Homeಕಥೆಕಠೋಪನಿಷತ್ತು - ಬಾಲಕನೊಬ್ಬನ ಬಂಡಾಯದ ಕತೆ: ಯೋಗೇಶ್ ಮಾಸ್ಟರ್

ಕಠೋಪನಿಷತ್ತು – ಬಾಲಕನೊಬ್ಬನ ಬಂಡಾಯದ ಕತೆ: ಯೋಗೇಶ್ ಮಾಸ್ಟರ್

- Advertisement -
- Advertisement -

ಆಚರಣೆಯು ಅನುಷ್ಠಾನದಿಂದ ಹೊರತಾಗಿರುವುದರ ವಿರುದ್ಧವಾಗಿ ಬಂಡಾಯವೇಳುವ ನಚಿಕೇತನೆಂಬ ಹುಡುಗನ ಕತೆ ಈ ಕಠೋಪನಿಷತ್ತು.

ಉದ್ದಾಲಕ ನಚಿಕೇತನ ತಂದೆ. ಅವನು ಸರ್ವವೇದಸ್ ಎಂಬ ಯಜ್ಞವನ್ನು ಮಾಡಿದ. ಅದರ ಪ್ರಕಾರ ತನ್ನಲ್ಲಿರುವ ಎಲ್ಲವನ್ನೂ ಕೂಡಾ ಯಜ್ಞಕರ್ತೃವು ಕೊಡಬೇಕು. ಹಸುಗಳೇ ಅವರ ಸಂಪತ್ತು. ಉದ್ದಾಲಕನು ತನ್ನಲ್ಲಿರುವ ಎಲ್ಲಾ ಹಸುಗಳನ್ನು ದಾನ ಮಾಡುವ ಬದಲು ಉತ್ತಮವಾದ ಹಸುಗಳನ್ನು ಇಟ್ಟುಕೊಂಡು ಗೊಡ್ಡು ಹಸುಗಳನ್ನು ಬಂದವರಿಗೆ ದಾನವಾಗಿ ನೀಡುತ್ತಿದ್ದ.

ಇದನ್ನು ನಚಿಕೇತ ಗಮನಿಸಿದ. ತನ್ನಲ್ಲಿರುವ ಸರ್ವಸ್ವವನ್ನೂ ಕೊಟ್ಟು ಲೌಕಿಕ ಭಾರದಿಂದ ಮುಕ್ತನಾಗಬೇಕಿದ್ದ ತಂದೆ ಆಚರಣೆಯಲ್ಲಿ ಹಾಗೆ ತೋರುತ್ತಿದ್ದಾನೆ ಆದರೆ ವಾಸ್ತವದಲ್ಲಿ ಲೋಭಿಯೇ ಆಗಿದ್ದಾನೆ. ನಡೆನುಡಿ ಹೊಂದದ, ಆಚರಣೆ ಅನುಷ್ಠಾನಗಳಿಗೆ ತಾಳೆಯಾಗದ ಈ ಯಜ್ಞವನ್ನು ಅವನು ಪ್ರತಿಭಟಿಸುವ ರೀತಿ ವಿಶಿಷ್ಟವಾಗಿದೆ.

ನಚಿಕೇತ ಅವರ ಮನೆಯಲ್ಲಿ ಜಾಣನಾಗಿ ಗುರುತಿಸಿಕೊಂಡಿರುವವನಲ್ಲ. ಒಂದು ರೀತಿಯಲ್ಲಿ ಕೆಲಸಕ್ಕೆ ಬಾರದವನು. ಏನೂ ಕೆಲಸಕ್ಕೆ ಬಾರದ ಹಸುಗಳನ್ನು ದಕ್ಷಿಣೆಯಾಗಿ ಕೊಡುತ್ತಿದ್ದ ತಂದೆಯ ಗಮನ ಸೆಳೆದು ಇದೇ ಕೆಲಸಕ್ಕೆ ಬಾರದ ಮಗ ಕೇಳಿದ “ನನ್ನನ್ನು ಯಾರಿಗೆ ಕೊಡುತ್ತೀರಿ?” ಎಂದು.

