುದನ್ನು ಸೂಚಿಸುತ್ತದೆ. ಆದರೆ ಅದು ಸಮಿತ್ತುಗಳನ್ನಿಟ್ಟು ಅಗ್ನಿಕಾರ್ಯದಿಂದ ಮಾಡುವ ಯಜ್ಞವಾಗಿರದೇ ಆಂತರಿಕ ಯಜ್ಞವಾಗಿ ಅನಾವರಣಗೊಳ್ಳುತ್ತದೆ.

ಅದೇನೇ ಇರಲಿ, ಒಬ್ಬ ಪ್ರತಿಭಟನಾಕಾರನಿಗೆ ಇರಬೇಕಾದ ಆತ್ಮವಿಶ್ವಾಸವನ್ನು ನಚಿಕೇತ ಅಲ್ಲಿ ತೋರುತ್ತಾನೆ. “ನಿನ್ನನ್ನು ಮೃತ್ಯುವಿಗೆ ಕೊಡುತ್ತೇನೆ” ಎಂದು ತಂದೆ ಹೇಳಿದಾಗ, “ಬಹುಜನರಲ್ಲಿ ಪ್ರಥಮನಾಗಿ, ಬಹುಜನರಲ್ಲಿ ಮಧ್ಯಮನಾಗಿರುವ ನನ್ನಿಂದ ಯಾವ ಕೆಲಸ ಮೃತ್ಯುವಿಗೆ ಆಗುತ್ತದೆ?” ಎಂದು ಯೋಚಿಸುತ್ತಾನೆ. ತಾನು ಅಧಮನಲ್ಲ ಎಂಬ ಆತ್ಮವಿಶ್ವಾಸವಿದೆ ಅವನಲ್ಲಿ. ಅಷ್ಟೇಅಲ್ಲದೇ ತಾನು ಪ್ರತಿಭಟಿಸಿದ ತಂದೆಗೆ ನಿದ್ರೆಗಳಿಂದ ಕೂಡಿರುವ ರಾತ್ರಿಯಿರಲಿ ಎಂದು ಒತ್ತಡರಹಿತವಾದ ಮನಸ್ಥಿತಿ ಬಯಸುತ್ತಾನೆ. ಪ್ರತಿಭಟನೆ ಮತ್ತು ಪ್ರೀತಿ ತೋರುವ ಆತ್ಮೀಯ ಭಾವ ನಚಿಕೇತದಲ್ಲಿ.

ಕಠೋಪನಿಷತ್ತಿನಲ್ಲಿ ಮೂಲಕತೆಯೊಂದಿಗೆ ನುಸುಳುವಿಕೆಗಳಿವೆ ಎಂದು ತೋರುತ್ತದೆ. ಆದರೆ, ನಚಿಕೇತನೆಂಬ ಸಾತ್ವಿಕ ಬಂಡಾಯಗಾರನ ಪ್ರತಿಮೆ ಮಾತ್ರ ಅತ್ಯಂತ ಆಪ್ತ. ಇದನ್ನೇ ಆಧರಿಸಿ ತ ರಾ ಸು “ಬೆಳಕು ತಂದ ಬಾಲಕ” ಎಂಬ ಕಾದಂಬರಿ ರಚಿಸಿದ್ದಾರೆ. ಇದೂ ಕೂಡಾ ನಚಿಕೇತನ ವ್ಯಕ್ತಿತ್ವದ ದರ್ಶನ ಮಾಡಿಸುವಂತದ್ದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...