ಈ ಪ್ರಶ್ನೆಯೇ ಅವನ ಪ್ರತಿಭಟನೆ. ಈ ಪ್ರಶ್ನೆಯಲ್ಲಿ ತಂದೆಯ ಡಾಂಭಿಕತನವನ್ನು ಪ್ರಶ್ನಿಸುತ್ತಾನೆ. ಶುಷ್ಕ ಆಚರಣೆಗಳನ್ನು, ಆಧ್ಯಾತ್ಮ ಮೌಲ್ಯಗಳನ್ನು ಗ್ರಹಿಸದ ವಿಧಿಗಳನ್ನು, ತನ್ನ ಸಂಪತ್ತನ್ನು ದಾನ ತೆಗೆದುಕೊಳ್ಳಿ ಎಂದು ಪೊಳ್ಳನ್ನು ಕೊಡುವ ಮೋಸವನ್ನು ಪ್ರಶ್ನಿಸುತ್ತಾನೆ. ಕೆಲಸಕ್ಕೆ ಬಾರದ ಮಗನನ್ನು ಏನು ಮಾಡುತ್ತೀಯಾ ಎಂದು ಕೆಲಸಕ್ಕೆ ಬಾರದವೆಂದು ಹಸುಗಳನ್ನು ದಾನದ ಹೆಸರಲ್ಲಿ ಕೈ ತೊಳೆದುಕೊಳ್ಳುವ ಮನುಷ್ಯನ ವ್ಯಾಮೋಹವನ್ನು ಪ್ರಶ್ನಿಸುತ್ತಾನೆ.

ನಚಿಕೇತ ಎಲ್ಲೋ ಮೂಲೆಯಲ್ಲಿ ಕೇಳಲಿಲ್ಲ. ಯಜ್ಞ ನಡೆಯುವಲ್ಲಿ ಎಲ್ಲರ ಮುಂದೆ ಕೇಳಿದ. ಮುಜುಗರಗೊಂಡ ತಂದೆ ಉತ್ತರಿಸದೇ ತಪ್ಪಿಸಿಕೊಳ್ಳುತ್ತಾನೆ. ಆದರೆ ಇವನು ಬಿಡದೇ ಮೂರು ಬಾರಿ ಕೇಳುತ್ತಾನೆ. ಕೆರಳಿದ ತಂದೆ ನಿನ್ನ ಸಾವಿಗೆ ಕೊಡುತ್ತೇನೆ ಎನ್ನುತ್ತಾನೆ.

ಮಾತು ಮತ್ತು ಕೃತಿಗಳ ಮೌಲ್ಯವನ್ನು ಎತ್ತಿ ಹಿಡಿಯುವ ನಚಿಕೇತನ ಪ್ರತಿಭಟನೆ ಮುಂದುವರಿಯುತ್ತದೆ. ನಾನು ಸಾವಿಗೆ ಹೋಗುತ್ತೇನೆ ಎಂದು ಹೋಗುತ್ತಾನೆ ನಚಿಕೇತ.
ಮುಂದಿನ ಭಾಗ ರೂಪಕ. ಏಕೆಂದರೆ ಮೃತ್ಯುವಿನ ದೇವತೆಯಾದ ಯಮನಿಗಾಗಿ ಮೂರು ದಿನಗಳ ಕಾಲ ಕಾದು ನಂತರ ಅವನನ್ನು ಸಂಧಿಸಿ ಮರಣದಾಚೆಯ ಬದುಕಿನ ಬಗ್ಗೆ ತಿಳಿದುಕೊಳ್ಳುತ್ತಾನೆ.

ವೈದಿಕರ ಯಾವ ಯಜ್ಞವನ್ನು ವಿರೋಧಿಸಿ ಮಾತು ಕೃತಿಗಳ ಮೌಲ್ಯವನ್ನು ಎತ್ತಿ ಹಿಡಿದನೋ ಆ ನಚಿಕೇತನೇ ಮುಂದೆ ಯಮನಿಂದ ಯಜ್ಞ ಮಾಡುವುದನ್ನು ಕಲಿತುಕೊಳ್ಳುವುದನ್ನು ಸೂಚಿಸುತ್ತದೆ. ಆದರೆ ಅದು ಸಮಿತ್ತುಗಳನ್ನಿಟ್ಟು ಅಗ್ನಿಕಾರ್ಯದಿಂದ ಮಾಡುವ ಯಜ್ಞವಾಗಿರದೇ ಆಂತರಿಕ ಯಜ್ಞವಾಗಿ ಅನಾವರಣಗೊಳ್ಳುತ್ತದೆ.

ಅದೇನೇ ಇರಲಿ, ಒಬ್ಬ ಪ್ರತಿಭಟನಾಕಾರನಿಗೆ ಇರಬೇಕಾದ ಆತ್ಮವಿಶ್ವಾಸವನ್ನು ನಚಿಕೇತ ಅಲ್ಲಿ ತೋರುತ್ತಾನೆ. “ನಿನ್ನನ್ನು ಮೃತ್ಯುವಿಗೆ ಕೊಡುತ್ತೇನೆ” ಎಂದು ತಂದೆ ಹೇಳಿದಾಗ, “ಬಹುಜನರಲ್ಲಿ ಪ್ರಥಮನಾಗಿ, ಬಹುಜನರಲ್ಲಿ ಮಧ್ಯಮನಾಗಿರುವ ನನ್ನಿಂದ ಯಾವ ಕೆಲಸ ಮೃತ್ಯುವಿಗೆ ಆಗುತ್ತದೆ?” ಎಂದು ಯೋಚಿಸುತ್ತಾನೆ. ತಾನು ಅಧಮನಲ್ಲ ಎಂಬ ಆತ್ಮವಿಶ್ವಾಸವಿದೆ ಅವನಲ್ಲಿ. ಅಷ್ಟೇಅಲ್ಲದೇ ತಾನು ಪ್ರತಿಭಟಿಸಿದ ತಂದೆಗೆ ನಿದ್ರೆಗಳಿಂದ ಕೂಡಿರುವ ರಾತ್ರಿಯಿರಲಿ ಎಂದು ಒತ್ತಡರಹಿತವಾದ ಮನಸ್ಥಿತಿ ಬಯಸುತ್ತಾನೆ. ಪ್ರತಿಭಟನೆ ಮತ್ತು ಪ್ರೀತಿ ತೋರುವ ಆತ್ಮೀಯ ಭಾವ ನಚಿಕೇತದಲ್ಲಿ.

ಕಠೋಪನಿಷತ್ತಿನಲ್ಲಿ ಮೂಲಕತೆಯೊಂದಿಗೆ ನುಸುಳುವಿಕೆಗಳಿವೆ ಎಂದು ತೋರುತ್ತದೆ. ಆದರೆ, ನಚಿಕೇತನೆಂಬ ಸಾತ್ವಿಕ ಬಂಡಾಯಗಾರನ ಪ್ರತಿಮೆ ಮಾತ್ರ ಅತ್ಯಂತ ಆಪ್ತ. ಇದನ್ನೇ ಆಧರಿಸಿ ತ ರಾ ಸು “ಬೆಳಕು ತಂದ ಬಾಲಕ” ಎಂಬ ಕಾದಂಬರಿ ರಚಿಸಿದ್ದಾರೆ. ಇದೂ ಕೂಡಾ ನಚಿಕೇತನ ವ್ಯಕ್ತಿತ್ವದ ದರ್ಶನ ಮಾಡಿಸುವಂತದ್ದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...